Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:12 - ಪರಿಶುದ್ದ ಬೈಬಲ್‌

12 ಯಾಕೆ ಹೀಗೆ? ಯಾಕೆಂದರೆ ನಿಮ್ಮ ಅನೇಕ ಪಾಪಕೃತ್ಯಗಳನ್ನು ನಾನು ಬಲ್ಲೆನು. ನೀವು ಭಯಂಕರ ಪಾಪಗಳನ್ನು ಮಾಡಿದ್ದೀರಿ. ನ್ಯಾಯವಂತರನ್ನು ಗಾಯಗೊಳಿಸಿದ್ದೀರಿ. ಅನ್ಯಾಯ ಮಾಡಲು ಹಣವನ್ನು ತೆಗೆದುಕೊಂಡಿದ್ದೀರಿ. ಬಡಜನರಿಗೆ ನ್ಯಾಯವನ್ನು ದೊರಕಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸಜ್ಜನರನ್ನು ಹಿಂಸಿಸಿ, ಲಂಚಕ್ಕೆ ಕೈ ಒಡ್ಡುವವರೇ, ನ್ಯಾಯಮಂಟಪದಲ್ಲಿ ಬಡವರಿಗೆ ನ್ಯಾಯದೊರಕಿಸದಿರುವವರೇ, ನಿಮ್ಮ ಪಾಪಗಳು ಅಪಾರ! ನಿಮ್ಮ ದ್ರೋಹಗಳು ಬಹಳ! ಇದು ನನಗೆ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಶಿಷ್ಟಹಿಂಸಕರೇ, ಲಂಚಕೋರರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ, ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ಪ್ರಬಲ, ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ನಿಮ್ಮ ಅನೇಕ ಅಪರಾಧಗಳನ್ನೂ, ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು. ಅವರು ನಿರಪರಾಧಿಯನ್ನು ಬಾಧೆಪಡಿಸಿ, ಲಂಚವನ್ನು ತೆಗೆದುಕೊಂಡರು ಮತ್ತು ಬಾಗಿಲ ಬಳಿಯಲ್ಲಿರುವ ಬಡವರ ನ್ಯಾಯವನ್ನು ತೀರಿಸದೇ ಕಳುಹಿಸಿಬಿಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:12
39 ತಿಳಿವುಗಳ ಹೋಲಿಕೆ  

ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಕೃತ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು.


ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಆದರೆ ಸಮುವೇಲನ ಮಕ್ಕಳು ಅವನಂತೆ ನಡೆದುಕೊಳ್ಳಲಿಲ್ಲ. ಅವರು ಲಂಚವನ್ನು ಪಡೆದು ನ್ಯಾಯಾಲಯದಲ್ಲಿ ಅನ್ಯಾಯದ ತೀರ್ಪುಗಳು ಮಾಡುತ್ತಿದ್ದರು ಮತ್ತು ಜನರನ್ನು ವಂಚಿಸುತ್ತಿದ್ದರು.


ನೀವು ಒಳ್ಳೆಯ ಜನರಿಗೆ ದಂಡನೆ ವಿಧಿಸಿದಿರಿ. ಅವರು ನಿಮಗೆ ವಿರೋಧವಾಗಿಲ್ಲದಿದ್ದರೂ ಅವರನ್ನು ಕೊಂದುಹಾಕಿದಿರಿ.


ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.


ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.


ಕೆಟ್ಟದ್ದನ್ನು ಎರಡೂ ಕೈಗಳಿಂದ ಮಾಡಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚ ಕೇಳುತ್ತಾರೆ. ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಾರೆ. “ಪ್ರಮುಖ ನಾಯಕರು” ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ.


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ಆ ಸಮಯದಲ್ಲಿ ಅತಿ ಧೈರ್ಯಶಾಲಿಗಳೂ ರಣವೀರರೂ ಓಡಿಬಿಡುವರು. ತಮ್ಮ ಬಟ್ಟೆಗಳನ್ನು ಧರಿಸಿಕೊಳ್ಳಲೂ ಅವರಿಗೆ ಸಮಯವಿರುವುದಿಲ್ಲ.” ಇವು ಯೆಹೋವನ ನುಡಿ.


ಈ ಸಂಗತಿಗಳನ್ನು ಇಷ್ಟಪಡುವುದಿಲ್ಲ. ಯಾರೋ ಒಬ್ಬನು ಈ ಲೋಕದ ಕೈದಿಗಳನ್ನೆಲ್ಲಾ ತನ್ನ ಪಾದದ ಕೆಳಗೆ ಹಾಕಿ ತುಳಿಯುವುದನ್ನು ಆತನು ಇಷ್ಟಪಡುವುದಿಲ್ಲ.


ಆ ಪ್ರವಾದಿಗಳಿಬ್ಬರು ಇಸ್ರೇಲಿನಲ್ಲಿ ಹೆಚ್ಚಿನ ದುರಾಚಾರವನ್ನು ನಡೆಸಿದರು. ಅವರು ತಮ್ಮ ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರ ಮಾಡಿದರು. ಅವರು ಸುಳ್ಳುಗಳನ್ನು ಹೇಳಿದರು. ಆ ಸುಳ್ಳುಗಳನ್ನು ಯೆಹೋವನಾದ ನನ್ನ ಸಂದೇಶವೆಂದು ಹೇಳಿದರು. ಹಾಗೆ ಮಾಡಲು ನಾನು ಅವರಿಗೆ ಹೇಳಿಲ್ಲ, ಅವರು ಏನು ಮಾಡಿದ್ದಾರೆಂಬುದನ್ನು ನಾನು ಬಲ್ಲೆ. ಅದಕ್ಕೆ ನಾನೇ ಸಾಕ್ಷಿ.” ಇದು ಯೆಹೋವನ ಸಂದೇಶ.


“ಆ ಜನರಲ್ಲಿ ಕೆಟ್ಟ ಯೋಜನೆಗಳು ಇದ್ದು ಕೆಟ್ಟದ್ದನ್ನೇ ಮಾಡುವವರಾಗಿದ್ದಾರೆ. ಅದಕ್ಕಾಗಿ ನಾನು ಅವರನ್ನು ಶಿಕ್ಷಿಸಲು ಬರುತ್ತಿದ್ದೇನೆ. ನಾನು ಎಲ್ಲಾ ಜನಾಂಗಗಳನ್ನೂ ಎಲ್ಲಾ ಜನರನ್ನೂ ಒಟ್ಟುಗೂಡಿಸುವೆನು. ಎಲ್ಲಾ ಜನರು ಒಟ್ಟುಗೂಡಿ ನನ್ನ ಸಾಮರ್ಥ್ಯವನ್ನು ನೋಡುವರು.


ಒಂದೇ ದಿನದೊಳಗೆ, ಒಂದೇ ಕ್ಷಣದಲ್ಲಿ ನಿನಗೆ ಎರಡು ಸಂಗತಿಗಳು ಸಂಭವಿಸುತ್ತವೆ. ನೀನು ನಿನ್ನ ಮಕ್ಕಳನ್ನು ಕಳೆದುಕೊಳ್ಳುವೆ, ಆ ಬಳಿಕ ನೀನು ನಿನ್ನ ಗಂಡನನ್ನು ಕಳಕೊಳ್ಳುವೆ. ಹೌದು, ಈ ವಿಷಯಗಳು ನಿನಗೆ ಖಂಡಿತವಾಗಿ ಸಂಭವಿಸುವವು. ನಿನ್ನಲ್ಲಿರುವ ಎಲ್ಲಾ ಮಾಟಮಂತ್ರಗಳು ನಿನ್ನನ್ನು ಕಾಪಾಡಲಾರವು.


ಪ್ರಾಮಾಣಿಕರಾಗಿರುವ ನೀತಿವಂತರು ಹಣಕ್ಕಾಗಿ ಇತರರಿಗೆ ಹಾನಿಮಾಡದವರಾಗಿದ್ದಾರೆ. ಅವರು ಆ ಬೆಂಕಿಯಲ್ಲಿ ವಾಸಿಸುವರು. ಅವರು ಲಂಚ ತೆಗೆದುಕೊಳ್ಳಲು ನಿರಾಕರಿಸುವರು. ಇತರರನ್ನು ಕೊಲೆಮಾಡುವ ಯೋಜನೆಯನ್ನು ಕೇಳಲು ಅವರು ಇಷ್ಟಪಡುವುದಿಲ್ಲ. ಅವರು ಕೆಟ್ಟಕಾರ್ಯಗಳ ಯೋಜನೆಗಳನ್ನು ನೋಡುವುದಿಲ್ಲ.


(ಅವರು ನೀತಿವಂತರ ವಿಷಯವಾಗಿ ಸುಳ್ಳಾಡುವರು. ನ್ಯಾಯಾಲಯದಲ್ಲಿ ಜನರನ್ನು ಸಿಕ್ಕಿಸಿ ಹಾಕುವರು. ದೀನರನ್ನು ನಾಶಮಾಡಲು ಅವರು ಪ್ರಯತ್ನಿಸುವರು.)


ಅವರು ಬಡವರಿಗೆ ನ್ಯಾಯವಂತರಾಗಿರುವುದಿಲ್ಲ. ಅವರು ಬಡಜನರ ಹಕ್ಕನ್ನು ತೆಗೆದುಬಿಡುವರು. ಜನರು ವಿಧವೆಯರಿಂದಲೂ ಅನಾಥರಿಂದಲೂ ಹಣ ಕಿತ್ತುಕೊಳ್ಳುವಂತೆ ಮಾಡುವರು.


ಅವರಿಗೆ ಹಣಕೊಟ್ಟರೆ, ಅಪರಾಧಿಯನ್ನೂ ಬಿಟ್ಟುಬಿಡುವರು; ಆದರೆ ಒಳ್ಳೆಯವರಿಗೆ ಸರಿಯಾದ ನ್ಯಾಯತೀರ್ಪು ದೊರಕಲು ಅವರು ಅವಕಾಶ ಕೊಡುವುದಿಲ್ಲ.


ಅಸಹಾಯಕರಾದ ಬಡವರಿಂದ ಕದ್ದುಕೊಳ್ಳಬೇಡ; ನ್ಯಾಯಾಲಯದಲ್ಲಿ ಅವರಿಗೆ ಅನ್ಯಾಯಮಾಡಬೇಡ.


ನನಗೆ ನ್ಯಾಯಸ್ಥಾನದಲ್ಲಿ ಬೆಂಬಲವಿದ್ದರೂ ಅನಾಥರನ್ನು ಕಂಡು ನಾನೆಂದೂ ಅವರ ಮೇಲೆ ಕೈ ಮಾಡಲಿಲ್ಲ.


ಬೋವಜನು ನಗರದ್ವಾರದ ಬಳಿಯಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಅಲ್ಲಿಂದ ಹಾದು ಹೋಗುವವರೆಗೂ ಅವನು ಅಲ್ಲಿಯೇ ಕುಳಿತಿದ್ದನು. ಅವನನ್ನು ಕಂಡ ಬೋವಜನು, “ಸ್ನೇಹಿತನೇ ಇಲ್ಲಿ ಬಾ, ಇಲ್ಲಿ ಕುಳಿತುಕೋ” ಎಂದು ಕರೆದನು.


ಆಗ ಭಯಂಕರವಾದ ಸಂಗತಿಗಳು ಅವರಿಗೆ ಉಂಟಾಗುವವು. ಅವರಿಗೆ ಅನೇಕ ಸಂಕಟಗಳು ಉಂಟಾಗುವವು. ಆಗ ಆ ಜನರಿಗೆ ಈ ಹಾಡು ತಿಳಿದಿರುವುದರಿಂದ ತಾವು ಎಷ್ಟು ತಪ್ಪಿತಸ್ಥರು ಎಂದು ತಿಳಿಯುವುದು. ನಾನು ಕೊಡುವುದಾಗಿ ವಾಗ್ದಾನ ಮಾಡಿರುವ ದೇಶಕ್ಕೆ ಅವರನ್ನು ಇನ್ನೂ ಕರೆದುಕೊಂಡು ಹೋಗಿಲ್ಲ. ಆದರೆ ಅವರು ಅಲ್ಲಿ ಏನು ಮಾಡುತ್ತಾರೆಂಬುದು ನನಗೆ ಆಗಲೇ ಗೊತ್ತಿದೆ.”


“ನಿಮ್ಮ ದೇವರು ನಿಮಗೆ ಕೊಡುವ ದೇಶದ ಎಲ್ಲಾ ಪಟ್ಟಣಗಳಲ್ಲಿ ನ್ಯಾಯಾಧೀಶರನ್ನೂ ಅಧಿಕಾರಿಗಳನ್ನೂ ಆರಿಸಿಕೊಳ್ಳಿರಿ. ಪ್ರತಿಯೊಂದು ಕುಲದವರು ಇದನ್ನು ಮಾಡಬೇಕು; ಆರಿಸಲ್ಪಟ್ಟವರು ನ್ಯಾಯವಂತರಾಗಿರಬೇಕು.


ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು.


ಲಂಚವು ಅದೃಷ್ಟ ಎಂದು ಭಾವಿಸಿಕೊಳ್ಳುವವರಿಗೆ, ಅವರು ಹೋದಲ್ಲೆಲ್ಲಾ ಅದೇ ಕಾರ್ಯಸಾಧಕದಂತೆ ಕಾಣುತ್ತದೆ.


“‘ಪ್ರವಾದಿನಿಯರೇ, ನೀವು ಸುಳ್ಳುಗಾರ್ತಿಯರಾಗಿದ್ದೀರಿ. ನಿಮ್ಮ ಸುಳ್ಳುಗಳು ಒಳ್ಳೆಯವರಿಗೆ ದುಃಖವನ್ನು ಬರಮಾಡುವವು. ಒಳ್ಳೆಯ ವ್ಯಕ್ತಿಗಳಿಗೆ ನೋವು ಮಾಡಲು ನನಗೆ ಮನಸ್ಸಿಲ್ಲ. ದುಷ್ಟ ಜನರು ತಮ್ಮ ದುರ್ಮಾರ್ಗಗಳನ್ನು ತೊರೆದುಬಿಡದಂತೆಯೂ ತಮ್ಮ ಪ್ರಾಣಗಳನ್ನು ರಕ್ಷಿಸಿಕೊಳ್ಳದಂತೆಯೂ ನೀವು ಪ್ರೋತ್ಸಾಹಿಸುತ್ತೀರಿ.


ಎಫ್ರಾಯೀಮೇ, ನನಗೆ ಗೊತ್ತುಂಟು. ಇಸ್ರೇಲ್ ಮಾಡಿದ ವಿಷಯಗಳೆಲ್ಲವನ್ನು ನಾನು ಬಲ್ಲೆನು. ಎಫ್ರಾಯೀಮೇ, ನೀನು ಈಗಲೂ ಸೂಳೆಯಂತೆ ವರ್ತಿಸುತ್ತಿರುವೆ. ತನ್ನ ಪಾಪಗಳಿಂದ ಇಸ್ರೇಲ್ ಮಲಿನವಾಗಿದೆ.


ಹೀಗೆ ನಾನು ಮೋವಾಬಿನ ಅರಸರಿಗೆ ಅಂತ್ಯವನ್ನು ಮಾಡುವೆನು. ಮೋವಾಬಿನ ಎಲ್ಲಾ ನಾಯಕರುಗಳನ್ನು ಸಾಯಿಸುವೆನು” ಇದು ಯೆಹೋವನ ನುಡಿ.


ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ.


ನನ್ನ ಮಾತುಗಳನ್ನು ಕೇಳಿರಿ! ಜನರೇ, ನೀವು ಬಡವರ ಮೇಲೆ ನಡೆದಾಡುತ್ತೀರಿ. ಈ ದೇಶದ ಬಡಜನರನ್ನು ನಾಶಮಾಡುತ್ತೀರಿ.


“ಇದಲ್ಲದೆ ಬಡವನೆಂದು ಕರುಣಿಸಿ ಪಕ್ಷಪಾತದ ತೀರ್ಪನ್ನು ನೀಡಬಾರದು.


“ಬಡವರಿಗೆ ವ್ಯಾಜ್ಯದಲ್ಲಿ ನೀವು ಅನ್ಯಾಯವಾದ ತೀರ್ಪನ್ನು ಕೊಡಕೂಡದು.


ಯಾಕೆಂದರೆ ದುಷ್ಟನು ಬಡವರನ್ನು ಕಡೆಗಣಿಸಿದ್ದಾನೆ; ಬೇರೊಬ್ಬನು ಕಟ್ಟಿದ ಮನೆಗಳನ್ನು ಕಿತ್ತುಕೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು