Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:23 - ಪರಿಶುದ್ದ ಬೈಬಲ್‌

23 ಮೋಶೆಯು ಹುಟ್ಟಿದಾಗ ಅವನ ತಂದೆತಾಯಿಗಳು ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳವರೆಗೆ ಅಡಗಿಸಿಟ್ಟರು. ಮಗುವಾಗಿದ್ದ ಮೋಶೆಯ ಸೌಂದರ್ಯವನ್ನು ಅವರು ಕಂಡದ್ದರಿಂದ ರಾಜನಾದ ಫರೋಹನ ಆಜ್ಞೆಗೂ ಅವಿಧೇಯರಾಗಲು ಹಿಂಜರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮೋಶೆ ಹುಟ್ಟಿದಾಗ ಅವನ ತಂದೆತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ ಅರಸನ ಅಪ್ಪಣೆಗೆ ಭಯಪಡದೇ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ವಿಶ್ವಾಸವಿದ್ದುದರಿಂದಲೇ ಮೋಶೆ ಹುಟ್ಟಿದಾಗ ಆ ಮಗುವಿನ ಸೌಂದರ್ಯವನ್ನು ಕಂಡು, ತಂದೆತಾಯಿಗಳು ರಾಜಾಜ್ಞೆಗೆ ಅಂಜದೆ, ಮೂರು ತಿಂಗಳವರೆಗೆ ಅದನ್ನು ಬಚ್ಚಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮೋಶೆ ಹುಟ್ಟಿದಾಗ ಅವನ ತಂದೆ ತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಂಬಿಕೆಯಿಂದಲೇ ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರುವುದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮೊಯ್ಜೆ ಉಪಾಜಲ್ಲ್ಯಾ ತನ್ನಾ ತೆಚ್ಯಾ ಬಾಯ್ ಬಾಬಾನಿ ಬಾಳ್ಸೆ ಬರೆ ಹಾಯ್ ಮನುನ್ ಬಗುನ್ ಫಾರೊವ್ ರಾಜಾಚ್ಯಾ ಹುಕುಮಾಕ್ ಭಿಂಯಿನಸ್ತಾನಾ ತಿನ್ ಮ್ಹಯಿನೆ ಪತರ್ ನಿಪ್ವುನ್ ಥವಲ್ಲೆಬಿ ವಿಶ್ವಾಸಾನುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:23
16 ತಿಳಿವುಗಳ ಹೋಲಿಕೆ  

ಆದ್ದರಿಂದ ಫರೋಹನು ತನ್ನ ಜನರಿಗೆಲ್ಲಾ, “ಇಬ್ರಿಯರಿಗೆ ಹುಟ್ಟುವ ಗಂಡುಕೂಸುಗಳನ್ನೆಲ್ಲಾ ನೈಲ್ ನದಿಗೆ ಎಸೆದುಬಿಡಬೇಕು. ಆದರೆ ಎಲ್ಲಾ ಹೆಣ್ಣುಮಕ್ಕಳು ಬದುಕಲಿ” ಎಂದು ಆಜ್ಞಾಪಿಸಿದನು.


“ಇಬ್ರಿಯ ಸ್ತ್ರೀಯರಿಗೆ ನೀವು ಹೆರಿಗೆ ಮಾಡುವಾಗ ಹೆಣ್ಣುಮಗು ಹುಟ್ಟಿದರೆ, ಅದನ್ನು ಉಳಿಸಿರಿ; ಗಂಡುಮಗು ಹುಟ್ಟಿದರೆ ಸಾಯಿಸಿರಿ!” ಎಂದು ಹೇಳಿದನು.


ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.”


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


“ಮೋಶೆಯು ಜನಿಸಿದ್ದು ಈ ಕಾಲದಲ್ಲೇ. ಅವನು ಬಹು ಸುಂದರನಾಗಿದ್ದನು. ಮೋಶೆಯನ್ನು ಅವನ ತಂದೆಯ ಮನೆಯಲ್ಲಿ ಮೂರು ತಿಂಗಳವರೆಗೆ ನೋಡಿಕೊಳ್ಳಲಾಯಿತು.


ನನಗೆ ಅಮೂಲ್ಯವಾದ ಯಾಕೋಬೇ, ಭಯಪಡಬೇಡ. ನನ್ನ ಪ್ರಿಯ ಇಸ್ರೇಲೇ, ಹೆದರಬೇಡ. ನಾನು ನಿಜವಾಗಿಯೂ ನಿನಗೆ ಸಹಾಯ ಮಾಡುತ್ತೇನೆ.” ಇದು ಯೆಹೋವನ ನುಡಿ. “ಇಸ್ರೇಲರ ಪರಿಶುದ್ಧನೂ ನಿನ್ನನ್ನು ರಕ್ಷಿಸುವಾತನೂ ಈ ಮಾತುಗಳನ್ನು ಹೇಳಿದ್ದಾನೆ:


ಯೆಹೋವನು ನನ್ನೊಂದಿಗಿದ್ದಾನೆ, ಆದ್ದರಿಂದ ನಾನು ಭಯಪಡುವುದಿಲ್ಲ. ಮನುಷ್ಯರು ನನಗೇನು ಮಾಡಬಲ್ಲರು?


ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.


ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”


ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ನಾನು ದೇವರಲ್ಲಿ ಭರವಸೆ ಇಟ್ಟಿರುವುದರಿಂದ ಜನರಿಗೆ ಭಯಪಡುವುದಿಲ್ಲ. ಕ್ಷಣಿಕರಾದ ಮಾನವರು ನನಗೇನು ಮಾಡಬಲ್ಲರು? ದೇವರ ವಾಗ್ದಾನಕ್ಕಾಗಿ ಆತನನ್ನು ಕೊಂಡಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು