Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:14 - ಪರಿಶುದ್ದ ಬೈಬಲ್‌

14 ಅದಕ್ಕೆ ಅಮೋಸನು ಅಮಚ್ಯನಿಗೆ, “ಪ್ರವಾದಿಸುವದು ನನ್ನ ಕೆಲಸವಲ್ಲ. ಅಲ್ಲದೆ ನಾನು ಪ್ರವಾದಿಗಳ ಕುಟುಂಬಕ್ಕೂ ಸೇರಿದವನಲ್ಲ. ನಾನು ದನ ಮೇಯಿಸುವವನೂ, ಅತ್ತಿ ಮರಗಳನ್ನು ಹತ್ತಿ ಹಣ್ಣು ಕೀಳುವವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ - ನಾನು ಪ್ರವಾದಿಯಲ್ಲ, ಪ್ರವಾದಿ ಮಂಡಲಿಗೆ ಸೇರಿದವನೂ ಅಲ್ಲ, ನಾನು ಗೊಲ್ಲನು, ಅತ್ತಿಹಣ್ಣು ಕೀಳುವವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಆಮೋಸನು ಅಮಚ್ಯನಿಗೆ ಉತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನೂ ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:14
17 ತಿಳಿವುಗಳ ಹೋಲಿಕೆ  

ಇದು ಆಮೋಸನ ಸಂದೇಶ. ಇವನು ತೆಕೋವ ಎಂಬ ಪಟ್ಟಣದ ಕುರುಬರಲ್ಲೊಬ್ಬನು. ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಸಮಯದಲ್ಲಿ ಮತ್ತು ಅದೇ ಸಮಯದಲ್ಲಿ ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿರುವಾಗ ಆಮೋಸನಿಗೆ ದೈವದರ್ಶನಗಳುಂಟಾದವು. ಭೂಕಂಪವಾಗುವುದಕ್ಕಿಂತ ಎರಡು ವರ್ಷಗಳಿಗೆ ಮೊದಲು ಈ ದರ್ಶನಗಳಾದವು.


ಅವನು, ‘ನಾನು ಪ್ರವಾದಿಯಲ್ಲ, ನಾನೊಬ್ಬ ರೈತ. ನಾನು ಬಾಲ್ಯಪ್ರಾಯದಿಂದಲೇ ರೈತನಾಗಿದ್ದೇನೆ’ ಎಂದು ಹೇಳುವನು.


ಎಲೀಷನು ಗಿಲ್ಗಾಲಿಗೆ ಮತ್ತೆ ಬಂದನು. ಆಗ ಆ ದೇಶದಲ್ಲಿ ಬರಗಾಲವಿತ್ತು. ಪ್ರವಾದಿಗಳ ಗುಂಪು ಎಲೀಷನ ಎದುರಿನಲ್ಲಿ ಕುಳಿತಿದ್ದರು. ಎಲೀಷನು ತನ್ನ ಸೇವಕನಿಗೆ, “ಒಂದು ದೊಡ್ಡ ಪಾತ್ರೆಯನ್ನು ಒಲೆಯ ಮೇಲಿಟ್ಟು ಪ್ರವಾದಿಗಳ ಗುಂಪಿಗೆಲ್ಲ ಸಾರನ್ನು ಮಾಡು” ಎಂದು ಹೇಳಿದನು.


ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವನು ಈ ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು. ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು.


ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಆ ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ.


ಬೇತೇಲಿನಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು, ಅವನಿಗೆ, “ಯೆಹೋವನು ಈ ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು. ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು.


ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ.


ಯೆಹೋಷಾಫಾಟನು ಆರಂಭದಿಂದ ಕೊನೆಯವರೆಗೂ ಮಾಡಿದ ಬೇರೆ ಕಾರ್ಯಗಳು, ಹನಾನೀಯನ ಮಗನಾದ ಯೇಹು ಬರೆದ ಇಸ್ರೇಲ್ ರಾಜರ ಗ್ರಂಥದಲ್ಲಿ ದಾಖಲಾಗಿವೆ.


ಆಗ ದೇವದರ್ಶಿಯಾದ ಹನಾನಿಯು ಯೆಹೂದದ ರಾಜನಾದ ಆಸನ ಬಳಿಗೆ ಬಂದು, “ಆಸನೇ, ನೀನು ದೇವರಾದ ಯೆಹೋವನ ಮೇಲೆ ಭರವಸವನ್ನಿಡುವ ಬದಲು ಅರಾಮ್ಯರ ಅರಸನ ಮೇಲೆ ಭರವಸವನ್ನಿಟ್ಟಿದ್ದರಿಂದ ಅರಾಮ್ಯರ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.


ಪ್ರವಾದಿಗಳ ಗುಂಪು ಎಲೀಷನಿಗೆ, “ನಾವು ಈ ಸ್ಥಳದಲ್ಲಿಯೇ ವಾಸಮಾಡುತ್ತಿದ್ದೇವೆ. ಆದರೆ ಇದು ನಮಗೆ ತುಂಬಾ ಚಿಕ್ಕದಾಗಿದೆ.


ಅವರನ್ನು ಹಿಂಬಾಲಿಸಿಕೊಂಡು ಬಂದ ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಅಲ್ಲಿದ್ದರು. ಎಲೀಯ ಮತ್ತು ಎಲೀಷರು ಜೋರ್ಡನ್ ನದಿಯ ಹತ್ತಿರ ನಿಂತುಕೊಂಡರು. ಆ ಐವತ್ತು ಮಂದಿ ಜನರು ಎಲೀಯ ಮತ್ತು ಎಲೀಷರಿಗಿಂತ ಬಹುದೂರದಲ್ಲಿ ನಿಂತುಕೊಂಡರು.


ಪ್ರವಾದಿಗಳಲ್ಲಿ ಒಬ್ಬನು ಮತ್ತೊಬ್ಬ ಪ್ರವಾದಿಗೆ, “ನನ್ನನ್ನು ಹೊಡಿ” ಎಂದು ಹೇಳಿದನು. ಹೀಗೆ ಹೇಳುವಂತೆ ಯೆಹೋವನೇ ಅವನಿಗೆ ಆಜ್ಞಾಪಿಸಿದ್ದನು. ಆದರೆ ಇನ್ನೊಬ್ಬ ಪ್ರವಾದಿಯು ಅವನನ್ನು ಹೊಡೆಯಲಿಲ್ಲ.


ಸೌಲನನ್ನು ಮೊದಲು ನೋಡಿದ್ದ ಜನರು, ಪ್ರವಾದಿಗಳ ಜೊತೆಯಲ್ಲಿ ಸೌಲನು ಪ್ರವಾದಿಸುತ್ತಿರುವುದನ್ನು ಕಂಡರು. ಈ ಜನರು, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನಾದನೇ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಎಲೀಯನು ಆ ಸ್ಥಳದಿಂದ ಹೊರಟು ಶಾಫಾಟನ ಮಗನಾದ ಎಲೀಷನನ್ನು ಕಂಡುಹಿಡಿಯಲು ಹೋದನು. ಎಲೀಷನು ಹನ್ನೆರಡು ಜೋಡಿ ಎತ್ತುಗಳನ್ನು ತಂದು ಭೂಮಿಯನ್ನು ಉಳುತ್ತಿದ್ದನು. ಎಲೀಯನು ಬಂದಾಗ ಎಲೀಷನು ಹನ್ನೆರಡನೆಯ ಜೋಡಿಯಿಂದ ತಾನಾಗಿ ಭೂಮಿಯನ್ನು ಉಳುತ್ತಿದ್ದನು. ಎಲೀಯನು ಎಲೀಷನ ಹತ್ತಿರಕ್ಕೆ ಹೋಗಿ ತನ್ನ ಮೇಲಂಗಿಯನ್ನು ಎಲೀಷನಿಗೆ ತೊಡಿಸಿದನು.


ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನನ್ನು ಕಂಡು, “ಎಲೀಯನ ಆತ್ಮವು ಈಗ ಎಲೀಷನ ಮೇಲಿದೆ!” ಎಂದು ಹೇಳಿ ಎಲೀಷನನ್ನು ಭೇಟಿಮಾಡಲು ಬಂದರು. ಅವರು ಎಲೀಷನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.


ಅವರು ಮರುಭೂಮಿಯಲ್ಲಿ ಉಪ್ಪುಸಸಿಗಳನ್ನು ಕೀಳುತ್ತಿದ್ದರು; ಕುರುಚಲು ಮರದ ಬೇರುಗಳನ್ನು ತಿನ್ನುತ್ತಿದ್ದರು.


ಸಿಂಹವು ಗರ್ಜಿಸಿದಾಗ ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು