Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:39 - ಪರಿಶುದ್ದ ಬೈಬಲ್‌

39 ಆದರೆ ನಾವು ಹಿಂಜರಿಯುವ ಜನರಲ್ಲ, ನಾಶವಾಗುವ ಜನರೂ ಅಲ್ಲ. ನಾವು ನಂಬಿಕೆಯುಳ್ಳವರಾಗಿದ್ದೇವೆ ಮತ್ತು ರಕ್ಷಣೆ ಹೊಂದಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆದರೆ ನಾವು ಹಿಮ್ಮೆಟ್ಟಿ ಹಾಳಾಗುವ ಜನರಲ್ಲ; ವಿಶ್ವಾಸವುಳ್ಳವರಾಗಿ ಜೀವೋದ್ಧಾರವನ್ನು ಪಡೆಯುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನಾವಾದರೋ ಹಿಂದೆಗೆದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಪ್ರಾಣರಕ್ಷಣೆಯನ್ನು ಹೊಂದುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ನಾವಾದರೋ ಹಿಂಜರಿದು ನಾಶವಾಗುವವರಲ್ಲ, ನಂಬುವವರಾಗಿ ಆ ರಕ್ಷಣೆಯನ್ನು ಹೊಂದುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಖರೆ ಅಮಿ ಫಾಟಿ ಸರ್ಕುನ್ ನಾಸ್ ಹೊತಲೆ ನ್ಹಯ್, ಹೆಚ್ಯಾ ಬದ್ಲಾಕ್ ವಿಶ್ವಾಸಾನ್ ರ್‍ಹಾವ್ನ್ ಸುಟ್ಕಾ ಖಮ್ವುನ್ ಘೆತಲ್ಯಾಂಚ್ಯಾ ಮದ್ಲೆಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:39
28 ತಿಳಿವುಗಳ ಹೋಲಿಕೆ  

ಲೋಕದ ವಿರುದ್ಧ ಜಯಗಳಿಸಿದ್ದು ನಮ್ಮ ನಂಬಿಕೆಯೇ. ಆದ್ದರಿಂದ ಲೋಕದ ವಿರುದ್ಧ ಜಯಗಳಿಸುವವನು ಯಾರು? ಯೇಸುವನ್ನು ದೇವರ ಮಗನೆಂದು ನಂಬುವ ವ್ಯಕ್ತಿಯು ಮಾತ್ರ ಜಯಗಳಿಸುತ್ತಾನೆ.


ದೇವರ ಶಕ್ತಿಯು ನಿಮ್ಮ ನಂಬಿಕೆಯ ಮೂಲಕ ನಿಮ್ಮನ್ನು ಕಾಯುತ್ತದೆ. ನಿಮಗೆ ರಕ್ಷಣೆಯಾಗುವವರೆಗೆ ನಿಮ್ಮನ್ನು ಸುರಕ್ಷಿತವಾಗಿಡುತ್ತದೆ. ಸಿದ್ಧವಾಗಿರುವ ಆ ರಕ್ಷಣೆಯು ಅಂತ್ಯಕಾಲದಲ್ಲಿ ನಿಮಗೆ ದೊರೆಯುವುದು.


ನಂಬಿಕೆಯಿಟ್ಟು, ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದವನು ಅಪರಾಧಿ ಎಂಬ ನಿರ್ಣಯ ಹೊಂದುವನು.


ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.


ಯೆಹೋವನು ಸಮುವೇಲನಿಗೆ, “ಸೌಲನು ನನ್ನ ಮಾರ್ಗವನ್ನು ತ್ಯಜಿಸಿದನು. ನಾನು ಸೌಲನನ್ನು ರಾಜನನ್ನಾಗಿ ಮಾಡಿದ್ದಕ್ಕಾಗಿ ಪಶ್ಚಾತ್ತಾಪಪಡುತ್ತೇನೆ. ನಾನು ಆಜ್ಞಾಪಿಸಿದ ಕಾರ್ಯಗಳನ್ನು ಅವನು ಮಾಡುತ್ತಿಲ್ಲ” ಎಂದು ಹೇಳಿದನು. ಸಮುವೇಲನು ತಳಮಳಗೊಂಡನು. ಅವನು ರಾತ್ರಿಯೆಲ್ಲ ಅಳುತ್ತಾ ಯೆಹೋವನಲ್ಲಿ ಮೊರೆಯಿಟ್ಟನು.


ಈಗಿರುವ ಆಕಾಶಕ್ಕೂ ಭೂಮಿಗೂ ಅದೇ ದೇವರ ವಾಕ್ಯವು ಆಧಾರವಾಗಿದೆ. ಆಕಾಶ ಮತ್ತು ಭೂಮಿಗಳು ಬೆಂಕಿಯಿಂದ ನಾಶಗೊಳ್ಳಲು ಇಡಲ್ಪಟ್ಟಿವೆ. ದೇವರಿಗೆ ವಿರುದ್ಧವಾಗಿರುವ ಜನರೆಲ್ಲರಿಗೆ ಆಗುವ ನ್ಯಾಯತೀರ್ಪಿನ ದಿನಕ್ಕಾಗಿಯೂ ನಾಶನಕ್ಕಾಗಿಯೂ ಭೂಮ್ಯಾಕಾಶಗಳು ಇಡಲ್ಪಟ್ಟಿವೆ.


ನಂಬಿಕೆ ಎಂದರೆ ನಾವು ನಿರೀಕ್ಷೆಯಿಂದಿರುವ ಸಂಗತಿಗಳಲ್ಲಿ ಭರವಸದಿಂದಿರುವುದೂ ನಮ್ಮ ಕಣ್ಣಿಗೆ ಕಾಣದಿರುವುದನ್ನು ನಿಜವೆಂದು ತಿಳಿದುಕೊಳ್ಳುವುದೂ ಆಗಿದೆ.


ದೇವರು ನಮ್ಮನ್ನು ಆರಿಸಿಕೊಂಡದ್ದು ತನ್ನ ಕೋಪಕ್ಕೆ ಗುರಿಯಾಗಲಿ ಎಂದಲ್ಲ. ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ರಕ್ಷಣೆಯಾಗಲೆಂದೇ ದೇವರು ನಮ್ಮನ್ನು ಆರಿಸಿಕೊಂಡನು.


ನಾನು ಇವರೊಂದಿಗೆ ಇದ್ದಾಗ, ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡಿದೆನು. ಪವಿತ್ರ ಗ್ರಂಥದ ಹೇಳಿಕೆಯು ನೆರವೇರುವಂತೆ ಕಳೆದುಹೋಗುವುದಕ್ಕಾಗಿಯೇ ಆರಿಸಲ್ಪಟ್ಟಿದ್ದ (ಯೂದನೆಂಬ) ಒಬ್ಬನೇ ಒಬ್ಬನು ಇವರಲ್ಲಿ ನಾಶವಾದನು.


ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.


ಆಗ ಹೊರಟುಹೋಗಿ ತನಗಿಂತಲೂ ಹೆಚ್ಚು ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಬಳಿಕ ಆ ದೆವ್ವಗಳೆಲ್ಲಾ ಆ ಮನುಷ್ಯನೊಳಗೆ ಹೋಗಿ ಅಲ್ಲೇ ವಾಸಿಸುತ್ತವೆ. ಆಗ ಆ ವ್ಯಕ್ತಿಯು ಮೊದಲಿಗಿಂತಲೂ ಹೆಚ್ಚಿನ ಸಂಕಟಕ್ಕೆ ಒಳಗಾಗುತ್ತಾನೆ” ಎಂದು ಹೇಳಿದನು.


ನಾವು ನಿನಗೆ ವಿಮುಖರಾಗದೆ ನಿನ್ನನ್ನೇ ಹಿಂಬಾಲಿಸಿದೆವು.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸಲು ಅವಕಾಶ ನೀಡದಿರಿ. ಜನರು ದೇವರಿಗೆ ವಿಮುಖರಾಗದ ಹೊರತು, ಅಧರ್ಮಸ್ವರೂಪನು ಕಾಣಿಸಿಕೊಳ್ಳದ ಹೊರತು ಆ ದಿನವು ಬರುವುದಿಲ್ಲ.


ಆದರೆ ಆತನೇ ಕ್ರಿಸ್ತನೆಂದೂ ದೇವರ ಮಗನೆಂದೂ ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ದುಷ್ಟರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ಸಂಪೂರ್ಣವಾಗಿ ದಂಡನೆ ಅನುಭವಿಸುವರು. ಆದರೆ ಸಜ್ಜನರು ತಮ್ಮ ಒಳ್ಳೆಯಕಾರ್ಯಗಳಿಗೆ ಸಂಪೂರ್ಣವಾಗಿ ಪ್ರತಿಫಲ ಪಡೆಯುವರು.


“ಮೂಢರು ಜ್ಞಾನವನ್ನು ತಿರಸ್ಕರಿಸುವುದರಿಂದ ಸಾವಿಗೀಡಾಗುವರು; ಅವರ ಉದಾಸೀನತೆಯೇ ಅವರನ್ನು ನಾಶಪಡಿಸುವುದು.


ಒಂದುಕಾಲದಲ್ಲಿ ಜೀವಿಸಿದ್ದು, ಆದರೆ ಈಗ ಜೀವಿಸಿಲ್ಲದ ಈ ಮೃಗವು ಎಂಟನೆಯ ರಾಜ. ಈ ಎಂಟನೆಯ ರಾಜನೂ ಮೊದಲ ಏಳು ರಾಜರುಗಳ ಗುಂಪಿಗೆ ಸೇರಿದವನು. ಅವನೂ ನಾಶವಾಗುತ್ತಾನೆ.


ನಾವು ಸತ್ಯವನ್ನು ತಿಳಿದುಕೊಂಡ ಮೇಲೆಯೂ ಪಾಪಗಳನ್ನು ಮಾಡುತ್ತಲೇ ಇದ್ದರೆ, ನಮ್ಮ ಪಾಪಗಳನ್ನು ಯಾವ ಯಜ್ಞವೂ ಪರಿಹರಿಸುವುದಿಲ್ಲ.


ಶ್ರೀಮಂತರಾಗಬೇಕೆನ್ನುವವರು ತಮ್ಮನ್ನು ತಾವೇ ಶೋಧನೆಗೆ ಗುರಿಪಡಿಸಿಕೊಳ್ಳುವರು. ಅವರು ಉರ್ಲಿನಲ್ಲಿ ಸಿಕ್ಕಿಹಾಕಿಕೊಂಡವರಾಗಿದ್ದಾರೆ. ಅವರು ಹಾನಿಕರವಾದ ಅನೇಕ ಮೂರ್ಖ ಆಸೆಗಳಲ್ಲಿ ಸಿಕ್ಕಿಬೀಳುವರು. ಅವು ಜನರನ್ನು ಹಾಳುಮಾಡಿ, ನಾಶಗೊಳಿಸುತ್ತವೆ.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ.


ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.


ನೀತಿವಂತನು ನಂಬಿಕೆಯಿಂದಲೇ ಜೀವವನ್ನು ಹೊಂದಿಕೊಳ್ಳುವನು. ಆದರೆ ಅವನು ಭಯದಿಂದ ಹಿಂಜರಿದರೆ ನಾನು ಅವನಲ್ಲಿ ಸಂತೋಷಪಡುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು