ಆಮೋಸ 5:12 - ಪರಿಶುದ್ದ ಬೈಬಲ್12 ಯಾಕೆ ಹೀಗೆ? ಯಾಕೆಂದರೆ ನಿಮ್ಮ ಅನೇಕ ಪಾಪಕೃತ್ಯಗಳನ್ನು ನಾನು ಬಲ್ಲೆನು. ನೀವು ಭಯಂಕರ ಪಾಪಗಳನ್ನು ಮಾಡಿದ್ದೀರಿ. ನ್ಯಾಯವಂತರನ್ನು ಗಾಯಗೊಳಿಸಿದ್ದೀರಿ. ಅನ್ಯಾಯ ಮಾಡಲು ಹಣವನ್ನು ತೆಗೆದುಕೊಂಡಿದ್ದೀರಿ. ಬಡಜನರಿಗೆ ನ್ಯಾಯವನ್ನು ದೊರಕಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸಜ್ಜನರನ್ನು ಹಿಂಸಿಸಿ, ಲಂಚಕ್ಕೆ ಕೈ ಒಡ್ಡುವವರೇ, ನ್ಯಾಯಮಂಟಪದಲ್ಲಿ ಬಡವರಿಗೆ ನ್ಯಾಯದೊರಕಿಸದಿರುವವರೇ, ನಿಮ್ಮ ಪಾಪಗಳು ಅಪಾರ! ನಿಮ್ಮ ದ್ರೋಹಗಳು ಬಹಳ! ಇದು ನನಗೆ ಗೊತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಶಿಷ್ಟಹಿಂಸಕರೇ, ಲಂಚಕೋರರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ, ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ಪ್ರಬಲ, ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಏಕೆಂದರೆ ನಿಮ್ಮ ಅನೇಕ ಅಪರಾಧಗಳನ್ನೂ, ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು. ಅವರು ನಿರಪರಾಧಿಯನ್ನು ಬಾಧೆಪಡಿಸಿ, ಲಂಚವನ್ನು ತೆಗೆದುಕೊಂಡರು ಮತ್ತು ಬಾಗಿಲ ಬಳಿಯಲ್ಲಿರುವ ಬಡವರ ನ್ಯಾಯವನ್ನು ತೀರಿಸದೇ ಕಳುಹಿಸಿಬಿಟ್ಟಿರಿ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ.