Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:11 - ಪರಿಶುದ್ದ ಬೈಬಲ್‌

11 ಪ್ರಧಾನಯಾಜಕನು ಪಶುಗಳ ರಕ್ತವನ್ನು ಮಹಾ ಪವಿತ್ರಸ್ಥಳದೊಳಕ್ಕೆ ತೆಗೆದುಕೊಂಡು ಹೋಗುತ್ತಾನೆ. ಅವನು ಪಾಪಗಳಿಗಾಗಿ ಆ ರಕ್ತವನ್ನು ಅರ್ಪಿಸುತ್ತಾನೆ. ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪ್ರಧಾನಯಾಜಕನು ಪಾಪಪರಿಹಾರಕ ಬಲಿಗಾಗಿ ಯಾವ ಪ್ರಾಣಿಗಳ ರಕ್ತವನ್ನು ಗರ್ಭಗುಡಿಗೆ ತರುತ್ತಾನೋ ಆ ಪ್ರಾಣಿಗಳ ದೇಹವನ್ನು ಪಾಳೆಯದಾಚೆ ಸುಡುವುದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮಹಾಯಾಜಕನು ದೋಷಪರಿಹಾರಕಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಮಹಾ ಪವಿತ್ರ ಸ್ಥಳದೊಳಗೆ ಹೋದ ಮೇಲೆ, ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಟ್ಟು ಬಿಡಲಾಗುತ್ತವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಪಾಪಾಚ್ಯಾಸಾಟ್ನಿ ಬಲಿ ಭೆಟ್ವುಕ್ ಮೊಟೊ ಯಾಜಕ್ ಜನಾವರಾಚೆ ರಗಾತ್ ಪವಿತ್ರ್ ಜಾಗ್ಯಾರ್ ಘೆವ್ನ್ ಜಾತಾ, ತೆಂಚಿ ಅಂಗಾ ಶಾರಾತ್ನಿ ಭಾಯ್ರ್ ನ್ಹೆವ್ನ್ ಜಾಳ್ವುತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:11
13 ತಿಳಿವುಗಳ ಹೋಲಿಕೆ  

“ಪಾಪಪರಿಹಾರಕ ಯಜ್ಞಕ್ಕಾಗಿ ಇರುವ ಹೋರಿಯನ್ನು ಮತ್ತು ಹೋತವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಬೇಕು. (ಆ ಪಶುಗಳ ರಕ್ತವನ್ನು, ಪವಿತ್ರವಸ್ತುಗಳನ್ನು ಶುದ್ಧೀಕರಿಸುವುದಕ್ಕೆ ಪವಿತ್ರಸ್ಥಳಕ್ಕೆ ತರಲಾಯಿತು.) ಯಾಜಕರು ಆ ಪಶುಗಳ ಚರ್ಮ, ಮಾಂಸ ಮತ್ತು ದೇಹದ ಕಲ್ಮಶವನ್ನೆಲ್ಲಾ ಬೆಂಕಿಯಿಂದ ಸುಟ್ಟುಹಾಕಿಸಬೇಕು.


ಬಳಿಕ ಹೋರಿಯ ಮಾಂಸ, ಚರ್ಮ, ಇತರ ಭಾಗಗಳನ್ನು ತೆಗೆದುಕೊಂಡು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಟ್ಟುಬಿಡು. ಇದು ಯಾಜಕರ ಪಾಪಗಳನ್ನು ಪರಿಹರಿಸುವ ಕಾಣಿಕೆಯಾಗಿದೆ.


ಅದನ್ನು ಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿರಿ. ಅವನು ಅದನ್ನು ಪಾಳೆಯದ ಹೊರಗೆ ಹೊಡಿಸಿಕೊಂಡು ಹೋಗಿ ತನಗೆದುರಾಗಿಯೇ ಒಬ್ಬನ ಕೈಯಿಂದ ವಧೆ ಮಾಡಿಸಬೇಕು.


ಬಳಿಕ ಆರೋನನು ಮಾಂಸವನ್ನು ಮತ್ತು ಚರ್ಮವನ್ನು ಪಾಳೆಯದ ಹೊರಗೆ ಬೆಂಕಿಯಲ್ಲಿ ಸುಟ್ಟುಹಾಕಿದನು.


ಆದರೆ ಪಾಪಪರಿಹಾರಕ ಯಜ್ಞದ ರಕ್ತವನ್ನು ದೇವದರ್ಶನಗುಡಾರದೊಳಗೆ ತೆಗೆದುಕೊಂಡು ಹೋಗಿ, ಜನರನ್ನು ಶುದ್ಧಿಗೊಳಿಸಲು ಪವಿತ್ರಸ್ಥಳದಲ್ಲಿ ಉಪಯೋಗಿಸಿದರೆ, ಆ ಪಾಪಪರಿಹಾರಕ ಯಜ್ಞವನ್ನು ಅಗ್ನಿಯಲ್ಲಿ ಸುಟ್ಟುಬಿಡಬೇಕು. ಯಾಜಕರು ಅದರ ಮಾಂಸವನ್ನು ತಿನ್ನಲೇಬಾರದು.


ಆರೋನನ ಪುತ್ರರು ಅದರ ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನ ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯಜ್ಞವೇದಿಕೆಯ ಮೂಲೆಗಳಿಗೆ ಹಚ್ಚಿದನು. ಬಳಿಕ ಆರೋನನು ರಕ್ತವನ್ನು ಯಜ್ಞವೇದಿಕೆಯ ಬುಡದಲ್ಲಿ ಸುರಿದನು.


ಆ ಯಾಜಕನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರುವನು.


ಆಮೇಲೆ ಪಾಪಪರಿಹಾರದ ಹೋರಿಯನ್ನು ತೆಗೆದು ಆಲಯದ ಜಾಗದಲ್ಲಿ ಆಲಯದ ಹೊರಗಿರುವ ಸ್ಥಳದಲ್ಲಿ ಸುಡಬೇಕು.


ಬಳಿಕ ಯಾಜಕನು ತನ್ನ ಬಟ್ಟೆಗಳನ್ನು ತೆಗೆದುಹಾಕಿ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ಬೂದಿಯನ್ನು ಪಾಳೆಯದ ಹೊರಗೆ ಒಂದು ವಿಶೇಷ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು