Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:4 - ಪರಿಶುದ್ದ ಬೈಬಲ್‌

4 ಏಕೆಂದರೆ ಅವರ ಪಾಪಗಳನ್ನು ತೆಗೆದುಹಾಕಲು ಹೋರಿಗಳ ಮತ್ತು ಹೋತಗಳ ರಕ್ತಕ್ಕೆ ಸಾಧ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಕೆಂದರೆ, ಹೋತ, ಹೋರಿಗಳ ರಕ್ತದಿಂದ ಪಾಪನಿವಾರಣೆ ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೋರಿಗಳ ಮತ್ತು ಹೋತಗಳ ರಕ್ತದಿಂದ ಪಾಪಗಳು ಪರಿಹಾರವಾಗುವದು ಅಸಾಧ್ಯವಾಗಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದುಹಾಕುವುದು ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಬೈಲಾಂಚ್ಯಾ, ಅನಿ ಪಾಲ್ವ್ಯಾಂಚ್ಯಾ ರಗ್ತಾನ್ ಪಾಪಾತ್ನಾ ಸುಟ್ಕಾ ಹೊವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:4
19 ತಿಳಿವುಗಳ ಹೋಲಿಕೆ  

ಪ್ರತಿದಿನವೂ ಯಾಜಕರು ನಿಂತುಕೊಂಡು ತಮ್ಮ ಧಾರ್ಮಿಕ ಸೇವೆಯನ್ನು ಮಾಡುತ್ತಾರೆ. ಅವರು ಮತ್ತೆಮತ್ತೆ ಅದೇ ಯಜ್ಞಗಳನ್ನು ಅರ್ಪಿಸುತ್ತಾರೆ. ಆದರೆ ಅವರ ಪಾಪಗಳನ್ನು ತೆಗೆದುಹಾಕಲು ಯಜ್ಞಗಳಿಗೆ ಎಂದಿಗೂ ಸಾಧ್ಯವಿಲ್ಲ.


ಕ್ರಿಸ್ತನು ಜನರ ಪಾಪಗಳನ್ನು ಹೋಗಲಾಡಿಸಲು ಬಂದನೆಂಬುದು ನಿಮಗೆ ತಿಳಿದಿದೆ. ಆತನಲ್ಲಿ ಪಾಪವೆಂಬುದಿಲ್ಲ.


ನಾನು ಆ ಜನರ ಪಾಪಗಳನ್ನು ಪರಿಹರಿಸುವಾಗ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.”


ಈ ಪವಿತ್ರ ಗ್ರಂಥದಲ್ಲಿ ಕ್ರಿಸ್ತನು ಮೊದಲನೆಯದಾಗಿ ಹೇಳಿದ್ದೇನೆಂದರೆ: “ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ನೀನು ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ.” (ಇವುಗಳೆಲ್ಲ ಧರ್ಮಶಾಸ್ತ್ರವು ಆಜ್ಞಾಪಿಸುವ ಯಜ್ಞಗಳು.)


ಈ ದಿನ ನಮಗೆ ಇದೊಂದು ಉದಾಹರಣೆಯಾಗಿದೆ. ದೇವರಿಗೆ ಅರ್ಪಿಸಲ್ಪಡುತ್ತಿದ್ದ ಕಾಣಿಕೆಗಳಿಗಾಗಲಿ ಯಜ್ಞಗಳಿಗಾಗಲಿ ದೇವಾರಾಧನೆ ಮಾಡುವ ವ್ಯಕ್ತಿಯನ್ನು ಪರಿಪೂರ್ಣನನ್ನಾಗಿ ಮಾಡಲು ಸಾಧ್ಯವಿರಲಿಲ್ಲ ಎಂಬುದನ್ನು ಇದು ತೋರ್ಪಡಿಸುತ್ತದೆ. ಆ ವ್ಯಕ್ತಿಯ ಹೃದಯವನ್ನು ಪರಿಶುದ್ಧಗೊಳಿಸಲು ಆ ಯಜ್ಞಗಳಿಗೆ ಸಾಧ್ಯವಿರಲಿಲ್ಲ.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ಆತನಲ್ಲದೆ ಬೇರೆ ದೇವರಿಲ್ಲ. ದೇವರನ್ನು ಪೂರ್ಣಹೃದಯದಿಂದ, ಪೂರ್ಣಬುದ್ಧಿಯಿಂದ ಹಾಗೂ ಪೂರ್ಣಶಕ್ತಿಯಿಂದ ಪ್ರೀತಿಸಬೇಕು ಮತ್ತು ಒಬ್ಬ ವ್ಯಕ್ತಿಯು ತನ್ನನ್ನು ಪ್ರೀತಿಸುವಂತೆಯೇ ಇತರರನ್ನೂ ಪ್ರೀತಿಸಬೇಕು. ನಾವು ದೇವರಿಗೆ ಅರ್ಪಿಸುವ ಪಶುಯಜ್ಞಗಳಿಗಿಂತಲೂ ಈ ಆಜ್ಞೆಗಳು ಹೆಚ್ಚು ಮುಖ್ಯವಾಗಿವೆ” ಎಂದು ಉತ್ತರಿಸಿದನು.


ಯಾಕೆಂದರೆ ನನಗೆ ವಿಧೇಯತೆಯಿಂದ ಕೂಡಿದ ಪ್ರೀತಿಯು ಬೇಕೇ ಹೊರತು ಯಜ್ಞವಲ್ಲ. ಜನರು ತರುವ ಸರ್ವಾಂಗಹೋಮಗಳಿಗಿಂತಲೂ ಅವರು ನನ್ನನ್ನು (ದೇವರನ್ನು) ತಿಳಿದುಕೊಳ್ಳಬೇಕೆಂಬುದೇ ನನಗೆ ಇಷ್ಟ.


ನಿನಗೆ ನಿಜವಾಗಿಯೂ ಬೇಕಾದದ್ದು ಯಜ್ಞಗಳಲ್ಲ. ಹೀಗಿರಲು ನಿನಗೆ ಇಷ್ಟವೇ ಇಲ್ಲದ ಯಜ್ಞಗಳನ್ನು ನಾನೇಕೆ ಅರ್ಪಿಸಲಿ!


ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು.


ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”


ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.


ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು