Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:16 - ಪರಿಶುದ್ದ ಬೈಬಲ್‌

16 ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಸಾರ್ವಜನಿಕ ಸ್ಥಳಗಳಲ್ಲಿ ಜನರು ಗೋಳಾಡುವರು. ರಸ್ತೆ ಬದಿಗಳಲ್ಲಿ ಜನರು ಗೋಳಾಡುವರು. ಪಟ್ಟಣದ ನಿವಾಸಿಗಳು ತಮ್ಮೊಂದಿಗೆ ಗೋಳಾಡಲು ರೈತರನ್ನು ಆಹ್ವಾನಿಸುವರು. ಅಳುವವರನ್ನು ಬಾಡಿಗೆಗೆ ಕರೆದುಕೊಂಡು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬೀದಿ ಚೌಕಗಳಲ್ಲೆಲ್ಲ ಗೋಳಾಟ ಇರುವುದು. ಹಾದಿಬೀದಿಗಳಲ್ಲೆಲ್ಲ ‘ಅಯ್ಯಯ್ಯೋ’ ಎಂದು ಜನರು ಪ್ರಲಾಪಿಸುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು ಗೋಳಾಡುವುದಕ್ಕೂ ಕರೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸೇನಾಧೀಶ್ವರದೇವರಾದ ಯೆಹೋವಕರ್ತನು ಇಂತೆನ್ನುತ್ತಾನೆ - ಎಲ್ಲಾ ಚೌಕಗಳಲ್ಲಿ ಕಿರಿಚಾಟವಾಗುವದು, ಸಕಲ ಬೀದಿಗಳಲ್ಲಿ ಅಯ್ಯಯ್ಯೋ ಎಂದು ಅರಚಿಕೊಳ್ಳುವರು; ರೈತರನ್ನು ಪ್ರಲಾಪಿಸುವದಕ್ಕೂ ಗೋಳಾಟದವರನ್ನು ಗೋಳಿಡುವದಕ್ಕೂ ಕರೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ಸರ್ವಶಕ್ತ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎಲ್ಲಾ ಬೀದಿಗಳಲ್ಲೂ ವಿಲಾಪಗಳು, ಎಲ್ಲಾ ಸಾರ್ವಜನಿಕ ಚೌಕದಲ್ಲಿ ದುಃಖದ ಗೋಳಾಟಗಳು ಎನ್ನುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು, ಗೋಳಾಡುವುದಕ್ಕೂ ಕರೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:16
23 ತಿಳಿವುಗಳ ಹೋಲಿಕೆ  

ರೈತರೇ, ದುಃಖಿಸಿರಿ, ದ್ರಾಕ್ಷಿತೋಟ ಮಾಡಿದವರೇ, ಗಟ್ಟಿಯಾಗಿ ಬೊಬ್ಬಿಡಿರಿ. ಗೋದಿಗಾಗಿಯೂ, ಜವೆಗೋದಿಗಾಗಿಯೂ ಅಳಿರಿ. ಯಾಕೆಂದರೆ ಬೆಳೆಯು ನಾಶವಾಯಿತು.


ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.


ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು, ದುಃಖದಿಂದ ಗೋಳಾಡುತ್ತಾ ಹೀಗೆ ಹೇಳಿದರು: ‘ಅಯ್ಯೋ! ಅಯ್ಯೋ! ಈ ಮಹಾನಗರಿಗೆ ಎಂಥಾ ಗತಿಯಾಯಿತು! ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದ್ದ ಜನರೆಲ್ಲರೂ ಅವಳ ಸಂಪತ್ತಿನಿಂದ ಶ್ರೀಮಂತರಾದರು! ಆದರೆ ಅವಳು ಒಂದೇ ಗಳಿಗೆಯಲ್ಲಿ ನಾಶವಾಗಿಬಿಟ್ಟಳು!


ಅವಳ ಯಾತನೆಯನ್ನು ಕಂಡು ರಾಜರುಗಳು ಭಯದಿಂದ ದೂರನಿಂತು ಹೀಗೆನ್ನುವರು: ‘ಅಯ್ಯೋ, ಅಯ್ಯೋ, ಮಹಾನಗರಿಯೇ, ಬಲಿಷ್ಠವಾದ ಬಾಬಿಲೋನ್ ಪಟ್ಟಣವೇ, ಒಂದೇ ಗಳಿಗೆಯಲ್ಲಿ ನಿನಗೆ ದಂಡನೆ ಆಯಿತಲ್ಲಾ!’


ಆಗ ಜನರು ನಿಮ್ಮ ಬಗ್ಗೆ ಹಾಡನ್ನು ಹಾಡುವರು. ಜನರು ಶೋಕಗೀತೆಯನ್ನು ಹಾಡುವರು. ‘ನಾವು ನಾಶವಾದೆವು! ಯೆಹೋವನು ನಮ್ಮ ದೇಶವನ್ನು ನಮ್ಮಿಂದ ತೆಗೆದುಕೊಂಡು ಇತರ ಜನರಿಗೆ ಕೊಟ್ಟನು. ಹೌದು, ಆತನು ನಮ್ಮ ಭೂಮಿಯನ್ನು ನಮ್ಮಿಂದ ತೆಗೆದುಕೊಂಡುಬಿಟ್ಟನು, ನಮ್ಮ ಗದ್ದೆಗಳನ್ನು ಯೆಹೋವನು ನಮ್ಮ ವೈರಿಗಳಿಗೆ ಪಾಲು ಮಾಡಿಕೊಟ್ಟನು.


ಮುಂದೆ ಸಂಭವಿಸುವ ಘಟನೆಗಳ ಬಗ್ಗೆ ನಾನು ಬಹಳ ದುಃಖಿತನಾಗಿದ್ದೇನೆ. ನಾನು ಬಟ್ಟೆಯನ್ನಾಗಲಿ ಚಪ್ಪಲಿಯನ್ನಾಗಲಿ ಹಾಕಿಕೊಳ್ಳದೇ ಹೋಗುವೆನು. ನಾಯಿಯಂತೆ ಅಳುವೆನು, ಪಕ್ಷಿಯಂತೆ ಗೋಳಾಡುವೆನು.


ನಿಮ್ಮ ಸಂತಸದ ದಿವಸಗಳನ್ನು ಸತ್ತವರಿಗಾಗಿ ರೋದಿಸುವ ದಿವಸಗಳನ್ನಾಗಿ ಮಾಡುವೆನು. ನಿಮ್ಮ ಹಾಡುಗಳೆಲ್ಲಾ ಶೋಕಗೀತೆಯಾಗುವವು. ಎಲ್ಲರೂ ಶೋಕಬಟ್ಟೆಯನ್ನು ಧರಿಸುವಂತೆ ಮಾಡುವೆನು. ಪ್ರತಿ ತಲೆಯನ್ನು ಬೋಳು ತಲೆಯನ್ನಾಗಿ ಮಾಡುವೆನು. ಒಬ್ಬನೇ ಮಗನನ್ನು ಕಳೆದುಕೊಳ್ಳುವಾಗ ರೋದಿಸುವ ಹಾಗೆ ಗಟ್ಟಿಯಾಗಿ ರೋದಿಸುವಂತೆ ಮಾಡುತ್ತೇನೆ. ಅದರ ಅಂತ್ಯ ಕಹಿಯಾಗಿರುವುದು.”


ಆದ್ದರಿಂದ ನಾನು ನಿನ್ನನ್ನು ದಮಸ್ಕದ ಆಚೆಗೆ ಸೆರೆಯಾಳಾಗಿ ಕಳುಹಿಸುವೆನು.” ಇದು ಯೆಹೋವನ ನುಡಿ.


ಸರ್ವಶಕ್ತನೂ ನನ್ನ ಒಡೆಯನೂ ಆಗಿರುವ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, “ಯಾಕೋಬನ ಕುಟುಂಬದವರಿಗೆ ಈ ವಿಷಯವನ್ನು ತಿಳಿಸು.


ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ.


ಮದುಮಗನು ಸತ್ತುಹೋದಾಗ ಮದುಮಗಳು ಗೋಳಾಡುವಂತೆ ನೀವು ಗೋಳಾಡಿರಿ.


ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ. ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.


ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರಗಳನ್ನು ಧರಿಸುವರು.


ಮೋವಾಬ್ ದೇಶದಲ್ಲೆಲ್ಲಾ ಅಳುವ ಸದ್ದು ಕೇಳಿಸುತ್ತದೆ. ದೂರದಲ್ಲಿರುವ ಎಗ್ಲಯಿಮಿನಲ್ಲೂ ಜನರು ಅಳುತ್ತಿದ್ದಾರೆ. ಬೆಯೇರ್ ಏಲೀಮ್ ಪಟ್ಟಣದಲ್ಲೂ ಜನರು ರೋಧಿಸುತ್ತಾರೆ.


ಯೆರೆಮೀಯನು ಅವನ ಬಗ್ಗೆ ಶೋಕಗೀತೆಗಳನ್ನು ರಚಿಸಿ ಹಾಡಿದನು. ಆ ಗೀತೆಗಳನ್ನು ಗಂಡಸರು ಹೆಂಗಸರು ಈಗಲೂ ಹಾಡುತ್ತಾರೆ. ಯೋಷೀಯನ ಕುರಿತು ದುಃಖದ ಹಾಡನ್ನು ಹಾಡುವದು ಅವರಿಗೆ ರೂಢಿಯಾಗಿದೆ. ಆ ಗೀತೆಗಳನ್ನು ಮರಣದ ಹಾಡಿನ ಪುಸ್ತಕದಲ್ಲಿ ಬರೆಯಲಾಗಿದೆ.


“ಜನರು ಭಯದಿಂದ ಗೋಳಿಡುವದನ್ನು ನಾವು ಕೇಳುತ್ತಿದ್ದೇವೆ. ಜನರು ಅಂಜಿಕೊಂಡಿದ್ದಾರೆ; ನೆಮ್ಮದಿಯಿಲ್ಲದವರಾಗಿದ್ದಾರೆ.


ಹೀಗೆ ದೇಶವು ಸತ್ತವರಿಗಾಗಿ ಗೋಳಾಡುವ ಮನುಷ್ಯನಂತಿರುವದು. ಆದ್ದರಿಂದ ಅದರ ಜನರೆಲ್ಲಾ ಬಲಹೀನರಾಗತ್ತಾರೆ. ಅಡವಿಯಲ್ಲಿರುವ ಪ್ರಾಣಿಗಳೂ ಆಕಾಶದ ಪಕ್ಷಿಗಳೂ ಸಮುದ್ರದಲ್ಲಿರುವ ಮೀನುಗಳೂ ಸಾಯುತ್ತಿವೆ.


ಶೋಕಿಸಿರಿ. ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು.


ನನ್ನ ಆಲಯದಲ್ಲಿ ಹಾಡುವ ಹಾಡುಗಳು ಮರಣದ ಶೋಕಗೀತೆಗಳಾಗುವವು. ಇವು ಕರ್ತನಾದ ಯೆಹೋವನ ನುಡಿಗಳು. ಸತ್ತಹೆಣಗಳು ಎಲ್ಲೆಲ್ಲಿಯೂ ಬಿದ್ದುಕೊಂಡಿರುವವು. ಜನರು ಮೌನದಿಂದಿದ್ದು ಸತ್ತವರನ್ನು ಎತ್ತಿ ರಾಶಿಗೆ ಬಿಸಾಡುವರು.”


ನಾನು ಯೆಹೂದದ ಜನರನ್ನು ಬೇರೆ ಜನಾಂಗಗಳಲ್ಲಿ ಚದರಿಸಿಬಿಡುತ್ತೇನೆ. ಅವರು ಮತ್ತು ಅವರ ತಂದೆಗಳು ಎಂದೂ ಅರಿಯದ ಅಪರಿಚಿತ ದೇಶಗಳಲ್ಲಿ ಅವರು ವಾಸಿಸುವರು. ನಾನು ಖಡ್ಗಧಾರಿಗಳಾದ ಜನರನ್ನು ಕಳುಹಿಸುತ್ತೇನೆ. ಅವರು ಯೆಹೂದದ ಜನರನ್ನು ನಿರ್ಮೂಲವಾಗುವವರೆಗೆ ಕೊಲ್ಲುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು