Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:13 - ಪರಿಶುದ್ದ ಬೈಬಲ್‌

13 ಆ ಸಮಯದಲ್ಲಿ ಜ್ಞಾನಿಗಳಾದ ಬೋಧಕರು ಸುಮ್ಮನಿರುವರು. ಯಾಕೆಂದರೆ ಅದು ಕೆಟ್ಟ ಸಮಯವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಾಲವು ಕೆಟ್ಟದ್ದಾಗಿ ಇರುವುದರಿಂದ ವಿವೇಕಿಯಾದವನು ಸುಮ್ಮನಿರುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು; ಇದು ದುಷ್ಕಾಲವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಆ ಕಾಲದಲ್ಲಿ ಬುದ್ಧಿವಂತನು ಮೌನವಾಗಿರುವನು, ಏಕೆಂದರೆ ಅದು ಕೆಟ್ಟ ಕಾಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:13
17 ತಿಳಿವುಗಳ ಹೋಲಿಕೆ  

ನೆನಪಿನಲ್ಲಿಡಿರಿ! ಕಡೇ ದಿನಗಳಲ್ಲಿ ಅನೇಕ ತೊಂದರೆಗಳು ಬರುತ್ತವೆ.


ಅದಕ್ಕಾಗಿಯೇ ಯೆಹೋವನು ಹೀಗೆ ಹೇಳುತ್ತಾನೆ: “ನೋಡಿ, ನಾನು ಈ ಕುಟುಂಬದ ವಿರುದ್ಧವಾಗಿ ಸಂಕಟ ತರಲು ಯೋಚಿಸುತ್ತಿದ್ದೇನೆ. ನಿನ್ನನ್ನು ನೀನು ರಕ್ಷಿಸಲು ಸಾಧ್ಯವಿರುವುದಿಲ್ಲ. ಭಯಂಕರ ದಿವಸಗಳು ಬರುವದರಿಂದ ನೀನು ಉಬ್ಬಿಕೊಳ್ಳುವುದನ್ನು ನಿಲ್ಲಿಸುವೆ.


ಯಾರೂ ಪರಸ್ಪರ ವಾದಿಸದೆ ತಪ್ಪು ಹೊರಿಸದೆ ಇರಬೇಕು. ಯಾಜಕರೇ, ನಿಮ್ಮೊಂದಿಗೆ ನಾನು ವಾದಿಸುತ್ತೇನೆ.


ಬಟ್ಟೆಯನ್ನು ಹರಿಯುವ ಸಮಯ, ಬಟ್ಟೆಯನ್ನು ಹೊಲಿಯುವ ಸಮಯ. ಮೌನವಾಗಿರುವ ಸಮಯ, ಮಾತಾಡುವ ಸಮಯ.


ಆದಕಾರಣವೇ ನೀವು ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಬೇಕು. ಆಗ ಯುದ್ಧದ ದಿನದಲ್ಲಿಯೂ ಹೋರಾಟವು ಸಂಪೂರ್ಣವಾಗಿ ಮುಗಿದಾದ ಮೇಲೆಯೂ ದೃಢವಾಗಿನಿಂತುಕೊಳ್ಳಲು ನಿಮಗೆ ಸಾಧ್ಯವಾಗುವುದು.


ಆ ವಿಷಯವನ್ನು ಕೇಳಿದಾಗ ನನ್ನ ಶರೀರವೆಲ್ಲಾ ನಡುಗಿತು. ಆಶ್ಟರ್ಯದಿಂದ ನಾನು ಸಿಳ್ಳುಹಾಕಿದೆ. ನನ್ನ ಎಲುಬುಗಳ ಬಲಹೀನತೆಯಿಂದ ನಾನು ನಡುಗುವವನಾಗಿ ನಿಂತೆನು. ಅವರು ಜನರ ಮೇಲೆ ಬೀಳಲು ಬರುವಾಗ ನಾನು ಅವರ ನಾಶನದ ದಿವಸವನ್ನು ಎದುರುನೋಡುತ್ತಿದ್ದೇನೆ.


ಒಬ್ಬ ವ್ಯಕ್ತಿಯು ಸತ್ತಾಗ ಅವನ ಸಂಬಂಧಿಕರಲ್ಲಿ ಒಬ್ಬನು ಬಂದು ಶವವನ್ನು ಸುಡಲು ತೆಗೆದುಕೊಂಡು ಹೋಗುವನು. ಸಂಬಂಧಿಕನು ಬಂದು ಎಲುಬುಗಳನ್ನು ಕೊಂಡೊಯ್ಯುವನು. ಮನೆಯೊಳಗೆ ಅವಿತುಕೊಂಡಿರುವವರನ್ನು ಕರೆಯುವನು. “ಇನ್ನೂ ಸತ್ತ ಹೆಣಗಳು ಒಳಗಿವೆಯೋ?” ಎಂದು ವಿಚಾರಿಸುವನು. ಒಳಗಿದ್ದವರು “ಇಲ್ಲ” ಎಂದು ಉತ್ತರಿಸುವರು. ಆಗ ಆ ಸಂಬಂಧಿಕನು ಅವರನ್ನು ತಡೆದು, “ಯೆಹೋವನ ನಾಮವನ್ನು ನಾವು ಉಚ್ಚರಿಸಬಾರದು” ಎಂದು ಹೇಳುವನು.


ಇವರು ಯೆಶಾಯನಿಗೆ, “ಅರಸನಾದ ಹಿಜ್ಕೀಯನು ಈ ದಿವಸವನ್ನು ಶೋಕದ ದಿವಸವನ್ನಾಗಿ ಘೋಷಿಸಿದ್ದಾನೆ. ಇದು ದುಃಖದ ಸಮಯವಾಗಿದೆ. ಇದು ದಿನತುಂಬಿ ತಾಯಿಯ ಹೊಟ್ಟೆಯೊಳಗಿಂದ ಹೊರಬರಲು ಶಕ್ತವಾಗಿಲ್ಲದ ಕೂಸಿನಂತಿದೆ.


ಇದನ್ನು ಕೇಳಿ ಜೆರುಸಲೇಮಿನ ಜನರು ಮೌನವಾದರು. ಅವರು ಸೇನಾದಂಡನಾಯಕನಿಗೆ ಯಾವ ಉತ್ತರವನ್ನೂ ಕೊಡಲಿಲ್ಲ. ಯಾಕೆಂದರೆ ಹಿಜ್ಕೀಯನು ಅವರ ಸಂಗಡ ಮಾತಾಡಬಾರದೆಂದು ಹೇಳಿದ್ದನು.


ಮನುಷ್ಯನಿಗೆ ಮುಂದೆ ಏನಾಗುವುದೋ ತಿಳಿಯದು. ಬಲೆಯಲ್ಲಿ ಸಿಕ್ಕಿಕೊಂಡಿರುವ ಮೀನಿನಂತೆಯೂ ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯಂತೆಯೂ ಮನುಷ್ಯನು ತನಗೆ ಸಂಭವಿಸುವ ಕೇಡುಗಳಿಗೆ ಗುರಿಯಾಗುವನು.


ಆದರೆ ಜನರೆಲ್ಲರೂ ಸುಮ್ಮನಿದ್ದರು, ರಾಜನಾದ ಹಿಜ್ಕೀಯನು ಜನರಿಗೆ ಆಜ್ಞಾಪಿಸಿದ್ದರಿಂದ ಅವರು ಸೇನಾಧಿಪತಿಯೊಂದಿಗೆ ಒಂದು ಮಾತನ್ನೂ ಆಡಲಿಲ್ಲ. “ಅವನಿಗೆ ಏನನ್ನೂ ಹೇಳಬೇಡಿ” ಎಂದು ಹಿಜ್ಕೀಯನು ಹೇಳಿದ್ದನು.


ಈ ಮೂವರು ಮೌನವಾಗಿ ಅಲ್ಲಿ ನಿಂತಿದ್ದಾರೆ; ಅವರಲ್ಲಿ ಉತ್ತರವಿಲ್ಲ. ಹೀಗಿರಲು ನಾನಿನ್ನೂ ಕಾಯುತ್ತಲೇ ಇರಬೇಕೇ?


ನಾನು ಕಿವಿಕೇಳಿಸದವನಂತೆಯೂ ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು