ಇಬ್ರಿಯರಿಗೆ 3:1 - ಪರಿಶುದ್ದ ಬೈಬಲ್1 ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ಪರಿಶುದ್ಧ ಜನರಾಗುವುದಕ್ಕಾಗಿ ದೇವರಿಂದ ಕರೆಯಲ್ಪಟ್ಟವರಾದ ನೀವು ಯೇಸುವನ್ನೇ ಕುರಿತು ಆಲೋಚಿಸಿರಿ. ದೇವರು ಆತನನ್ನು ನಮ್ಮ ಬಳಿಗೆ ಕಳುಹಿಸಿದನು. ಆತನೇ ನಮ್ಮ ನಂಬಿಕೆಯ ಪ್ರಧಾನಯಾಜಕನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಹೆಚ್ಯಾಸಾಟ್ನಿ ಭಕ್ತಿನ್ ಚಲ್ತಲ್ಯಾ ಭಾವಾನು, ಅನಿ ಭೆನಿಯಾನು ದೆವಾಚ್ಯಾ ಬಲ್ವನಿತ್ ಭಾಗಿದಾರ್ ಹೊಲ್ಲ್ಯಾನು, ಅಮ್ಕಾ ಗಾವಲ್ಲ್ಯಾ ವಿಶ್ವಾಸಾಚ್ಯಾ ವೈನಾ ಮಾನುನ್ ಘೆಟಲ್ಲ್ಯಾ ಅಮ್ಚ್ಯಾ ಶ್ರೆಸ್ಟ್ ಯಾಜಕ್ ಹೊವ್ನ್ ಅಸಲ್ಲ್ಯಾ ಜೆಜು ಕ್ರಿಸ್ತಾಕ್ಡೆ ಧ್ಯಾನ್ ದಿವಾ. ಅಧ್ಯಾಯವನ್ನು ನೋಡಿ |
ಕೆಲವರಿಗೆ ವಿಶ್ವಾಸಿಗಳಾದ ಯಜಮಾನರಿದ್ದಾರೆ. ಆದ್ದರಿಂದ ಆ ಗುಲಾಮರು ಮತ್ತು ಯಜಮಾನರು ಸಹೋದರರಾಗಿದ್ದಾರೆ. ಆದರೆ ಅವರು ತಮ್ಮ ಯಜಮಾನರಿಗೆ ಕಡಿಮೆ ಗೌರವ ಕೊಡದೆ ತಮ್ಮ ಯಜಮಾನರ ಸೇವೆಯನ್ನು ಇನ್ನೂ ಉತ್ತಮವಾಗಿ ಮಾಡಬೇಕು. ಏಕೆಂದರೆ ಅವರು ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಪ್ರತಿಷ್ಠಿಸಿಕೊಳ್ಳುವ ವಿಶ್ವಾಸಿಗಳಾಗಿದ್ದಾರೆ ಮತ್ತು ಸ್ನೇಹಿತರಾಗಿದ್ದಾರೆ. ಈ ಕಾರ್ಯಗಳನ್ನು ಮಾಡುವಂತೆ ನೀನು ಜನರಿಗೆ ಉಪದೇಶಿಸಬೇಕು ಮತ್ತು ತಿಳಿಸಬೇಕು.
ಆದಕಾರಣವೇ ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತೇವೆ. ಯಾವ ಒಳ್ಳೆಯ ಮಾರ್ಗದಲ್ಲಿ ನೀವು ಜೀವಿಸಬೇಕೆಂದು ದೇವರು ನಿಮ್ಮನ್ನು ಕರೆದನೋ, ಆ ಮಾರ್ಗದಲ್ಲೇ ನೀವು ಜೀವಿಸಲಿಕ್ಕಾಗುವಂತೆ ಪ್ರಾರ್ಥಿಸುತ್ತೇವೆ. ನಿಮ್ಮಲ್ಲಿರುವ ಒಳ್ಳೆಯ ತನವು ಒಳ್ಳೆಯದನ್ನು ಮಾಡುವಂತೆ ನಿಮ್ಮನ್ನು ಪ್ರೇರೇಪಿಸುತ್ತದೆ. ನಿಮ್ಮಲ್ಲಿರುವ ನಂಬಿಕೆಯು ನಿಮ್ಮಿಂದ ಕಾರ್ಯ ಸಾಧಿಸುತ್ತದೆ. ಈ ಕಾರ್ಯಗಳನ್ನು ನೀವು ಹೆಚ್ಚುಹೆಚ್ಚಾಗಿ ಮಾಡಲು ದೇವರು ತನ್ನ ಶಕ್ತಿಯಿಂದ ನಿಮಗೆ ಸಹಾಯ ಮಾಡಲೆಂದು ಬೇಡಿಕೊಳ್ಳುತ್ತೇವೆ.
ಆದರೆ ಕ್ರಿಸ್ತನು ಈಗಾಗಲೇ ಪ್ರಧಾನಯಾಜಕನಾಗಿ ಬಂದಿದ್ದಾನೆ. ಈಗ ನಾವು ಹೊಂದಿರುವ ಉತ್ತಮ ಸಂಗತಿಗಳಿಗೆ ಆತನು ಪ್ರಧಾನಯಾಜಕನಾಗಿದ್ದಾನೆ. ಇತರ ಯಾಜಕರಾದರೊ ಗುಡಾರದಲ್ಲಿ ಸೇವೆಯನ್ನು ಮಾಡಿದರು. ಆದರೆ ಕ್ರಿಸ್ತನು ಗುಡಾರದಲ್ಲಿ ಸೇವೆ ಮಾಡದೆ ಅದಕ್ಕಿಂತಲೂ ಶ್ರೇಷ್ಠವಾದ ಸ್ಥಳದಲ್ಲಿ ಸೇವೆ ಮಾಡುತ್ತಾನೆ. ಅದು ಮತ್ತಷ್ಟು ಪರಿಪೂರ್ಣವಾದದ್ದು. ಅದು ಮನುಷ್ಯರಿಂದ ನಿರ್ಮಿತವಾದದ್ದಲ್ಲ. ಲೋಕಕ್ಕೆ ಸೇರಿದ್ದೂ ಅಲ್ಲ.
ನೀವು ಮಾಡುವ ಈ ಸೇವಾಕಾರ್ಯವು ನಿಮ್ಮ ನಂಬಿಕೆಗೆ ಸಾಕ್ಷಿಯಾಗಿದೆ. ಇದರ ನಿಮಿತ್ತವಾಗಿ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಕ್ರಿಸ್ತನ ಸುವಾರ್ತೆಯನ್ನು ಅನುಸರಿಸುವುದರಿಂದ ಅವರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಹೇಳುವ ಸುವಾರ್ತೆಯನ್ನು ನೀವು ನಂಬಿದ್ದೀರಿ. ತಮ್ಮೊಂದಿಗೆ ಮತ್ತು ಎಲ್ಲರೊಂದಿಗೆ ನೀವು ಉದಾರವಾಗಿ ಹಂಚಿಕೊಂಡಿದ್ದರಿಂದ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.