Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:2 - ಪರಿಶುದ್ದ ಬೈಬಲ್‌

2 ಹೋಗಿ ಕಲ್ನೆಯ ಕಡೆಗೆ ದಿಟ್ಟಿಸಿರಿ. ಅಲ್ಲಿಂದ ದೊಡ್ಡ ಪಟ್ಟಣವಾದ ಹಾಮಾತಿಗೆ ಹೋಗಿರಿ. ಫಿಲಿಷ್ಟಿಯರ ಗತ್ ಪಟ್ಟಣಕ್ಕೆ ಹೋಗಿರಿ. ಆ ಜನಾಂಗಗಳಿಗಿಂತ ನೀವು ಉತ್ತಮರೋ? ಇಲ್ಲ. ಅವರ ರಾಜ್ಯವು ನಿಮಗಿಂತ ವಿಸ್ತಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ಪ್ರಮುಖರು, “ಕಲ್ನೆಗೆ ಹೋಗಿ ನೋಡಲಿ; ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ; ಆ ಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಗಳಿಗಿಂತ ದೊಡ್ಡದೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕಲ್ನೆ ಪಟ್ಟಣಕ್ಕೆ ಹೋಗಿ ನೋಡಿ. ಅಲ್ಲಿಂದ ಪ್ರಖ್ಯಾತ ಪಟ್ಟಣವಾದ ಹಮಾತಿಗೆ ನಡೆಯಿರಿ. ಹಮಾತಿನಿಂದ ಫಿಲಿಷ್ಟಿಯರ ಊರಾದ ಗತ್ ನಗರಕ್ಕೆ ಇಳಿದುಹೋಗಿರಿ. ಅವು ನಿಮ್ಮ ರಾಜ್ಯಗಳಿಗಿಂತ ದೊಡ್ಡವೋ? ಅವುಗಳ ಪ್ರಾಂತ್ಯ, ನಿಮ್ಮ ಪ್ರಾಂತ್ಯಕ್ಕಿಂತ ಹಿರಿದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕಲ್ನೆಗೆ ಹೋಗಿ ನೋಡಿರಿ, ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ, ಆಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ; ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತವು ನಿಮ್ಮ ಪ್ರಾಂತಕ್ಕಿಂತ ದೊಡ್ಡದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕಲ್ನೇ ಪಟ್ಟಣಕ್ಕೆ ಹೋಗಿ ನೋಡಿರಿ. ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ಹೋಗಿರಿ. ಅಲ್ಲಿಂದ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ನಿಮ್ಮ ಎರಡು ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:2
19 ತಿಳಿವುಗಳ ಹೋಲಿಕೆ  

ನಿನೆವೆಯೇ, ನೀನು ನೈಲ್ ನದಿಯ ದಡದಲ್ಲಿರುವ ತೆಬೆಸ್ ಗಿಂತಲೂ ಉತ್ತಮಳೋ? ಇಲ್ಲ. ತೆಬೆಸಿನ ಸುತ್ತಲೂ ನೀರು ಇತ್ತು. ಆ ನೀರು ಆಕೆಯನ್ನು ತನ್ನ ವೈರಿಗಳಿಂದ ಕಾಪಾಡಲು ಶಕ್ತವಾಯಿತು. ಆ ನೀರನ್ನು ಆಕೆಯು ಗೋಡೆಯಂತೆ ಉಪಯೋಗಿಸಿದಳು.


ಹಮಾತ್ ಮತ್ತು ಅರ್ಪಾದ್ ದೇವರುಗಳು ಎಲ್ಲಿವೆ? ಸೆಫರ್ವಯಿಮ್, ಹೇನ, ಇವ್ವಾದ ದೇವರುಗಳು ಎಲ್ಲಿವೆ? ಸಮಾರ್ಯವನ್ನು ನನ್ನ ಕೈಗೆ ಸಿಗದಂತೆ ಅವು ರಕ್ಷಿಸಿದವೇ? ಇಲ್ಲ!


ನಿಮ್ರೋದನ ರಾಜ್ಯವು ಶಿನಾರ್ ದೇಶದಲ್ಲಿರುವ ಬಾಬಿಲೋನಿನಲ್ಲಿ, ಯೆರೆಕ್‌ನಲ್ಲಿ ಮತ್ತು ಅಕ್ಕದ್ ಮತ್ತು ಕಲ್ನೇ ಎಂಬ ಪಟ್ಟಣಗಳಲ್ಲಿ ಪ್ರಾರಂಭವಾಯಿತು.


ಉಜ್ಜೀಯನು ಫಿಲಿಷ್ಟಿಯರೊಂದಿಗೆ ಯುದ್ಧಮಾಡಿ ಅವರ ಪಟ್ಟಣಗಳಾದ ಗತ್, ಯೆಬ್ನೆ ಮತ್ತು ಅಷ್ಡೋದ್‌ಗಳ ಪೌಳಿಗೋಡೆಗಳನ್ನು ಕೆಡವಿಹಾಕಿದನು. ಅವನು ಅಷ್ಡೋದಿನ ಮತ್ತು ಇತರ ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ಫಿಲಿಷ್ಟಿಯರಲ್ಲಿ ಗೊಲ್ಯಾತನೆಂಬ ಹೆಸರಿನ ವೀರ ಯೋಧನಿದ್ದನು. ಆತನು ಗತ್ ಊರಿನವನು. ಗೊಲ್ಯಾತನು ಒಂಭತ್ತು ಅಡಿ ಎತ್ತರವಾಗಿದ್ದನು. ಅವನು ಫಿಲಿಷ್ಟಿಯರ ಪಾಳೆಯದಿಂದ ಹೊರಬಂದನು.


ಹಮಾತಿನ ರಾಜನು ಎಲ್ಲಿದ್ದಾನೆ? ಅರ್ಪಾದ್‌ನ ರಾಜನೆಲ್ಲಿ? ಸೆಫರ್ವಯಿಮ್ ರಾಜನೆಲ್ಲಿ? ಹೇನ ಮತ್ತು ಇವ್ವಾಗಳ ರಾಜರೆಲ್ಲಿ?” (ಅವರೆಲ್ಲರೂ ಹತರಾದರು!)


ಬಾಬಿಲೋನಿನ ಜನರು ಸುಳ್ಳುದೇವತೆಯಾದ ಸುಕ್ಕೋತ್ಬೆನೋತನ್ನು ನಿರ್ಮಿಸಿದರು. ಕೂತದ ಜನರು ಸುಳ್ಳುದೇವತೆಯಾದ ನೇರ್ಗಲ್‌ಯನ್ನು ಮಾಡಿದರು. ಹಮಾತಿನ ಜನರು ಸುಳ್ಳುದೇವತೆಯಾದ ಅಷೀಮಾವನ್ನು ಮಾಡಿದರು.


ಇಸ್ರೇಲರನ್ನು ಸಮಾರ್ಯದಿಂದ ಅಶ್ಶೂರದ ರಾಜನು ಒಯ್ದನು. ನಂತರ ಅಶ್ಶೂರದ ರಾಜನು ಬಾಬಿಲೋನ್, ಕೂತಾ, ಅವ್ವಾ, ಹಮಾತ್ ಮತ್ತು ಸೆಫರ್ವಯಿಮ್‌ಗಳಿಂದ ಜನರನ್ನು ಕರೆತಂದು ಇಸ್ರೇಲರ ಬದಲಾಗಿ ಅವರನ್ನು ಸಮಾರ್ಯದಲ್ಲಿ ನೆಲೆಗೊಳಿಸಿದನು. ಅವರು ಸಮಾರ್ಯವನ್ನು ಹೊಂದಿಕೊಂಡು ಅವರ ಸುತ್ತಲಿನ ನಗರಗಳಲ್ಲಿ ವಾಸಿಸಿದರು.


ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!


ಬಳಿಕ ತನ್ನ ಸಹೋದರರನ್ನು ಕಂಡುಕೊಂಡು ಅವರೊಂದಿಗೆ ಮಾತಾಡತೊಡಗಿದನು. ಆ ಸಮಯದಲ್ಲಿ ಗತ್ ದೇಶದ ಗೊಲ್ಯಾತನೆಂಬ ಹೆಸರಿನ ಫಿಲಿಷ್ಟಿಯ ರಣವೀರನು ಆ ಸೇನೆಯಿಂದ ಹೊರಬಂದನು. ಗೊಲ್ಯಾತನು ಎಂದಿನಂತೆ ಇಸ್ರೇಲರ ವಿರುದ್ಧ ಆರ್ಭಟಿಸಿದನು. ದಾವೀದನಿಗೆ ಅವನ ಆರ್ಭಟವು ಕೇಳಿಸಿತು.


ಅಷ್ಡೋದಿನ ಜನರು ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳನ್ನು ಒಟ್ಟಿಗೆ ಸೇರಿಸಿ “ಇಸ್ರೇಲರ ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಾವು ಏನು ಮಾಡೋಣ?” ಎಂದು ಕೇಳಿದರು. ಅಧಿಪತಿಗಳು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ‘ಗತ್’ ನಗರಕ್ಕೆ ಕಳುಹಿಸಿ” ಎಂದು ಹೇಳಿದರು. ಅಂತೆಯೇ, ಅವರು ಅದನ್ನು ಗತ್ ನಗರಕ್ಕೆ ಕಳುಹಿಸಿದರು.


ಈ ಸಂದೇಶವು ದಮಸ್ಕ ನಗರದ ಕುರಿತಾಗಿದೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಹೆದರಿಕೊಂಡಿವೆ. ಅವು ಕೆಟ್ಟ ಸಮಾಚಾರವನ್ನು ಕೇಳಿದ್ದರಿಂದ ಹೆದರಿಕೊಂಡಿವೆ. ಅವುಗಳು ನಿರಾಶೆಗೊಂಡಿವೆ. ಅವು ಆತಂಕಪಡುತ್ತಿವೆ ಮತ್ತು ಭಯಪಡುತ್ತಿವೆ.


ಆದ್ದರಿಂದ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಪವಿತ್ರ ಪೆಟ್ಟಿಗೆಯು ಎಕ್ರೋನಿಗೆ ಬಂದಾಗ, ಅಲ್ಲಿನ ಜನರು, “ಇಸ್ರೇಲರ ದೇವರನ್ನು ನಮ್ಮ ನಗರವಾದ ಎಕ್ರೋನಿಗೆ ನೀವೇಕೆ ತರುತ್ತಿರುವಿರಿ? ನಮ್ಮನ್ನೂ ನಮ್ಮ ಜನರನ್ನೂ ನೀವು ಕೊಲ್ಲಬೇಕೆಂದಿರುವಿರಾ?” ಎಂದು ಆಕ್ಷೇಪಿಸಿದರು.


ಹದದೆಜೆರನ ಸೈನ್ಯವನ್ನೆಲ್ಲ ದಾವೀದನು ಸೋಲಿಸಿದನೆಂಬ ವರ್ತಮಾನವು ಹಮಾತಿನ ರಾಜನಾದ ತೋವಿಗೆ ತಿಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು