Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:5 - ಪರಿಶುದ್ದ ಬೈಬಲ್‌

5 ದೇವರ ಮನೆಯಲ್ಲೆಲ್ಲಾ ಮೋಶೆಯು ಸೇವಕನಂತೆ ನಂಬಿಗಸ್ತನಾಗಿದ್ದನು. ಮುಂದೆ ಪ್ರಕಟವಾಗಲಿದ್ದ ಸಂಗತಿಗಳಿಗೆ ಅವನು ಸಾಕ್ಷಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ ಸಾಕ್ಷಿಕೊಟ್ಟಿದ್ದಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮೋಶೆ ದೇವರ ಮನೆಗೆಲ್ಲಾ ಪ್ರಾಮಾಣಿಕ ದಾಸನಾಗಿದ್ದನು; ಮುಂದೆ ಪ್ರಕಟವಾಗಬೇಕಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು.” ಅವನು, ಮುಂದೆ ಪ್ರಕಟವಾಗಬೇಕಾಗಿದ್ದ ಒಬ್ಬರಿಗೆ ಸಾಕ್ಷಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮೊಯ್ಜೆ ದೆವಾಚ್ಯಾ ಘರಾತ್ ಎಕ್ ವಿಶ್ವಾಸಾಚ್ಯಾ ಆಳಾಚ್ಯಾ ಸಾರ್ಕೆ ಕಾಮ್ ಕರುಕ್ ಲಾಗಲ್ಲೊ; ದೆವ್ ಫಿಡೆ ಸಾಂಗುಚೆ ಮನುನ್ ಹೊತ್ತ್ಯಾ ಖಬ್ರೆಕ್ ಸಾಕ್ಷಿ ದಿವ್ಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:5
35 ತಿಳಿವುಗಳ ಹೋಲಿಕೆ  

ಆದರೆ ಮೋಶೆಯೊಡನೆ ನಾನು ಆ ರೀತಿ ಮಾಡುವುದಿಲ್ಲ. ಮೋಶೆಯು ನನ್ನ ನಂಬಿಗಸ್ತನಾದ ಸೇವಕನು. ಅವನ ಮೇಲೆ ನನಗೆ ಭರವಸೆಯಿದೆ.


ಯೇಸುವನ್ನು ದೇವರು ನಮ್ಮ ಬಳಿಗೆ ಕಳುಹಿಸಿ, ಆತನನ್ನು ನಮ್ಮ ಪ್ರಧಾನಯಾಜಕನನ್ನಾಗಿ ಮಾಡಿದನು. ಆತನು ಮೋಶೆಯಂತೆ ದೇವರಿಗೆ ನಂಬಿಗಸ್ತನಾಗಿದ್ದನು. ದೇವರ ಮನೆಯಲ್ಲಿ ದೇವರ ಇಷ್ಟಕ್ಕನುಗುಣವಾಗಿ ಮಾಡಬೇಕಾದುದನ್ನೆಲ್ಲ ಆತನು ಮಾಡಿದನು.


ಈಜಿಪ್ಟಿನವರನ್ನು ಯೆಹೋವನು ಸೋಲಿಸಿದಾಗ ಇಸ್ರೇಲರು ಆತನ ಮಹಾಶಕ್ತಿಯನ್ನು ನೋಡಿದರು. ಆದ್ದರಿಂದ ಜನರು ಯೆಹೋವನನ್ನು ಸನ್ಮಾನಿಸಿ ಆತನ ಸೇವಕನಾದ ಮೋಶೆಯಲ್ಲಿ ಭರವಸವಿಟ್ಟರು.


ಆದ್ದರಿಂದ ದೇವರು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಯಾಜಕನಾದ ಆರೋನನನ್ನೂ ಕಳುಹಿಸಿದನು.


ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.


ಈ ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು” ಎಂದು ಹೇಳಿದ್ದು ಈ ಕಾರಣದಿಂದಲೇ.


ನಮ್ಮ ಪ್ರಭುವಾದ ಕ್ರಿಸ್ತ ಯೇಸು ನನ್ನ ಮೇಲಿನ ನಂಬಿಕೆಯಿಂದ, ಆತನ ಸೇವೆ ಮಾಡುವ ಈ ಕಾರ್ಯವನ್ನು ನನಗೆ ದಯಪಾಲಿಸಿದ್ದರಿಂದ ನಾನು ಆತನಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಆತನು ನನ್ನನ್ನು ಬಲಪಡಿಸುತ್ತಾನೆ.


“ನನ್ನ ಸೇವಕನಾದ ಮೋಶೆಯು ಸತ್ತನು. ಈಗ ನೀನು ಮತ್ತು ಈ ಜನರು ಜೋರ್ಡನ್ ನದಿಯನ್ನು ದಾಟಿಹೋಗಬೇಕು. ಇಸ್ರೇಲಿನ ಜನರಾದ ನಿಮಗೆ ನಾನು ಕೊಡಲಿರುವ ದೇಶಕ್ಕೆ ನೀವು ಹೋಗಬೇಕು.


ಮೋವಾಬ್ ದೇಶದಲ್ಲಿ ಯೆಹೋವನ ಸೇವಕನಾದ ಮೋಶೆಯು ಸತ್ತುಹೋದನು. ಯೆಹೋವನು ಅವನಿಗೆ ಹಾಗೆ ಆಗುತ್ತದೆಂದು ಮುಂಚೆಯೇ ತಿಳಿಸಿದ್ದನು.


ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.


ಆದರೆ ಈಗ ದೇವರು ಧರ್ಮಶಾಸ್ತ್ರದ ನೆರವಿಲ್ಲದೆಯೇ ಜನರನ್ನು ನೀತಿವಂತರನ್ನಾಗಿ ಮಾಡುವ ಮಾರ್ಗವನ್ನು ತೋರಿಸಿದ್ದಾನೆ. ಧರ್ಮಶಾಸ್ತ್ರ ಮತ್ತು ಪ್ರವಾದಿಗಳು ಈ ಹೊಸ ಮಾರ್ಗದ ಬಗ್ಗೆ ನಮಗೆ ಹೇಳಿದ್ದಾರೆ.


ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ!


ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.


ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು.


ಯಜ್ಞವೇದಿಕೆಯನ್ನು ಹೇಗೆ ಕಟ್ಟಬೇಕೆಂಬುದನ್ನು ಯೆಹೋವನ ಸೇವಕನಾದ ಮೋಶೆಯು ಇಸ್ರೇಲರಿಗೆ ಹೇಳಿ ಕೊಟ್ಟಿದ್ದನು. ಆದ್ದರಿಂದ ಮೋಶೆಯ ಧರ್ಮಶಾಸ್ತ್ರದ ಗ್ರಂಥದಲ್ಲಿ ವಿವರಿಸಿದಂತೆ ಯೆಹೋಶುವನು ಯಜ್ಞವೇದಿಕೆಯನ್ನು ಕಟ್ಟಿಸಿದನು. ಯಜ್ಞವೇದಿಕೆಯನ್ನು ಕಡಿಯದ ಕಲ್ಲುಗಳಿಂದ ಮಾಡಲಾಯಿತು. ಆ ಕಲ್ಲುಗಳ ಮೇಲೆ ಯಾವ ಉಪಕರಣವನ್ನೂ ಉಪಯೋಗಿಸಿರಲಿಲ್ಲ. ಯೆಹೋವನಿಗೆ ಆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದರು.


ಹೀಗಿರಲು, ಜವಾಬ್ದಾರಿಕೆಯನ್ನು ವಹಿಸಿಕೊಂಡವರು ತಾವು ತಮ್ಮ ಕೆಲಸದಲ್ಲಿ ನಂಬಿಗಸ್ತರೆಂಬುದನ್ನು ತೋರಿಸಬೇಕು.


“ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’ ಎಂದು ಹೇಳಿದನು.


ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ.


“ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.


“ವಿವೇಕಿಯೂ ನಂಬಿಗಸ್ತನೂ ಆದ ಸೇವಕನು ಯಾರು? ಇತರ ಸೇವಕರಿಗೆ ಆಹಾರವನ್ನು ತಕ್ಕ ಸಮಯದಲ್ಲಿ ಕೊಡುವುದಕ್ಕಾಗಿ ಯಜಮಾನನು ಯಾವ ಸೇವಕನ ಮೇಲೆ ಭರವಸೆಯಿಡುತ್ತಾನೋ ಅವನೇ.


ಹಿರಿಯರು, ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಇಸ್ರೇಲರೆಲ್ಲರು ಪವಿತ್ರ ಪೆಟ್ಟಿಗೆಯ ಸುತ್ತಲೂ ನಿಂತುಕೊಂಡಿದ್ದರು. ಯೆಹೋವನ ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯನ್ನು ಹೊತ್ತುತಂದ ಲೇವಿಯರ ಎದುರುಗಡೆ ಅವರು ನಿಂತುಕೊಂಡಿದ್ದರು. ಅರ್ಧಜನರು ಏಬಾಲ್ ಬೆಟ್ಟದ ಎದುರಿಗೂ ಮತ್ತು ಇನ್ನುಳಿದ ಅರ್ಧಜನರು ಗೆರಿಜ್ಜೀಮ್ ಬೆಟ್ಟದ ಎದುರಿಗೂ ನಿಂತುಕೊಂಡಿದ್ದರು. ಆಶೀರ್ವಾದವನ್ನು ಹೊಂದಿಕೊಳ್ಳಲು ಹೀಗೆ ಮಾಡಬೇಕೆಂದು ಯೆಹೋವನ ಸೇವಕನಾದ ಮೋಶೆಯು ಜನರಿಗೆ ಹೇಳಿದ್ದನು.


ಯೆಹೋವನು ನಿಮ್ಮ ವಿಶ್ರಾಂತಿಗಾಗಿ ಒಂದು ಸ್ಥಳವನ್ನು ಕೊಟ್ಟಿದ್ದಾನೆ. ಯೆಹೋವನು ನಿಮ್ಮ ಸಹೋದರರಿಗಾಗಿಯೂ ಒಂದು ಸ್ಥಳವನ್ನು ಕೊಡುತ್ತಾನೆ. ಆದರೆ ನಿಮ್ಮ ದೇವರಾದ ಯೆಹೋವನು ಅವರಿಗೆ ಕೊಡುವ ದೇಶವನ್ನು ಅವರು ಪಡೆದುಕೊಳ್ಳುವವರೆಗೆ ನೀವು ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕು. ಆಮೇಲೆ ನೀವು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ನಿಮ್ಮ ದೇಶಕ್ಕೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ದೇಶವು ಅದೇ ಆಗಿದೆ” ಎಂದನು.


ಆದರೆ ನೀನು ಇನ್ನೊಂದು ವಿಷಯದಲ್ಲಿಯೂ ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು. ನನ್ನ ಸೇವಕನಾಗಿದ್ದ ಮೋಶೆಯು ನಿನಗೆ ಕೊಟ್ಟ ಆಜ್ಞೆಗಳನ್ನು ನೀನು ನಿಶ್ಚಿತವಾಗಿ ಪಾಲಿಸಬೇಕು. ಅವನ ಧರ್ಮೋಪದೇಶವನ್ನೆಲ್ಲಾ ಚಾಚೂತಪ್ಪದೆ ಅನುಸರಿಸಿದ್ದೇ ಆದರೆ ನೀನು ಮಾಡುವ ಎಲ್ಲ ಕಾರ್ಯಗಳಲ್ಲಿ ನಿನಗೆ ಜಯಸಿಗುವುದು ಖಂಡಿತ.


ನಾನು, ‘ಯೆಹೋವನೇ, ನನ್ನ ಒಡೆಯನೇ, ನಾನು ನಿನ್ನ ಸೇವಕ. ನಿನ್ನ ತ್ರಾಣವುಳ್ಳ ಹಸ್ತದಿಂದ ಮಾಡಿದ ಪರಾಕ್ರಮದ ಕಾರ್ಯಗಳನ್ನು ನೀನು ನನಗೆ ಸ್ವಲ್ಪ ಮಟ್ಟಿಗೆ ತೋರಿಸಿರುವೆ. ನೀನು ಮಾಡಿದ ಮಹಾಕೃತ್ಯಗಳನ್ನು ಮಾಡಲು ಪರಲೋಕದ ಅಥವಾ ಭೂಲೋಕದ ಯಾವ ದೇವರುಗಳಿಗೂ ಸಾಧ್ಯವಿಲ್ಲ.


ಅವರಿಗೆ ನಿನ್ನ ವಿಶೇಷ ದಿನವಾದ ಸಬ್ಬತ್ತನ್ನು ತಿಳಿಸಿದೆ. ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಕಟ್ಟಳೆಗಳನ್ನು ತಿಳಿಸಿದೆ.


ಯೆಹೋವನು ಆಜ್ಞಾಪಿಸಿದಂತೆಯೇ ಪ್ರತಿಯೊಂದನ್ನೂ ಮೋಶೆಯು ಮಾಡಿದನು.


ಪೂರ್ವಕಾಲದಲ್ಲಿ ದೇವರು ಪ್ರವಾದಿಗಳ ಮೂಲಕ ನಮ್ಮ ಜನರೊಂದಿಗೆ ಹಲವಾರು ವಿಧದಲ್ಲಿ ಅನೇಕ ಸಲ ಮಾತನಾಡಿದನು.


ಪ್ರತಿಯೊಂದು ಮನೆಯು ಯಾರಾದರೊಬ್ಬರಿಂದ ಕಟ್ಟಲ್ಪಟ್ಟಿರಬೇಕು. ಆದರೆ ದೇವರು ಎಲ್ಲವನ್ನು ನಿರ್ಮಿಸಿದನು.


ಅವರು ದೇವರ ಸೇವಕನಾದ ಮೋಶೆಯ ಗೀತೆಯನ್ನು ಮತ್ತು ಕುರಿಮರಿಯಾದಾತನ ಗೀತೆಯನ್ನು ಹಾಡಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ನೀನು ಮಹತ್ತಾದ ಕಾರ್ಯಗಳನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ಮಾಡುವೆ. ಸರ್ವಜನಾಂಗಗಳ ರಾಜನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು