Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:2 - ಪರಿಶುದ್ದ ಬೈಬಲ್‌

2 ಮಿಡತೆಗಳು ದೇಶದ ಎಲ್ಲಾ ಹುಲ್ಲನ್ನು ತಿಂದುಬಿಟ್ಟವು. ಆ ಬಳಿಕ ನಾನು ಹೇಳಿದ್ದೇನೆಂದರೆ, “ನನ್ನ ಒಡೆಯನಾದ ಯೆಹೋವನೇ, ನಮ್ಮನ್ನು ಕ್ಷಮಿಸು. ಯಾಕೋಬನು ತೀರಾ ದುರ್ಬಲನಾಗಿರುವದರಿಂದ ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ಅವನಿಗಾಗಿ ನಾನು ನಿನ್ನನ್ನು ಬೇಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವು ದೇಶದ ಹುಲ್ಲನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು, “ಕರ್ತನಾದ ಯೆಹೋವನೇ, ಲಾಲಿಸು, ನನ್ನನ್ನು ಕ್ಷಮಿಸು. ಯಾಕೋಬ ಜನಾಂಗವು ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ” ಎಂದು ವಿಜ್ಞಾಪಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮಿಡತೆಗಳು ನಾಡಿನ ಪೈರು ಪಚ್ಚೆಯನ್ನೆಲ್ಲ ತಿಂದುಬಿಟ್ಟವು. ಆಮೇಲೆ ನಾನು ಪ್ರಭುವಿಗೆ ಹೀಗೆಂದು ಮೊರೆಯಿಟ್ಟೆ: “ಒಡೆಯರಾದ ಸರ್ವೇಶ್ವರಾ, ನಮ್ಮನ್ನು ಆಲಿಸಿ, ಕ್ಷಮಿಸಿರಿ; ಅತಿ ಚಿಕ್ಕದಾದ ಯಕೋಬ ಜನಾಂಗ ಈ ಪಿಡುಗಿನಿಂದ ಉಳಿಯುವುದುಂಟೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವು ದೇಶದ ಪೈರುಪಚ್ಚೆಯನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು - ಕರ್ತನಾದ ಯೆಹೋವನೇ, ಲಾಲಿಸು, ಕ್ಷವಿುಸು; ಯಾಕೋಬು ಹೇಗೆ ನಿಂತೀತು, ಅದು ಚಿಕ್ಕ ಜನಾಂಗ ಎಂದು ವಿಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವು ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು, “ಸಾರ್ವಭೌಮ ಯೆಹೋವ ದೇವರೇ, ಲಾಲಿಸು, ನನ್ನನ್ನು ಮನ್ನಿಸು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ,” ಎಂದು ವಿಜ್ಞಾಪಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:2
20 ತಿಳಿವುಗಳ ಹೋಲಿಕೆ  

ನಾನು ದೇವರ ಪರವಾಗಿ ಮಾತನಾಡುವದನ್ನು ನಿಲ್ಲಿಸಿದ ಕೂಡಲೇ, ಬೆನಾಯನ ಮಗನಾದ ಪೆಲತ್ಯನು ಸತ್ತನು. ನಾನು ನೆಲದ ಮೇಲೆ ಬಗ್ಗಿ, “ನನ್ನ ಒಡೆಯನಾದ ಯೆಹೋವನೇ, ನೀನು ಇಸ್ರೇಲಿನಲ್ಲಿ ಅಳಿದುಳಿದವರನ್ನು ಸಂಪೂರ್ಣವಾಗಿ ನಾಶಮಾಡುವಿಯೋ?” ಎಂದು ಗಟ್ಟಿಯಾಗಿ ಕೂಗಿಕೊಂಡೆನು.


ಅಶ್ಶೂರದ ಅರಸನು ತನ್ನ ಸೇನಾದಂಡನಾಯಕನು ನಮ್ಮ ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟಮಾತುಗಳನ್ನು ಹೇಳಲು ಕಳುಹಿಸಿರುತ್ತಾನೆ. ನಿನ್ನ ದೇವರಾದ ಯೆಹೋವನು ಇದನ್ನೆಲ್ಲಾ ಕೇಳಿರುವನು. ವೈರಿಗಳು ನುಡಿದ ಆ ಮಾತುಗಳು ಸತ್ಯವಾದವುಗಳಲ್ಲ ಎಂಬುದನ್ನು ಆತನು ತೋರಿಸುವನು. ಆದ್ದರಿಂದ ಇನ್ನೂ ಜೀವದಿಂದ ಉಳಿದಿರುವವರಿಗಾಗಿ ಪ್ರಾರ್ಥಿಸು” ಎಂದು ಹಿಜ್ಕೀಯನು ಹೇಳಿದ್ದಾನೆ ಅಂದರು.


ಅವರು ಜನರನ್ನು ಕೊಲ್ಲಲು ಹೊರಟಾಗ ನಾನೊಬ್ಬನೇ ಅಲ್ಲಿದ್ದೆನು. ನಾನು ಬಾಗಿ ನಮಸ್ಕರಿಸಿ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನೀನು ಜೆರುಸಲೇಮಿನ ಮೇಲೆ ನಿನ್ನ ಕೋಪವನ್ನು ಪ್ರದರ್ಶಿಸುವಾಗ ಉಳಿದ ಇಸ್ರೇಲರನ್ನು ನೀನು ನಿರ್ಮೂಲ ಮಾಡುವೆ!” ಎಂದು ಹೇಳಿದೆನು.


ಅವರೆಲ್ಲರೂ ಅವನಿಗೆ, “ಯೆರೆಮೀಯನೇ, ನಮ್ಮ ಬೇಡಿಕೆಯನ್ನು ದಯವಿಟ್ಟು ಕೇಳು. ಯೆಹೂದ ಕುಲದಲ್ಲಿ ಅಳಿದುಳಿದ ಎಲ್ಲಾ ಜನರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು. ಯೆರೆಮೀಯನೇ, ನಮ್ಮಲ್ಲಿ ಈಗ ಬಹಳ ಜನ ಉಳಿದಿಲ್ಲವೆಂಬುದು ನಿನಗೆ ಗೊತ್ತಿದೆ. ಒಂದು ಕಾಲದಲ್ಲಿ ನಾವು ಬಹಳ ಜನರಿದ್ದೆವು.


“ಯೆಹೋವನೇ, ಅದು ನಮ್ಮ ಪಾಪಗಳ ಫಲವೆಂಬುದು ನಮಗೆ ತಿಳಿದಿದೆ. ನಮ್ಮ ಪಾಪಗಳಿಂದಾಗಿ ನಾವು ಈಗ ತೊಂದರೆಗಳನ್ನು ಅನುಭವಿಸುತ್ತಿದ್ದೇವೆ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿಗಾಗಿ ನಮಗೇನಾದರೂ ಸಹಾಯಮಾಡು. ನಾವು ನಿನ್ನನ್ನು ಅನೇಕ ಸಲ ತ್ಯಜಿಸಿದ್ದೇವೆಂದು ಒಪ್ಪಿಕೊಳ್ಳುತ್ತೇವೆ. ನಾವು ನಿನ್ನ ವಿರುದ್ಧ ಪಾಪಮಾಡಿದ್ದೇವೆ.


ಮಿಡತೆಗಳು ನೆಲವನ್ನು ಮುಚ್ಚಿಕೊಂಡವು; ಇದರಿಂದಾಗಿ ನೆಲವು ಕಾಣದಂತಾಯಿತು. ಆಲಿಕಲ್ಲಿನ ಮಳೆಗೆ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ ಮರಗಳಲ್ಲಿದ್ದ ಕಾಯಿಗಳನ್ನೂ ಅವು ತಿಂದುಬಿಟ್ಟವು. ಈಜಿಪ್ಟಿನಲ್ಲೆಲ್ಲಾ ಮರಗಳಲ್ಲಾಗಲಿ ಗಿಡಗಳಲ್ಲಾಗಲಿ ಹಸುರಾಗಿದ್ದ ಒಂದಾದರೂ ಉಳಿಯಲಿಲ್ಲ.


ಭೂಮಿಯ ಮೇಲಿನ ಹುಲ್ಲಿಗಾಗಲಿ ಸಸ್ಯಕ್ಕಾಗಲಿ ಮರಕ್ಕಾಗಲಿ ಹಾನಿ ಮಾಡದಂತೆ ಆ ಮಿಡತೆಗಳಿಗೆ ತಿಳಿಸಲಾಯಿತು. ತಮ್ಮ ಹಣೆಗಳ ಮೇಲೆ ದೇವರ ಮುದ್ರೆಯಿಲ್ಲದ ಜನರನ್ನು ಹಿಂಸಿಸಲು ಅವುಗಳಿಗೆ ತಿಳಿಸಲಾಯಿತು.


ಒಂದು ಸಣ್ಣ ರೀತಿಯ ಪ್ರಾರಂಭಕ್ಕೆ ಜನರು ನಾಚುವುದಿಲ್ಲ. ಜೆರುಬ್ಬಾಬೆಲನು ನೂಲುಗುಂಡು ಹಿಡಿದುಕೊಂಡು ಸಂಪೂರ್ಣವಾದ ಆಲಯವನ್ನು ಅಳತೆ ಮಾಡುವಾಗ ಜನರು ಅತಿಯಾಗಿ ಸಂತೋಷಿಸುವರು. ಈಗ ಆ ಕಲ್ಲಿನ ಏಳು ಬದಿಗಳು ಯೆಹೋವನ ಕಣ್ಣುಗಳು ಎಲ್ಲಾ ದಿಕ್ಕುಗಳನ್ನು ನೋಡುತ್ತಿರುವುದನ್ನು ಸೂಚಿಸುತ್ತವೆ. ಅವು ಭೂಲೋಕದಲ್ಲಿರುವ ಎಲ್ಲಾ ಸಂಗತಿಗಳನ್ನು ನೋಡುತ್ತಿವೆ.”


ಆಗ ನಾನು, “ದೇವರಾದ ಯೆಹೋವನೇ, ಸಾಕು, ನಿಲ್ಲಿಸು ಎಂದು ಬೇಡುತ್ತೇನೆ, ಯಾಕೋಬನು ಇದರಿಂದ ಉಳಿಯಲಿಕ್ಕಿಲ್ಲ. ಅವನು ಇನ್ನೂ ಚಿಕ್ಕವನು” ಅಂದೆನು.


ಯೆಹೋವನೇ, ನನ್ನ ಮೊರೆಯನ್ನು ಕೇಳು. ಯೆಹೋವನೇ, ನಮ್ಮನ್ನು ಕ್ಷಮಿಸು. ಯೆಹೋವನೇ, ನಮ್ಮ ಕಡೆಗೆ ಗಮನ ನೀಡಿ ಸಹಾಯಮಾಡು. ತಡಮಾಡಬೇಡ. ಈಗಲೇ ಸಹಾಯಮಾಡು. ನಿನ್ನ ಮಹಿಮೆಗಾಗಿಯೇ ಸಹಾಯಮಾಡು. ನನ್ನ ದೇವರೇ, ನಿನ್ನ ಹೆಸರಿನಿಂದ ಕರೆಯಲ್ಪಡುವ ನಿನ್ನ ನಗರಕ್ಕಾಗಿಯೂ ನಿನ್ನ ಜನರಿಗಾಗಿಯೂ ಈಗಲೇ ಸಹಾಯಮಾಡು” ಎಂದು ಪ್ರಾರ್ಥಿಸಿದೆನು.


ಜೆರುಸಲೇಮಿಗೆ ತೊಂದರೆಗಳು ಎರಡು ಗುಂಪುಗಳಾಗಿ ಬಂದವು: ಲೂಟಿ ಮತ್ತು ಕೊರತೆ; ಕ್ಷಾಮ ಮತ್ತು ಖಡ್ಗ. ನೀನು ಸಂಕಟ ಅನುಭವಿಸುವಾಗ ಯಾರೂ ನಿನಗೆ ಸಹಾಯ ಮಾಡಲಿಲ್ಲ. ಯಾರೂ ನಿನಗೆ ಕರುಣೆ ತೋರಿಸಲಿಲ್ಲ.


ಯೆಹೋವನೇ, ನನ್ನನ್ನು ರಕ್ಷಿಸು! ಒಳ್ಳೆಯವರೆಲ್ಲಾ ಕೊನೆಗೊಂಡರು. ಭೂನಿವಾಸಿಗಳಲ್ಲಿ ನಿಜವಾದ ವಿಶ್ವಾಸಿಗಳು ಉಳಿದೇ ಇಲ್ಲ.


ಮೋಶೆಯು, “ಯೆಹೋವನೇ, ನಿನ್ನ ದಯೆ ನನಗೆ ದೊರಕುವುದಾದರೆ, ದಯವಿಟ್ಟು ನಮ್ಮೊಂದಿಗೆ ಬಾ. ಇವರು ಅವಿಧೇಯರಾದ ಜನರೆಂದು ನಾನು ಬಲ್ಲೆನು. ಆದರೆ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ನಿನ್ನ ಜನರನ್ನಾಗಿ ಸ್ಪೀಕರಿಸು” ಎಂದು ಬೇಡಿಕೊಂಡನು.


ಯೆಹೋವನ ಸೇವಕರಾದ ಯಾಜಕರು ಮಂಟಪಕ್ಕೂ ವೇದಿಕೆಗೂ ಮಧ್ಯದಲ್ಲಿ ಗೋಳಾಡಲಿ. ಆ ಜನರೆಲ್ಲಾ ಹೀಗೆ ಹೇಳಬೇಕು, “ಯೆಹೋವನೇ, ನಿನ್ನ ಜನರ ಮೇಲೆ ಕರುಣೆ ಇಡು, ನಿನ್ನ ಜನರನ್ನು ನಾಚಿಕೆಗೆ ತುತ್ತಾಗುವಂತೆ ಮಾಡಬೇಡ. ನಿನ್ನ ಜನರ ವಿಷಯವಾಗಿ ಅನ್ಯಜನರು ಗೇಲಿ ಮಾಡದಿರಲಿ. ಇತರ ದೇಶದ ಜನರು ನಮಗೆ ಹಾಸ್ಯ ಮಾಡುತ್ತಾ, ‘ಅವರ ದೇವರು ಎಲ್ಲಿ?’ ಎಂದು ಹೇಳದ ಹಾಗೆ ಮಾಡು.”


“ನಿಮ್ಮ ಬೆಳೆಗಳು ಸೂರ್ಯನ ಶಾಖದಿಂದಲೂ ರೋಗದಿಂದಲೂ ಸಾಯುವಂತೆ ಮಾಡಿದೆನು. ನಿಮ್ಮ ತೋಟಗಳನ್ನೂ ದ್ರಾಕ್ಷಿತೋಟಗಳನ್ನೂ ನಾನು ನಾಶಮಾಡಿದೆನು. ಮಿಡತೆಗಳು ನಿಮ್ಮ ಅಂಜೂರದ ಮತ್ತು ಆಲೀವ್ ಮರಗಳನ್ನು ತಿಂದುಬಿಟ್ಟವು. ಆದಾಗ್ಯೂ ಸಹಾಯಕ್ಕಾಗಿ ನೀವು ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು