Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:14 - ಪರಿಶುದ್ದ ಬೈಬಲ್‌

14 ಸೆರೆಯಿಂದ ಬಿಡಿಸಿ ನನ್ನ ಜನರಾದ ಇಸ್ರೇಲನ್ನು ಹಿಂದಕ್ಕೆ ಕರೆತರುವೆನು. ಪಾಳುಬಿದ್ದ ಪಟ್ಟಣಗಳನ್ನು ತಿರುಗಿ ಕಟ್ಟಿ ಅದರಲ್ಲಿ ವಾಸಿಸುವರು. ದ್ರಾಕ್ಷಿತೋಟವನ್ನು ಮಾಡಿ ಅದರಿಂದ ಸಿಗುವ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅದರ ಫಲಗಳನ್ನು ಭೋಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವರವರು ಪಾಳುಬಿದ್ದ ಪಟ್ಟಣಗಳನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಿಯಾಗಿ ದ್ರಾಕ್ಷಾತೋಟಗಳನ್ನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನು ಬೆಳೆಸಿಕೊಂಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ನನ್ನ ಜನರಾದ ಇಸ್ರಾಯೇಲ್ಯರ ದುರವಸ್ಥೆಯನ್ನು ತಪ್ಪಿಸುವೆನು; ಅವರು ಹಾಳುಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು; ದ್ರಾಕ್ಷೆಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು; ಫಲವೃಕ್ಷಗಳನ್ನು ಬೆಳೆಯಿಸಿ ಅವುಗಳ ಹಣ್ಣುಗಳನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು. “ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು. ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:14
31 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಹಾಳುಬಿದ್ದ ಹಳೇ ಪಟ್ಟಣಗಳು ಮತ್ತೆ ಕಟ್ಟಲ್ಪಡುವವು. ಅವುಗಳು ಮುಂಚೆ ಹೇಗಿದ್ದವೋ ಹಾಗೆಯೇ ಹೊಸದಾಗಿ ಕಾಣಿಸುವವು. ಹಲವು ವರ್ಷಗಳ ಕಾಲ ಕೆಡವಲ್ಪಟ್ಟು ಹಾಳುಬಿದ್ದ ಪಟ್ಟಣಗಳು ಹೊಸದಾಗಿ ಕಾಣಿಸುವವು.


ಏಕೆಂದರೆ ನಾನು ನನ್ನ ಜನರಾದ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸದಿಂದ ಕರೆದುಕೊಂಡು ಬರುವ ದಿನಗಳು ಬರುತ್ತಿವೆ.” ಈ ಸಂದೇಶವು ಯೆಹೋವನಿಂದ ಬಂದದ್ದು. “ಆ ಜನರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲಸುವಂತೆ ಮಾಡುತ್ತೇನೆ. ಆಗ ನನ್ನ ಜನರು ಆ ಪ್ರದೇಶದ ಒಡೆತನ ಪಡೆಯುವರು.”


ಯೆಹೋವನು ಹೀಗೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು.


ಆ ದೇಶದಲ್ಲಿ ಅವರು ಸುರಕ್ಷಿತವಾಗಿ ವಾಸಿಸುವರು; ಮನೆಗಳನ್ನು ಕಟ್ಟಿ ದ್ರಾಕ್ಷಿತೋಟಗಳನ್ನು ಮಾಡುವರು. ಅವರನ್ನು ದ್ವೇಷಿಸಿದ ರಾಜ್ಯಗಳನ್ನು ದಂಡಿಸುವೆನು. ಆಗ ಇಸ್ರೇಲ್ ಜನರು ಸುರಕ್ಷಿತವಾಗಿ ಜೀವಿಸುವರು; ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.”


ಪೂರ್ವಕಾಲದಲ್ಲಿ, ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೆನು. ಆದರೆ ನಾನು ಅವರನ್ನು ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನ್ನು ಕೆಡವಿದೆ; ಅವರನ್ನು ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನ್ನು ಕೊಟ್ಟೆ. ಆದರೆ ಈಗ ಅವರನ್ನು ಅಭಿವೃದ್ಧಿಪಡಿಸುವದಕ್ಕಾಗಿ ಅವರನ್ನು ಬಲಶಾಲಿಗಳನ್ನಾಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ.


“ಆ ಪಟ್ಟಣದೊಳಗೆ ಒಬ್ಬನು ಮನೆಯನ್ನು ಕಟ್ಟಿದ್ದರೆ ಅದರಲ್ಲಿ ಅವನು ವಾಸಿಸುವನು. ಒಬ್ಬನು ದ್ರಾಕ್ಷಿತೋಟವನ್ನು ನೆಟ್ಟರೆ ಅವನು ಅದರ ಫಲಗಳನ್ನು ತಿನ್ನುವನು.


ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲಿಗೆ ಜಯವನ್ನು ತರುವನು! ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. ಯಾಕೋಬನೇ ಉಲ್ಲಾಸಿಸು! ಇಸ್ರೇಲೇ ಬಹು ಸಂತೋಷಪಡು.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಈಗ ನಾನು ಯಾಕೋಬನ ವಂಶದವರನ್ನು ಸೆರೆಯಿಂದ ಬಿಡಿಸಿ ಹಿಂದಕ್ಕೆ ತರುವೆನು. ಇಸ್ರೇಲಿನ ಜನಾಂಗದವರ ಮೇಲೆಲ್ಲಾ ನನ್ನ ದಯೆ ಇರುವದು. ನನ್ನ ಪವಿತ್ರನಾಮದ ಸಲುವಾಗಿ ಅವರನ್ನು ಉದ್ಧರಿಸುವೆನು.


ದೇವರು ಹೇಳಿದ್ದೇನೆಂದರೆ: “ಸೊದೋಮ್ ಮತ್ತು ಅದರ ಸುತ್ತಲೂ ಇದ್ದ ನಗರಗಳನ್ನು ನಾನು ನಾಶಮಾಡಿದೆನು. ನಾನು ಸಮಾರ್ಯವನ್ನು ನಾಶಮಾಡಿದೆನು. ಮತ್ತು ಜೆರುಸಲೇಮೇ, ನಾನು ನಿನ್ನನ್ನು ನಾಶಮಾಡುವೆ. ಆದರೆ ನಾನು ತಿರುಗಿ ಆ ಪಟ್ಟಣಗಳನ್ನು ಕಟ್ಟುವೆನು. ಜೆರುಸಲೇಮೇ, ನಾನು ನಿನ್ನನ್ನೂ ಕಟ್ಟುವೆನು.


ಇಸ್ರೇಲಿನ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆನ್ನುತ್ತಾನೆ: “ನಾನು ಯೆಹೂದದ ಜನರಿಗಾಗಿ ಮತ್ತೆ ಒಳ್ಳೆಯದನ್ನು ಮಾಡುವೆನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದವರನ್ನು ನಾನು ಮತ್ತೆ ಕರೆದುತರುವೆನು. ಆಗ ಅವರು ಯೆಹೂದನಾಡಿನಲ್ಲಿಯೂ ಅದರ ನಗರಗಳಲ್ಲಿಯೂ ಹೀಗೆನ್ನುವರು: ‘ನ್ಯಾಯವಾದ ನಿವಾಸವೇ, ಪವಿತ್ರ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ.’


ಆಗ ಇತರ ಜನರು ಬಂದು ಅವರ ಐಶ್ವರ್ಯವನ್ನು ಸುಲುಕೊಂಡು ಅವರ ಮನೆಯನ್ನು ನಾಶಮಾಡುವರು. ಆ ಸಮಯಗಳಲ್ಲಿ ಮನೆಕಟ್ಟಿದ ಜನರು ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟವರು, ಅದರ ಹಣ್ಣಿನ ರಸವನ್ನು ಕುಡಿಯುವುದಿಲ್ಲ. ಬೇರೆಯವರು ಅದನ್ನು ಪಡೆದುಕೊಳ್ಳುವರು.”


ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ.


ಅವರು ಹೊಲಗಳಲ್ಲಿ ಬೀಜ ಬಿತ್ತಿ ತೋಟಗಳಲ್ಲಿ ದ್ರಾಕ್ಷಾಲತೆಗಳನ್ನು ನೆಟ್ಟು ಒಳ್ಳೆಯ ಸುಗ್ಗಿಗಳನ್ನು ಪಡೆದರು.


ನಿನ್ನ ಸುತ್ತಲೂ ನೋಡು. ಜನರು ಸುತ್ತಲೂ ನಿನ್ನ ಬಳಿಗೆ ಬಂದು ಸೇರುವದನ್ನು ನೋಡು. ಅವರು ದೂರ ಪ್ರಾಂತ್ಯದಿಂದ ಬರುವ ನಿನ್ನ ಗಂಡುಮಕ್ಕಳಾಗಿದ್ದಾರೆ. ನಿನ್ನ ಕುಮಾರಿಯರು ಅವರೊಂದಿಗೆ ಬರುತ್ತಿದ್ದಾರೆ.


ಬಳಿಕ ನಾನು ಅವರಿಗಾಗಿ ಪರಿತಪಿಸುವೆನು. ನಾನು ಪ್ರತಿಯೊಂದು ಕುಟುಂಬವನ್ನು ಅದರ ಸ್ವಾಸ್ತ್ಯಕ್ಕೂ ಅದರ ದೇಶಕ್ಕೂ ಕರೆತರುವೆನು.


ಆದರೆ ಹೊಸ ಕಾಲ ಬರಲಿದೆ. ಆಗ, ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸ್ವದೇಶದಲ್ಲಿ ನೆಲಸುವರು.”


ನಾನು ಅವರನ್ನು ರಕ್ಷಿಸುವೆನು. ನಾನು ಅವರನ್ನು ಪುನಃ ಯೆಹೂದಕ್ಕೆ ಕರೆತರುವೆನು. ನಾನು ಅವರನ್ನು ಬೀಳಿಸುವದಿಲ್ಲ. ನಾನು ಅವರನ್ನು ಅಭಿವೃದ್ಧಿಪಡಿಸುತ್ತೇನೆ. ನಾನು ಅವರನ್ನು ಕೀಳುವದಿಲ್ಲ. ಅವರನ್ನು ನೆಟ್ಟು ಬೆಳೆಯುವದಕ್ಕೆ ಅವಕಾಶ ಮಾಡಿಕೊಡುವೆನು.


ಇಸ್ರೇಲಿನ ರೈತರಾದ ನೀವು ಮತ್ತೆ ದ್ರಾಕ್ಷಿತೋಟಗಳನ್ನು ಬೆಳೆಸುವಿರಿ. ನೀವು ಸಮಾರ್ಯ ನಗರದ ಸುತ್ತಮುತ್ತಲಿನ ಬೆಟ್ಟಗಳಲ್ಲಿ ಆ ದ್ರಾಕ್ಷಿತೋಟವನ್ನು ಬೆಳೆಸುವಿರಿ. ರೈತರಾದ ನೀವು ಅದರ ಫಲವನ್ನು ಅನುಭವಿಸುವಿರಿ.


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು, ‘ಮುಂದಿನಕಾಲದಲ್ಲಿ ಇಸ್ರೇಲ್ ದೇಶದಲ್ಲಿ ನನ್ನ ಜನರು ಪುನಃ ಮನೆಗಳನ್ನು, ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಂಡುಕೊಳ್ಳುವರು’ ಎಂದು ಅನ್ನುತ್ತಾನೆ.”


‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.


ಯೆಹೂದ ಮತ್ತು ಇಸ್ರೇಲುಗಳಿಗೆ ಮತ್ತೊಮ್ಮೆ ಒಳ್ಳೆಯದಾಗುವಂತೆ ಮಾಡುವೆನು. ಅವರನ್ನು ನಾನು ಮೊದಲಿನಂತೆ ಶಕ್ತಿಶಾಲಿಗಳನ್ನಾಗಿ ಮಾಡುವೆನು.


ಯೆಹೋವನು ಹೀಗೆ ಹೇಳುತ್ತಾನೆ ಎಂದು ಆ ಜನರಿಗೆ ಹೇಳು: ‘ನಾನು ಇಸ್ರೇಲ್ ಜನರನ್ನು ಅವರು ಚದರಿದ ದೇಶಗಳಿಂದಲೂ ಸುತ್ತಲಿರುವ ದೇಶಗಳಿಂದಲೂ ಅವರನ್ನು ಒಟ್ಟುಗೂಡಿಸಿ ಅವರ ಸ್ವದೇಶಕ್ಕೆ ತರುವೆನು.


ಆಗ ಅವರು ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಎಲ್ಲಾ ದೇಶಗಳಿಂದಲೂ ಹೊರತಂದ ಯೆಹೋವನ ಜೀವದಾಣೆ.’ ಇಸ್ರೇಲರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ದೇಶಕ್ಕೆ ಮತ್ತೆ ಕರೆದುಕೊಂಡು ಬರುವೆನು. ಆದ್ದರಿಂದಲೇ ಜನರು ಹೀಗೆ ಹೇಳುವರು.”


ನಾನು ನಿಮಗೆ ದೊರೆಯುವೆನು.” ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಬಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ಆ ದೇಶವು ಯೆಹೂದದಲ್ಲಿ ಅಳಿದುಳಿದವರಿಗೆ ಆಗುವದು. ಯೆಹೂದದಲ್ಲಿರುವ ಜನರನ್ನು ಯೆಹೋವನು ನೆನಪುಮಾಡುವನು. ಅವರು ಸೆರೆಯಾಳುಗಳಾಗಿ ಅನ್ಯದೇಶದಲ್ಲಿರುವರು. ಆದರೆ ಯೆಹೋವನು ಅವರನ್ನು ಹಿಂದಕ್ಕೆ ತರುವನು. ಆಗ ಯೆಹೂದದ ಜನರು ಆ ಬಯಲಿನಲ್ಲಿ ತಮ್ಮ ಕುರಿಮಂದೆಗಳನ್ನು ಮೇಯಿಸುವರು. ಸಾಯಂಕಾಲ ಬರಿದಾದ ಅಷ್ಕೆಲೋನಿನ ಮನೆಗಳಲ್ಲಿ ತಂಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು