Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:10 - ಪರಿಶುದ್ದ ಬೈಬಲ್‌

10 ಬೇತೇಲಿನ ಯಾಜಕನಾದ ಅಮಚ್ಯನು ಇಸ್ರೇಲಿನ ಅರಸನಾದ ಯಾರೊಬ್ಬಾಮನಿಗೆ ಈ ಪತ್ರವನ್ನು ಕಳುಹಿಸಿದನು. “ನಿನಗೆ ವಿರುದ್ಧವಾಗಿ ಆಮೋಸನು ಯೋಜನೆಗಳನ್ನು ಮಾಡುತ್ತಿದ್ದಾನೆ. ಇಸ್ರೇಲಿನ ಜನರು ನಿನಗೆ ವಿರುದ್ಧವಾಗಿ ಯುದ್ಧಮಾಡುವಂತೆ ಪ್ರಯತ್ನಿಸುತ್ತಾನೆ. ಅವನು ಎಷ್ಟೆಲ್ಲಾ ಮಾತಾಡುತ್ತಾನೆಂದರೆ, ಈ ದೇಶವು ಅವನ ಮಾತುಗಳನ್ನು ತುಂಬಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ, “ಆಮೋಸನು ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚು ಮಾಡಿದ್ದಾನೆ. ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತರುವಾಯ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಯೇಲಿನ ಅರಸ ಯಾರೊಬ್ಬಾಮನಿಗೆ ಹೀಗೆ ಹೇಳಿಕಳುಹಿಸಿದನು: “ಆಮೋಸನು ನಿನಗೆ ವಿರುದ್ಧವಾಗಿ ಇಸ್ರಯೇಲರಲ್ಲಿ ಒಳಸಂಚು ಹೂಡಿದ್ದಾನೆ. ಅವನ ಮಾತುಗಳನ್ನು ನಾಡು ಸಹಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ - ಆಮೋಸನು ಇಸ್ರಾಯೇಲ್ಯರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚುಮಾಡಿದ್ದಾನೆ; ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ ಕಳುಹಿಸಿ ಹೇಳಿದ್ದೇನೆಂದರೆ: “ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:10
23 ತಿಳಿವುಗಳ ಹೋಲಿಕೆ  

ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.


ಯೇಸು ದೇವಾಲಯಕ್ಕೆ ಹೋದನು. ಯೇಸು ಅಲ್ಲಿ ಉಪದೇಶಿಸುತ್ತಿದ್ದಾಗ, ಮಹಾಯಾಜಕರು ಮತ್ತು ಜನರ ಹಿರಿಯ ನಾಯಕರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ತಿಳಿಸು!” ಎಂದರು.


ರಾಜನಾದ ಯಾರೊಬ್ಬಾಮನು ಬದಲಾವಣೆಯಾಗಲಿಲ್ಲ. ಅವನು ಕೆಟ್ಟಕಾರ್ಯಗಳನ್ನು ಮಾಡುತ್ತಲೇ ಇದ್ದನು. ಅವನು ಬೇರೆಬೇರೆ ಕುಲಗಳಿಂದ ಯಾಜಕರನ್ನು ಆರಿಸಿಕೊಳ್ಳುತ್ತಲೇ ಇದ್ದನು. ಆ ಯಾಜಕರು ಎತ್ತರದ ಸ್ಥಳಗಳಲ್ಲಿ ಸೇವೆಯನ್ನು ಮಾಡುತ್ತಿದ್ದರು. ಯಾಜಕನಾಗಬೇಕೆಂದು ಯಾವ ವ್ಯಕ್ತಿಯಾದರೂ ಇಚ್ಛಿಸಿದರೆ, ಯಾಜಕನಾಗಲು ಅವನಿಗೆ ಅವಕಾಶ ಕಲ್ಪಿಸುತ್ತಿದ್ದನು.


ಈ ಮನುಷ್ಯನು (ಪೌಲನು) ಗಲಭೆ ಮಾಡುತ್ತಿದ್ದಾನೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಇವನು ಗಲಭೆಯನ್ನು ಎಬ್ಬಿಸುತ್ತಾನೆ. ಇವನು ‘ನಜರೇನ’ ಪಂಗಡದ ನಾಯಕನಾಗಿದ್ದಾನೆ.


ಸ್ತೆಫನನ ಈ ಮಾತುಗಳನ್ನು ಕೇಳಿದ ಆ ಯೆಹೂದ್ಯನಾಯಕರು ಬಹಳ ಕೋಪಗೊಂಡರು. ಅವರು ರೋಷದಿಂದ ಸ್ತೆಫನನ ಮೇಲೆ ಹಲ್ಲು ಕಡಿದರು.


“ಈ ಮನುಷ್ಯನ (ಯೇಸುವಿನ) ಬಗ್ಗೆ ನೀವು ಬೋಧಿಸಕೂಡದೆಂದು ನಾವು ನಿಮಗೆ ಆಜ್ಞಾಪಿಸಿದೆವು. ಆದರೆ ನೀವು ಮಾಡಿರುವುದೇನು? ನೀವು ಜೆರುಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿಬಿಟ್ಟಿದ್ದೀರಿ. ಈ ಮನುಷ್ಯನ (ಯೇಸುವಿನ) ಸಾವಿಗೆ ನಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದರು.


ಅವರು ಯೇಸುವಿನ ಮೇಲೆ ದೋಷಾರೋಪಣೆ ಮಾಡತೊಡಗಿದರು. ಅವರು ಪಿಲಾತನಿಗೆ, “ಈ ಮನುಷ್ಯನು ನಮ್ಮ ಜನರನ್ನು ತಪ್ಪುದಾರಿಗೆ ನಡೆಸುವ ಸಂಗತಿಗಳನ್ನು ಹೇಳುತ್ತಿದ್ದನು. ನಾವು ಸೀಸರನಿಗೆ ತೆರಿಗೆ ಕೊಡಬಾರದೆಂದೂ ಇವನು ಹೇಳುತ್ತಿದ್ದನು. ಅಲ್ಲದೆ ಇವನು ತನ್ನನ್ನು ಕ್ರಿಸ್ತನೆಂಬ ಅರಸನೆಂದು ಹೇಳಿಕೊಳ್ಳುತ್ತಾನೆ. ಆದ್ದರಿಂದ ನಾವು ಇವನನ್ನು ಬಂಧಿಸಿದೆವು” ಎಂದು ಹೇಳಿದರು.


ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”


ಅಹಾಬನು ಎಲೀಯನನ್ನು ಕಂಡು, “ಇಸ್ರೇಲಿಗೆ ತೊಂದರೆ ಕೊಡುವವನು ನೀನೇ ಅಲ್ಲವೇ?” ಎಂದನು.


ಅವನ ಅಣ್ಣಂದಿರು, “ನೀನು ರಾಜನಾಗಿ ನಮ್ಮನ್ನು ಆಳುವೆ ಎಂಬುದು ಇದರ ಅರ್ಥವೆಂದು ನಿನ್ನ ಆಲೋಚನೆಯೋ?” ಎಂದು ಪ್ರಶ್ನಿಸಿ ಆ ಕನಸಿನ ನಿಮಿತ್ತ ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು.


ಆ ರಾಜ್ಯಾಧಿಕಾರಿಗಳು ಆ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಕೇಳಿ ಭಯಪಟ್ಟು ಒಬ್ಬರ ಮುಖವನ್ನೊಬ್ಬರು ನೋಡಿದರು. ಅವರು ಬಾರೂಕನಿಗೆ, “ನಾವು ರಾಜನಾದ ಯೆಹೋಯಾಕೀಮನಿಗೆ ಈ ಸುರುಳಿಯಲ್ಲಿರುವ ಸಂದೇಶಗಳ ಬಗ್ಗೆ ತಿಳಿಸಬೇಕು” ಎಂದರು.


ಇದು ಆಮೋಸನ ಸಂದೇಶ. ಇವನು ತೆಕೋವ ಎಂಬ ಪಟ್ಟಣದ ಕುರುಬರಲ್ಲೊಬ್ಬನು. ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಸಮಯದಲ್ಲಿ ಮತ್ತು ಅದೇ ಸಮಯದಲ್ಲಿ ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿರುವಾಗ ಆಮೋಸನಿಗೆ ದೈವದರ್ಶನಗಳುಂಟಾದವು. ಭೂಕಂಪವಾಗುವುದಕ್ಕಿಂತ ಎರಡು ವರ್ಷಗಳಿಗೆ ಮೊದಲು ಈ ದರ್ಶನಗಳಾದವು.


ಇಸ್ರೇಲು ಪಾಪಮಾಡಿದೆ. ಅದಕ್ಕಾಗಿ ನಾನು ಅದನ್ನು ಶಿಕ್ಷಿಸುವೆನು. ಬೇತೇಲಿನಲ್ಲಿರುವ ವೇದಿಕೆಗಳನ್ನು ನಾನು ನಾಶಮಾಡುವೆನು. ವೇದಿಕೆಯ ಕೊಂಬುಗಳು ಮುರಿಯಲ್ಪಟ್ಟು ನೆಲದ ಮೇಲೆ ಬೀಳುವವು.


ಆದರೆ ಬೇತೇಲಿನಲ್ಲಿ ಹುಡುಕಬೇಡ, ಗಿಲ್ಗಾಲಿನಲ್ಲಿ ಕಾಲಿಡಬೇಡ. ಗಡಿಯನ್ನು ದಾಟಿ ಬೇರ್ಷೆಬಕ್ಕೆ ಹೋಗಬೇಡ. ಗಿಲ್ಗಾಲಿನ ಜನರು ಕೈದಿಗಳಂತೆ ತೆಗೆಯಲ್ಪಡುವರು. ಮತ್ತು ಬೇತೇಲ್ ನಾಶಮಾಡಲ್ಪಡುವದು.


ಅಮೋಸನು, ‘ಯಾರೊಬ್ಬಾಮನು ಕತ್ತಿಯಿಂದ ಸಂಹರಿಸಲ್ಪಡುವನು ಮತ್ತು ಇಸ್ರೇಲಿನ ಜನರು ಸೆರೆಹಿಡಿಯಲ್ಪಟ್ಟವರಾಗಿ ಪರದೇಶಕ್ಕೆ ಒಯ್ಯಲ್ಪಡುವರು’” ಎಂದು ಹೇಳಿದ್ದಾನೆ.


ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಕೃತ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು