Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:14 - ಪರಿಶುದ್ದ ಬೈಬಲ್‌

14 ದೇವರು ನಿಮ್ಮೊಂದಿಗಿದ್ದಾನೆಂದು ನೀವು ಹೇಳುತ್ತೀರಿ. ಆದ್ದರಿಂದ ನೀವು ಕೆಟ್ಟಕಾರ್ಯವನ್ನು ಮಾಡದೆ ಒಳ್ಳೆಯ ಕಾರ್ಯಗಳನ್ನು ಮಾಡಬೇಕು. ಆಗ ನೀವು ಬದುಕುವಿರಿ. ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಯಲ್ಲಿ ಖಂಡಿತವಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೆಟ್ಟದ್ದನಲ್ಲ ಒಳ್ಳೆಯದನ್ನು, ಅನುಸರಿಸಿ ಬಾಳಿರಿ. ನೀವು ಅಂದುಕೊಂಡಂತೆ, ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೆಟ್ಟದ್ದನ್ನು ಬಿಟ್ಟುಬಿಡಿ. ಒಳ್ಳೆಯದನ್ನು ಆಸಕ್ತಿಯಿಂದ ಮಾಡಿ; ನೀವು ಬಾಳುವಿರಿ. ಆಗ ನೀವು ಹೇಳಿಕೊಳ್ಳುವಂತೆ, ಸೇನಾಧೀಶ್ವರ ದೇವರಾದ ಸರ್ವೇಶ್ವರ ನಿಮ್ಮೊಡನೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕೆಟ್ಟದ್ದನ್ನಲ್ಲ, ಒಳ್ಳೆಯದನ್ನು ಅನುಸರಿಸಿರಿ, ಬಾಳುವಿರಿ; ನೀವು ಅಂದುಕೊಂಡಂತೆ ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಬದುಕುವ ಹಾಗೆ ಒಳ್ಳೆಯದನ್ನು ಹುಡುಕಿ, ಕೆಟ್ಟದ್ದನ್ನಲ್ಲ. ಆಗ ನೀವು ಹೇಳಿಕೊಳ್ಳುವಂತೆ ಸರ್ವಶಕ್ತರಾದ ಯೆಹೋವ ದೇವರು ನಿಮ್ಮ ಸಂಗಡ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:14
27 ತಿಳಿವುಗಳ ಹೋಲಿಕೆ  

ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು.


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ಪ್ರಭುವು ನಿನ್ನ ಆತ್ಮದ ಸಂಗಡ ಇರಲಿ. ಆತನ ಕೃಪೆಯು ನಿನ್ನೊಂದಿಗಿರಲಿ.


ಇಬ್ಬರು ಒಟ್ಟಾಗಿ ನಡೆಯಬೇಕಾದರೆ ಅದಕ್ಕೆ ಅವರಿಬ್ಬರೂ ಒಪ್ಪಿಕೊಂಡಿರಲೇಬೇಕು.


ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಧೈರ್ಯವಾಗಿದ್ದು ಬಲಗೊಳ್ಳು ಮತ್ತು ಈ ಕಾರ್ಯವನ್ನು ಮಾಡಿ ಮುಗಿಸು. ನನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವದರಿಂದ ನೀನು ಭಯಪಡುವ ಕಾರಣವೇ ಇಲ್ಲ. ಆತನು ನಿನ್ನೊಂದಿಗಿದ್ದು ಆಲಯವನ್ನು ಸಂಪೂರ್ಣ ಮಾಡುವಂತೆ ನಿನ್ನನ್ನು ನಡೆಸುತ್ತಾನೆ. ನೀನು ಯೆಹೋವನ ಆಲಯವನ್ನು ಕಟ್ಟುವೆ.


ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)


ಆಹಾರವಲ್ಲದ್ದಕ್ಕಾಗಿ ಹಣವನ್ನು ಯಾಕೆ ವೆಚ್ಚ ಮಾಡುತ್ತೀರಿ? ತೃಪ್ತಿಗೊಳಿಸದ ಆಹಾರಕ್ಕಾಗಿ ನೀವು ಯಾಕೆ ಶ್ರಮಿಸುತ್ತೀರಿ? ಗಮನವಿಟ್ಟು ಕೇಳಿರಿ. ನೀವು ಒಳ್ಳೆಯ ಆಹಾರವನ್ನು ತಿನ್ನುವಿರಿ; ನಿಮ್ಮ ಊಟದಲ್ಲಿ ಆನಂದಿಸುವಿರಿ. ಅವು ನಿಮ್ಮ ಆತ್ಮವನ್ನು ತೃಪ್ತಿಗೊಳಿಸುತ್ತವೆ.


ಒಳ್ಳೆಯದನ್ನು ಮಾಡುವವನನ್ನು ಜನರು ಗೌರವಿಸುವರು. ಕೇಡನ್ನು ಮಾಡುವವನಿಗೆ ಕೇವಲ ಕೇಡೇ ಆಗುವುದು.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


ಯುದ್ಧ ಮಾಡಲು ಯೋಜನೆ ಹಾಕಿರಿ. ಆದರೆ ನಿಮ್ಮ ಯೋಜನೆಯೆಲ್ಲಾ ನಿಷ್ಫಲವಾಗುವುದು. ನಿಮ್ಮ ಸೈನ್ಯಕ್ಕೆ ಆಜ್ಞೆಕೊಡಿರಿ. ಆದರೆ ಅದು ನಿಷ್ಪ್ರಯೋಜಕವಾಗುವುದು. ಯಾಕೆಂದರೆ ದೇವರು ನಮ್ಮೊಂದಿಗಿದ್ದಾನೆ!


ಅವರು ಮೋಶೆ ಮತ್ತು ಆರೋನರ ವಿರುದ್ಧ ಒಟ್ಟಾಗಿ ಸೇರಿಬಂದು, ಅವರಿಗೆ, “ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತಿರುವಿರಿ. ಈ ಸಮೂಹದವರಲ್ಲಿರುವ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ. ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಜನರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇನು?” ಎಂದು ಕೇಳಿದರು.


ಅದಕ್ಕೆ ದೇವರು “ನೀನು ಇದನ್ನು ಮಾಡಬಹುದು; ಯಾಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಿನ್ನನ್ನು ಕಳುಹಿಸಿದವನು ನಾನೇ ಎಂಬುದಕ್ಕೆ ಇದೇ ಸಾಕ್ಷಿಯಾಗಿರುವುದು. ನೀನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಮೇಲೆ, ನೀವು ಈ ಬೆಟ್ಟದ ಬಳಿ ನನ್ನನ್ನು ಆರಾಧಿಸುವಿರಿ” ಎಂದು ಹೇಳಿದನು.


ಯೆಹೋವನು ಯೋಸೇಫನ ಸಂಗಡವಿದ್ದು ಅವನ ಎಲ್ಲಾ ಕೆಲಸಕಾರ್ಯಗಳನ್ನು ಯಶಸ್ವಿಗೊಳಿಸುತ್ತಿದ್ದದ್ದರಿಂದ ಮುಖ್ಯಾಧಿಕಾರಿಯು ಎಲ್ಲಾ ವಿಷಯಗಳನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಾಗಿದ್ದನು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಯೆಹೋವನ ಬಳಿಗೆ ಹೋಗು. ಆಗ ಜೀವಿಸುವೆ. ಯೆಹೋವನ ಬಳಿಗೆ ನೀನು ಹೋಗದಿದ್ದಲ್ಲಿ ಯೋಸೇಫನ ಮನೆತನಕ್ಕೆ ಬೆಂಕಿಯು ಹಿಡಿಯುವುದು. ಆ ಬೆಂಕಿಯು ಯೋಸೇಫನ ಮನೆಯನ್ನು ದಹಿಸುವದು. ಬೇತೇಲಿನಲ್ಲಿ ಅದನ್ನು ಯಾರೂ ನಂದಿಸಲಾರರು.


ದೀನರೇ, ಯೆಹೋವನ ಬಳಿಗೆ ಬನ್ನಿರಿ. ಆತನ ನಿಯಮಗಳಿಗೆ ಒಳಗಾಗಿರಿ, ಒಳ್ಳೇದನ್ನು ಮಾಡಿರಿ, ದೀನರಾಗಿರಿ. ಯೆಹೋವನು ತನ್ನ ಕೋಪಾಗ್ನಿಯನ್ನು ಪ್ರದರ್ಶಿಸುವ ದಿವಸದಲ್ಲಿ ನೀವು ರಕ್ಷಿಸಲ್ಪಡಬಹುದು.


ಯೆಹೋವನನ್ನು ಪ್ರೀತಿಸುವವರೇ, ದುಷ್ಟತನವನ್ನು ದ್ವೇಷಿಸಿರಿ. ದೇವರು ತನ್ನ ಭಕ್ತರನ್ನು ಸಂರಕ್ಷಿಸುವನು. ದೇವರು ತನ್ನ ಸದ್ಭಕ್ತರನ್ನು ಕೆಡುಕರಿಂದ ರಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು