Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:1 - ಪರಿಶುದ್ದ ಬೈಬಲ್‌

1 ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಧರ್ಮಶಾಸ್ತ್ರವು ಬರಲಿದ್ದ ಸೌಭಾಗ್ಯದ ಛಾಯೆಯೇ ಹೊರತು ಅದರ ನಿಜಸ್ವರೂಪವಲ್ಲ. ವರ್ಷವರ್ಷವೂ ನಿರಂತರವಾಗಿ ಅದೇ ಬಲಿಗಳು ಅರ್ಪಿತವಾಗುತ್ತಿವೆ. ಹೀಗಿರುವಲ್ಲಿ, ದೇವರನ್ನು ಅರಸಿ ಬರುತ್ತಿರುವವರನ್ನು ಇಂಥ ಬಲಿಗಳಿಂದ ಸಿದ್ಧಿಗೆ ತರಲು ಹೇಗೆ ತಾನೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಧರ್ಮಶಾಸ್ತ್ರದಲ್ಲಿ ಮುಂದೆ ಬರಬೇಕಾಗಿದ್ದ ಮೇಲುಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲವಾದದರಿಂದ ಆ ಧರ್ಮಶಾಸ್ತ್ರವು ವರುಷ ವರುಷಕ್ಕೆ ಪದೇ ಪದೇ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋಶೆಯ ನಿಯಮವು ಬರಬೇಕಾಗಿದ್ದ ವಸ್ತುಗಳ ಛಾಯೆಯಾಗಿದೆ ಹೊರತು ಅವುಗಳ ನಿಜಸ್ವರೂಪವಲ್ಲ. ಈ ಕಾರಣದಿಂದ ಅದು ಪ್ರತಿವರ್ಷ ಯಾವಾಗಲೂ ಯಜ್ಞಗಳನ್ನು ಅರ್ಪಿಸುವುದಕ್ಕೆ ಬರುವವರನ್ನು ಮೋಶೆಯ ನಿಯಮವು ಎಂದಿಗೂ ಪರಿಪೂರ್ಣತೆಗೆ ತರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮೊಯ್ಜೆಚೆ ಖಾಯ್ದೆ ಫಿಡೆ ಯೆತಲ್ಯಾ ಬರ್‍ಯಾಪಾನಾಚಿ ಸಾವ್ಳಿ ಶಿವಾಯ್ ತೆಂಚೊ ಖರೊ ರುಪ್ ನ್ಹಯ್, ಪರ್ತುನ್ ಪರ್ತುನ್ ವರ್ಸಾ ಬಲಿ ದಿಲ್ಯಾರ್ಬಿ ತೆಚ್ಯಾ ವೈನಾ ದೆವಾಚೆ ಆರಾದನ್ ಕರ್‍ತಲ್ಯಾಕ್ನಿ ಸಂಪುರ್ನ್ ಕರುಕ್ ಖಾಯ್ದ್ಯಾಂಚಾನ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:1
13 ತಿಳಿವುಗಳ ಹೋಲಿಕೆ  

ಈ ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು” ಎಂದು ಹೇಳಿದ್ದು ಈ ಕಾರಣದಿಂದಲೇ.


ಆದರೆ ಕ್ರಿಸ್ತನು ಈಗಾಗಲೇ ಪ್ರಧಾನಯಾಜಕನಾಗಿ ಬಂದಿದ್ದಾನೆ. ಈಗ ನಾವು ಹೊಂದಿರುವ ಉತ್ತಮ ಸಂಗತಿಗಳಿಗೆ ಆತನು ಪ್ರಧಾನಯಾಜಕನಾಗಿದ್ದಾನೆ. ಇತರ ಯಾಜಕರಾದರೊ ಗುಡಾರದಲ್ಲಿ ಸೇವೆಯನ್ನು ಮಾಡಿದರು. ಆದರೆ ಕ್ರಿಸ್ತನು ಗುಡಾರದಲ್ಲಿ ಸೇವೆ ಮಾಡದೆ ಅದಕ್ಕಿಂತಲೂ ಶ್ರೇಷ್ಠವಾದ ಸ್ಥಳದಲ್ಲಿ ಸೇವೆ ಮಾಡುತ್ತಾನೆ. ಅದು ಮತ್ತಷ್ಟು ಪರಿಪೂರ್ಣವಾದದ್ದು. ಅದು ಮನುಷ್ಯರಿಂದ ನಿರ್ಮಿತವಾದದ್ದಲ್ಲ. ಲೋಕಕ್ಕೆ ಸೇರಿದ್ದೂ ಅಲ್ಲ.


ಪೂರ್ವಕಾಲದಲ್ಲಿ ಈ ಸಂಗತಿಗಳೆಲ್ಲ ಮುಂದೆ ಬರಬೇಕಾಗಿದ್ದವುಗಳ ಛಾಯೆಗಳಾಗಿದ್ದವು. ಅವುಗಳ ನಿಜರೂಪವು ಕ್ರಿಸ್ತನಲ್ಲಿ ತೋರಿಬಂದಿತು.


ಈ ವಸ್ತುಗಳು ಪರಲೋಕದಲ್ಲಿರುವ ವಸ್ತುಗಳ ಪ್ರತಿರೂಪಗಳಾಗಿವೆ. ಇವುಗಳನ್ನು ಪ್ರಾಣಿಗಳ ಯಜ್ಞಗಳಿಂದ ಪರಿಶುದ್ಧಗೊಳಿಸಬೇಕಾಗಿದೆ. ಆದರೆ ಪರಲೋಕದಲ್ಲಿರುವ ನಿಜರೂಪಗಳಿಗಾಗಿ ಉತ್ತಮವಾದ ಯಜ್ಞಗಳನ್ನು ಅರ್ಪಿಸಬೇಕಾಗಿದೆ.


ಪ್ರಧಾನಯಾಜಕನು ವರ್ಷಕ್ಕೊಮ್ಮೆ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವಾಗ ಅರ್ಪಿಸುವುದಕ್ಕಾಗಿ ಪಶುರಕ್ತವನ್ನು ತನ್ನೊಡನೆ ತೆಗೆದುಕೊಂಡು ಹೋಗುತ್ತಿದ್ದನು. ಆದರೆ ಅವನು ತನ್ನ ಸ್ವಂತ ರಕ್ತವನ್ನು ಅರ್ಪಿಸುತ್ತಿರಲಿಲ್ಲ. ಕ್ರಿಸ್ತನು ಪರಲೋಕಕ್ಕೆ ಹೋದದ್ದು, ಪ್ರಧಾನ ಯಾಜಕನು ಮತ್ತೆಮತ್ತೆ ರಕ್ತವನ್ನು ಅರ್ಪಿಸಿದಂತೆ ತನ್ನನ್ನು ಮತ್ತೆಮತ್ತೆ ಅರ್ಪಿಸಿಕೊಳ್ಳುವುದಕ್ಕಾಗಿಯಲ್ಲ.


ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.


ಲೇವಿಕುಲದ ಯಾಜಕತ್ವದ ಆಧಾರದ ಮೇಲೆ ಧರ್ಮಶಾಸ್ತ್ರವನ್ನು ಜನರಿಗೆ ಕೊಡಲಾಯಿತು. ಆದರೆ ಆ ಯಾಜಕತ್ವದಿಂದ ಜನರನ್ನು ಆತ್ಮಿಕತೆಯಲ್ಲಿ ಪರಿಪೂರ್ಣರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಬೇರೊಂದು ರೀತಿಯ ಯಾಜಕನು ಬರುವುದು ಅತ್ಯವಶ್ಯಕವಾಗಿತ್ತು. ಅಂದರೆ ಮೆಲ್ಕಿಜೆದೇಕನಂತಹ ಯಾಜಕನೇ ಹೊರತು ಆರೋನನಂತವನಲ್ಲ ಎಂಬುದು ಅದರ ಅರ್ಥ.


ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.


ಆರೋನನು ಸರ್ವಾಂಗಹೋಮಕ್ಕಾಗಿ ಪಶುವನ್ನು ತರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಅರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು