Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:24 - ಪರಿಶುದ್ದ ಬೈಬಲ್‌

24 ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ, ಪ್ರೋಕ್ಷಿಸಿದ ರಕ್ತದ ಬಳಿಗೂ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ನ್ಹವ್ಯಾ ಕರಾರಾಚೊ ಮಧ್ಯಸ್ತ್ ಜೆಜುಕ್ಡೆ ಅನಿ ಅಬೆಲಾಚ್ಯಾ ರಗ್ತಾಚ್ಯಾನ್ಕಿ ಜಾಸ್ತಿ ಅರ್ಥಾಚ್ಯಾ ಸಿಪಡಲ್ಲ್ಯಾ ರಗ್ತಾಕ್ಡೆ ತುಮಿ ಯೆಲ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:24
24 ತಿಳಿವುಗಳ ಹೋಲಿಕೆ  

ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.


ಪಸ್ಕಹಬ್ಬವನ್ನು ಆಚರಿಸಿ, ಬಾಗಿಲುಗಳ ಮೇಲೆ ರಕ್ತವನ್ನು ಹಚ್ಚಿದನು. ಯೆಹೂದ್ಯ ಜನರ ಚೊಚ್ಚಲು ಮಕ್ಕಳನ್ನು ಮರಣದೂತನು ಸಂಹರಿಸಿದಂತೆ ರಕ್ತವನ್ನು ಬಾಗಿಲುಗಳ ಮೇಲೆ ಹಚ್ಚಲಾಯಿತು. ಅವನು ತನ್ನಲ್ಲಿದ್ದ ನಂಬಿಕೆಯಿಂದಲೇ ಹೀಗೆ ಮಾಡಿದನು.


ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.


ಆದರೆ ಯೇಸುವಿಗೆ ಕೊಡಲ್ಪಟ್ಟ ಕಾರ್ಯವು ಆ ಯಾಜಕರಿಗೆ ಕೊಡಲ್ಪಟ್ಟ ಕಾರ್ಯಕ್ಕಿಂತ ಅತ್ಯಂತ ಮಹತ್ವದ್ದಾಗಿದೆ. ಇದೇ ರೀತಿಯಲ್ಲಿ ಯೇಸು ತನ್ನ ಜನರಿಗಾಗಿ ದೇವರಿಂದ ತಂದ ಹೊಸ ಒಡಂಬಡಿಕೆಯು ಹಳೆಯದಕ್ಕಿಂತ ಶ್ರೇಷ್ಠವಾಗಿದೆ. ಉತ್ತಮ ಸಂಗತಿಗಳ ವಾಗ್ದಾನದ ಆಧಾರದ ಮೇಲೆ ಹೊಸ ಒಡಂಬಡಿಕೆಯು ಸ್ಥಾಪಿತವಾಗಿದೆ.


ಅದಕ್ಕೆ ಯೆಹೋವನು, “ನೀನು ಮಾಡಿದ್ದೇನು? ನೀನು ನಿನ್ನ ತಮ್ಮನನ್ನೇ ಕೊಲೆಮಾಡಿದೆ! ಅವನ ರಕ್ತವು ಭೂಮಿಯ ಕಡೆಯಿಂದ ನನ್ನನ್ನು ಕೂಗುತಿದೆ.


ದೇವರು ಒಬ್ಬನೇ. ದೇವರಿಗೂ ಮನುಷ್ಯರಿಗೂ ಮಧ್ಯಸ್ತನು ಒಬ್ಬನೇ. ಮನುಷ್ಯನಾಗಿರುವ ಯೇಸುಕ್ರಿಸ್ತನೇ ಆತನು.


ಇದು ಹೊಸ ಒಡಂಬಡಿಕೆಯನ್ನು ಸ್ಥಾಪಿಸುವ ನನ್ನ ರಕ್ತ. ಇದು ಅನೇಕ ಜನರ ಪಾಪಗಳ ಕ್ಷಮೆಗಾಗಿ ಸುರಿಸಲ್ಪಡುವ ರಕ್ತ.


“ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.


ಅದೇ ರೀತಿಯಾಗಿ, ಊಟವಾದ ನಂತರ, ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಇದು ಸೂಚಿಸುತ್ತದೆ. ನಾನು ನಿಮಗಾಗಿ ಕೊಡುತ್ತಿರುವ ರಕ್ತದಿಂದ ಈ ಹೊಸ ಒಡಂಬಡಿಕೆ ಪ್ರಾರಂಭವಾಗುತ್ತದೆ” ಅಂದನು.


ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.


ಆಗ ಮೋಶೆ ಯಜ್ಞಗಳ ರಕ್ತದಿಂದ ತುಂಬಿದ ಬೋಗುಣಿಯನ್ನು ತೆಗೆದುಕೊಂಡು ಅದರಲ್ಲಿದ್ದ ರಕ್ತವನ್ನು ಜನರ ಮೇಲೆ ಚಿಮಿಕಿಸಿ, “ಈ ಸುರುಳಿಯಲ್ಲಿರುವ ವಾಕ್ಯಗಳಿಗನುಸಾರವಾಗಿ ಯೆಹೋವನು ನಿಮ್ಮೊಡನೆ ಒಂದು ವಿಶೇಷ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆಂಬುದನ್ನು ಈ ರಕ್ತವು ಸೂಚಿಸುತ್ತದೆ” ಎಂದು ಹೇಳಿದನು.


ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.


ಅದೇರೀತಿ, ಮೋಶೆಯು ರಕ್ತವನ್ನು ಗುಡಾರದ ಮೇಲೆಯೂ ಆರಾಧನೆಯಲ್ಲಿ ಬಳಸುವ ಎಲ್ಲಾ ವಸ್ತುಗಳ ಮೇಲೆಯೂ ಚಿಮುಕಿಸಿದನು.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಶ್ರೇಷ್ಠವಾದ ಒಡಂಬಡಿಕೆಗೆ ಯೇಸುವೇ ಆಧಾರ ಎಂಬುದೇ ಇದರರ್ಥ.


ಹೇಬೆಲನನ್ನು ಕೊಂದದ್ದಕ್ಕಾಗಿಯೂ ಜಕರೀಯನನ್ನು ಕೊಂದದ್ದಕ್ಕಾಗಿಯೂ ನಿಮಗೆ ದಂಡನೆಯಾಗುವುದು. ಜಕರೀಯನನ್ನು ಯಜ್ಞವೇದಿ ಮತ್ತು ದೇವಾಲಯದ ನಡುವೆ ಕೊಲ್ಲಲಾಯಿತು. ಹೌದು, ಅವರೆಲ್ಲರ ಕೊಲೆಗಳಿಗಾಗಿ ಈಗ ಜೀವಿಸುತ್ತಿರುವ ನಿಮಗೆ ದಂಡನೆ ಆಗುವುದು.


ಯೇಸು, “ಇದು ನನ್ನ ರಕ್ತ. ಒಡಂಬಡಿಕೆಯ ರಕ್ತ. ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


ಆದರೆ ದೇವರು ಜನರಲ್ಲಿ ಯಾವುದೋ ದೋಷವನ್ನು ಕಂಡು ಹೇಳಿದ್ದೇನೆಂದರೆ: “ಇಸ್ರೇಲರೊಡನೆಯೂ ಯೆಹೂದ್ಯರೊಡನೆಯೂ ನಾನು ಹೊಸ ಒಡಂಬಡಿಕೆ ಮಾಡಿಕೊಳ್ಳುವ ಕಾಲ ಬರುತ್ತಿದೆ ಎಂದು ಪ್ರಭು ಹೇಳುತ್ತಾನೆ.


“ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು.


ಒಂದೇ ಪಕ್ಷವಿದ್ದರೆ ಮಧ್ಯಸ್ತನು ಬೇಕಿಲ್ಲ. ದೇವರು ಒಬ್ಬನೇ.


ದೇವರು ಇದನ್ನು ಹೊಸ ಒಡಂಬಡಿಕೆ ಎಂದು ಕರೆದನು. ಆದ್ದರಿಂದ ಮೊದಲನೆ ಒಡಂಬಡಿಕೆಯನ್ನು ದೇವರು ಹಳೆಯದಾಗಿ ಮಾಡಿದನು. ಯಾವುದು ಹಳೆಯದಾಗಿ ಉಪಯೋಗಕ್ಕೆ ಬಾರದಾಗುತ್ತದೋ ಅದು ಅದೃಶ್ಯವಾಗುವುದು.


ಮೊದಲನೆಯದಾಗಿ, ಮೋಶೆಯು ಧರ್ಮಶಾಸ್ತ್ರದ ಪ್ರತಿಯೊಂದು ಆಜ್ಞೆಯನ್ನೂ ಜನರಿಗೆಲ್ಲ ತಿಳಿಸಿದನು. ನಂತರ ಅವನು ಕರುಗಳ ರಕ್ತವನ್ನು ತೆಗೆದುಕೊಂಡು ಅದನ್ನು ನೀರಿನೊಂದಿಗೆ ಬೆರೆಸಿದನು. ಬಳಿಕ ನೀರು ಮತ್ತು ರಕ್ತವನ್ನು ಧರ್ಮಶಾಸ್ತ್ರದ ಮೇಲೆ ಮತ್ತು ಜನರೆಲ್ಲರ ಮೇಲೆ ಚಿಮುಕಿಸಲು ಕೆಂಪು ಉಣ್ಣೆಯನ್ನೂ ಹಿಸ್ಸೋಪ್ ಗಿಡದ ಕವಲನ್ನು ಉಪಯೋಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು