Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:10 - ಪರಿಶುದ್ದ ಬೈಬಲ್‌

10 ಇದಲ್ಲದೆ ದೇವರು ಹೀಗೆನ್ನುತ್ತಾನೆ: “ಪ್ರಭುವೇ, ಆದಿಯಲ್ಲಿ ನೀನು ಈ ಲೋಕವನ್ನು ಸೃಷ್ಟಿಸಿದೆ. ಗಗನಮಂಡಲವು ನಿನ್ನ ಕೈಕೆಲಸವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ, “ಸರ್ವೇಶ್ವರಾ, ಆದಿಯಲ್ಲಿ ನೀ ಭೂಮಿಯನು ಸೃಜಿಸಿದೆ ನಭಮಂಡಲದಲ್ಲಿ ನಿನ್ನ ಕೈಚಳಕವ ತೋರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕರ್ತನೇ, ಆದಿಯಲ್ಲಿ ನೀನು ಭೂವಿುಗೆ ಅಸ್ತಿವಾರವನ್ನು ಹಾಕಿದಿ, ಗಗನಮಂಡಲವು ನಿನ್ನ ಕೈಕೆಲಸವಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ದೇವರು ಹೀಗೆಂದರು: “ಕರ್ತದೇವರೇ, ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ, ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆವ್ ಅಸೆಬಿ ಮನ್ತಾ,“ತಿಯಾ ಧನಿಯಾ, ಸಗ್ಳ್ಯಾನ್ ಪಯ್ಲೆ ಜಿಮಿನ್ ರಚ್ಲೆಯ್ ಅನಿ ಖುದ್ದ್ ತುಜ್ಯಾಚ್ ಹಾತಾನಿ ತಿಯಾ ಮಳ್ಬಾಕ್ನಿ ಬಿ ರಚ್ಲೆಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:10
17 ತಿಳಿವುಗಳ ಹೋಲಿಕೆ  

ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.


“ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.


ಭೂಮಿಯನ್ನು ನನ್ನ ಕೈಗಳಿಂದಲೇ ನಿರ್ಮಿಸಿದೆನು. ನನ್ನ ಬಲಗೈ ಆಕಾಶವನ್ನು ಉಂಟುಮಾಡಿತು. ನಾನು ಅವುಗಳನ್ನು ಕರೆದಾಗ ಅವು ನನ್ನ ಬಳಿಗೆ ಬರುವವು.


ನಿಜದೇವರಾದ ಯೆಹೋವನು ಹೀಗೆನ್ನುತ್ತಾನೆ: ಆಕಾಶವನ್ನು ನಿರ್ಮಿಸಿ ಅದನ್ನು ಭೂಮಿಯ ಮೇಲೆ ಹರಡಿದಾತನು ಯೆಹೋವನೇ. ಭೂಮಿಯ ಮೇಲಿರುವದನ್ನೆಲ್ಲಾ ಸೃಷ್ಟಿಸಿದಾತನು ಯೆಹೋವನೇ. ಭೂಮಿಯ ಮೇಲಿರುವ ಮನುಷ್ಯರಿಗೆಲ್ಲಾ ಜೀವಶ್ವಾಸವನ್ನು ಕೊಟ್ಟವನು ಆತನೇ. ಭೂಮಿಯ ಮೇಲೆ ನಡೆಯುವ ಪ್ರತಿಯೊಬ್ಬನಿಗೂ ಪ್ರಾಣವನ್ನು ಕೊಟ್ಟವನು ಆತನೇ.


ಇಸ್ರೇಲಿನ ಬಗ್ಗೆ ಯೆಹೋವನ ದುಃಖದ ಸಂದೇಶ. ಯೆಹೋವನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುತ್ತಾನೆ. ಮಾನವನಲ್ಲಿ ತನ್ನ ಆತ್ಮವನ್ನಿಟ್ಟನು. ಆ ಬಳಿಕ ಆತನು ಹೇಳಿದ್ದೇನೆಂದರೆ,


ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. ನಾವು ಜೇಡಿಮಣ್ಣಿನಂತಿದ್ದೇವೆ. ನೀನಾದರೋ ಕುಂಬಾರನಾಗಿರುವೆ. ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು.


ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.


ಆತನು ಸಮುದ್ರಗಳ ನೀರಿಗೆ ಎಲ್ಲೆಕಟ್ಟನ್ನು ಹಾಕಿದಾಗಲೂ ಭೂಮಿಗೆ ಅಸ್ತಿವಾರಗಳನ್ನು ಹಾಕಿದಾಗಲೂ ನಾನು ಅಲ್ಲಿದ್ದೆನು.


“ಲವೊದಿಕೀಯದ ಸಭೆಗೆ ಈ ಪತ್ರವನ್ನು ಬರೆ: “ಆಮೆನ್ ಎಂಬಾತನು ಅಂದರೆ ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಅಧಿಪತಿಯೂ ಆಗಿರುವಾತನು ಹೇಳುವುದೇನೆಂದರೆ:


ಆಕಾಶಮಂಡಲವು ದೇವರ ಮಹಿಮೆಯನ್ನು ಪ್ರಕಟಿಸುವುದು. ಗಗನವು ಆತನ ಕೈಕೆಲಸವನ್ನು ತಿಳಿಸುವುದು.


ನೀವು ಆಕಾಶವನ್ನು ತಲೆಯೆತ್ತಿ ನೋಡುವಾಗ ಅಲ್ಲಿ ಕಾಣುವ ಸೂರ್ಯಚಂದ್ರ ನಕ್ಷತ್ರಾದಿಗಳನ್ನು ಪೂಜಿಸಬೇಡಿ. ಇವುಗಳನ್ನೆಲ್ಲಾ ಅನ್ಯರು ಪೂಜಿಸುವರು.


ತನ್ನ ಅಂಗೈಯಿಂದ ಸಾಗರಗಳನ್ನು ಅಳತೆ ಮಾಡಿದವರ್ಯಾರು? ತನ್ನ ಹಸ್ತದಿಂದ ಆಕಾಶವನ್ನು ಅಳತೆ ಮಾಡಿದವರ್ಯಾರು? ಭೂಮಿಯ ಧೂಳನ್ನೆಲ್ಲಾ ಒಂದು ಬೋಗುಣಿಯಲ್ಲಿ ಅಳೆದವರ್ಯಾರು? ಪರ್ವತಗಳನ್ನು ಮತ್ತು ಬೆಟ್ಟಗಳನ್ನು ಅಳೆಯಲು ಅಳತೆಕೋಲನ್ನು ಯಾರು ಉಪಯೋಗಿಸಿದರು?


ಪರಲೋಕದ ಕಡೆಗೆ ದೃಷ್ಟಿಸಿರಿ. ನಿಮ್ಮ ಸುತ್ತಲೂ ಇರುವ ಭೂಮಿಯನ್ನು ನೋಡಿರಿ. ಹೊಗೆಯ ಮೋಡದಂತೆ ಆಕಾಶವು ಇಲ್ಲದೆಹೋಗುವದು. ಭೂಮಿಯು ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವುದು. ಭೂಮಿಯ ಮೇಲಿರುವ ಜನರು ಸಾಯುವರು. ಆದರೆ ನನ್ನ ರಕ್ಷಣೆಯು ನಿರಂತರವಾಗಿರುವದು. ನನ್ನ ಕರುಣೆಯು ಅಂತ್ಯವಾಗದು.


“ಮತ್ತೊಂದು ಸಾರಿ” ಎಂಬ ಮಾತುಗಳು ಸೃಷ್ಟಿಗೊಂಡ ಎಲ್ಲವೂ ನಾಶವಾಗುತ್ತವೆ ಎಂಬುದನ್ನು ನಮಗೆ ಸ್ಪಷ್ಟಪಡಿಸುತ್ತವೆ. ಅವುಗಳನ್ನು ನಡುಗಿಸಲು ಸಾಧ್ಯ. ನಡುಗಿಸಲಾಗದಂಥವುಗಳು ಮಾತ್ರ ಸ್ಥಿರವಾಗಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು