Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:5 - ಪರಿಶುದ್ದ ಬೈಬಲ್‌

5 ಹಣದ ಮೇಲೆ ನಿಮಗಿರುವ ವ್ಯಾಮೋಹವನ್ನು ದೂರತಳ್ಳಿರಿ. ನಿಮ್ಮಲ್ಲಿರುವ ವಸ್ತುಗಳಲ್ಲಿ ತೃಪ್ತಿಯಿಂದಿರಿ. ದೇವರು ಹೀಗೆ ಹೇಳಿದ್ದಾನೆ: “ನಾನು ನಿಮ್ಮನ್ನು ಎಂದೆಂದಿಗೂ ಕೈಬಿಡುವುದಿಲ್ಲ. ನಾನು ನಿಮ್ಮನ್ನು ಎಂದೆಂದಿಗೂ ತೊರೆದುಬಿಡುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದ್ರವ್ಯಾಶೆಯಿಲ್ಲದವರಾಗಿರಿ; ನಿಮಗಿರುವವುಗಳಲ್ಲಿ ತೃಪ್ತರಾಗಿರಿ; ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ, ಎಂದಿಗೂ ತೊರೆಯುವದಿಲ್ಲವೆಂದು ದೇವರು ತಾನೇ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಪೈಶಾಂಚಿ ಆಶಾ ತುಮ್ಚ್ಯಾ ಜಿವನಾಕ್ ಪ್ರೆರನ್ ಹೊಯ್‍ನಸ್ತಾನಾ ರ್‍ಹಾಂವ್ದಿತ್, ತುಮ್ಚ್ಯಾಕ್ಡೆ ಕವ್ಡೆ ಹಾಯ್ ತವ್ಡ್ಯಾತುಚ್ ತೃಪ್ತಿ ಹೊವ್ನ್ ರ್‍ಹಾವ್ಕ್ ಶಿಕಾ, ದೆವಾನುಚ್ ಮಟಲ್ಲೆ ಹಾಯ್ ಮಿಯಾ ತುಮ್ಕಾ ಕಳ್ದುನ್ ಘೆಯ್ನಾ ಮಿಯಾ ತುಮ್ಕಾ ಸೊಡುನ್ ಘಾಲಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:5
46 ತಿಳಿವುಗಳ ಹೋಲಿಕೆ  

ಯೆಹೋವನು ನಿನ್ನನ್ನು ನಡೆಸುತ್ತಾನೆ, ಆತನು ತಾನೇ ನಿನ್ನೊಂದಿಗಿರುವನು. ಆತನು ನಿನ್ನ ಕೈಬಿಡುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ. ಆದ್ದರಿಂದ ಚಿಂತಿಸಬೇಡ, ಭಯಪಡಬೇಡ” ಎಂದು ಹೇಳಿದನು.


ನಾನು ಮೋಶೆಯ ಸಂಗಡ ಇದ್ದಂತೆ ನಿನ್ನ ಸಂಗಡವೂ ಇರುತ್ತೇನೆ. ನಿನ್ನ ಜೀವಮಾನದಲ್ಲೆಲ್ಲಾ ಯಾವನೂ ನಿನ್ನನ್ನು ತಡೆಯಲಾರನು. ನಾನು ನಿನ್ನನ್ನು ಕೈಬಿಡುವುದಿಲ್ಲ; ತೊರೆದುಬಿಡುವುದಿಲ್ಲ” ಎಂದು ಹೇಳಿದನು.


ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”


“ಆದರೆ ಯೆಹೋವನು ತನ್ನ ಜನರನ್ನು ಕೈಬಿಡುವುದಿಲ್ಲ. ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನರನ್ನಾಗಿ ಮಾಡಿಕೊಳ್ಳಲು ಇಷ್ಟಪಟ್ಟನು. ಆದ್ದರಿಂದ ಆತನು ತನ್ನ ಮಹಾ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ತ್ಯಜಿಸುವುದಿಲ್ಲ.


“ಬಡಜನರು ನೀರಿಗಾಗಿ ಹುಡುಕಾಡುವರು. ಆದರೆ ನೀರು ಅವರಿಗೆ ದೊರಕುವದಿಲ್ಲ. ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ. ನಾನು ಅವರ ಮೊರೆಯನ್ನು ಕೇಳುವೆನು. ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ.


ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಧೈರ್ಯವಾಗಿದ್ದು ಬಲಗೊಳ್ಳು ಮತ್ತು ಈ ಕಾರ್ಯವನ್ನು ಮಾಡಿ ಮುಗಿಸು. ನನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವದರಿಂದ ನೀನು ಭಯಪಡುವ ಕಾರಣವೇ ಇಲ್ಲ. ಆತನು ನಿನ್ನೊಂದಿಗಿದ್ದು ಆಲಯವನ್ನು ಸಂಪೂರ್ಣ ಮಾಡುವಂತೆ ನಿನ್ನನ್ನು ನಡೆಸುತ್ತಾನೆ. ನೀನು ಯೆಹೋವನ ಆಲಯವನ್ನು ಕಟ್ಟುವೆ.


ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ. ನೀತಿವಂತರನ್ನು ದೇವರು ತೊರೆದುಬಿಟ್ಟದ್ದನ್ನಾಗಲಿ ಅವನ ಮಕ್ಕಳು ಆಹಾರಕ್ಕಾಗಿ ಬೇಡುವುದನ್ನಾಗಲಿ ನಾನೆಂದೂ ಕಾಣಲಿಲ್ಲ.


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


“ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು.


“ಆದ್ದರಿಂದ ನಿಮ್ಮ ಪ್ರಾಣಧಾರಣೆಗೆ ಬೇಕಾದ ಆಹಾರಕ್ಕಾಗಲಿ ದೇಹಕ್ಕೆ ಬೇಕಾದ ಬಟ್ಟೆಗಾಗಲಿ ನೀವು ಚಿಂತಿಸಬಾರದು. ಪ್ರಾಣವು ಆಹಾರಕ್ಕಿಂತಲೂ ದೇಹವು ಬಟ್ಟೆಗಿಂತಲೂ ಬಹಳ ಮುಖ್ಯವಾದದ್ದೆಂದು ನಾನು ನಿಮಗೆ ಹೇಳುತ್ತೇನೆ.


ಯೆಹೋವನು ನ್ಯಾಯವನ್ನು ಪ್ರೀತಿಸುವನು. ಆತನು ತನ್ನ ಭಕ್ತರನ್ನು ತೊರೆದುಬಿಡದೆ ಅವರನ್ನು ಯಾವಾಗಲೂ ಕಾಪಾಡುವನು. ದುಷ್ಟರನ್ನಾದರೋ ಆತನು ನಾಶಮಾಡುವನು.


ಆದ್ದರಿಂದ ನಾಳೆಗಾಗಿ ಚಿಂತಿಸಬೇಡಿ. ಪ್ರತಿದಿನವು ತನ್ನದೇ ಆದ ಎಷ್ಟೋ ಕಷ್ಟಗಳನ್ನು ಹೊಂದಿರುತ್ತದೆ. ನಾಳೆಯು ಸಹ ತನ್ನದೇ ಆದ ಚಿಂತೆಗಳನ್ನು ಹೊಂದಿದೆ.


ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.


ಸೈನಿಕರು ಯೋಹಾನನಿಗೆ, “ನಾವೇನು ಮಾಡಬೇಕು?” ಎಂದು ಕೇಳಿದರು. ಯೋಹಾನನು ಅವರಿಗೆ, “ಲಂಚ ತೆಗೆದುಕೊಳ್ಳಬೇಡಿ, ಸುಳ್ಳುದೂರು ಹೇಳಬೇಡಿರಿ. ನಿಮಗೆ ಸಿಕ್ಕುವ ಸಂಬಳದಲ್ಲಿ ಸಂತೋಷವಾಗಿರಿ” ಎಂದು ಹೇಳಿದನು.


ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.


ಐಶ್ವರ್ಯದ ಮೇಲೆ ಮನಸ್ಸಿಡದೆ ನಿನ್ನ ಒಡಂಬಡಿಕೆಯ ಬಗ್ಗೆ ಧ್ಯಾನಿಸಲು ನನಗೆ ಸಹಾಯಮಾಡು.


ಅವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರಾಗಿದ್ದಾರೆ. ಅವರು ದುರ್ಬಲರನ್ನು ಪಾಪವೆಂಬ ಉರುಲಿನಲ್ಲಿ ಬೀಳಿಸುತ್ತಾರೆ. ಅವರು ತಮ್ಮ ಹೃದಯಗಳಿಗೆ ಸ್ವಾರ್ಥವನ್ನೇ ಕಲಿಸಿದ್ದಾರೆ. ಅವರು ಶಾಪಗ್ರಸ್ತರಾಗಿದ್ದಾರೆ.


ಮದ್ಯಪಾನದಲ್ಲಿ ಆಸ್ತಕನಾಗಿರಬಾರದು ಮತ್ತು ಹಿಂಸಾತ್ಮಕನಾಗಿರಬಾರದು. ಅವನು ಸಾತ್ವಿಕನೂ ಶಾಂತನೂ ಆಗಿರಬೇಕು; ಹಣದಾಸೆ ಉಳ್ಳವನಾಗಿರಬಾರದು.


ಇದು ನಿಮಗೆ ಚೆನ್ನಾಗಿ ತಿಳಿದಿರಲಿ: ಲೈಂಗಿಕ ಪಾಪಮಾಡುವವರಿಗೆ, ದುಷ್ಕೃತ್ಯಗಳನ್ನು ಮಾಡುವವರಿಗೆ, ಸ್ವಾರ್ಥಿಗಳಿಗೆ, ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಸ್ಥಳವೇ ಇಲ್ಲ. ಸ್ವಾರ್ಥತೆಯು ವಿಗ್ರಹಾರಾಧನೆಗೆ ಸಮಾನವಾಗಿದೆ.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


“ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.


ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.


ಮೋಶೆಯು ರೆಗೂವೇಲನೊಂದಿಗೆ ವಾಸಮಾಡಲು ಇಷ್ಟಪಟ್ಟನು; ರೆಗೂವೇಲನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆ ಮಾಡಿಸಿದನು.


ಆದರೆ ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿರಕೂಡದು. ಯಾವ ಬಗೆಯ ದುಷ್ಟತ್ವವಾಗಲಿ ಸ್ವಾರ್ಥತೆಯಾಗಲಿ ಇರಕೂಡದು. ಏಕೆಂದರೆ ಅವುಗಳು ದೇವರ ಪರಿಶುದ್ಧ ಜನರಿಗೆ ಯೋಗ್ಯವಾದವುಗಳಲ್ಲ.


ಆದರೆ ಕ್ರಿಸ್ತನಲ್ಲಿ ತನ್ನನ್ನು ಸಹೋದರನೆಂದು ಹೇಳಿಕೊಳ್ಳುವವನು ಲೈಂಗಿಕ ಪಾಪ ಮಾಡುವವನಾಗಿದ್ದರೆ, ಸ್ವಾರ್ಥಿಯಾಗಿದ್ದರೆ, ವಿಗ್ರಹಗಳನ್ನು ಪೂಜಿಸುವವನಾಗಿದ್ದರೆ, ಜನರಿಗೆ ಕೆಟ್ಟ ಮಾತುಗಳನ್ನಾಡುವವನಾಗಿದ್ದರೆ, ಮದ್ಯಪಾನ ಮಾಡಿ ಮತ್ತನಾಗುವವನಾಗಿದ್ದರೆ, ಜನರಿಗೆ ಮೋಸ ಮಾಡುವವನಾಗಿದ್ದರೆ, ಅವನ ಸಹವಾಸ ಮಾಡಬಾರದು; ಅವನೊಂದಿಗೆ ಊಟವನ್ನು ಸಹ ಮಾಡಬಾರದು.


“ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಲೋಕದ ಚಿಂತೆಗಳಿಗೂ ಐಶ್ವರ್ಯಗಳಿಗೂ ಭೋಗಗಳಿಗೂ ಅವರು ಅವಕಾಶಕೊಡುವುದರಿಂದ ಅವರು ಬೆಳೆಯಲಾರರು; ಎಂದಿಗೂ ಒಳ್ಳೆಯ ಫಲವನ್ನು ಕೊಡಲಾರರು.


ವ್ಯಭಿಚಾರ, ಹಣದಾಶೆ, ಕೆಡುಕುತನ, ಭಂಡತನ, ಅಸೂಯೆ, ಚಾಡಿಕೋರತನ, ಅಹಂಕಾರ ಮತ್ತು ಬುದ್ಧಿಗೇಡಿತನ.


“ನೀವು ನೆರೆಯವನ ಮನೆಯನ್ನು ಆಶಿಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.”


ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.


ಅವರಲ್ಲಿ ಪ್ರತಿಯೊಂದು ಬಗೆಯ ಪಾಪ, ದುಷ್ಟತನ, ಸ್ವಾರ್ಥ, ದ್ವೇಷ, ಹೊಟ್ಟೆಕಿಚ್ಚು, ಕೊಲೆ, ಹೊಡೆದಾಟ, ಸುಳ್ಳುನುಡಿ ಮತ್ತು ಕೆಟ್ಟ ಆಲೋಚನೆ ಇವುಗಳೆಲ್ಲಾ ತುಂಬಿಕೊಂಡಿವೆ. ಅವರು ಹರಟೆ ಹೊಡೆಯುತ್ತಾರೆ;


ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.


ಯಾಕೋಬನು, ರಾಹೇಲಳಿಗೆ ಮತ್ತು ಲೇಯಾಳಿಗೆ, “ನಿಮ್ಮ ತಂದೆ ನನ್ನ ಮೇಲೆ ಕೋಪದಿಂದಿರುವುದನ್ನು ನಾನು ಗಮನಿಸಿದ್ದೇನೆ. ಮೊದಲು ಅವನು ನನ್ನೊಂದಿಗೆ ಸ್ನೇಹದಿಂದಿದ್ದನು. ಆದರೆ ಈಗ ಅವನು ಸ್ನೇಹದಿಂದಿಲ್ಲ. ಆದರೆ ನನ್ನ ತಂದೆಯ ದೇವರು ನನ್ನೊಂದಿಗಿದ್ದಾನೆ.


ನಿಮ್ಮ ದೇವರಾದ ಯೆಹೋವನು ಕರುಣೆಯುಳ್ಳ ದೇವರಾಗಿದ್ದಾನೆ. ನಿಮ್ಮನ್ನು ಅಲ್ಲಿಯೇ ಇರಗೊಡಿಸುವುದಿಲ್ಲ; ನಿಮ್ಮನ್ನು ಸಂಪೂರ್ಣವಾಗಿ ನಾಶಪಡಿಸುವುದಿಲ್ಲ; ನಿಮ್ಮ ಪೂರ್ವಿಕರೊಂದಿಗೆ ಮಾಡಿದ ಒಡಂಬಡಿಕೆಯನ್ನು ಆತನು ಮರೆತುಬಿಡುವವನಲ್ಲ.


ಈ ಕಾರ್ಯಗಳು ಸಂಭವಿಸಿದ ಮೇಲೆ, ನೀನು ನಿನ್ನ ನಿರ್ಧಾರದಂತೆ ಮಾಡು. ಯಾಕೆಂದರೆ ದೇವರು ನಿನ್ನೊಂದಿಗಿರುತ್ತಾನೆ.


ನೀನು ನಿರ್ಮಿಸುತ್ತಿರುವ ಈ ದೇವಾಲಯದಲ್ಲಿ ನಾನು ಇಸ್ರೇಲರೊಂದಿಗೆ ವಾಸಿಸುತ್ತೇನೆ. ನಾನು ಅವರನ್ನು ಎಂದೆಂದಿಗೂ ಬಿಟ್ಟುಹೋಗುವುದಿಲ್ಲ” ಎಂದು ಹೇಳಿದನು.


ನಮ್ಮ ದೇವರಾದ ಯೆಹೋವನು ನಮ್ಮೊಂದಿಗಿರಲೆಂದು ನಾನು ಮೊರೆಯಿಡುತ್ತೇನೆ. ಆತನು ನಮ್ಮ ಪೂರ್ವಿಕರ ಜೊತೆಯಲ್ಲಿದ್ದಂತೆ ನಮ್ಮ ಜೊತೆಯಲ್ಲಿಯೂ ಇರಲೆಂದು ನಾನು ಮೊರೆಯಿಡುತ್ತೇನೆ. ಆತನು ನಮ್ಮನ್ನು ಎಂದಿಗೂ ಬಿಟ್ಟುಹೋಗಕೂಡದೆಂದು ನಾನು ಪ್ರಾರ್ಥಿಸುತ್ತೇನೆ.


ಐಶ್ವರ್ಯವಂತನಾಗಬೇಕೆಂಬ ಪ್ರಯತ್ನದಲ್ಲಿ ನಿನ್ನ ಆರೋಗ್ಯವನ್ನು ಕಳೆದುಕೊಳ್ಳಬೇಡ. ನೀನು ಜ್ಞಾನಿಯಾಗಿದ್ದರೆ ತಾಳ್ಮೆಯಿಂದಿರುವೆ.


ಅವರು ಹಿಂದೆಂದೂ ತಿಳಿಯದ ರೀತಿಯಲ್ಲಿ ನಾನು ಕುರುಡರನ್ನು ನಡೆಸುವೆನು. ಕುರುಡರು ಹೋಗಿರದ ಸ್ಥಳಕ್ಕೆ ನಾನು ಅವರನ್ನು ನಡಿಸುವೆನು. ನಾನು ಅವರಿಗಾಗಿ ಕತ್ತಲೆಯನ್ನು ಬೆಳಕಾಗಿ ಮಾರ್ಪಡಿಸುವೆನು. ನಾನು ಕೊರಕಲು ನೆಲವನ್ನು ಸಮತಟ್ಟಾಗಿ ಮಾಡುವೆನು. ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ನನ್ನ ಜನರನ್ನು ನಾನು ಎಂದಿಗೂ ತೊರೆಯುವದಿಲ್ಲ.


“ನಿಮಗೋಸ್ಕರ ಈ ಭೂಮಿಯ ಮೇಲೆ ಭಂಡಾರಗಳನ್ನು ಮಾಡಿಕೊಳ್ಳಬೇಡಿ. ಅವು ಕಿಲುಬುಹತ್ತಿ ಹಾಳಾಗುತ್ತವೆ. ಕಳ್ಳರು ನಿಮ್ಮ ಮನೆಯೊಳಗೆ ಕನ್ನಕೊರೆದು ನಿಮ್ಮಲ್ಲಿರುವುದನ್ನು ಕದಿಯಬಲ್ಲರು.


ನಾವು ಹಿಂಸೆಗೆ ಗುರಿಯಾದೆವು, ಆದರೆ ದೇವರು ನಮ್ಮನ್ನು ತೊರೆದುಬಿಡಲಿಲ್ಲ. ಕೆಲವು ಸಲ ನಮಗೆ ನೋವಾಯಿತು, ಆದರೂ ನಾಶವಾಗಲಿಲ್ಲ.


ಲಾಬಾನನು “ಹಾಗಾದರೆ ನಾನು ನಿನಗೇನು ಕೊಡಬೇಕು” ಎಂದು ಕೇಳಿದನು. ಯಾಕೋಬನು, “ನೀನು ನನಗೆ ಏನೂ ಕೊಡಬೇಕಾಗಿಲ್ಲ. (ನಾನು ಕೆಲಸ ಮಾಡಿದ್ದಕ್ಕೆ ನೀನು ಸಂಬಳ ಕೊಟ್ಟರೆ ಸಾಕು.) ಇದೊಂದು ಕಾರ್ಯವನ್ನು ಮಾಡು; ನಾನು ಹೋಗಿ ನಿನ್ನ ಕುರಿಗಳನ್ನು ನೋಡಿಕೊಳ್ಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು