Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:11 - ಪರಿಶುದ್ದ ಬೈಬಲ್‌

11 “ದಾವೀದನ ಗುಡಾರವು ಕುಸಿದುಬಿದ್ದಿದೆ. ಆದರೆ ಆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು. ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು. ಬಿದ್ದುಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು. ಮುಂಚೆ ಹೇಗಿತ್ತೋ ಹಾಗೆಯೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ದಿನದಲ್ಲಿ ನಾನು ದಾವೀದನ ಬಿದ್ದು ಹೋಗಿರುವ ಗುಡಿಸಲನ್ನು ಎತ್ತಿ ಅದರ ಕಂಡಿಗಳನ್ನು ಮುಚ್ಚುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:11
37 ತಿಳಿವುಗಳ ಹೋಲಿಕೆ  

ಆಗ ಹೊಸ ಅರಸನು ಬರುವನು. ಆತನು ನ್ಯಾಯವಾದವುಗಳನ್ನು ಮತ್ತು ಒಳ್ಳೆಯವುಗಳನ್ನು ಮಾಡುವನು. ಆತನು ದಾವೀದನ ವಂಶದವನಾಗಿದ್ದಾನೆ. ಆತನು ಪ್ರಾಮಾಣಿಕನೂ ಪ್ರೀತಿದಯೆಗಳಿಂದ ತುಂಬಿದವನೂ ಆಗಿರುವನು. ಆತನ ನ್ಯಾಯತೀರ್ಪು ನ್ಯಾಯಕ್ಕನುಸಾರವಾಗಿರುವದು.


ನಿನ್ನ “ದ್ರಾಕ್ಷಾಲತೆ”ಯ ಸಂರಕ್ಷಣೆಗಾಗಿ ಕಟ್ಟಿದ್ದ ಗೋಡೆಗಳನ್ನು ನೀನು ಕೆಡವಿಬಿಟ್ಟದ್ದೇಕೆ? ಈಗ ಅದರ ಸಮೀಪದಲ್ಲಿ ಹೋಗುವ ಪ್ರತಿಯೊಬ್ಬರೂ ಅದರ ಹಣ್ಣುಗಳನ್ನು ತೆಗೆದುಕೊಳ್ಳುವರು.


ಆದರೆ ಯೆಹೋವನು ಬಹಳ ಕಾಲದ ಹಿಂದೆ ನಡೆದುದನ್ನು ಇನ್ನೂ ಜ್ಞಾಪಕದಲ್ಲಿಟ್ಟುಕೊಂಡಿದ್ದಾನೆ. ಆತನು ಮೋಶೆಯನ್ನೂ ಅವನ ಜನರನ್ನೂ ನೆನಪುಮಾಡಿಕೊಳ್ಳುತ್ತಾನೆ. ಆ ಜನರನ್ನು ಸಮುದ್ರದ ಮೂಲಕ ಬರಮಾಡಿದವನು ಯೆಹೋವನೇ. ಆತನು ತನ್ನ ಕುರಿಮಂದೆಯನ್ನು ನಡೆಸಲು ತನ್ನ ಕುರುಬರನ್ನು ಉಪಯೋಗಿಸಿದನು. ಆದರೆ ಈಗ ಯೆಹೋವನೆಲ್ಲಿ? ಮೋಶೆಯಲ್ಲಿ ತನ್ನ ಪವಿತ್ರಾತ್ಮನನ್ನು ಇಟ್ಟ ಯೆಹೋವನೆಲ್ಲಿ?


ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.


ನಾನು ನಿನಗೆ ಅನೇಕ ಜನರನ್ನೂ ಪ್ರಾಣಿಗಳನ್ನೂ ಕೊಡುವೆನು. ಪ್ರಾಣಿಗಳು ವೃದ್ಧಿಯಾಗುವವು ಮತ್ತು ಜನರು ಹೆಚ್ಚು ಮಕ್ಕಳನ್ನು ಪಡೆಯುವರು. ಹಿಂದಿನ ಕಾಲದಲ್ಲಿ ನಿನ್ನ ದೇಶ ಜನಭರಿತವಾಗಿದ್ದಂತೆ ಈಗಲೂ ಆಗುವ ಹಾಗೆ ನಾನು ಜನರನ್ನು ತರಿಸುವೆನು. ನಿನ್ನ ದೇಶವು ಹಿಂದೆ ಇದ್ದುದಕ್ಕಿಂತಲೂ ಉತ್ತಮ ದೇಶವನ್ನಾಗಿ ಮಾಡುವೆನು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವೆ.


“ಆಗ ಬೇರೆ ಮರಗಳಿಗೆ, ನಾನು ದೊಡ್ಡ ಮರಗಳನ್ನು ನೆಲಕ್ಕೆ ಬೀಳಿಸುವೆನೆಂತಲೂ, ಚಿಕ್ಕ ಮರಗಳನ್ನು ಉದ್ದವಾಗಿ ಬೆಳೆಯುವಂತೆ ಮಾಡುತ್ತೇನೆಂತಲೂ ಗೊತ್ತಾಗುವದು. ಹಸಿರು ಮರಗಳು ಒಣಗಿಹೋಗುವಂತೆಯೂ ಒಣಗಿಹೋದ ಮರಗಳು ಹಸಿರಾಗಿ ಬೆಳೆಯುವಂತೆಯೂ ನಾನು ಮಾಡುತ್ತೇನೆ. ನಾನೇ ಯೆಹೋವನು. ಇದನ್ನು ನಾನೇ ಹೇಳಿದ್ದೇನೆ; ಮತ್ತು ನಾನೇ ಇದನ್ನು ನೆರವೇರಿಸುವೆನು.”


ಯೆಹೋವನೇ, ನಮ್ಮನ್ನು ನಿನ್ನ ಬಳಿಗೆ ಮತ್ತೆ ಬರಮಾಡಿಕೋ. ನಾವು ಸಂತೋಷದಿಂದ ನಿನ್ನ ಬಳಿಗೆ ಬರುತ್ತೇವೆ. ನಮ್ಮ ಜೀವಿತಗಳನ್ನು ಮೊದಲಿನ ಸ್ಥಿತಿಗೆ ಬರಮಾಡು.


ಆ ಜನರನ್ನೆಲ್ಲ ಅವರ ಶತ್ರುಗಳು ಸೋಲಿಸುವಂತೆ ಮಾಡುವೆನು. ಅವರ ಶತ್ರುಗಳು ಅವರನ್ನು ಕೊಲ್ಲಬಯಸುವರು. ನಾನು ಆ ಜನರನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಒಪ್ಪಿಸುವೆನು.” “ಬಹಳ ಹಿಂದೆ, ಈಜಿಪ್ಟ್ ದೇಶದಲ್ಲಿ ಶಾಂತಿ ನೆಲೆಸಿತ್ತು. ತೊಂದರೆಗಳ ಈ ದಿನಗಳ ತರುವಾಯ ಈಜಿಪ್ಟ್ ಪುನಃ ಶಾಂತಿಯ ಬೀಡಾಗುವುದು” ಇದು ಯೆಹೋವನ ನುಡಿ.


“ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡುಮಾಡುವೆನು.


ನೀನು ಅವನನ್ನೂ ಅವನ ಕುಟುಂಬವನ್ನೂ ಅವನ ಆಸ್ತಿಯನ್ನೂ ಸಂರಕ್ಷಿಸುತ್ತಿರುವೆ. ಅವನ ಕೆಲಸಕಾರ್ಯಗಳನ್ನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲೆಲ್ಲಾ ವೃದ್ಧಿಯಾಗುತ್ತಿದೆ.


ಆದ್ದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. ಆ ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. ಹಿಂದಿನ ಕಾಲದಲ್ಲಿ ಮಾಡಿದಂತೆ ಆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ಇಸ್ರೇಲರು ಮತ್ತು ಯೆಹೂದ್ಯರು ಪರದೇಶಿಯರ ಸೇವೆಮಾಡುವುದಿಲ್ಲ. ಅವರು ತಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವರು, ಅವರು ತಮ್ಮ ರಾಜನಾದ ದಾವೀದನ ಸೇವೆಮಾಡುವರು, ನಾನು ಆ ರಾಜನನ್ನು ಕಳುಹಿಸುವೆನು.”


ಆದರೆ ಬಹುಕಾಲದ ಹಿಂದೆ ನಡೆದವುಗಳನ್ನು ಜ್ಞಾಪಿಸಿಕೊಳ್ಳುವೆನು. ನೀನು ಮಾಡಿದ ಅನೇಕ ಅದ್ಭುತಕಾರ್ಯಗಳನ್ನು ಆಲೋಚಿಸುವೆನು.


ಅವನ ಪಟ್ಟಣದ ಗೋಡೆಗಳನ್ನು ಕೆಡವಿಹಾಕಿದೆ; ಅವನ ರಕ್ಷಣಾದುರ್ಗಗಳನ್ನೆಲ್ಲಾ ನಾಶಮಾಡಿದೆ.


ಇಸ್ರೇಲರು ಬಲಿಷ್ಠರಾಗುವರು. ಅವರು ಎದೋಮ್ ದೇಶವನ್ನು ಪಡೆಯುವರು. ಅವರು ತಮ್ಮ ವೈರಿಯಾದ ಸೇಯೀರನ ದೇಶವನ್ನು ಪಡೆಯುವರು.


ಬಹಳ ವರ್ಷಗಳಿಂದ ನಿಮ್ಮ ಪಟ್ಟಣಗಳು ಹಾಳಾಗಿ ಬಿದ್ದಿವೆ. ಆದರೆ ಹೊಸ ಪಟ್ಟಣಗಳು ಏಳುವವು. ಅವುಗಳ ಅಸ್ತಿವಾರಗಳು ಬಹಳ ವರ್ಷ ಬಾಳುವವು. ನೀವು “ಬೇಲಿ ಸರಿಮಾಡುವವರು” ಎಂದು ಕರೆಯಲ್ಪಡುವಿರಿ; “ಮನೆಗಳನ್ನು, ರಸ್ತೆಗಳನ್ನು ನಿರ್ಮಿಸುವವರು” ಎಂದು ನೀವು ಕರೆಯಲ್ಪಡುವಿರಿ.


ನಾನು ಯಾಕೋಬನ ಜನರಲ್ಲಿ ಕೆಲವರನ್ನು ಉಳಿಸುವೆನು. ಯೆಹೂದದ ಕೆಲವರು ನನ್ನ ಪರ್ವತವನ್ನು ಪಡೆದುಕೊಳ್ಳುವರು. ನನ್ನ ಸೇವಕರು ಅಲ್ಲಿ ವಾಸಿಸುವರು. ಅಲ್ಲಿ ವಾಸಿಸಬೇಕಾದವರನ್ನು ನಾನೇ ಆರಿಸಿಕೊಳ್ಳುವೆನು.


ಇನ್ನೊಮ್ಮೆ ಒಂದು ಜನಾಂಗದ ಬಗ್ಗೆ ಹೇಳುವಾಗ ಆ ಜನಾಂಗವನ್ನು ನಾನು ಅಭಿವೃದ್ಧಿಗೆ ತರುತ್ತೇನೆ, ಅದನ್ನು ನೆಟ್ಟು ಕಟ್ಟುತ್ತೇನೆ ಎಂದು ಹೇಳಬಹುದು.


ಆದರೆ ಚೀಯೋನ್ ಬೆಟ್ಟದಲ್ಲಿ ಅಳಿದುಳಿದವರು ಇರುವರು. ಅವರು ನನ್ನ ವಿಶೇಷ ಜನರಾಗಿರುವರು. ಯಾಕೋಬನ ಜನರು ತಮಗೆ ಸೇರಿರುವದನ್ನು ಹಿಂದಕ್ಕೆ ಪಡೆದುಕೊಳ್ಳುವರು.


ನಾನು ಬಿದ್ದಿದ್ದೇನೆ, ಆದರೆ ವೈರಿಯೇ, ನನ್ನನ್ನು ನೋಡಿ ನಗಾಡಬೇಡ! ನಾನು ತಿರುಗಿ ಏಳುತ್ತೇನೆ; ನಾನೀಗ ಅಂಧಕಾರದಲ್ಲಿ ಕುಳಿತುಕೊಳ್ಳುತ್ತೇನೆ. ಆದರೆ ಯೆಹೋವನು ನನ್ನ ಬೆಳಕಾಗಿರುತ್ತಾನೆ.


ನಿನ್ನ ನಗರದ ಗೋಡೆಗಳು ತಿರುಗಿ ಕಟ್ಟಲ್ಪಡುವ ದಿನಗಳು ಬರುತ್ತವೆ. ಆಗ ದೇಶವು ಬೆಳೆಯುವುದು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಕೊಂಬೆ ಎಂಬ ಒಬ್ಬಾತನು ಇದ್ದಾನೆ. ಆತನು ಬೆಳೆದು ಬಲಿಷ್ಠನಾಗುವನು. ಆತನು ದೇವಾಲಯವನ್ನು ಕಟ್ಟುವನು.


ಯೆಹೋವನು ಯೆಹೂದದ ಜನರನ್ನು ಮೊದಲು ರಕ್ಷಿಸುವನು. ಆಗ ಜೆರುಸಲೇಮಿನ ನಿವಾಸಿಗಳು ತಮ್ಮನ್ನು ಹೆಚ್ಚಿಸಿಕೊಳ್ಳುವದಿಲ್ಲ. ಜೆರುಸಲೇಮಿನಲ್ಲಿ ವಾಸಿಸುವ ದಾವೀದನ ಸಂತತಿಯವರೂ ಇತರರೂ ತಾವು ಯೆಹೂದ ಪ್ರಾಂತ್ಯದಲ್ಲಿ ವಾಸಿಸುವ ಜನರಿಗಿಂತ ಉತ್ತಮರು ಎಂದು ಹೆಚ್ಚಳಪಡುವದಿಲ್ಲ.


ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು