Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:5 - ಪರಿಶುದ್ದ ಬೈಬಲ್‌

5 ನೀವು ದೇವರ ಮಕ್ಕಳಾಗಿದ್ದೀರಿ. ಆತನು ನಿಮಗೆ ನೆಮ್ಮದಿಯ ಮಾತುಗಳನ್ನು ನುಡಿಯುತ್ತಾನೆ. ನೀವು ಆ ಮಾತುಗಳನ್ನು ಮರೆತಿರುವಿರಿ: “ಮಗನೇ, ಪ್ರಭುವಿನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಪ್ರಭುವು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮಕ್ಕಳಿಗೆ ಹೇಳುವಂತೆ ದೇವರು ನಿಮಗೆ ಹೇಳಿರುವ ಎಚ್ಚರಿಕೆಯ ಮಾತನ್ನು ನೀವು ಮರೆತುಬಿಟ್ಟಿರೋ? “ಸುಕುಮಾರಾ, ಸರ್ವೇಶ್ವರ ಕೊಡುವ ಶಿಕ್ಷೆಯನ್ನು ತಾತ್ಸಾರ ಮಾಡದಿರು ಅವರು ನಿನ್ನನ್ನು ದಂಡಿಸುವಾಗ ಧೈರ್ಯಗೆಡದಿರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ - ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಒಬ್ಬ ತಂದೆ ಮಕ್ಕಳಾಗಿರುವ ನಿಮಗೆ ಎಚ್ಚರಿಸಲಾದ ಮಾತನ್ನು ನೀವು ಮರೆತಿದ್ದೀರಿ. ಅದು, “ನನ್ನ ಮಗನೇ, ಕರ್ತದೇವರ ಶಿಕ್ಷೆಯನ್ನು ಹಗುರವಾಗಿ ಎಣಿಸಬೇಡ. ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ದೆವಾಚಿ ಪೊರಾ ತುಮಿ ಹೊಲ್ಯಾಶಿ, ತೊ ಸುಖಾಚೆ ಬೊಲ್ನೆ ಬೊಲ್ತಾ, ತಿ ಗೊಸ್ಟಿಯಾ ಸಗ್ಳಿ ಇಸರ್ತ್ಯಾಶಿ. ತೆಕಾ ಧನಿಯಾಚಿ ಶಿಕ್ಷಾ ತಿರಸ್ಕಾರ್ ಕರುನಕ್ಕೊ, ಧನಿ ತುಮ್ಕಾ ಗಾಳಿಯಾ ದಿತಾನಾ ಬೆಜಾರ್ ಕರುನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:5
33 ತಿಳಿವುಗಳ ಹೋಲಿಕೆ  

“ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.


ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಈ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ.


ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ. ದೇವರು ಅವನಿಗೆ ನೀತಿಮಾರ್ಗವನ್ನು ಉಪದೇಶಿಸುವನು.


ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ನನ್ನ ಪ್ರಾಣವು ಯಾವಾಗಲೂ ಅಪಾಯದಲ್ಲಿದೆ. ಆದರೂ ನಾನು ನಿನ್ನ ಉಪದೇಶಗಳನ್ನು ಮರೆತುಬಿಟ್ಟಿಲ್ಲ.


“ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.


ಯೆಹೋವನೇ, ನಿನ್ನ ತೀರ್ಪುಗಳು ನ್ಯಾಯವಾದವುಗಳೆಂದು ನನಗೆ ತಿಳಿದಿದೆ. ನೀನು ನನ್ನನ್ನು ಶಿಕ್ಷಿಸಿದ್ದು ನನ್ನ ದೃಷ್ಟಿಯಲ್ಲಿ ನ್ಯಾಯವಾಗಿತ್ತು.


ಯೆಹೋವನು ನನ್ನನ್ನು ಶಿಕ್ಷಿಸಿದರೂ ಸಾವಿಗೀಡುಮಾಡಲಿಲ್ಲ.


ಆದ್ದರಿಂದ ತಂದೆಯು ನೀಡುವ ದಂಡನೆ ಎಂಬುದಾಗಿ ಅವುಗಳನ್ನು ಸಹಿಸಿಕೊಳ್ಳಿ. ತಂದೆಯು ತನ್ನ ಮಕ್ಕಳನ್ನು ದಂಡಿಸುವಂತೆ ದೇವರು ನಿಮ್ಮನ್ನು ಈ ರೀತಿ ಶಿಕ್ಷಿಸುತ್ತಾನೆ. ಎಲ್ಲಾ ಮಕ್ಕಳು ತಮ್ಮ ತಂದೆಗಳಿಂದ ಶಿಕ್ಷಿಸಲ್ಪಡುತ್ತಾರೆ.


ನನ್ನ ಮಗನೇ, ನನ್ನ ಉಪದೇಶವನ್ನು ಮರೆಯಬೇಡ. ನನ್ನ ಆಜ್ಞೆಗಳನ್ನು ಜ್ಞಾಪಕದಲ್ಲಿಟ್ಟುಕೊ.


ಜ್ಞಾನವನ್ನು ಮತ್ತು ವಿವೇಕವನ್ನು ಪಡೆದುಕೋ! ನನ್ನ ಮಾತುಗಳನ್ನು ಮರೆಯಬೇಡ. ಯಾವಾಗಲೂ ನನ್ನ ಉಪದೇಶಗಳನ್ನು ಅನುಸರಿಸು.


ಬಿಸಾಕಲ್ಪಟ್ಟ ದ್ರಾಕ್ಷಾರಸದ ಬುದ್ದಲಿಯಂತಿದ್ದೇನೆ, ಆದರೂ ನಾನು ನಿನ್ನ ಕಟ್ಟಳೆಗಳನ್ನು ಮರೆಯುವುದಿಲ್ಲ.


ನಾನು ನಿನ್ನ ಕಟ್ಟಳೆಗಳಲ್ಲಿ ಆನಂದಿಸುವೆನು, ನಿನ್ನ ಮಾತುಗಳನ್ನು ಮರೆಯುವುದಿಲ್ಲ.


“ಮನುಷ್ಯನು ದೇವರಿಗೆ, ‘ನಾನು ದೋಷಿ, ನಾನು ಇನ್ನೆಂದಿಗೂ ಪಾಪ ಮಾಡುವುದಿಲ್ಲ.


ಯೇಸು ಇಲ್ಲಿಲ್ಲ. ಆತನು ಜೀವಂತವಾಗಿ ಎದ್ದಿದ್ದಾನೆ! ಆತನು ಗಲಿಲಾಯದಲ್ಲಿದ್ದಾಗ ಹೇಳಿದ ವಿಷಯ ಜ್ಞಾಪಕವಿಲ್ಲವೋ?


ಆಗ ಆ ಸ್ತ್ರೀಯರು ಯೇಸುವಿನ ಮಾತುಗಳನ್ನು ಜ್ಞಾಪಿಸಿಕೊಂಡರು.


ನಾನು ಸಂಕಟಪಡುವುದಕ್ಕಿಂತ ಮೊದಲು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದೆ; ಈಗಲಾದರೋ ನಾನು ನಿನ್ನ ಆಜ್ಞೆಗಳಿಗೆ ಎಚ್ಚರಿಕೆಯಿಂದ ವಿಧೇಯನಾಗುವೆನು.


ಜೀವಂತವಾಗಿರುವ ಯಾವ ವ್ಯಕ್ತಿಯೇ ಆಗಲಿ ತನ್ನ ಪಾಪಗಳ ನಿಮಿತ್ತ ಯೆಹೋವನ ಶಿಕ್ಷೆಗೆ ಗುರಿಯಾಗುವಾಗ ದೂರು ಹೇಳಕೂಡದು.


ನಾವು ಒಳ್ಳೆಯ ಕಾರ್ಯ ಮಾಡುವುದರಲ್ಲಿ ಬೇಸರಗೊಳ್ಳಬಾರದು. ತಕ್ಕ ಸಮಯದಲ್ಲಿ ನಾವು ನಿತ್ಯಜೀವವೆಂಬ ಸುಗ್ಗಿಯನ್ನು ಪಡೆಯುವೆವು. ಆದ್ದರಿಂದ ಒಳ್ಳೆಯ ಕಾರ್ಯ ಮಾಡುವುದನ್ನು ನಾವು ಬಿಟ್ಟುಬಿಡಬಾರದು.


ಹುಮೆನಾಯನು ಮತ್ತು ಅಲೆಗ್ಸಾಂಡರನು ಹಾಗೆ ಮಾಡಿದರು. ದೇವರ ವಿರುದ್ಧವಾಗಿ ಮಾತನಾಡಕೂಡದೆಂದು ಅವರು ತಿಳಿದುಕೊಳ್ಳಲೆಂದೇ ಅವರನ್ನು ಸೈತಾನನಿಗೆ ಒಪ್ಪಿಸಿದೆನು.


ನನ್ನ ಸಹೋದರ ಸಹೋದರಿಯರೇ, ನಾನು ಹೇಳಿದ ಈ ಸಂಗತಿಗಳನ್ನು ನೀವು ತಾಳ್ಮೆಯಿಂದ ಆಲಿಸಬೇಕೆಂದು ನಿಮ್ಮಲ್ಲಿ ಬೇಡಿಕೊಳ್ಳುತ್ತೇನೆ. ನಿಮ್ಮನ್ನು ಬಲಪಡಿಸುವುದಕ್ಕಾಗಿ ಈ ಪತ್ರವನ್ನು ಬರೆದಿರುವೆನು. ಈ ಪತ್ರವು ಬಹುದೀರ್ಘವಾದದ್ದೇನೂ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು