Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:19 - ಪರಿಶುದ್ದ ಬೈಬಲ್‌

19 ಆದ್ದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ಆ ಜನರಿಗೆ ಅವಕಾಶ ದೊರೆಯಲಿಲ್ಲ. ಅವರಲ್ಲಿ ನಂಬಿಕೆ ಇಲ್ಲದಿದ್ದ ಕಾರಣವೇ ಅವರು ಪ್ರವೇಶಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆ ವಿಶ್ರಾಂತಿಯ ನೆಲೆಯನ್ನು ಅವರು ಸೇರದೆಹೋದದ್ದು ತಮ್ಮ ಅವಿಶ್ವಾಸದಿಂದಲೇ ಎಂಬುದು ನಮಗೆ ಸ್ಪಷ್ಟವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ಸೇರಲಾರದೆ ಹೋದದ್ದು ಅವರ ಅವಿಶ್ವಾಸದಿಂದಲೇ ಎಂದು ಕಾಣುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಶೆ ರಾತಾನಾ, ತೆಂಚ್ಯಾ ವಿಶ್ವಾಸ್‍ ನಸಲ್ಲ್ಯಾಚ್ ತೆಂಕಾ ಆರಾಮ್ ಘೆತಲ್ಯಾ ಗಾಂವಾತ್ ಭುತ್ತುರ್ ಗುಸುಕ್ ಅಡ್ವುಲ್ಯಾನ್ ಮನುನ್ ಅಮ್ಕಾ ಬರಬ್ಬರ್ ಕಳುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:19
10 ತಿಳಿವುಗಳ ಹೋಲಿಕೆ  

ನೀವು ಈಗಾಗಲೇ ತಿಳಿದುಕೊಂಡಿರುವ ಕೆಲವು ವಿಚಾರಗಳನ್ನು ನೆನಪು ಮಾಡಿಕೊಳ್ಳಲು ನಾನು ನಿಮಗೆ ಸಹಾಯ ಮಾಡಲಿಚ್ಛಿಸುತ್ತೇನೆ. ಪ್ರಭುವು ತನ್ನ ಜನರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ಅವರನ್ನು ರಕ್ಷಿಸಿದನೆಂಬುದನ್ನು ನೆನಪು ಮಾಡಿಕೊಳ್ಳಿರಿ. ತರುವಾಯ ಪ್ರಭುವು ನಂಬಿಕೆಯಿಲ್ಲದ ಜನರೆಲ್ಲರನ್ನೂ ನಾಶಪಡಿಸಿದನು.


ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.


ದೇವರ ಮಗನಲ್ಲಿ ನಂಬಿಕೆ ಇಡುವವನಿಗೆ ತೀರ್ಪಾಗುವುದಿಲ್ಲ. ಆದರೆ ನಂಬದವನಿಗೆ ಆಗಲೇ ತೀರ್ಪಾಗಿದೆ. ಏಕೆಂದರೆ ಅವನು ದೇವರ ಒಬ್ಬನೇ ಮಗನಲ್ಲಿ ನಂಬಿಕೆ ಇಡಲಿಲ್ಲ.


ನಂಬಿಕೆಯಿಟ್ಟು, ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದವನು ಅಪರಾಧಿ ಎಂಬ ನಿರ್ಣಯ ಹೊಂದುವನು.


ದೇವರ ಮಗನನ್ನು ನಂಬುವವನು ದೇವರಿಂದ ಸಾಕ್ಷೀಕರಿಸಲ್ಪಟ್ಟ ಸತ್ಯವನ್ನು ಹೊಂದಿರುತ್ತಾನೆ. ದೇವರನ್ನು ನಂಬದೆ ಇರುವವನು, ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತಾನೆ. ಏಕೆಂದರೆ ದೇವರು ತನ್ನ ಮಗನ ಬಗ್ಗೆ ನಮಗೆ ಹೇಳಿದುದನ್ನು ಅವನು ನಂಬುವುದಿಲ್ಲ.


ಸತ್ಯವನ್ನು ನಂಬದೆ, ಕೆಟ್ಟಕಾರ್ಯಗಳನ್ನು ಮಾಡುವುದರಲ್ಲಿ ಸಂತೋಷಪಡುವ ಜನರೆಲ್ಲರೂ ದಂಡನೆಗೆ ಒಳಗಾಗುವರು.


“ಆದರೂ ನೀವು ಇನ್ನೂ ನಿಮ್ಮ ದೇವರಾದ ಯೆಹೋವನ ಮೇಲೆ ಭರವಸೆ ಇಡಲಿಲ್ಲ.


ಬಳಿಕ ಅವರು ರಮಣೀಯವಾದ ಕಾನಾನ್ ದೇಶಕ್ಕೆ ಹೋಗಲು ಒಪ್ಪಲಿಲ್ಲ. ಅಲ್ಲಿಯ ನಿವಾಸಿಗಳನ್ನು ಸೋಲಿಸಲು ಆತನು ತಮಗೆ ಸಹಾಯ ಮಾಡುತ್ತಾನೆಂಬ ನಂಬಿಕೆ ಅವರಲ್ಲಿರಲಿಲ್ಲ.


ಯೆಹೂದ್ಯರು ತಮ್ಮ ಅಪನಂಬಿಕೆಯನ್ನು ಬಿಡುವುದಾದರೆ, ದೇವರು ಅವರನ್ನು ಮತ್ತೆ ಸ್ವೀಕರಿಸಿಕೊಳ್ಳುವನು. ಅವರ ಮೊದಲಿನ ಸ್ಥಾನವನ್ನು ಅವರಿಗೆ ಕೊಡಲು ದೇವರು ಶಕ್ತನಾಗಿದ್ದಾನೆ.


ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು