Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:16 - ಪರಿಶುದ್ದ ಬೈಬಲ್‌

16 ಆದ್ದರಿಂದ ಯೆಹೋವನ ಸಂದೇಶಕ್ಕೆ ಕಿವಿಗೊಡು. ಆದರೆ ನೀನು, ‘ಇಸ್ರೇಲರಿಗೆ ವಿರುದ್ಧವಾಗಿ ಪ್ರವಾದಿಸಬೇಡ. ಇಸಾಕನ ಕುಟುಂಬದ ವಿರುದ್ಧ ಪ್ರಸಂಗಿಸಬೇಡ’ ಎಂದು ಹೇಳುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಈಗ ಯೆಹೋವನ ವಾಕ್ಯವನ್ನು ಕೇಳು ‘ಇಸ್ರಾಯೇಲರಿಗೆ ವಿರುದ್ಧವಾಗಿ ಪ್ರವಾದನೆಮಾಡಬೇಡ. ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯಿ ಎತ್ತಬೇಡ’ ಎಂದು ನಿನಗೆ ಹೇಳಿದ ಕಾರಣ ಯೆಹೋವನು ಇಂತೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈಗ ಯೆಹೋವನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ವಿರುದ್ಧವಾಗಿ ಪ್ರವಾದನೆ ಮಾಡಬೇಡ, ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯೆತ್ತಬೇಡ ಎಂದು ನೀನು ಹೇಳಿದ ಕಾರಣ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗಿರುವುದರಿಂದ ನೀನು ಈಗ ಯೆಹೋವ ದೇವರ ವಾಕ್ಯವನ್ನು ಕೇಳು: ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ, ಇಸಾಕನ ಮನೆತನಕ್ಕೆ ವಿರೋಧವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:16
14 ತಿಳಿವುಗಳ ಹೋಲಿಕೆ  

“ನರಪುತ್ರನೇ, ಯೆಹೂದದ ದಕ್ಷಿಣದಲ್ಲಿರುವ ನೆಗೆವ್ ಕಡೆಗೆ ನೋಡು. ನೆಗೆವ್ ಅಡವಿಗೆ ವಿರುದ್ಧವಾಗಿ ಮಾತನಾಡು.


ಜನರು, “ನೀನು ನಮಗೆ ಬೋಧಿಸಬೇಡ, ಆ ಕೆಟ್ಟವಿಷಯಗಳನ್ನು ನಮಗೆ ಹೇಳಬೇಡ, ನಮಗೆ ಯಾವ ಕೆಟ್ಟ ವಿಷಯವೂ ಸಂಭವಿಸುವುದಿಲ್ಲ” ಎಂದು ಹೇಳುತ್ತಾರೆ.


“ನರಪುತ್ರನೇ, ಜೆರುಸಲೇಮಿನ ಕಡೆಗೆ ನೋಡಿ ಅವರ ಪವಿತ್ರ ಸ್ಥಳಗಳಿಗೆ ವಿರುದ್ಧವಾಗಿ ಹೇಳು. ನನ್ನ ಪರವಾಗಿ ಇಸ್ರೇಲ್ ದೇಶದ ವಿರುದ್ಧವಾಗಿ ಮಾತನಾಡು.


ಬೇತೇಲಿನಲ್ಲಿ ಇನ್ನು ನೀನು ಪ್ರವಾದಿಸುವದು ಬೇಡ. ಇದು ಯಾರೊಬ್ಬಾಮನ ಪವಿತ್ರಸ್ಥಳ. ಇದು ಇಸ್ರೇಲಿನ ದೇವಾಲಯ” ಎಂದು ಹೇಳಿದನು.


ನನ್ನ ಬೋಧನೆಯು ಮಳೆಯಂತೆ ಬರುವುದು. ನೆಲದ ಮೇಲೆ ಬೀಳುವ ಇಬ್ಬನಿಯಂತಿರುವುದು; ಮೃದುವಾದ ಹುಲ್ಲಿನ ಮೇಲೆ ಬೀಳುವ ಹದವಾದ ಮಳೆಯಂತಿರುವುದು; ಹಸಿರು ಸಸಿಗಳ ಮೇಲೆ ಬೀಳುವ ಮಳೆಯ ಹನಿಯಂತಿರುವುದು.


ಅವರು ಪ್ರವಾದಿಗಳಿಗೆ, “ನಾವು ಮಾಡಬೇಕಿರುವ ಕಾರ್ಯಗಳ ಬಗ್ಗೆ ದೈವೋಕ್ತಿ ನುಡಿಯಬೇಡಿ, ನಮಗೆ ಸತ್ಯವನ್ನು ತಿಳಿಸಬೇಡಿ. ನಮಗೊಪ್ಪುವ ಮನರಂಜನೆಯ ಮಾತುಗಳನ್ನಾಡಿ. ನಮಗೋಸ್ಕರ ಒಳ್ಳೆಯ ಸಂಗತಿಗಳನ್ನೇ ನಿಮ್ಮ ದರ್ಶನಗಳಲ್ಲಿ ನೋಡಿರಿ.


ಆದರೆ ಮೀಕಾಯೆಹು ಯೆಹೋವನಿಗಾಗಿ ಮಾತನಾಡುತ್ತಲೇ ಇದ್ದನು. ಮೀಕಾಯೆಹು, “ಕೇಳಿರಿ! ಈ ಮಾತುಗಳನ್ನು ಯೆಹೋವನು ತಿಳಿಸುತ್ತಾನೆ! ಯೆಹೋವನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆತನ ಎಲ್ಲಾ ದೂತರು ಆತನ ಎಡಬಲಗಳಲ್ಲಿ ನಿಂತಿದ್ದರು.


ಸಮುವೇಲನು ಸೌಲನಿಗೆ, “ಯೆಹೋವನು ಕಳೆದ ರಾತ್ರಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುತ್ತೇನೆ” ಎಂದನು. ಸೌಲನು. “ಸರಿ, ತಿಳಿಸು” ಎಂದು ಉತ್ತರಿಸಿದನು.


“ನರಪುತ್ರನೇ, ನೀನು ಇಸ್ರೇಲಿನ ಪ್ರವಾದಿಗಳಿಗೆ ನನ್ನ ಪರವಾಗಿ ಹೇಳಬೇಕು. ಅವರು ನಿಜವಾಗಿ ನನ್ನ ಪರವಾಗಿ ಮಾತನಾಡುವುದಿಲ್ಲ. ಅವರು ಏನು ಹೇಳಬೇಕೆಂದು ಇಷ್ಟಪಡುತ್ತಾರೋ ಅದನ್ನೇ ಹೇಳುತ್ತಾರೆ. ಅದಕ್ಕಾಗಿ ನೀನು ಅವರ ಕೂಡ ಮಾತನಾಡಿ ಇಂತೆನ್ನಬೇಕು, ‘ಯೆಹೋವನ ಸಂದೇಶವನ್ನು ಕೇಳಿರಿ.


“ಆದರೆ ನೀವು ನಾಜೀರರನ್ನು ದ್ರಾಕ್ಷಾರಸ ಕುಡಿಯುವಂತೆ ಮಾಡಿದಿರಿ. ಪ್ರವಾದಿಗಳನ್ನು ಪ್ರವಾದಿಸಬೇಡಿ ಎಂದು ಹೇಳಿದಿರಿ.


ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಞವೇದಿಕೆಯ ಹತ್ತಿರ ನಿಂತಿದ್ದನು.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯಾರೊಬ್ಬಾಮನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕೃತ್ಯಗಳನ್ನು ಮಾಡುವುದನ್ನು ಯಾರೊಬ್ಬಾಮನು ನಿಲ್ಲಿಸಲಿಲ್ಲ.


ಸೂಳೆಯೇ, ಯೆಹೋವನ ಸಂದೇಶವನ್ನು ಕೇಳು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು