Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:11 - ಪರಿಶುದ್ದ ಬೈಬಲ್‌

11 ಅಮೋಸನು, ‘ಯಾರೊಬ್ಬಾಮನು ಕತ್ತಿಯಿಂದ ಸಂಹರಿಸಲ್ಪಡುವನು ಮತ್ತು ಇಸ್ರೇಲಿನ ಜನರು ಸೆರೆಹಿಡಿಯಲ್ಪಟ್ಟವರಾಗಿ ಪರದೇಶಕ್ಕೆ ಒಯ್ಯಲ್ಪಡುವರು’” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಆಮೋಸನು, “ಯಾರೊಬ್ಬಾಮನು ಖಡ್ಗದಿಂದ ಹತನಾಗುವನು. ಇಸ್ರಾಯೇಲರು ಖಂಡಿತವಾಗಿ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರು” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಏಕೆಂದರೆ, “ಯಾರೊಬ್ಬಾಮನು ಖಡ್ಗದಿಂದ ಹತನಾಗುವನು. ಇಸ್ರಯೇಲ್ ಸ್ವಂತ ನಾಡಿನಿಂದ ಪರದೇಶಕ್ಕೆ ಒಯ್ಯಲ್ಪಡುವುದು ಖಂಡಿತ ಎಂದು ಅವನು ನುಡಿದಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು - ಯಾರೊಬ್ಬಾಮನು ಖಡ್ಗದಿಂದ ಹತನಾಗುವನು, ಇಸ್ರಾಯೇಲು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು ಖಂಡಿತ ಎಂದು ನುಡಿದಿದ್ದಾನೆ ಎಂಬದಾಗಿ ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಮೋಸನು ಹೇಳಿದ್ದೇನೆಂದರೆ: “ಯಾರೊಬ್ಬಾಮನು ಖಡ್ಗದಿಂದ ಸಾಯುವನೆಂದೂ ಇಸ್ರಾಯೇಲರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಕರೆದೊಯ್ಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:11
13 ತಿಳಿವುಗಳ ಹೋಲಿಕೆ  

ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.


ಇಸಾಕನ ವೇದಿಕೆಗಳೆಲ್ಲಾ ನಾಶವಾಗುವದು. ಇಸ್ರೇಲಿನ ಪವಿತ್ರ ಸ್ಥಳಗಳೆಲ್ಲಾ ಬಂಡೆಯ ರಾಶಿಯಾಗಿ ಮಾರ್ಪಡುವವು. ಯಾರೊಬ್ಬಾಮನ ಕುಟುಂಬದ ಮೇಲೆ ಆಕ್ರಮಣ ಮಾಡಿ ಅವರನ್ನು ಸಂಹರಿಸುವೆನು” ಎಂದು ಹೇಳಿದನು.


ನನ್ನ ವೈರಿಗಳು ನನ್ನ ಮಾತುಗಳಿಗೆ ಅಪಾರ್ಥ ಮಾಡುವರು. ನನಗೆ ಕೇಡುಮಾಡಬೇಕೆಂದೇ ಅವರು ಯಾವಾಗಲೂ ಯೋಚಿಸುವರು.


ನಜರೇತಿನ ಯೇಸು ಈ ದೇವಾಲಯವನ್ನು ಕೆಡವಿ ಮೋಶೆಯ ವಿಧಿಗಳನ್ನು ಬದಲಾಯಿಸುತ್ತಾನೆಂದು ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಎಂದು ಹೇಳಿಸಿದರು.


“ಈ ಮನುಷ್ಯನು, ‘ನಾನು ದೇವರ ಆಲಯವನ್ನು ಕೆಡವಿ ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆ’ ಎಂದು ಹೇಳಿದನು” ಎಂಬುದಾಗಿ ತಿಳಿಸಿದರು.


ಯೆಹೋವನ ಹೆಸರಿನಲ್ಲಿ ಹಾಗೆ ಪ್ರವಾದಿಸಲು ನಿನಗೆ ಹೇಗೆ ಧೈರ್ಯ ಬಂದಿತು? ಶಿಲೋವಿನಂತೆ ಯೆಹೋವನ ಈ ಆಲಯವು ಹಾಳಾಗುವದೆಂದು ಹೇಳಲು ನಿನಗೆ ಹೇಗೆ ಧೈರ್ಯ ಬಂದಿತು? ಜೆರುಸಲೇಮು ಜನರಿಲ್ಲದ ಒಂದು ಮರುಭೂಮಿಯಾಗುವುದೆಂದು ಹೇಳಲು ನಿನಗೆ ಹೇಗೆ ಧೈರ್ಯ ಬಂದಿತು?” ಎಂದು ಕೇಳಿದರು. ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನನ್ನು ಮುತ್ತಿದರು.


ಆ ರಾಜ್ಯಾಧಿಕಾರಿಗಳು ಆ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಕೇಳಿ ಭಯಪಟ್ಟು ಒಬ್ಬರ ಮುಖವನ್ನೊಬ್ಬರು ನೋಡಿದರು. ಅವರು ಬಾರೂಕನಿಗೆ, “ನಾವು ರಾಜನಾದ ಯೆಹೋಯಾಕೀಮನಿಗೆ ಈ ಸುರುಳಿಯಲ್ಲಿರುವ ಸಂದೇಶಗಳ ಬಗ್ಗೆ ತಿಳಿಸಬೇಕು” ಎಂದರು.


ಇದು ಆಮೋಸನ ಸಂದೇಶ. ಇವನು ತೆಕೋವ ಎಂಬ ಪಟ್ಟಣದ ಕುರುಬರಲ್ಲೊಬ್ಬನು. ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಸಮಯದಲ್ಲಿ ಮತ್ತು ಅದೇ ಸಮಯದಲ್ಲಿ ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿರುವಾಗ ಆಮೋಸನಿಗೆ ದೈವದರ್ಶನಗಳುಂಟಾದವು. ಭೂಕಂಪವಾಗುವುದಕ್ಕಿಂತ ಎರಡು ವರ್ಷಗಳಿಗೆ ಮೊದಲು ಈ ದರ್ಶನಗಳಾದವು.


ಬೇತೇಲಿನ ಯಾಜಕನಾದ ಅಮಚ್ಯನು ಇಸ್ರೇಲಿನ ಅರಸನಾದ ಯಾರೊಬ್ಬಾಮನಿಗೆ ಈ ಪತ್ರವನ್ನು ಕಳುಹಿಸಿದನು. “ನಿನಗೆ ವಿರುದ್ಧವಾಗಿ ಆಮೋಸನು ಯೋಜನೆಗಳನ್ನು ಮಾಡುತ್ತಿದ್ದಾನೆ. ಇಸ್ರೇಲಿನ ಜನರು ನಿನಗೆ ವಿರುದ್ಧವಾಗಿ ಯುದ್ಧಮಾಡುವಂತೆ ಪ್ರಯತ್ನಿಸುತ್ತಾನೆ. ಅವನು ಎಷ್ಟೆಲ್ಲಾ ಮಾತಾಡುತ್ತಾನೆಂದರೆ, ಈ ದೇಶವು ಅವನ ಮಾತುಗಳನ್ನು ತುಂಬಲು ಸಾಧ್ಯವಿಲ್ಲ.


ಅಮಚ್ಯನು ಆಮೋಸನಿಗೆ ಹೇಳಿದ್ದೇನೆಂದರೆ, “ಭವಿಷ್ಯವಾದಿಯೇ, ನೀನು ಯೆಹೂದಕ್ಕೆ ಹೋಗಿ ಅಲ್ಲಿ ನಿನ್ನ ಹೊಟ್ಟೆ ತುಂಬಿಸಿಕೊ. ನಿನ್ನ ಪ್ರಸಂಗವನ್ನು ಅಲ್ಲಿಯೇ ಮಾಡು.


ನಿನ್ನ ಕೂದಲನ್ನು ಬೋಳಿಸು; ಯಾಕೆಂದರೆ ನೀನು ಪ್ರೀತಿಸುವ ಮಕ್ಕಳಿಗಾಗಿ ನೀನು ಅಳುವೆ. ಗಿಡುಗನಂತೆ ನಿನ್ನ ತಲೆ ಬೋಳಾಗಲಿ. ನಿನ್ನ ದುಃಖವನ್ನು ಪ್ರದರ್ಶಿಸು. ಯಾಕೆಂದರೆ ನಿನ್ನ ಮಕ್ಕಳು ನಿನ್ನಿಂದ ತೆಗೆಯಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು