Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:9 - ಪರಿಶುದ್ದ ಬೈಬಲ್‌

9 ನೀನು ಒಳ್ಳೆಯದನ್ನು ಪ್ರೀತಿಸುವೆ, ಕೆಟ್ಟದ್ದನ್ನು ದ್ವೇಷಿಸುವೆ. ಆದ್ದರಿಂದ ದೇವರು, ಹೌದು, ನಿನ್ನ ದೇವರೇ ನಿನ್ನನ್ನು ನಿನ್ನ ಸಂಗಡಿಗರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದದ ತೈಲದಿಂದ ಅಭಿಷೇಕಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ ಎಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ನೀತಿಯನ್ನು ಪ್ರೀತಿಸಿದ್ದೀರಿ. ಅನೀತಿಯನ್ನು ದ್ವೇಷಿಸಿದ್ದೀರಿ; ಆದ್ದರಿಂದ ದೇವರೇ, ನಿಮ್ಮ ದೇವರು ನಿಮ್ಮನ್ನು ನಿಮ್ಮ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾರೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತಿಯಾ ಖಲೆ ಸಮಾ ಹಾಯ್ ತೆಚೊ ಪ್ರೆಮ್ ಕರ್ತೆಯ್, ಅನಿ ಚುಕ್ ಅಸಲ್ಲ್ಯಾಚೊ ತಿಯಾ ಪ್ರೆಮ್ ಕರಿನ್ಹಯ್. ತೆಚ್ಯಾ ಸಾಟಿಚ್ ದೆವಾನ್, “ತುಜ್ಯಾ ದೆವಾನ್ ತುಕಾ ಎಚುನ್ ಕಾಡ್ಲ್ಯಾನಾಯ್, ಅನಿ ತುಜ್ಯಾ ವಾಂಗ್ಡಿಯಾಕ್ನಿ ದಿಲ್ಲ್ಯಾಚ್ಯಾನ್ಕಿ ಮೊಟ್ಯಾ ಗೌರವಾಚಿ ಖುಶಿ ತುಕಾ ದಿಲ್ಯಾನಾಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:9
42 ತಿಳಿವುಗಳ ಹೋಲಿಕೆ  

ನೀನು ನೀತಿಯನ್ನು ಪ್ರೀತಿಸುವೆ; ದುಷ್ಟತನವನ್ನು ದ್ವೇಷಿಸುವೆ. ಆದ್ದರಿಂದ ನಿನ್ನ ದೇವರಾಗಿರುವಾತನು ನಿನ್ನನ್ನು ನಿನ್ನ ಸ್ನೇಹಿತರಿಗೆ ರಾಜನನ್ನಾಗಿ ಆರಿಸಿಕೊಂಡಿದ್ದಾನೆ.


ವೈರಿಗಳ ಎದುರಿನಲ್ಲಿ ನೀನು ನನಗೆ ಔತಣವನ್ನು ಸಿದ್ಧಪಡಿಸಿರುವೆ; ನನ್ನ ತಲೆಗೆ ಎಣ್ಣೆಯನ್ನು ಹಚ್ಚಿರುವೆ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತಿದೆ.


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


ನಿರೀಕ್ಷೆಯನ್ನು ಕೊಡುವ ದೇವರು ನಂಬಿಕೆಯಿಂದ ಉಂಟಾಗುವ ಆನಂದವನ್ನೂ ಸಮಾಧಾನವನ್ನೂ ನಿಮಗೆ ಸಂಪೂರ್ಣವಾಗಿ ದಯಪಾಲಿಸಲೆಂದು ನಾನು ಪ್ರಾರ್ಥಿಸುತ್ತೇನೆ. ಆಗ ಪವಿತ್ರಾತ್ಮನ ಶಕ್ತಿಯ ಮೂಲಕ ನಿರೀಕ್ಷೆಯು ನಿಮ್ಮಲ್ಲಿ ತುಂಬಿ ಹೊರಸೂಸುವುದು.


ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.


“ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ


ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಬಹುದು.


ನಾವು ನೋಡಿದವುಗಳನ್ನೂ ಕೇಳಿದವುಗಳನ್ನೂ ಈಗ ನಿಮಗೆ ಹೇಳುತ್ತೇವೆ. ಏಕೆಂದರೆ ನೀವು ನಮ್ಮ ಅನ್ಯೋನ್ಯತೆಯಲ್ಲಿ ಪಾಲುಗಾರರಾಗಬೇಕೆಂಬುದು ನಮ್ಮ ಅಪೇಕ್ಷೆ. ನಮ್ಮ ಈ ಅನ್ಯೋನ್ಯತೆಯು ತಂದೆಯಾದ ದೇವರ ಮತ್ತು ಆತನ ಮಗನಾದ ಯೇಸು ಕ್ರಿಸ್ತನ ಸಂಗಡವಿರುವಂಥದ್ದು.


ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ.


ಯಾಕೆಂದರೆ ನಾನೇ ಯೆಹೋವನು. ನಾನು ನ್ಯಾಯದಲ್ಲಿ ಸಂತೋಷಿಸುವೆನು. ನಾನು ಕದಿಯುವದನ್ನೂ ಎಲ್ಲಾ ದುಷ್ಟತ್ವಗಳನ್ನೂ ದ್ವೇಷಿಸುತ್ತೇನೆ. ಅದಕ್ಕಾಗಿ ನಾನು ಅಂಥಾ ಜನರಿಗೆ ದೊರಕಬೇಕಾದ ಶಿಕ್ಷೆಯನ್ನು ಕೊಡುವೆನು. ನನ್ನ ಜನರೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.


ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.


ಆದ್ದರಿಂದ ದೇವರು ಆತನನ್ನು ಅತ್ಯುನ್ನತವಾದ ಸ್ಥಾನಕ್ಕೇರಿಸಿ ಉಳಿದೆಲ್ಲ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ.


ದೇವರು ನಂಬಿಗಸ್ತನಾಗಿದ್ದಾನೆ. ದೇವರ ಮಗನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಜೀವದಲ್ಲಿ ಪಾಲುಹೊಂದಬೇಕೆಂದು ನಮ್ಮನ್ನು ಕರೆದಿರುವಾತನು ದೇವರೇ.


ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ. ನಾನು ತಂದೆಯ ಬಳಿಗೆ ಇನ್ನೂ ಹಿಂತಿರುಗಿ ಹೋಗಿಲ್ಲ. ಆದರೆ ನೀನು ನನ್ನ ಸಹೋದರರ (ಶಿಷ್ಯರ) ಬಳಿಗೆ ಹೋಗಿ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತಿದ್ದೇನೆ’ ಎಂಬುದಾಗಿ ಹೇಳು” ಎಂದನು.


ಮೊದಲನೆಯದಾಗಿ, ಅವನು ತನ್ನ ಅಣ್ಣನಾದ ಸೀಮೋನನನ್ನು ಕಾಣಲು ಹೋಗಿ ಅವನಿಗೆ, “ನಾವು ಮೆಸ್ಸೀಯನನ್ನು ಕಂಡುಕೊಂಡೆವು” ಎಂದು ಹೇಳಿದನು. (“ಮೆಸ್ಸೀಯ” ಅಂದರೆ “ಕ್ರಿಸ್ತನು” ಎಂದರ್ಥ.)


ನಾನು ನಿನ್ನ ಆಜ್ಞೆಗಳಿಗೆಲ್ಲಾ ಎಚ್ಚರಿಕೆಯಿಂದ ವಿಧೇಯನಾಗುವೆನು. ನಾನು ಸುಳ್ಳು ಉಪದೇಶಗಳನ್ನು ದ್ವೇಷಿಸುವೆನು.


ನಿನ್ನ ಉಪದೇಶಗಳು ನನ್ನನ್ನು ಜ್ಞಾನಿಯನ್ನಾಗಿ ಮಾಡುತ್ತವೆ, ಆದ್ದರಿಂದ ನಾನು ದುರುಪದೇಶಗಳನ್ನು ದ್ವೇಷಿಸುವೆನು.


ನನ್ನ ಸೇವಕನಾದ ದಾವೀದನನ್ನು ಕಂಡುಕೊಂಡೆ. ನನ್ನ ವಿಶೇಷವಾದ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದೆ.


ಆತನು ನೀತಿಯನ್ನೂ ನ್ಯಾಯವನ್ನೂ ಪ್ರೀತಿಸುವನು. ಯೆಹೋವನ ಶಾಶ್ವತವಾದ ಪ್ರೀತಿಯು ಭೂಲೋಕವನ್ನೆಲ್ಲಾ ತುಂಬಿಕೊಂಡಿದೆ.


ನಿನ್ನ ಸಭೆಯಲ್ಲಿಯೂ ಇದೇ ರೀತಿ ನಡೆಯುತ್ತಿದೆ. ನಿಕೊಲಾಯಿತರ ಬೋಧನೆಗಳನ್ನು ಅನುಸರಿಸುವ ಜನರು ನಿನ್ನಲ್ಲಿದ್ದಾರೆ.


ನಾನು ಸುಳ್ಳು ಹೇಳುತ್ತಿಲ್ಲವೆಂದು ದೇವರಿಗೆ ಗೊತ್ತಿದೆ. ಆತನು ಪ್ರಭು ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿದ್ದಾನೆ. ಆತನಿಗೆ ಸದಾಕಾಲ ಸ್ತೋತ್ರ ಸಲ್ಲಿಸಬೇಕು.


ನಿಮ್ಮ ಪ್ರೀತಿಯು ಯಥಾರ್ಥವಾಗಿರಲಿ. ದುಷ್ಕೃತ್ಯಗಳನ್ನು ದ್ವೇಷಿಸಿರಿ. ಒಳ್ಳೆಯ ಕಾರ್ಯಗಳನ್ನು ಮಾತ್ರ ಮಾಡಿರಿ.


ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


ಹೆರೋದರಾಜನು, ಪೊಂತಿಯಸ್ ಪಿಲಾತನು, ಜನಾಂಗಗಳು ಮತ್ತು ಯೆಹೂದ್ಯರು ಈ ಪಟ್ಟಣದಲ್ಲಿ ಒಟ್ಟಾಗಿ ಸೇರಿಕೊಂಡು ಯೇಸುವನ್ನು ವಿರೋಧಿಸಿದಾಗ ಈ ಸಂಗತಿಗಳು ನಿಜವಾಗಿಯೂ ನೆರವೇರಿದವು. ಯೇಸು ನಿನ್ನ ಪವಿತ್ರ ಸೇವಕನಾಗಿದ್ದಾನೆ. ನೀನು ಆತನನ್ನು ಅಭಿಷೇಕಿಸಿದೆ.


ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.


ನಿಮ್ಮ ನೆರೆಯವನಿಗೆ ಹಾನಿಮಾಡುವುದನ್ನು ಗುಟ್ಟಾಗಿ ಆಲೋಚಿಸಬೇಡಿರಿ. ಸುಳ್ಳು ವಾಗ್ದಾನ ಮಾಡಬೇಡಿರಿ. ಅವುಗಳನ್ನೆಲ್ಲಾ ಮಾಡುವದರಲ್ಲಿ ಆನಂದಿಸಬೇಡಿರಿ. ಯಾಕೆಂದರೆ ಅವುಗಳನ್ನು ನಾನು ದ್ವೇಷಿಸುತ್ತೇನೆ.” ಇದು ಯೆಹೋವನ ನುಡಿ.


ಅವನು ನನಗೆ, ‘ನೀನೇ ನನ್ನ ತಂದೆ; ನೀನೇ ನನ್ನ ದೇವರು. ನೀನೇ ನನ್ನ ಬಂಡೆ; ನೀನೇ ನನ್ನ ರಕ್ಷಕ’ ಎಂದು ಹೇಳುವನು.


ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ. ನಿನ್ನ ಉಪದೇಶಗಳನ್ನು ಹೃದಯದಲ್ಲಿಟ್ಟುಕೊಂಡಿದ್ದೇನೆ” ಅಂದೆನು.


ಯೆಹೋವನು ನ್ಯಾಯವನ್ನು ಪ್ರೀತಿಸುವನು. ಆತನು ತನ್ನ ಭಕ್ತರನ್ನು ತೊರೆದುಬಿಡದೆ ಅವರನ್ನು ಯಾವಾಗಲೂ ಕಾಪಾಡುವನು. ದುಷ್ಟರನ್ನಾದರೋ ಆತನು ನಾಶಮಾಡುವನು.


ಯೆಹೋವನು ನೀತಿವಂತರಿಗಾಗಿ ಹುಡುಕುವನು. ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು.


ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.


ಜನರನ್ನು ಪರಿಶುದ್ಧರನ್ನಾಗಿ ಮಾಡುವ ಯೇಸುವೂ ಮತ್ತು ಆತನಿಂದ ಪರಿಶುದ್ಧರಾಗುವ ಜನರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಆ ಜನರನ್ನು ಸಹೋದರರೆಂದೂ ಸಹೋದರಿಯರೆಂದೂ ಕರೆಯಲು ಆತನು (ಯೇಸು) ನಾಚಿಕೆಪಡುವುದಿಲ್ಲ.


ದೇವರೇ, ನಿನ್ನ ಸಿಂಹಾಸನವು ಶಾಶ್ವತವಾದದ್ದು. ಒಳ್ಳೆಯತನವು ನಿನ್ನ ರಾಜದಂಡವಾಗಿದೆ.


ತಂದೆಯು ನನ್ನನ್ನು ಪ್ರೀತಿಸುತ್ತಾನೆ. ಏಕೆಂದರೆ ನಾನು ನನ್ನ ಪ್ರಾಣವನ್ನು ಮತ್ತೆ ಪಡೆದುಕೊಳ್ಳುವುದಕ್ಕಾಗಿ ಕೊಡುತ್ತೇನೆ.


‘ಭೂಲೋಕದ ರಾಜರು ಹೋರಾಡಲು ಸಿದ್ಧರಾಗಿದ್ದಾರೆ; ಪ್ರಭುವಿಗೂ ಆತನ ಕ್ರಿಸ್ತನಿಗೂ ವಿರೋಧವಾಗಿ ಅಧಿಪತಿಗಳೆಲ್ಲರೂ ಒಟ್ಟಾಗಿ ಸೇರಿದ್ದಾರೆ.’


ಕೇವಲ ಸ್ವಲ್ಪಕಾಲದವರೆಗೆ ಯೇಸುವು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಲ್ಪಟ್ಟನು. ಆದರೆ ನಾವೀಗ ವೈಭವ, ಗೌರವಗಳೆಂಬ ಕಿರೀಟ ಧರಿಸಿರುವ ಆತನನ್ನು ನೋಡುತ್ತೇವೆ. ಏಕೆಂದರೆ ದೇವರ ಕೃಪೆಯ ನಿಮಿತ್ತ ಆತನು ಎಲ್ಲರಿಗೋಸ್ಕರ ಸಂಕಟ ಅನುಭವಿಸಿ ಮರಣಹೊಂದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು