Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:8 - ಪರಿಶುದ್ದ ಬೈಬಲ್‌

8 ಆತನು ದೇವರ ಮಗನಾಗಿದ್ದಾನೆ. ಆದರೂ ಹಿಂಸೆಗೊಳಗಾಗಿ, ತಾನು ಅನುಭವಿಸಿದ ಹಿಂಸೆಗಳಿಂದಲೇ ವಿಧೇಯನಾಗಿರುವುದನ್ನು ಕಲಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗೆ ಆತನು ಮಗನಾಗಿದ್ದರೂ ತಾನು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೇಸು, ದೇವರ ಪುತ್ರರಾಗಿದ್ದರೂ ಹಿಂಸೆಬಾಧೆಗಳನ್ನು ತಪ್ಪಿಸಿಕೊಳ್ಳದೆ ವಿಧೇಯತೆಯನ್ನು ಅನುಭವದಿಂದ ಅರಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗೆ ಆತನು ಮಗನಾಗಿದ್ದರೂ ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕ್ರಿಸ್ತ ಯೇಸು ದೇವರ ಪುತ್ರರಾಗಿದ್ದರೂ ತಾವು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ತೊ ದೆವಾಚೊ ಲೆಕ್ ಹೊಲ್ಯಾರ್ ಬಿ ಅಪ್ನಿ ಸೊಸಲ್ಲ್ಯಾ ಕಸ್ಟಾ ವೈನಾ ಖಾಲ್ತಿ ಪಾನ್ ಮನ್ತಲೆ ತೆನಿ ಶಿಕ್ಲ್ಯಾನ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:8
13 ತಿಳಿವುಗಳ ಹೋಲಿಕೆ  

ಆತನು ಮನುಷ್ಯನಾಗಿ ಜೀವಿಸುತ್ತಿದ್ದಾಗ ತನ್ನನ್ನು ತಗ್ಗಿಸಿಕೊಂಡು ಮರಣವನ್ನೂ ಕಡೆಗಣಿಸಿ ದೇವರಿಗೆ ಸಂಪೂರ್ಣ ವಿಧೇಯನಾಗಿ, ಶಿಲುಬೆಯ ಮೇಲೆ ಪ್ರಾಣವನ್ನೇ ಕೊಟ್ಟನು.


ಯೇಸು, “ನನ್ನನ್ನು ಕಳುಹಿಸಿದಾತನು (ದೇವರು) ನಾನು ಏನು ಮಾಡಬೇಕೆಂದು ಬಯಸುವನೋ ಅದನ್ನು ಮಾಡುವುದೇ ನನಗೆ ಆಹಾರವಾಗಿದೆ. ಆತನು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಆಹಾರವಾಗಿದೆ.


ನಾನು ನನ್ನ ತಂದೆಯ ಆಜ್ಞೆಗಳಿಗೆ ವಿಧೇಯನಾಗಿದ್ದು ಆತನ ಪ್ರೀತಿಯಲ್ಲಿ ನೆಲೆಗೊಂಡಿದ್ದೇನೆ. ಅದೇ ರೀತಿಯಲ್ಲಿ, ನೀವು ನನ್ನ ಆಜ್ಞೆಗಳಿಗೆ ವಿಧೇಯರಾದರೆ, ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ನಾನು ಪರಲೋಕದಿಂದ ಇಳಿದು ಬಂದದ್ದು ದೇವರ ಚಿತ್ತಕ್ಕನುಸಾರವಾಗಿ ಮಾಡುವುದಕ್ಕಾಗಿಯೇ ಹೊರತು ನನ್ನ ಚಿತ್ತಕ್ಕನುಸಾರವಾಗಿಯಲ್ಲ.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.


ಆದರೆ ದೇವರು ತನ್ನ ಮಗನನ್ನು ಕುರಿತು ಹೀಗೆ ಹೇಳಿದನು: “ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲೂ ಇರುವುದು. ನೀನು ನಿನ್ನ ರಾಜ್ಯವನ್ನು ಸಮರ್ಪಕವಾದ ತೀರ್ಪುಗಳೊಡನೆ ಆಳುವೆ.


ದೇವರು ಯಾವ ದೂತರಿಗೂ ಈ ಸಂಗತಿಗಳನ್ನು ಎಂದೂ ಹೇಳಿಲ್ಲ: “ನೀನು ನನ್ನ ಮಗ; ಈ ದಿನ ನಾನು ನಿನ್ನ ತಂದೆಯಾದೆನು.” ದೇವರು ದೂತನೊಬ್ಬನಿಗೆ ಎಂದೂ ಹೀಗೆ ಹೇಳಿಲ್ಲ: “ನಾನು ಅವನ ತಂದೆಯಾಗಿರುವೆನು, ಅವನು ನನ್ನ ಮಗನಾಗಿರುವನು.”


ಯೇಸು, “ಸದ್ಯಕ್ಕೆ ಒಪ್ಪಿಕೊ. ನಾವು ಯೋಗ್ಯವಾದ ಕಾರ್ಯಗಳನ್ನೆಲ್ಲ ಮಾಡಬೇಕು” ಎಂದು ಉತ್ತರಕೊಟ್ಟನು. ಆಗ ಯೋಹಾನನು ಯೇಸುವಿಗೆ ದೀಕ್ಷಾಸ್ನಾನ ಮಾಡಿಸಲು ಒಪ್ಪಿಕೊಂಡನು.


ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.


ಆದರೆ ನಾವು ಮಾಡಿದ ದುಷ್ಟತನಕ್ಕಾಗಿಯೇ ಆತನು ಬಾಧಿತನಾದನು. ನಮ್ಮ ಅಪರಾಧಗಳ ನಿಮಿತ್ತ ಆತನು ಜಜ್ಜಲ್ಪಟ್ಟನು. ನಾವು ಹೊಂದಬೇಕಾಗಿದ್ದ ಶಿಕ್ಷೆಯನ್ನು ಆತನೇ ಅನುಭವಿಸಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನೇ ಅದನ್ನು ಇಚ್ಛಾಪೂರ್ವಕವಾಗಿ ಕೊಡುತ್ತೇನೆ. ನನ್ನ ಪ್ರಾಣವನ್ನು ಕೊಡುವುದಕ್ಕೂ ಅದನ್ನು ಮತ್ತೆ ಪಡೆದುಕೊಳ್ಳುವುದಕ್ಕೂ ನನಗೆ ಹಕ್ಕಿದೆ. ಹೀಗೆ ಮಾಡಬೇಕೆಂದು ತಂದೆಯೇ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು