Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:11 - ಪರಿಶುದ್ದ ಬೈಬಲ್‌

11 ನೋಡು, ಯೆಹೋವನು ಆಜ್ಞೆಯನ್ನು ಕೊಡುವನು. ಆಗ ಭವ್ಯಭವನಗಳು ಒಡೆದು ಚೂರುಚೂರಾಗಿ ಬೀಳುವವು. ಮತ್ತು ಸಣ್ಣ ಮನೆಗಳು ಚಿಂದಿಚಿಂದಿಯಾಗಿ ಚೂರಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಗೋ, ನೋಡಿರಿ, ಯೆಹೋವನು ಆಜ್ಞಾಪಿಸಲು, ದೊಡ್ಡ ಮನೆಯು ಕೆಡವಲ್ಪಟ್ಟು ಚೂರುಚೂರಾಯಿತು, ಚಿಕ್ಕ ಮನೆಯೂ ಮುರಿದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಗೋ, ಸರ್ವೇಶ್ವರ ಆಜ್ಞಾಪಿಸಲು, ಕುಸಿದುಬೀಳುವುವು ಮಹಾಸೌಧಗಳು, ನುಚ್ಚುನೂರಾಗುವುವು ಚಿಕ್ಕಚಿಕ್ಕ ಮನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಗೋ, ಯೆಹೋವನು ಆಜ್ಞಾಪಿಸಲು ದೊಡ್ಡ ಮನೆಯು ಹೊಡೆಯಲ್ಪಟ್ಟು ಚೂರುಚೂರಾಗುವದು, ಚಿಕ್ಕ ಮನೆಯೂ ಮುರಿದುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ, ಯೆಹೋವ ದೇವರು ಆಜ್ಞಾಪಿಸುತ್ತಾರೆ, ಆತನು ದೊಡ್ಡ ಮನೆಯನ್ನು ಸೀಳುಗಳಿಂದಲೂ ಚಿಕ್ಕ ಮನೆಯನ್ನು ಬಿರುಕುಗಳಿಂದಲೂ ಹೊಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:11
21 ತಿಳಿವುಗಳ ಹೋಲಿಕೆ  

ಬೇಸಿಗೆ ಕಾಲದ ಅರಮನೆಯೊಂದಿಗೆ ಚಳಿಗಾಲದ ಅರಮನೆಯನ್ನೂ ನಾಶಮಾಡುವೆನು. ದಂತದ ಭವನಗಳನ್ನು ನಾಶಮಾಡುವೆನು, ಇತರ ಎಷ್ಟೋ ಮನೆಗಳು ನಾಶವಾಗುವವು.” ಇವು ಯೆಹೋವನ ನುಡಿಗಳು.


ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ. ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯ ಮಾಡುವವು. ನನ್ನ ಮಾತುಗಳು ತಮಗೆ ನೇಮಕವಾದ ಆ ಕಾರ್ಯಗಳನ್ನು ಮಾಡಿಮುಗಿಸುವವು.


ನೆಬೂಜರದಾನನು ದೇವಾಲಯವನ್ನೂ ರಾಜನ ಅರಮನೆಯನ್ನೂ ಜೆರುಸಲೇಮಿನಲ್ಲಿದ್ದ ಮನೆಗಳನ್ನೆಲ್ಲಾ ಸುಟ್ಟುಹಾಕಿದನು. ಅವನು ಮಹಾಸೌಧಗಳನ್ನು ನಾಶಗೊಳಿಸಿದನು.


ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು.


ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಮಾಡಲು ನಾನು ಎಲ್ಲಾ ಜನಾಂಗಗಳನ್ನು ಒಟ್ಟಿಗೆ ಸೇರಿಸುವೆನು. ಅವರು ಪಟ್ಟಣವನ್ನು ವಶಪಡಿಸಿಕೊಂಡು ಕಟ್ಟಡಗಳನ್ನೆಲ್ಲಾ ಧ್ವಂಸಮಾಡುವರು. ಹೆಂಗಸರನ್ನು ಬಲಾತ್ಕಾರದಿಂದ ಸಂಭೋಗಿಸುವರು. ಜನಸಂಖ್ಯೆಯ ಅರ್ಧದಷ್ಟು ಜನರು ಸೆರೆಹಿಡಿಯಲ್ಪಡುವರು. ಉಳಿದವರನ್ನು ಪಟ್ಟಣದಿಂದ ಕೊಂಡೊಯ್ಯುವುದಿಲ್ಲ.


ಅಶ್ಶೂರದ ಅರಸನೇ, ನಿನ್ನ ವಿಷಯವಾಗಿ ಯೆಹೋವನು ಕೊಟ್ಟ ಆಜ್ಞೆ ಏನೆಂದರೆ, “ನಿನ್ನ ಹೆಸರನ್ನು ಧರಿಸುವ ಸಂತತಿಯವರು ಯಾರೂ ಇರುವುದಿಲ್ಲ. ನಿನ್ನ ಕೆತ್ತನೆಯ ವಿಗ್ರಹಗಳನ್ನು ನಾನು ನಾಶಮಾಡುವೆನು. ನಿನ್ನ ದೇವರುಗಳ ಆಲಯದಲ್ಲಿರುವ ಲೋಹದ ಬೊಂಬೆಗಳನ್ನು ಕೆಡವಿಬಿಡುವೆನು. ನಿನ್ನ ಅಂತ್ಯವು ಬೇಗನೆ ಬರಲಿರುವುದರಿಂದ ನಿನಗೆ ಸಮಾಧಿಯನ್ನು ತಯಾರುಮಾಡುತ್ತಿದ್ದೇನೆ.”


ಇಸ್ರೇಲನ್ನು ನಾಶನ ಮಾಡುವದಕ್ಕಾಗಿ ಆಜ್ಞಾಪಿಸುವೆನು. ಇಸ್ರೇಲರನ್ನು ನಾನು ಪರದೇಶಗಳಲ್ಲಿ, ಚದರಿಸಿಬಿಡುವೆನು. ಒಬ್ಬನು ಜಾಳಿಗೆಯಲ್ಲಿ ಹಿಟ್ಟನ್ನು ಜಾಳಿಸುವಂತೆ ಇರುವುದು. ಒಳ್ಳೆಯ ಹಿಟ್ಟು ಜಾಳಿಗೆಯ ರಂಧ್ರದ ಮೂಲಕ ಕೆಳಗೆ ಬಿದ್ದರೆ, ಹಿಟ್ಟಿನ ಗಂಟುಗಳು ಜಾಳಿಗೆಯ ಮೇಲೆ ಸಿಕ್ಕಿಕೊಳ್ಳುವವು. ಯಾಕೋಬನ ಕುಟುಂಬಕ್ಕೆ ಇದೇ ರೀತಿಯಾಗುವುದು.


ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.


ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಈ ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು: “ಯಾಕೋಬನು ಹೆಚ್ಚಳಪಡುವಂಥವುಗಳನ್ನು ನಾನು ದ್ವೇಷಿಸುತ್ತೇನೆ. ಅವನ ಬಲವಾದ ಬುರುಜುಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಶತ್ರುಗಳು ಬಂದು ಪಟ್ಟಣವನ್ನೂ ಪಟ್ಟಣದಲ್ಲಿರುವದೆಲ್ಲವನ್ನೂ ಸೂರೆಮಾಡುವಂತೆ ಮಾಡುವೆನು.”


ಸಮಾರ್ಯವು ಶಿಕ್ಷಿಸಲ್ಪಡಬೇಕು. ಯಾಕೆಂದರೆ ಆಕೆಯು ತನ್ನ ದೇವರಿಗೆ ವಿರುದ್ಧವಾಗಿ ನಡೆದಳು. ಇಸ್ರೇಲರು ಖಡ್ಗದಿಂದ ಸಾಯುವರು. ಅವರ ಮಕ್ಕಳು ಹರಿಯಲ್ಪಟ್ಟು ಚೂರುಚೂರಾಗುವರು. ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವರು.”


“ನಾನು ಅವರನ್ನು ಆ ಜನರಿಂದ ಪ್ರತ್ಯೇಕಿಸಿದ್ದೇನೆ; ನಾನೇ ಅವರಿಗೆ ಆಜ್ಞಾಪಿಸುವೆನು. ನಾನು ಕೋಪಗೊಂಡಿರುವುದರಿಂದ ಆ ಜನರನ್ನು ಶಿಕ್ಷಿಸಲು ನನ್ನ ಉತ್ತಮವಾದ ಜನರನ್ನು ಒಟ್ಟಾಗಿ ಸೇರಿಸಿದ್ದೇನೆ. ಉತ್ಸಾಹಶಾಲಿಗಳಾದ ನನ್ನ ಜನರ ಬಗ್ಗೆ ನಾನು ಹೆಮ್ಮೆಪಡುತ್ತೇನೆ.


ಒಬ್ಬನು ಕೆಲಸಮಾಡಲಾರದಷ್ಟು ತುಂಬ ಸೋಮಾರಿಯಾಗಿದ್ದರೆ, ಅವನ ಮನೆಯು ಸೋರಲಾರಂಭಿಸುವುದು; ಅದರ ಮೇಲ್ಛಾವಣಿಗೆಯು ಬೀಳತೊಡಗುವುದು.


ಆತನು ಆಜ್ಞಾಪಿಸಲು ಮಿಡತೆಗಳೂ ಜಿಟ್ಟೆಹುಳಗಳೂ ಅಸಂಖ್ಯಾತವಾಗಿ ಬಂದವು.


ಆತನು ಆಜ್ಞಾಪಿಸಲು ವಿಷದ ಹುಳಗಳೂ ಹೇನುಗಳೂ ಬಂದವು. ಅವು ಎಲ್ಲೆಲ್ಲಿಯೂ ಹರಡಿಕೊಂಡವು.


ದೇವರು ಆ ದೇಶಕ್ಕೆ ಬರಗಾಲವನ್ನು ಬರಮಾಡಿದನು. ಜನರಿಗೆ ತಿನ್ನುವುದಕ್ಕೂ ಸಾಕಷ್ಟು ಆಹಾರವಿರಲಿಲ್ಲ.


ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ.


ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು