Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:10 - ಪರಿಶುದ್ದ ಬೈಬಲ್‌

10 ಒಬ್ಬ ವ್ಯಕ್ತಿಯು ಸತ್ತಾಗ ಅವನ ಸಂಬಂಧಿಕರಲ್ಲಿ ಒಬ್ಬನು ಬಂದು ಶವವನ್ನು ಸುಡಲು ತೆಗೆದುಕೊಂಡು ಹೋಗುವನು. ಸಂಬಂಧಿಕನು ಬಂದು ಎಲುಬುಗಳನ್ನು ಕೊಂಡೊಯ್ಯುವನು. ಮನೆಯೊಳಗೆ ಅವಿತುಕೊಂಡಿರುವವರನ್ನು ಕರೆಯುವನು. “ಇನ್ನೂ ಸತ್ತ ಹೆಣಗಳು ಒಳಗಿವೆಯೋ?” ಎಂದು ವಿಚಾರಿಸುವನು. ಒಳಗಿದ್ದವರು “ಇಲ್ಲ” ಎಂದು ಉತ್ತರಿಸುವರು. ಆಗ ಆ ಸಂಬಂಧಿಕನು ಅವರನ್ನು ತಡೆದು, “ಯೆಹೋವನ ನಾಮವನ್ನು ನಾವು ಉಚ್ಚರಿಸಬಾರದು” ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಶವವನ್ನು ಸುಡಲು ಬಂದ ಸಂಬಂಧಿಕರು, ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮ ಹತ್ತಿರ ಇನ್ನೂ ಯಾರಾದರೂ ಇದ್ದಾರೋ?” ಎಂದು ಮನೆಯಲ್ಲಿರುವವರನ್ನು ಕೇಳುವಾಗ ಅವನು, “ಇಲ್ಲ” ಎನ್ನುವನು. ಆಗ ಸಂಬಂಧಿಕನು, “ಸುಮ್ಮನಿರು, ನಾವು ಯೆಹೋವನ ಹೆಸರನ್ನು ನೆನಪುಮಾಡಿಕೊಳ್ಳಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಶವವನ್ನು ಸುಡಲು ಬಂದ ಸಂಬಂಧಿಕರು ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮಲ್ಲಿ ಯಾರಾದರೂ ಉಳಿದಿದ್ದಾರೋ?” ಎಂದು ಒಳಮನೆಯಲ್ಲಿ ಇರುವವನನ್ನು ಕೇಳಿದರೆ, ಅವನು “ಇಲ್ಲ” ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ಸರ್ವೇಶ್ವರಸ್ವಾಮಿಯ ಹೆಸರನ್ನೂ ಎತ್ತಕೂಡದು” ಎಂದು ಎಚ್ಚರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸುಡಲು ಬಂದ ದಾಯಾದಿಯು ಒಂದು ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋಗಬೇಕೆಂದು ಅದನ್ನೆತ್ತಿ - ನಿನ್ನ ಹತ್ತಿರ ಇನ್ನು ಯಾರಾದರೂ ಇದ್ದಾರೋ ಎಂದು ಒಳಮನೆಯಲ್ಲಿರುವವನನ್ನು ಕೇಳುವಾಗ ಅವನು ಇಲ್ಲವೆನ್ನಲು ಇವನು ಯೆಹೋವನ ಹೆಸರನ್ನು ಎತ್ತಾನೆಂದು ದಾಯಾದಿಯು ಭಯಪಟ್ಟು ಸುಮ್ಮನಿರು ಎಂದು ಅವನನ್ನು ತಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮತ್ತು ಸಂಬಂಧಿಯೊಬ್ಬರು ಮೃತ ದೇಹಗಳನ್ನು ಸುಡಲು ಆ ಮನೆಯಿಂದ ಹೊರತೆಗೆಯಲು ಬಂದಾಗ ಮತ್ತು ಅಲ್ಲಿ ಅಡಗಿಕೊಂಡಿದ್ದ ವ್ಯಕ್ತಿಯನ್ನು, “ನಿಮ್ಮೊಂದಿಗೆ ಬೇರೆ ಯಾರಾದರೂ ಇದ್ದಾರೆಯೇ?” ಎಂದು ಕೇಳಲು ಅವನು ಇಲ್ಲ ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ನಾವು ಯೆಹೋವ ದೇವರ ಹೆಸರನ್ನು ತೆಗೆದುಕೊಳ್ಳಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:10
11 ತಿಳಿವುಗಳ ಹೋಲಿಕೆ  

ನನ್ನ ಆಲಯದಲ್ಲಿ ಹಾಡುವ ಹಾಡುಗಳು ಮರಣದ ಶೋಕಗೀತೆಗಳಾಗುವವು. ಇವು ಕರ್ತನಾದ ಯೆಹೋವನ ನುಡಿಗಳು. ಸತ್ತಹೆಣಗಳು ಎಲ್ಲೆಲ್ಲಿಯೂ ಬಿದ್ದುಕೊಂಡಿರುವವು. ಜನರು ಮೌನದಿಂದಿದ್ದು ಸತ್ತವರನ್ನು ಎತ್ತಿ ರಾಶಿಗೆ ಬಿಸಾಡುವರು.”


ಆದ್ದರಿಂದ ಯಾಬೆಷಿನ ಸೈನಿಕರೆಲ್ಲ ಬೇತ್‌ಷೆಯಾನಿಗೆ ಹೋದರು. ಅವರು ರಾತ್ರಿಯೆಲ್ಲಾ ನಡೆದರು! ನಂತರ ಅವರು ಬೇತ್‌ಷೆಯಾನಿನ ಗೋಡೆಯಲ್ಲಿದ್ದ ಸೌಲನ ದೇಹವನ್ನು ಇಳಿಸಿದರು. ನಂತರ ಅವರು ಸೌಲನ ಗಂಡುಮಕ್ಕಳ ದೇಹಗಳನ್ನೂ ಇಳಿಸಿದರು. ನಂತರ ಅವರು ಆ ದೇಹಗಳನ್ನು ಯಾಬೇಷಿಗೆ ತೆಗೆದುಕೊಂಡು ಹೋದರು. ಸೌಲ ಮತ್ತು ಅವನ ಮೂವರು ಗಂಡುಮಕ್ಕಳ ದೇಹಗಳನ್ನು ಯಾಬೇಷಿನ ಜನರು ಅಲ್ಲಿ ದಹಿಸಿಬಿಟ್ಟರು.


ಆ ಸಮಯದಲ್ಲಿ ಜ್ಞಾನಿಗಳಾದ ಬೋಧಕರು ಸುಮ್ಮನಿರುವರು. ಯಾಕೆಂದರೆ ಅದು ಕೆಟ್ಟ ಸಮಯವಾಗಿರುತ್ತದೆ.


ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.


ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಧಿಸಬೇಕೆನ್ನುವವನು ಹೋಗಿ ಆರಾಧಿಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳೇ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


ಆದರೆ, ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ. ‘ನಾನು ಆಣೆಮಾಡಿ ಹೀಗೆ ಹೇಳುತ್ತೇನೆ. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದಿಯರಲ್ಲಿ ಯಾರೊಬ್ಬರೂ ಇನ್ನು ಮುಂದೆ ನನ್ನ ಹೆಸರಿನ ಮೇಲೆ ಆಣೆಯಿಟ್ಟು ಹೇಳಲಾರರು ಎಂದು ನಾನು ನನ್ನ ಮಹತ್ತಾದ ನಾಮದ ಮೇಲೆ ಆಣೆಯಿಟ್ಟುಕೊಂಡು ಹೇಳುತ್ತೇನೆ. ಇನ್ನು ಮುಂದೆ ಎಂದೂ ಅವರು “ದೇವರ ಆಣೆಯಾಗಿ” ಎಂದು ಹೇಳಲಾರರು.


“ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನ್ನು ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಬಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನ್ನು ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವದಿಲ್ಲ.


ಇಸ್ರೇಲರು ಮೋಶೆಗೆ, “ನಾವೆಲ್ಲರು ಪ್ರಾಣ ಕಳೆದುಕೊಂಡು ನಾಶವಾಗುತ್ತೇವಲ್ಲಾ, ನಮ್ಮಲ್ಲಿ ಯಾರೂ ಉಳಿಯುವುದಿಲ್ಲ.


ಯೋಷೀಯನು ಸುತ್ತಲೂ ನೋಡಿದಾಗ ಬೆಟ್ಟದ ಮೇಲಿದ್ದ ಸ್ಮಶಾನಗಳನ್ನು ಕಂಡನು. ಅವನು ಜನರನ್ನು ಕಳುಹಿಸಿ ಆ ಸ್ಮಶಾನಗಳಿಂದ ಎಲುಬುಗಳನ್ನು ತರಿಸಿ ಆ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿಯಲ್ಲಿ, ಯೋಷೀಯನು ಯಜ್ಞವೇದಿಕೆಯನ್ನು ಹೊಲಸು ಮಾಡಿದನು. ಇದು ಪ್ರವಾದಿಯು ಘೋಷಿಸಿದ್ದ ಯೆಹೋವನ ಸಂದೇಶದಂತೆ ಸಂಭವಿಸಿತು. ಯಾರೊಬ್ಬಾಮನು ಯಜ್ಞವೇದಿಕೆಯ ಪಕ್ಕದಲ್ಲಿ ನಿಂತಿದ್ದಾಗ ಪ್ರವಾದಿಯು ಈ ಸಂಗತಿಗಳನ್ನು ಪ್ರಕಟಿಸಿದ್ದನು. ನಂತರ ಯೋಷೀಯನು ಸುತ್ತಲೂ ನೋಡಿದಾಗ, ದೇವಮನುಷ್ಯನ ಸಮಾಧಿಯನ್ನು ಕಂಡನು.


ಎಲೀಷನು ಹಿರಿಯರೊಂದಿಗೆ ಇನ್ನೂ ಮಾತನಾಡುತ್ತಿರುವಾಗ ಸಂದೇಶಕನು ಅವನ ಬಳಿಗೆ ಬಂದನು. ಅವನ ಸಂದೇಶವು ಹೀಗಿತ್ತು: “ಈ ಆಪತ್ತು ಯೆಹೋವನಿಂದಲೇ ಬಂದಿದೆ! ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು?”


ಮೃತ್ಯುವು ಬಂದು ನಮ್ಮ ಕಿಟಕಿಗಳಿಂದ ಇಳಿದಿದೆ. ಮೃತ್ಯುವು ನಮ್ಮ ಅರಮನೆಗಳಲ್ಲಿ ಪ್ರವೇಶ ಮಾಡಿದೆ. ಬೀದಿಯಲ್ಲಿ ಆಡುವ ನಮ್ಮ ಮಕ್ಕಳಿಗೆ ಮೃತ್ಯುವು ಹಿಡಿದುಕೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸೇರುವ ನಮ್ಮ ಯುವಕರಿಗೆ ಮೃತ್ಯುವು ಹಿಡಿದುಕೊಂಡಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು