Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:10 - ಪರಿಶುದ್ದ ಬೈಬಲ್‌

10 ಈ ಲೋಕದ ನಮ್ಮ ತಂದೆಗಳು ನಮ್ಮನ್ನು ಸ್ವಲ್ಪಕಾಲ ದಂಡಿಸಿದರು. ಅವರು ತಮಗೆ ಉತ್ತಮವೆಂದು ತೋರಿದ ರೀತಿಯಲ್ಲಿ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ನಮಗೆ ಸಹಾಯ ಮಾಡಲು ನಮ್ಮನ್ನು ಶಿಕ್ಷಿಸುತ್ತಾನೆ. ಏಕೆಂದರೆ ನಾವೂ ಆತನಂತೆ ಪರಿಶುದ್ಧರಾಗಬೇಕೆಂಬುದೇ ಆತನ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಲೌಕಿಕ ತಂದೆಯಾದವರು ತಮ್ಮ ಮನಸ್ಸಿಗೆ ಸರಿದೋರಿದಂತೆ ನಮ್ಮನ್ನು ಶಿಕ್ಷಿಸುತ್ತಾರೆ. ಅದು ಕೊಂಚಕಾಲಕ್ಕೆ ಮಾತ್ರ ಪರಿಣಾಮಕರವಾಗಿರುತ್ತದೆ. ದೇವರಾದರೋ ನಾವು ಅವರ ಪರಿಶುದ್ಧತೆಯಲ್ಲೇ ಭಾಗಿಗಳಾಗುವಂತೆ ನಮ್ಮ ಹಿತಕ್ಕೋಸ್ಕರ ಶಿಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ತಂದೆಗಳು ಕೆಲವು ದಿವಸಗಳ ಪ್ರಯೋಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಮ್ಮ ತಂದೆಯಾದವರು ತಮಗೆ ಒಳ್ಳೆಯದೆಂದು ತಿಳಿದಾಗ, ಸ್ವಲ್ಪಕಾಲ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತಮ್ಮ ಪವಿತ್ರತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಒಳ್ಳೆಯದಕ್ಕಾಗಿಯೇ ಶಿಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಮ್ಚ್ಯಾ ಹ್ಯಾ ಜಗಾಚ್ಯಾ ಬಾಬಾನಿ ಉಲ್ಲ್ಯಾ ದಿಸಾಂಚ್ಯಾ ಜಿವನಾತ್ ಅಪ್ನಾಕ್ ಬರೆ ದಿಸ್ತಾ ತಸಿ ಶಿಕ್ಷಾ ಲಾವಲ್ಲ್ಯಾನಿ, ಖರೆ ದೆವ್ ಅಪ್ಲ್ಯಾ ಪವಿತ್ರ್ ಪಾನಾತ್ ಅಮ್ಕಾ ಭಾಗ್ ಘೆಯ್ ಸಾರ್ಕೆ ಕರುಕ್ ಸಾಟ್ನಿ ಮನುನ್ ಅಮ್ಚ್ಯಾಚ್ ಬರ್ಯ್ಯಾಸಾಟ್ನಿ ಅಮ್ಕಾ ಶಿಕ್ಷಾಕ್ ಲಾವ್ನ್ ಸಮಾ ವಾಟೆಕ್ ಹಾನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:10
17 ತಿಳಿವುಗಳ ಹೋಲಿಕೆ  

ಯೇಸು ತಾನು ಮಾಡಿದ ವಾಗ್ದಾನದಂತೆ, ತನ್ನ ಪ್ರಭಾವ ಮತ್ತು ಗುಣಾತಿಶಯಗಳ ಮೂಲಕ ನಮಗೆ ಅಮೂಲ್ಯವಾದ ಹಾಗೂ ಉತ್ಕೃಷ್ಟವಾದ ವರಗಳನ್ನು ದಯಪಾಲಿಸಿರುವನು. ಆ ವರಗಳಿಂದ ನೀವು ದೇವರ ಗುಣಾತಿಶಯದಲ್ಲಿ ಪಾಲುಗಾರರಾಗಲು ಸಾಧ್ಯ. ಹೀಗಿರಲಾಗಿ ನೀವು ಈ ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನಕ್ಕೆ ತಪ್ಪಿಸಿಕೊಂಡವರಾಗಿದ್ದೀರಿ.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


“ಇಸ್ರೇಲರಿಗೆ ಹೀಗೆ ಹೇಳು: ನಾನೇ ನಿಮ್ಮ ದೇವರಾದ ಯೆಹೋವನು ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು!


ಈಗಲಾದರೋ ಕ್ರಿಸ್ತನು ಶರೀರಧಾರಿಯಾಗಿ ಈ ಲೋಕದಲ್ಲಿದ್ದಾಗ ತನ್ನ ಪ್ರಾಣವನ್ನೇ ಕೊಡುವುದರ ಮೂಲಕ ನಿಮಗೂ ದೇವರಿಗೂ ಸಂಧಾನ ಮಾಡಿದ್ದಾನೆ. ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿಷ್ಕಳಂಕರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ದೇವರ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.


ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯವಾದ ನೀತಿಯುಳ್ಳದಾಗಿಯೂ ಪರಿಶುದ್ಧವಾಗಿಯೂ ನಿರ್ಮಿಸಲ್ಪಟ್ಟಿದೆ.


ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ಯೆಹೋವನೇ, ನಿನ್ನ ತೀರ್ಪುಗಳು ನ್ಯಾಯವಾದವುಗಳೆಂದು ನನಗೆ ತಿಳಿದಿದೆ. ನೀನು ನನ್ನನ್ನು ಶಿಕ್ಷಿಸಿದ್ದು ನನ್ನ ದೃಷ್ಟಿಯಲ್ಲಿ ನ್ಯಾಯವಾಗಿತ್ತು.


ತಾನು ಜನರನ್ನು ಶಿಕ್ಷಿಸಬೇಕೆಂಬುದು ಯೆಹೋವನ ಬಯಕೆಯೇನಲ್ಲ. ತಾನು ಜನರನ್ನು ವ್ಯಸನಗೊಳಿಸಬೇಕೆಂಬುದು ಆತನಿಗೆ ಇಷ್ಟವಿಲ್ಲ.


ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ಕೆಲವು ದಿನಗಳಾದ ಮೇಲೆ ನೊವೊಮಿಯ ಗಂಡನಾದ ಎಲೀಮೆಲೆಕನು ಮರಣಹೊಂದಿದನು. ನೊವೊಮಿ ಮತ್ತು ಆಕೆಯ ಇಬ್ಬರು ಗಂಡುಮಕ್ಕಳು ಅಲ್ಲಿ ತಮ್ಮ ಜೀವನವನ್ನು ಮುಂದುವರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು