ಇಬ್ರಿಯರಿಗೆ 1:14 - ಪರಿಶುದ್ದ ಬೈಬಲ್14 ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತಸೆಹೊಲ್ಯಾರ್, ದೆವ್ದುತಾ ಕೊನ್ ಹೊವ್ನ್ ಹಾತ್ ತೆನಿ ದೆವಾಚಿ ಸೆವಾ ಕರ್ತಲೆ ಅನಿ ಜೆ ಕೊನ್ ಸುಟ್ಕಾ ಸ್ವಿಕಾರ್ ಕರ್ತಾ ತೆಂಕಾ ಮಜತ್ ಕರುಕ್ ಮನುನ್ ದೆವಾನ್ ಧಾಡುನ್ ದಿಲ್ಲೊ ಆತ್ಮೊ ತೊ. ಅಧ್ಯಾಯವನ್ನು ನೋಡಿ |
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.
ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.