Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:38 - ಪರಿಶುದ್ದ ಬೈಬಲ್‌

38 ನೀತಿವಂತನು ನಂಬಿಕೆಯಿಂದಲೇ ಜೀವವನ್ನು ಹೊಂದಿಕೊಳ್ಳುವನು. ಆದರೆ ಅವನು ಭಯದಿಂದ ಹಿಂಜರಿದರೆ ನಾನು ಅವನಲ್ಲಿ ಸಂತೋಷಪಡುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಸಜ್ಜನರಾದ ನನ್ನ ಭಕ್ತರು ವಿಶ್ವಾಸದಿಂದಲೇ ಬಾಳುವರು ಅವರು ಹಿಂಜರಿದರಾದರೆ ಮೆಚ್ಚೆನು ನಾನವರನು,” ಎನ್ನುತ್ತದೆ ಪವಿತ್ರಗ್ರಂಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನಗೆ ಸಂತೋಷವಿರುವದಿಲ್ಲ ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದರೆ, “ನನ್ನ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಹಿಂಜರಿದರೆ, ಅವನಲ್ಲಿ ನನಗೆ ಸಂತೋಷವಿರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಮಾಜಿ ನಿತಿವಂತ್ ಲೊಕಾ ವಿಶ್ವಾಸಾತುಚ್ ಜಿವನ್ ಕರ್ತಾತ್ ತೆನಿ ಫಾಟಿ ಸರಕ್ಲ್ಯಾ ಮಿಯಾ ಖುಶಿನ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:38
24 ತಿಳಿವುಗಳ ಹೋಲಿಕೆ  

ಆದ್ದರಿಂದ ಧರ್ಮಶಾಸ್ತ್ರದ ಮೂಲಕ ಯಾವನೂ ನೀತಿವಂತನಾಗಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಪವಿತ್ರ ಗ್ರಂಥವು ಹೇಳುವಂತೆ, “ನಂಬಿಕೆಯ ಮೂಲಕ ನೀತಿವಂತನಾದವನು ಸದಾಕಾಲ ಜೀವಿಸುವನು.”


ಹೇಗೆಂದರೆ, ದೇವರಿಂದ ದೊರೆಯುವ ನೀತಿಯು ಅದರಲ್ಲಿ ತೋರಿಬರುತ್ತದೆ. ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುತ್ತದೆ. ಪವಿತ್ರ ಗ್ರಂಥವು ಹೇಳುವಂತೆ, “ನೀತಿವಂತನು ನಂಬಿಕೆಯಿಂದಲೇ ಜೀವಿಸುತ್ತಾನೆ.”


ಯಾವ ಜನರು ಅದರ ವಿಚಾರವಾಗಿ ಕೇಳಲು ನಿರಾಕರಿಸುವರೋ ಅವರಿಗಾಗಿ ಈ ಸಂದೇಶವಿರುವದಿಲ್ಲ. ಆದರೆ ಒಬ್ಬ ಸತ್ಪುರುಷನು ಈ ಸಂದೇಶವನ್ನು ನಂಬುವನು. ಆ ಸತ್ಪುರುಷನು ತಾನು ನಂಬಿದ ನಿಮಿತ್ತವಾಗಿ ಬದುಕುವನು.”


ದೇವರಾದ ಯೆಹೋವನು ಹೇಳಿದ್ದು ನನಗೆ ಕೇಳಿಸಿತು. ತನ್ನ ಜನರಿಗೂ ತನ್ನ ಸದ್ಭಕ್ತರಿಗೂ ಶಾಂತಿ ಇರುವುದೆಂದು ಆತನು ಹೇಳಿದನು. ಆದ್ದರಿಂದ ಅವರು ತಮ್ಮ ಮೂಢಜೀವನಕ್ಕೆ ಹೋಗಕೂಡದು.


“ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.


ಯೆಹೋವನು ತನ್ನನ್ನು ಆರಾಧಿಸುವ ಜನರಲ್ಲೇ ಸಂತೋಷಪಡುವನು. ಆತನು ತನ್ನ ಶಾಶ್ವತ ಪ್ರೀತಿಯಲ್ಲಿ ಭರವಸವಿಟ್ಟಿರುವವರನ್ನು ಮೆಚ್ಚಿಕೊಳ್ಳುವನು.


ಆದರೆ ಆ ಮನುಷ್ಯನು ಬೋಧನೆಯನ್ನು ತನ್ನ ಜೀವಿತದಲ್ಲಿ ಬೇರೂರಿಸಿಕೊಳ್ಳುವುದಿಲ್ಲ. ಅವನು ಆ ಬೋಧನೆಯನ್ನು ಸ್ವಲ್ಪಕಾಲ ಮಾತ್ರ ಅನುಸರಿಸುವನು. ಆ ಬೋಧನೆಯನ್ನು ಅಂಗೀಕರಿಸಿದ್ದರಿಂದ ತನಗೆ ಕಷ್ಟವಾಗಲಿ ಹಿಂಸೆಯಾಗಲಿ ಬಂದಾಗ ಅದನ್ನು ಬೇಗನೆ ಬಿಟ್ಟುಬಿಡುವನು.


“ಇಗೋ, ನನ್ನ ಸೇವಕನು. ನಾನು ಆತನನ್ನು ಆರಿಸಿಕೊಂಡಿದ್ದೇನೆ. ಆತನನ್ನು ಪ್ರೀತಿಸುತ್ತೇನೆ, ಆತನನ್ನು ಮೆಚ್ಚಿದ್ದೇನೆ. ಆತನ ಮೇಲೆ ನನ್ನ ಆತ್ಮವನ್ನು ಇರಿಸುವೆನು. ಆತನು ಜನಾಂಗಗಳಿಗೆ ನ್ಯಾಯವಾದ ತೀರ್ಪು ಮಾಡುವನು.


“ಒಳ್ಳೆಯವನು ತನ್ನ ಒಳ್ಳೆಯತನವನ್ನು ತೊರೆದು ಕೆಟ್ಟದ್ದನ್ನು ಮಾಡಿದರೆ, ನಾನು ಅವನ ಹಾದಿಗೆ ತಡೆಯನ್ನು ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನ್ನು ಎಚ್ಚರಿಸಲಿಲ್ಲವಾದ್ದರಿಂದ ಅವನು ತನ್ನ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೆ ಹೊಣೆಗಾರನನ್ನಾಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ಆ ಯೆಹೂದ್ಯರು ಪ್ರಭುವಾದ ಯೇಸುವನ್ನೂ ಪ್ರವಾದಿಗಳನ್ನೂ ಕೊಂದುಹಾಕಿದರು. ತಮ್ಮ ದೇಶದಿಂದ (ಜುದೇಯ) ನಮ್ಮನ್ನು ಬಲವಂತವಾಗಿ ಹೊರಗಟ್ಟಿದರು. ಅವರು ದೇವರಿಗೆ ಮೆಚ್ಚಿಕೆಯಾದವರಾಗಿಲ್ಲ ಮತ್ತು ಜನರೆಲ್ಲರ ವಿರುದ್ಧವಾಗಿದ್ದಾರೆ.


“ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.


ಕೆಲವರು ಯೆಹೋವನಾದ ನನ್ನಿಂದ ತೊಲಗಿಹೋದರು. ನನ್ನನ್ನು ಹಿಂಬಾಲಿಸುವುದನ್ನು ನಿಲ್ಲಿಸಿಬಿಟ್ಟರು. ಅವರು ಯೆಹೋವನನ್ನು ಸಹಾಯಕ್ಕಾಗಿ ಬೇಡುವಂತದ್ದನ್ನು ನಿಲ್ಲಿಸಿದರು. ಅವರನ್ನು ನಾನು ಅವರ ಸ್ಥಳಗಳಿಂದ ತೆಗೆದುಹಾಕುವೆನು.”


“ಒಂದುವೇಳೆ ಒಳ್ಳೆಯವನೊಬ್ಬನು ತನ್ನ ಒಳ್ಳೆಯತನವನ್ನು ಬಿಟ್ಟು ಪಾಪ ಮಾಡಬಹುದು; ದುಷ್ಟರು ಮಾಡುವ ಅಸಹ್ಯಕೃತ್ಯಗಳನ್ನೆಲ್ಲ ಮಾಡಬಹುದು. ಅವನು ಹೀಗೆ ಮಾಡುತ್ತಾ ಬದುಕಲು ಸಾಧ್ಯವೇ ಇಲ್ಲ! ಅವನು ಅಪನಂಬಿಗಸ್ತನಾದ್ದರಿಂದ ಮತ್ತು ಪಾಪ ಮಾಡಿದ್ದರಿಂದ ದೇವರು ಅವನ ಎಲ್ಲಾ ಒಳ್ಳೆಯ ಕಾರ್ಯಗಳನ್ನೂ ಮರೆತುಬಿಡುವನು. ಅವನು ತನ್ನ ಪಾಪಗಳ ದೆಸೆಯಿಂದ ಸಾಯುವನು.”


ಯೆಹೋವನು ತನ್ನ ಜನರಲ್ಲಿ ಸಂತೋಷಿಸುವನು. ಆತನು ತನ್ನ ದೀನಜನರಿಗಾಗಿ ಅದ್ಭುತಕಾರ್ಯವನ್ನು ಮಾಡಿ ಅವರನ್ನು ರಕ್ಷಿಸಿದನು!


ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ. ನಿನ್ನ ಸನ್ನಿಧಿಯಲ್ಲಿ ದುಷ್ಟರು ಇರಲಾರರು.


ಕ್ರಿಸ್ತನ ಶತ್ರುಗಳು ನಮ್ಮ ಗುಂಪಿನಲ್ಲೇ ಇದ್ದರು. ಅವರು ನಮ್ಮನ್ನು ಬಿಟ್ಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ. ಅವರು ನಿಜವಾಗಿಯೂ ನಮ್ಮ ಸಭೆಗೆ ಸೇರಿದವರಾಗಿದ್ದರೆ ನಮ್ಮೊಂದಿಗೆ ಇರುತ್ತಿದ್ದರು. ಆದರೆ ಅವರು ಹೊರಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ ಎಂಬುದನ್ನು ಇದೇ ತೋರ್ಪಡಿಸುತ್ತದೆ.


“ಒಂದುವೇಳೆ ‘ನೀನು ಜೀವಿಸುವಿ’ ಎಂದು ಒಬ್ಬ ಒಳ್ಳೆಯ ಮನುಷ್ಯನಿಗೆ ನಾನು ಹೇಳಬಹುದು. ಅವನು ತಾನು ಮಾಡಿದ ಒಳ್ಳೆಯ ಕಾರ್ಯಗಳ ನಿಮಿತ್ತ ತಾನು ರಕ್ಷಿಸಲ್ಪಟ್ಟಿದ್ದೇನೆ ಎಂದು ನೆನಸಬಹುದು. ಆ ಬಳಿಕ ಅವನು ದುಷ್ಕೃತ್ಯಗಳನ್ನು ಮಾಡಲು, ನಾನು ಅವನ ಪುಣ್ಯಕಾರ್ಯಗಳನ್ನು ನೋಡದೆ ಅವನ ದುಷ್ಕೃತ್ಯಗಳ ನಿಮಿತ್ತ ಅವನನ್ನು ಸಾಯಿಸುವೆನು.


ಆದರೆ ನಾವು ಹಿಂಜರಿಯುವ ಜನರಲ್ಲ, ನಾಶವಾಗುವ ಜನರೂ ಅಲ್ಲ. ನಾವು ನಂಬಿಕೆಯುಳ್ಳವರಾಗಿದ್ದೇವೆ ಮತ್ತು ರಕ್ಷಣೆ ಹೊಂದಿದವರಾಗಿದ್ದೇವೆ.


ನೀವು ಒಳ್ಳೆಯ ಜನರಿಗೆ ದಂಡನೆ ವಿಧಿಸಿದಿರಿ. ಅವರು ನಿಮಗೆ ವಿರೋಧವಾಗಿಲ್ಲದಿದ್ದರೂ ಅವರನ್ನು ಕೊಂದುಹಾಕಿದಿರಿ.


ನಾನು ಆತನ ಮಾರ್ಗಗಳನ್ನೇ ಅನುಸರಿಸಿದೆನು. ನನ್ನ ದೇವರ ವಿರುದ್ಧ ನಾನು ಪಾಪವನ್ನು ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು