Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:9 - ಪರಿಶುದ್ದ ಬೈಬಲ್‌

9 ದೇವರು ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ಅವನು ಪ್ರವಾಸಿಗನಂತೆ ವಾಸಮಾಡಿದ್ದು ನಂಬಿಕೆಯಿಂದಲೇ. ಅದೇ ವಾಗ್ದಾನಕ್ಕೆ ಸಹ ಭಾದ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವರು ವಾಗ್ದಾನ ಮಾಡಿದ ನಾಡಿಗೆ ಬಂದಾಗಲೂ ಆತನು ಅದೇ ವಿಶ್ವಾಸದ ನಿಮಿತ್ತ ಒಬ್ಬ ಅನ್ಯದೇಶಿಯನಂತೆ ಬಾಳಿದನು. ಡೇರೆಗಳಲ್ಲಿದ್ದುಕೊಂಡು ಒಬ್ಬ ಪ್ರವಾಸಿಗನಂತೆ ಜೀವಿಸಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯಸ್ಥರಾದ ಇಸಾಕನೂ ಯಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಂಬಿಕೆಯಿಂದಲೇ ಅವನು ವಾಗ್ದಾತ್ತದೇಶಕ್ಕೆ ಬಂದಾಗ ಅಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಡೇರೆಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗಲೂ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರು ಸಹ ಗುಡಾರಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ವಿಶ್ವಾಸಾನುಚ್ ದೆವಾನ್ ಸಾಂಗಲ್ಲ್ಯಾ ದೆಶ್ಯಾಕ್ ಯೆಲ್ಯಾ ತನ್ನಾ ಥೈ ದುಸ್ರ್ಯಾ ದೆಶಾತುಚ್ ಹೊತ್ತ್ಯಾ ಸಾರ್ಕೊಚ್ ಝೊಪ್ಡೆ ಬಾಂದುನ್ ಘೆವ್ನ್ ಪರ್ವಾಸಾಕ್ ಯೆಲ್ಲ್ಯಾ ಮಾನ್ಸಾ ಸಾರ್ಕೊ ಹೊವ್ನ್ ಜಿವನ್ ಕರ್ಲ್ಯಾನ್, ತೆಜಿ ಲೆಕಾ ಇಸಾಕ್ ಅನಿ ಜಾಕೊಬಾನ್ಬಿ ತೆಚ್ಯಾ ಸಾರ್ಕೆಚ್ ಬಿಡಾರಾತ್ನಿಚ್ ಜಿವನ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:9
22 ತಿಳಿವುಗಳ ಹೋಲಿಕೆ  

ಆಮೇಲೆ ಅಬ್ರಾಮನು ಆ ಸ್ಥಳದಿಂದ ಹೊರಟು ಬೇತೇಲಿಗೆ ಪೂರ್ವದಲ್ಲಿರುವ ಗುಡ್ಡಗಳ ಬಳಿಗೆ ಪ್ರಯಾಣ ಮಾಡಿದನು. ಅಲ್ಲಿ ಅಬ್ರಾಮನು ತನ್ನ ಗುಡಾರಗಳನ್ನು ಹಾಕಿದನು. ಪಶ್ಚಿಮಕ್ಕೆ ಬೇತೇಲ್ ಪಟ್ಟಣವಿತ್ತು, ಪೂರ್ವಕ್ಕೆ ಆಯಿ ಪಟ್ಟಣವಿತ್ತು. ಆ ಸ್ಥಳದಲ್ಲಿ ಅವನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಕೆಯನ್ನು ಕಟ್ಟಿ ಅಲ್ಲಿ ಅವನು ಯೆಹೋವನನ್ನು ಆರಾಧಿಸಿದನು.


ಆದ್ದರಿಂದ ಅಬ್ರಾಮನು ತನ್ನ ಗುಡಾರಗಳನ್ನು ಕೀಳಿಸಿ, ದೊಡ್ಡ ಮರಗಳಿರುವ ಮಮ್ರೆಯ ಸಮೀಪಕ್ಕೆ ಹೋಗಿ ವಾಸಿಸತೊಡಗಿದನು. ಇದು ಹೆಬ್ರೋನ್ ನಗರಕ್ಕೆ ಸಮೀಪದಲ್ಲಿತ್ತು. ಆ ಸ್ಥಳದಲ್ಲಿ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಯಜ್ಞವೇದಿಕೆಯನ್ನು ಕಟ್ಟಿದನು.


ಹಾಗೆಯೇ ದೇವರು ತನ್ನ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವ ಜನರಿಗೆ ತನ್ನ ಸಂಕಲ್ಪವು ಸ್ಥಿರವಾದದ್ದು ಎಂಬುದನ್ನು ಸ್ಪಷ್ಟಪಡಿಸಲು ಆಣೆಯಿಟ್ಟು ನಿಶ್ಚಯಪಡಿಸಿದನು.


ಆ ಪುರುಷರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ ಸಾರಳು ಎಲ್ಲಿ?” ಎಂದು ಕೇಳಿದರು. ಅಬ್ರಹಾಮನು ಅವರಿಗೆ, “ಆಕೆ ಗುಡಾರದಲ್ಲಿ ಇದ್ದಾಳೆ” ಅಂದನು.


ಅಬ್ರಾಮನು ತನ್ನ ಪ್ರಯಾಣವನ್ನು ಮುಂದುವರಿಸಿ ನೆಗೆವ್‌ವನ್ನು ಬಿಟ್ಟು ಬೇತೇಲಿಗೆ ಹಿಂತಿರುಗಿಹೋದನು. ಅವನು ಬೇತೇಲ್‌ ನಗರಕ್ಕೂ ಆಯಿ ನಗರಕ್ಕೂ ಮಧ್ಯದಲ್ಲಿರುವ ಸ್ಥಳಕ್ಕೆ ಹೋದನು. ಅಬ್ರಾಮನು ಮತ್ತು ಅವನ ಕುಟುಂಬದವರು ಇಳಿದುಕೊಂಡಿದ್ದ ಸ್ಥಳವೇ ಇದು.


ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಹೆಬ್ರೋನೆಂಬ ಕಿರ್ಯತರ್ಬದಲ್ಲಿದ್ದ ಮಮ್ರೆಗೆ ಬಂದನು. ಅಬ್ರಹಾಮನು ಮತ್ತು ಇಸಾಕನು ವಾಸವಾಗಿದ್ದದ್ದು ಇಲ್ಲೇ.


ದೇವರು ಅಬ್ರಹಾಮನನ್ನು ಆಶೀರ್ವದಿಸಿದ ರೀತಿಯಲ್ಲಿ ನಿನ್ನನ್ನೂ ನಿನ್ನ ಮಕ್ಕಳನ್ನೂ ಆಶೀರ್ವದಿಸುವಂತೆಯೂ ನೀನು ವಾಸಿಸುವ ಸ್ಥಳದಲ್ಲಿ ಸ್ವಂತ ಭೂಮಿಯನ್ನು ಪಡೆದುಕೊಳ್ಳುವಂತೆಯೂ ನಾನು ಪ್ರಾರ್ಥಿಸುವೆನು. ದೇವರು ಅಬ್ರಹಾಮನಿಗೆ ಕೊಟ್ಟ ಭೂಮಿಯೇ ಅದು” ಎಂದು ಹೇಳಿ ಕಳುಹಿಸಿಕೊಟ್ಟನು.


ಆ ಬಾಲಕರು ಬೆಳೆದು ದೊಡ್ಡವರಾದರು. ಏಸಾವನು ಚತುರ ಬೇಟೆಗಾರನಾದನು. ಹೊಲದಲ್ಲಿರುವುದು ಅವನಿಗೆ ಪ್ರಿಯವಾಗಿತ್ತು. ಆದರೆ ಯಾಕೋಬನು ಸಾಧು ಮನುಷ್ಯನಾಗಿದ್ದನು. ಅವನು ತನ್ನ ಗುಡಾರದಲ್ಲಿರುತ್ತಿದ್ದನು.


ಅವರಿಗೆ, “ನಾನು ಈ ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೇ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.


ಅಬ್ರಹಾಮನು ಗುಡಾರಕ್ಕೆ ಬೇಗನೆ ಹೋಗಿ ಸಾರಳಿಗೆ, “ಮೂರು ದೊಡ್ಡ ರೊಟ್ಟಿಗಳಿಗೆ ಬೇಕಾಗುವಷ್ಟು ಗೋಧಿ ಹಿಟ್ಟನ್ನು ಬೇಗನೆ ನಾದು” ಎಂದು ಹೇಳಿದನು.


ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.


ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು.


ಅಬ್ರಹಾಮನ ಕುಟುಂಬವು ಚಿಕ್ಕದಾಗಿದ್ದಾಗ ಅವರು ಪ್ರಯಾಣಿಕರಂತೆ ಕಾನಾನಿನಲ್ಲಿ ವಾಸವಾಗಿದ್ದಾಗ, ಆತನು ಅವರಿಗೆ ಈ ವಾಗ್ದಾನವನ್ನು ಮಾಡಿದನು.


ನೀವೆಂದೂ ಮನೆಯನ್ನು ಕಟ್ಟಿಕೊಳ್ಳಬಾರದು, ಬೀಜಗಳನ್ನು ಬಿತ್ತಬಾರದು, ದ್ರಾಕ್ಷಿತೋಟಗಳನ್ನು ಬೆಳಸಬಾರದು. ನೀವು ಅವುಗಳಲ್ಲಿ ಒಂದನ್ನು ಕೂಡ ಎಂದಿಗೂ ಮಾಡಬಾರದು. ನೀವು ಕೇವಲ ಗುಡಾರಗಳಲ್ಲಿ ವಾಸಿಸಬೇಕು. ಆಗ ನೀವು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆಹೋಗುವ ದೇಶದಲ್ಲಿ ಬಹಳ ಕಾಲದವರೆಗೆ ಇರಬಲ್ಲಿರಿ’ ಎಂದು ಆಜ್ಞಾಪಿಸಿದ್ದಾನೆ.


ಅವನು ಬಹುಕಾಲದವರೆಗೆ ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದನು.


ಮರುದಿನ ಮುಂಜಾನೆ ಲಾಬಾನನು ಯಾಕೋಬನನ್ನು ಸಂಧಿಸಿದನು. ಯಾಕೋಬನು ಬೆಟ್ಟದ ಮೇಲೆ ಪಾಳೆಯ ಮಾಡಿಕೊಂಡಿದ್ದನು. ಆದ್ದರಿಂದ ಲಾಬಾನನು ಮತ್ತು ಅವನ ಜನರೆಲ್ಲರು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಪಾಳೆಯ ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು