Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:5 - ಪರಿಶುದ್ದ ಬೈಬಲ್‌

5 ಕ್ರಿಸ್ತನು ಈ ಲೋಕದಲ್ಲಿ ಪ್ರತ್ಯಕ್ಷನಾದಾಗ ಹೇಳಿದ್ದೇನೆಂದರೆ: “ದೇವರೇ, ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ಆದರೆ ನೀನು ನನಗಾಗಿ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದ್ದರಿಂದಲೇ ಭೂಲೋಕಕ್ಕೆ ಬರಲಿದ್ದ ಕ್ರಿಸ್ತಯೇಸು ದೇವರಿಗೆ ಇಂತೆಂದರು: “ಬಲಿಯರ್ಪಣೆಗಳೂ ಕಾಣಿಕೆಗಳೂ ನಿಮಗೆ ಬೇಡವಾದವು ಎಂದೇ ಅಣಿಮಾಡಿ ಕೊಟ್ಟಿರಿ ನನಗೆ ದೇಹವೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ - [ದೇವರೇ], ಯಜ್ಞನೈವೇದ್ಯಗಳು ನಿನಗೆ ಇಷ್ಟವಾಗಿರಲಿಲ್ಲ, ನನಗೆ ದೇಹವನ್ನು ಸಿದ್ಧಮಾಡಿಕೊಟ್ಟಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಕ್ರಿಸ್ತ ಯೇಸು ಭೂಲೋಕದೊಳಗೆ ಬಂದಾಗ, “ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿ ಕೊಟ್ಟಿರುವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಸೆ ಹೊವ್ನ್, ಕ್ರಿಸ್ತ್ ಹ್ಯಾ ಜಗಾತ್ ಯೆತಾನಾ ಸಾಂಗಲ್ಲೆ ಕಾಯ್ ಮಟ್ಲ್ಯಾರ್, ದೆವಾ ತುಕಾ ಯಜ್ನ್ ಕರ್‍ತಲೆ ಅನಿ ಕಾನಿಕಾಚಿ ಆಶಾ ನಾ ಖರೆ ತಿಯಾ ಮಾಜ್ಯಾ ಸಾಟ್ನಿ ಆಂಗ್ ತಯಾರ್ ಕರುನ್ ಥವ್ಲೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:5
26 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ಈ ಯಜ್ಞಗಳನ್ನೆಲ್ಲ ನೀವು ನನಗೆ ಕೊಡುತ್ತಲೇ ಇರುವುದೇಕೆ? ನಿಮ್ಮ ಆಡುಗಳ ಯಜ್ಞಗಳೂ, ಹೋರಿಗಳ, ಕುರಿಗಳ, ಆಡುಗಳ ಕೊಬ್ಬೂ ನನಗೆ ಬೇಕಿಲ್ಲ. ಅವುಗಳ ರಕ್ತಕ್ಕೆ ನಾನು ಪ್ರಸನ್ನನಾಗುವುದಿಲ್ಲ.


ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ದೇವರು ತನ್ನ ಚೊಚ್ಚಲ ಮಗನನ್ನು ಈ ಲೋಕಕ್ಕೆ ಬರಮಾಡುವಾಗ, ಆತನು ಹೇಳುವುದೇನೆಂದರೆ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ.”


ಆಗ ನಾನು, ‘ದೇವರೇ, ನಾನು ಇಲ್ಲಿದ್ದೇನೆ. ಧರ್ಮಶಾಸ್ತ್ರದಲ್ಲಿ ನನ್ನ ಬಗ್ಗೆ ಬರೆದಿರುವಂತೆಯೇ ನಿನ್ನ ಚಿತ್ತಕ್ಕನುಸಾರವಾಗಿ ಮಾಡಲು ನಾನು ಬಂದಿದ್ದೇನೆ’ ಎಂದು ಹೇಳಿದೆ.”


ಆ ಮಕ್ಕಳು ಭೌತಿಕ ಶರೀರ ಹೊಂದಿದ್ದರು. ಆದ್ದರಿಂದ ಯೇಸು ತಾನೇ ಅವರಂತಾದನು. ಆತನು ತನ್ನ ಸಾವಿನ ಮೂಲಕ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಗೊಳಿಸಿ,


ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಯೇಸು ಕ್ರಿಸ್ತನು ಮಾಡಿದನು. ಆ ಕಾರಣದಿಂದಲೇ, ಯಜ್ಞವಾಗಿ ಅರ್ಪಿತವಾದ ಆತನ ದೇಹದ ಮೂಲಕ ನಾವು ಪರಿಶುದ್ಧರಾದೆವು. ಆತನು ಶಾಶ್ವತವಾದ ಯಜ್ಞವನ್ನು ಒಂದೇ ಸಲ ಅರ್ಪಿಸಿದನು.


ಆದರೆ ತಕ್ಕ ಕಾಲ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿದನು. ದೇವರ ಮಗನು ಸ್ತ್ರೀಯಲ್ಲಿ ಜನಿಸಿ, ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸಿದನು.


ಈಗ ಲೋಕದಲ್ಲಿ ಅನೇಕ ಸುಳ್ಳುಬೋಧಕರಿದ್ದಾರೆ. ಯೇಸು ಕ್ರಿಸ್ತನು ಈ ಲೋಕಕ್ಕೆ ಮನುಷ್ಯನಾಗಿ ಬಂದನೆಂಬುದನ್ನು ಈ ಸುಳ್ಳುಬೋಧಕರು ಒಪ್ಪಿಕೊಳ್ಳುವುದಿಲ್ಲ. ಈ ಸತ್ಯವನ್ನು ಒಪ್ಪಿಕೊಳ್ಳದವನು ಸುಳ್ಳುಬೋಧಕನಾಗಿದ್ದಾನೆ ಮತ್ತು ಯೇಸು ಕ್ರಿಸ್ತನ ವೈರಿಯಾಗಿದ್ದಾನೆ.


ಪ್ರತಿಯೊಬ್ಬ ಪ್ರಧಾನಯಾಜಕನೂ ದೇವರಿಗೆ ಯಜ್ಞಗಳನ್ನೂ ಕಾಣಿಕೆಗಳನ್ನೂ ಅರ್ಪಿಸಬೇಕು. ಆದ್ದರಿಂದ ನಮ್ಮ ಪ್ರಧಾನ ಯಾಜಕನೂ ದೇವರಿಗೆ ಏನನ್ನಾದರೂ ಅರ್ಪಿಸಲೇಬೇಕು.


ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.


ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”


ಯೋಹಾನನ ಶಿಷ್ಯರು ಯೇಸುವಿಗೆ, “ಯೋಹಾನನು ಹೇಳಿದ್ದಂತೆ ಬರಬೇಕಾಗಿದ್ದವನು ನೀನೋ ಅಥವಾ ಬೇರೊಬ್ಬನಿಗಾಗಿ ನಾವು ಎದುರುನೋಡಬೇಕೋ?” ಎಂದು ಕೇಳಿದರು.


ನೀನು ಅಪನಂಬಿಗಸ್ತಳಾದ ಮಗಳಾಗಿದ್ದೆ. ಆದರೆ ನೀನು ಬದಲಾವಣೆ ಹೊಂದಿದೆ. ಈಗ ನೀನು ಮನೆಗೆ ಹಿಂದಿರುಗಿ ಬರಲು ಎಷ್ಟು ಹೊತ್ತು ಕಾದುಕೊಂಡಿರುವೆ. “ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಮಾಡಿದ್ದಾನೆ. ಹೆಂಗಸು ಗಂಡಸನ್ನು ಕಾಪಾಡುವಳು.”


ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.


“ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?” ಎಂದು ಕೇಳುವುದಕ್ಕಾಗಿ ಅವರನ್ನು ಪ್ರಭುವಿನ (ಯೇಸುವಿನ) ಬಳಿಗೆ ಕಳುಹಿಸಿದನು.


ಯೆಹೋವನಿಗೆ ಲೆಬನೋನಿನಲ್ಲಿರುವ ಮರಗಳನ್ನೆಲ್ಲಾ ಸುಟ್ಟರೂ ಸಾಲದು, ಲೆಬನೋನಿನಲ್ಲಿರುವ ಪ್ರಾಣಿಗಳು ಆತನ ಯಜ್ಞಕ್ಕೆ ಸಾಲವು.


ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.


ಈ ಪವಿತ್ರ ಗ್ರಂಥದಲ್ಲಿ ಕ್ರಿಸ್ತನು ಮೊದಲನೆಯದಾಗಿ ಹೇಳಿದ್ದೇನೆಂದರೆ: “ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ನೀನು ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ.” (ಇವುಗಳೆಲ್ಲ ಧರ್ಮಶಾಸ್ತ್ರವು ಆಜ್ಞಾಪಿಸುವ ಯಜ್ಞಗಳು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು