Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:1 - ಪರಿಶುದ್ದ ಬೈಬಲ್‌

1 ಆದ್ದರಿಂದ ನಮಗೆ ಬೋಧಿಸಲ್ಪಟ್ಟ ಸಂಗತಿಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಬೇಕು. ಸತ್ಯಮಾರ್ಗವನ್ನು ಬಿಟ್ಟು ತಪ್ಪಿಹೋಗದಂತೆ ಎಚ್ಚರಿಕೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋದೇವೆಂದು ಭಯಪಟ್ಟು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ ದಾರಿಬಿಟ್ಟು ಹೋಗದಂತೆ, ನಾವು ಕೇಳಿದ ಸಂಗತಿಗಳಿಗೆ ಹೆಚ್ಚು ಲಕ್ಷ್ಯ ಕೊಡುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆಚ್ಯಾಸಾಟ್ನಿ, ಅಮಿ ಆಯ್ಕಲ್ಲ್ಯಾ ಖಬ್ರೆ ವರ್ತಿ ಅಮಿ ವಿಶೆಸ್ ಗಮನ್ ದಿವ್ಕ್ ಪಾಜೆ, ನಾಹೊಲ್ಯಾರ್, ಅಮಿ ಅಮ್ಚ್ಯಾ ವಾಟೆ ವೈನಾ ಧುರ್ ಹೊತಲೊ ಸಂಭವ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:1
25 ತಿಳಿವುಗಳ ಹೋಲಿಕೆ  

ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.


ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯುಳ್ಳವರಾಗಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು.


ನನ್ನ ಸ್ನೇಹಿತರೇ, ನಾನು ನಿಮಗೆ ಬರೆಯುತ್ತಿರುವ ಎರಡನೆ ಪತ್ರವಿದು. ನಿಮ್ಮ ಯಥಾರ್ಥವಾದ ಮನಸ್ಸು ಮತ್ತೆ ನೆನಪು ಮಾಡಿಕೊಳ್ಳಲಿ ಎಂದು ನಾನು ಈ ಎರಡು ಪತ್ರಗಳನ್ನು ಬರೆದಿದ್ದೇನೆ.


ನೀವು ಇವುಗಳನ್ನು ಯಾವಾಗಲೂ ನೆನಪು ಮಾಡಿಕೊಳ್ಳಲು ನಿಮಗೆ ನನ್ನಿಂದಾದಷ್ಟು ಸಹಾಯಮಾಡಲು ನಾನು ಪ್ರಯತ್ನಿಸುತ್ತೇನೆ. ನಾನು ಈ ಲೋಕವನ್ನು ಬಿಟ್ಟುಹೋದ ನಂತರವೂ ನೀವು ಈ ಸಂಗತಿಗಳನ್ನು ನೆನಪು ಮಾಡಿಕೊಳ್ಳಲು ಸಮರ್ಥರಾಗಿರಬೇಕೆಂಬುದು ನನ್ನ ಅಪೇಕ್ಷೆ.


ನನ್ನ ಮಗನೇ, ಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ. ನಿನ್ನ ದೃಷ್ಟಿಯು ಅವುಗಳ ಮೇಲೇ ಇರಲಿ.


ಯೌವನಸ್ಥನು ಪವಿತ್ರನಾಗಿ ಜೀವಿಸುವುದು ಯಾವುದರಿಂದ? ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದರಿಂದಲೇ.


ಯೆಹೋವನು ಮೋಶೆಗೆ ಕೊಟ್ಟಿರುವ ಕಟ್ಟಳೆಗಳನ್ನು ನೀನು ಜಾಗ್ರತೆಯಾಗಿ ಅನುಸರಿಸಿ ನಡೆದರೆ ನಿನಗೆ ಯಶಸ್ಸು ಪ್ರಾಪ್ತವಾಗುವುದು. ಸ್ಥಿರಚಿತ್ತನಾಗಿರು; ಧೈರ್ಯದಿಂದಿರು; ಹೆದರಬೇಡ; ಕಳವಳಪಡಬೇಡ.


ನೀವು ದೇವರ ಮಕ್ಕಳಾಗಿದ್ದೀರಿ. ಆತನು ನಿಮಗೆ ನೆಮ್ಮದಿಯ ಮಾತುಗಳನ್ನು ನುಡಿಯುತ್ತಾನೆ. ನೀವು ಆ ಮಾತುಗಳನ್ನು ಮರೆತಿರುವಿರಿ: “ಮಗನೇ, ಪ್ರಭುವಿನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಪ್ರಭುವು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.


ನಿಮ್ಮ ಕಣ್ಣುಗಳು ಕುರುಡಾಗಿವೆಯೋ? ನಿಮ್ಮ ಕಿವಿಗಳು ಕಿವುಡಾಗಿವೆಯೋ? ಮೊದಲೊಮ್ಮೆ, ನಮ್ಮ ಬಳಿ ಸಾಕಷ್ಟು ರೊಟ್ಟಿಗಳಿಲ್ಲದಿದ್ದಾಗ, ನಾನು ಏನು ಮಾಡಿದೆನೆಂಬುದನ್ನು ಜ್ಞಾಪಿಸಿಕೊಳ್ಳಿ.


ನೀವಿನ್ನೂ ಅರ್ಥಮಾಡಿಕೊಳ್ಳಲಿಲ್ಲವೇ? ಐದು ರೊಟ್ಟಿಗಳಿಂದ ಐದು ಸಾವಿರ ಜನರಿಗೆ ಊಟ ಮಾಡಿಸಿದ್ದು ನಿಮಗೆ ನೆನಪಿಲ್ಲವೇ? ಜನರು ಊಟ ಮಾಡಿದ ಮೇಲೆ ನೀವು ಅನೇಕ ಬುಟ್ಟಿಗಳಲ್ಲಿ ರೊಟ್ಟಿಗಳನ್ನು ತುಂಬಿಸಿದ್ದು ನಿಮಗೆ ನೆನಪಿಲ್ಲವೇ?


ನೀವು ಆ ದೇಶದಲ್ಲಿ ವಾಸಿಸುವಾಗ ನಿಮ್ಮ ದೇವರಾದ ಯೆಹೋವನೊಡನೆ ನೀವು ಮಾಡಿರುವ ಒಡಂಬಡಿಕೆಯನ್ನು ಮರೆಯಬೇಡಿರಿ. ನೀವು ಆತನ ಕಟ್ಟಳೆಗಳಿಗೆ ವಿಧೇಯರಾಗಿರಿ. ಯಾವ ವಿಗ್ರಹಗಳನ್ನಾಗಲಿ ಮಾಡಿಕೊಳ್ಳಬೇಡಿರಿ.


“ಆದರೆ ಅವನು ಯೆಹೋವನ ಕೋಪವನ್ನು ತಿಳಿದುಕೊಳ್ಳುವನು. ಆ ಕೋಪವು ಯೆಹೋವನ ಬಲಗೈಯಲ್ಲಿರುವ ವಿಷದ ಪಾತ್ರೆಯಂತಿರುವುದು. ಆ ವ್ಯಕ್ತಿಯು ಆ ಕೋಪವನ್ನು ರುಚಿನೋಡುವನು ಮತ್ತು ಅಮಲೇರಿದವನಂತೆ ನೆಲದ ಮೇಲೆ ಕುಸಿದುಬೀಳುವನು. “ದುಷ್ಟ ಅಧಿಪತಿಯೇ, ನೀನು ಆ ಪಾತ್ರೆಯಿಂದ ಕುಡಿಯುವೆ. ನಿನಗೆ ಅವಮಾನವೇ ಹೊರತು, ಮಾನ ಸಿಗುವುದಿಲ್ಲ.


“ಮನುಷ್ಯಕುಮಾರನನ್ನು ಕೆಲವರ ವಶಕ್ಕೆ ಒಪ್ಪಿಸಲಾಗುವುದು. ನೀವು ಇದನ್ನು ಮರೆಯಕೂಡದು” ಎಂದು ಹೇಳಿದನು.


ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶಮಾಡಿಕೊಳ್ಳುವರು.


ಇದನ್ನು ಕೇಳಿದ ಕೂಡಲೇ ಜನರು ಆತನತ್ತ ಬೀರಲು ಕಲ್ಲುಗಳನ್ನು ತೆಗೆದುಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದಿಂದ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು