Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:10 - ಪರಿಶುದ್ದ ಬೈಬಲ್‌

10 “ನನ್ನ ಜನರಲ್ಲಿ ಪಾಪಿಗಳು ಹೇಳುತ್ತಾರೆ: ‘ನಮಗೆ ಯಾವ ಕೇಡೂ ಸಂಭವಿಸುವುದಿಲ್ಲ.’ ಆದರೆ ಅವರೆಲ್ಲಾ ಕತ್ತಿಯಿಂದ ಸಾಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮ್ಮನ್ನು ಆಪತ್ತು ಹಿಂದಟದು; ನಮ್ಮನ್ನು ತಡೆಯುವುದಿಲ್ಲ, ಎನ್ನುವ ನನ್ನ ಜನರಲ್ಲಿರುವ ಸಮಸ್ತ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ‘ನಮಗೆ ಯಾವುದೇ ಆಪತ್ತು ತಟ್ಟದು. ಯಾವುದೇ ವಿಪತ್ತು ಅಡ್ಡಬರದು’ ಎಂದುಕೊಳ್ಳುವ ನನ್ನ ಜನರಲ್ಲಿನ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಮ್ಮನ್ನು ಆಪತ್ತು ಹಿಂದಟ್ಟಿ ಹಿಡಿಯದು, ಎದುರುಬಿದ್ದು ಮುತ್ತದು ಅಂದುಕೊಂಡ ನನ್ನ ಜನರಲ್ಲಿನ ಸಮಸ್ತ ಪಾಪಿಗಳು ಖಡ್ಗ ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕೇಡು ನಮ್ಮನ್ನು ಹಿಂದಟ್ಟದು ಮತ್ತು ನಮ್ಮನ್ನು ತಡೆಯುವದೂ ಇಲ್ಲ, ಎನ್ನುವ ನನ್ನ ಜನರಲ್ಲಿರುವ ಪಾಪಿಗಳೆಲ್ಲರೂ ಖಡ್ಗದಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:10
24 ತಿಳಿವುಗಳ ಹೋಲಿಕೆ  

ಶಿಕ್ಷಿಸಲ್ಪಡುವ ದಿವಸದ ಕಡೆಗೆ ನೀವು ಧಾವಿಸುತ್ತಿದ್ದೀರಿ. ಅಕ್ರಮ ಆಳ್ವಿಕೆಯನ್ನು ನೀವು ಹತ್ತಿರಕ್ಕೆ ಬರಮಾಡಿಕೊಳ್ಳುತ್ತಾ ಇದ್ದೀರಿ.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಕೆಟ್ಟಕಾರ್ಯಗಳನ್ನು ಮಾಡುವವರು ಹೆದರಿಕೆಯಿಂದ ನಡುಗುವರು. ಜನರು, “ನಮ್ಮಲ್ಲಿ ಯಾರು ನಾಶಮಾಡುವ ಈ ಬೆಂಕಿಯ ಜೊತೆ ಜೀವಿಸಬಲ್ಲರು? ನಿತ್ಯಕಾಲಕ್ಕೂ ಸುಡುವ ಈ ಬೆಂಕಿಯ ಬಳಿಯಲ್ಲಿ ಯಾರು ವಾಸಮಾಡಬಲ್ಲರು?” ಎಂದು ಹೇಳುವರು.


“ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಗರ್ವಿಷ್ಟರು ಸಂತೋಷವಾಗಿದ್ದಾರೆ ಎಂದು ನಾವು ತಿಳಿಯುತ್ತೇವೆ. ದುಷ್ಟಜನರು ಸಫಲತೆ ಹೊಂದುತ್ತಿದ್ದಾರೆ, ದೇವರ ತಾಳ್ಮೆಯನ್ನು ಪರೀಕ್ಷಿಸಲು ದುಷ್ಕೃತ್ಯಗಳನ್ನು ಮಾಡುತ್ತಿದ್ದಾರೆ. ಆದರೆ ದೇವರು ಅವರನ್ನು ಶಿಕ್ಷಿಸಲಿಲ್ಲ” ಎಂದು ಹೇಳಿದಿರಿ.


ಚೀಯೋನಿನಲ್ಲಿ ಸುಖದಿಂದಿರುವ ಜನರಿಗೂ ಸಮಾರ್ಯದ ಪರ್ವತಗಳ ಮೇಲೆ ಸುರಕ್ಷಿತರಾಗಿರುವ ಜನರಿಗೂ ಕೇಡು ಸಂಭವಿಸುವದು. ನೀವು ವಿಶೇಷವಾದ ದೇಶದ ವಿಶೇಷ ನಾಯಕರು. ಇಸ್ರೇಲಿನ ಮನೆತನವು ಸಲಹೆಗಾಗಿ ನಿಮ್ಮ ಹತ್ತಿರ ಬರುತ್ತದೆ.


ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”


ಅವರು ಬಂದು, “ನಾನು ಸ್ವಲ್ಪ ದ್ರಾಕ್ಷಾರಸ ಕುಡಿಯುತ್ತೇನೆ. ಅಥವಾ ನಾನು ಸ್ವಲ್ಪ ಮದ್ಯವನ್ನು ಕುಡಿಯುತ್ತೇನೆ. ನಾನು ನಾಳೆಯೂ ಹೀಗೆ ಮಾಡುವೆನು. ನಾನು ಇನ್ನೂ ಹೆಚ್ಚಾಗಿ ಕುಡಿಯುವೆನು” ಎಂದು ಹೇಳುವರು.


ಅವರು, “ದೇವರು ತಾನು ಮಾಡಲಿಕ್ಕಿರುವುದನ್ನು ಬೇಗನೇ ಮಾಡಿಮುಗಿಸಲಿ. ಆಗ ಏನಾಗುವದೋ ನೋಡೋಣ. ಆತನ ಯೋಜನೆ ಬೇಗನೆ ಕಾರ್ಯರೂಪಕ್ಕೆ ಬರಲಿ. ಆಗ ಆತನ ಯೋಜನೆ ಏನೆಂಬುದು ನಮಗೆ ತಿಳಿಯುವುದು” ಎಂದು ಹೇಳುತ್ತಿದ್ದಾರೆ.


ಜನರ ಅಪರಾಧಗಳಿಗೆ ದಂಡನೆಯು ಕೂಡಲೇ ಬರದಿರುವುದರಿಂದ ದುಷ್ಕೃತ್ಯಗಳನ್ನು ಮಾಡಲು ಇತರರು ಸಹ ಪ್ರೇರಿತರಾಗುತ್ತಾರೆ.


ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು.


ನನಗೆ ವಿರೋಧವಾಗಿ ಎದ್ದು ಪಾಪಮಾಡಿದ ಜನರನ್ನು ಅವರ ಸ್ವದೇಶದಿಂದ ತೆಗೆದುಬಿಡುವೆನು. ಅವರು ಇನ್ನೆಂದಿಗೂ ಇಸ್ರೇಲ್ ದೇಶಕ್ಕೆ ಹಿಂತಿರುಗಿ ಬರುವುದೇ ಇಲ್ಲ. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.”


ಕೆಲವು ಜನರು ಯೆಹೋವನ ನಿಜವಾದ ಸಂದೇಶಗಳನ್ನು ದ್ವೇಷಿಸುತ್ತಾರೆ. ಆದ್ದರಿಂದ ಆ ಪ್ರವಾದಿಗಳು ಆ ಜನರಿಗೆ ಬೇರೆಯದನ್ನೇ ಹೇಳುತ್ತಾರೆ. ಅವರು ‘ನಿಮಗೆ ಶುಭವಾಗುವುದು’ ಎನ್ನುತ್ತಾರೆ. ಕೆಲವು ಜನರು ಬಹಳ ಮೊಂಡರಾಗಿದ್ದಾರೆ. ಅವರು ತಮ್ಮ ಮನಸ್ಸಿಗೆ ಬಂದುದನ್ನೇ ಮಾಡುತ್ತಾರೆ. ಅವರಿಗೆ ಈ ಪ್ರವಾದಿಗಳು ‘ನಿಮಗೆ ಯಾವ ಕೇಡೂ ಸಂಭವಿಸುವದಿಲ್ಲ’ ಎಂದು ಹೇಳುತ್ತಾರೆ.


ಪಾಪದಿಂದ ತುಂಬಿದ ಇಸ್ರೇಲ್ ದೇಶವನ್ನು ಯೆಹೋವನು ನೋಡುತ್ತಿದ್ದಾನೆ. ಆತನು ಹೇಳಿದ್ದೇನೆಂದರೆ, “ನಾನು ಇಸ್ರೇಲರನ್ನು ಈ ಭೂಮುಖದಿಂದ ಅಳಿಸಿಬಿಡುವೆನು. ಆದರೆ ಯಾಕೋಬನ ಸಂತತಿಯವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ.


ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”


ಆದ್ದರಿಂದ ಅವನನ್ನು ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಬವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನ್ನ ಜನರಿಗಾಗಿ ಮಾಡುವ ಒಳ್ಳೆಯವುಗಳಲ್ಲಿ ಅವನು ಪಾಲು ಹೊಂದುವುದಿಲ್ಲ.’” ಇದು ಯೆಹೋವನ ನುಡಿ. “‘ಶೆಮಾಯನು, ಜನರನ್ನು ಯೆಹೋವನಾದ ನನ್ನ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನ್ನು ದಂಡಿಸುವೆನು.’”


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು