Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:12 - ಪರಿಶುದ್ದ ಬೈಬಲ್‌

12 ನೀವು ಸೋಮಾರಿಗಳಾಗಿರಬೇಕೆಂಬುದು ನಮ್ಮ ಅಪೇಕ್ಷೆಯಲ್ಲ. ದೇವರ ವಾಗ್ದಾನದ ಫಲಗಳನ್ನು ಪಡೆಯುವ ಜನರಂತೆ ನೀವಿರಬೇಕೆಂಬುದು ನಮ್ಮ ಅಪೇಕ್ಷೆ. ಆ ಜನರಿಗೆ ನಂಬಿಕೆ ಮತ್ತು ತಾಳ್ಮೆಯಿದ್ದುದರಿಂದ ಅವರು ದೇವರ ವಾಗ್ದಾನದಂತೆ ಫಲವನ್ನು ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀವು ಆಲಸಿಗಳಾಗಿರಬಾರದು; ವಿಶ್ವಾಸದಿಂದಲೂ ಬಹು ತಾಳ್ಮೆಯಿಂದಲೂ ದೈವ ವಾಗ್ದಾನಗಳನ್ನು ಬಾಧ್ಯವಾಗಿಸಿಕೊಂಡವರನ್ನು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ಮಂದಮತಿಗಳಾಗಿರದೆ ಯಾರು ವಾಗ್ದಾನಗಳನ್ನು ನಂಬಿ ಅವುಗಳ ಫಲಕ್ಕೋಸ್ಕರ ಬಹು ದಿವಸಗಳವರೆಗೂ ಕಾದಿದ್ದು ಆ ಫಲವನ್ನು ಹೊಂದುತ್ತಾರೋ ಅವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀವು ಸೋಮಾರಿಗಳಾಗಿರಬಾರದು. ವಿಶ್ವಾಸದಿಂದಲೂ ತಾಳ್ಮೆಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅನಿ ಆಳಸ್ಪಾನಾನ್, ದೆವಾಚ್ಯಾ ಗೊಸ್ಟಿಯಾಂಚೆ ಫಳ್ ಘೆತಲಿ ಲೊಕಾ ತುಮಿ ಹೊವ್ನ್ ರ್‍ಹಾವ್ಚೆ ಮನುನ್ ಅಮಿ ಆಶ್ಯಾ ಕರ್ತಾಂವ್ ತ್ಯಾ ಲೊಕಾಕ್ನಿ ವಿಶ್ವಾಸ್, ಅನಿ ತಾಳ್ಮೆ ಹೊತ್ತ್ಯಾಕ್ ತೆನಿ ದೆವಾಚ್ಯಾ ಗೊಸ್ಟಿಯಾಂಚ್ಯಾ ಸಾರ್ಕೆ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:12
36 ತಿಳಿವುಗಳ ಹೋಲಿಕೆ  

ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ.


ನೀವು ತಾಳ್ಮೆಯಿಂದಿರಬೇಕು, ನೀವು ದೇವರ ಚಿತ್ತಾನುಸಾರವಾಗಿ ಮಾಡಿದ ನಂತರ ಆತನ ವಾಗ್ದಾನದಂತೆ ನಿಮಗೆ ಪ್ರತಿಫಲವು ಸಿಕ್ಕೇ ಸಿಗುತ್ತದೆ.


ಕ್ರಿಸ್ತನು ನಮಗೆ ಕೊಡುವುದಾಗಿ ಮಾಡಿದ್ದ ವಾಗ್ದಾನವೇ ಈ ನಿತ್ಯಜೀವ.


ನೀವು ಪ್ರಭುವಿಗೋಸ್ಕರ ಸೇವೆಮಾಡುವುದು ಅಗತ್ಯವಿರುವಾಗ ಸೋಮಾರಿಗಳಾಗಿರಬೇಡಿರಿ. ಆತ್ಮಿಕವಾದ ಉತ್ಸಾಹದಿಂದ ಆತನ ಸೇವೆಮಾಡಿರಿ.


ಈ ವಿಷಯದಲ್ಲಿ ನಾವು ನಿಮಗೆ ಹೇಳಬೇಕಾದ ಅನೇಕ ಸಂಗತಿಗಳಿವೆ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸದಿರುವುದರಿಂದ ವಿವರಿಸುವುದು ಕಷ್ಟಕರವಾಗಿದೆ.


ನನ್ನ ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಳ್ಳಲು ಕರೆದನು. ಆದ್ದರಿಂದಲೇ ನೀವು ದೇವರಿಂದ ನಿಜವಾಗಿಯೂ ಕರೆಯಲ್ಪಟ್ಟವರೆಂದೂ ಆರಿಸಲ್ಪಟ್ಟವೆರೆಂದೂ ತೋರಿಸಲು ಬಹಳವಾಗಿ ಪ್ರಯತ್ನಿಸಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡವಿಬೀಳುವುದಿಲ್ಲ.


ಏಕೆಂದರೆ ಅವುಗಳು ನಿಮ್ಮ ನಂಬಿಕೆಯನ್ನು ಪರಿಶೋಧಿಸಲು ಬಂದಿವೆ ಎಂಬುದು ನಿಮಗೆ ತಿಳಿದದೆ. ಅವು ನಿಮ್ಮಲ್ಲಿ ತಾಳ್ಮೆಯನ್ನು ಉಂಟುಮಾಡುತ್ತವೆ.


ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ಅಲ್ಲದೆ ಸುನ್ನತಿ ಮಾಡಿಸಿಕೊಂಡಿರುವ ಜನರಿಗೂ ಸಹ ಅಬ್ರಹಾಮನು ತಂದೆಯಾಗಿದ್ದಾನೆ. ಆದರೆ ಅವನನ್ನು ಅವರ ತಂದೆಯನ್ನಾಗಿ ಮಾಡುವಂಥದ್ದು ಅವರ ಸುನ್ನತಿಯಲ್ಲ. ನಮ್ಮ ತಂದೆಯಾದ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವ ಮೊದಲು ಹೊಂದಿದ್ದ ನಂಬಿಕೆಗನುಸಾರವಾಗಿ ಅವರು ಜೀವಿಸಿದರೆ ಮಾತ್ರ ಅವನು ಅವರ ತಂದೆಯಾಗಿದ್ದಾನೆ.


ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು.


ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.


ಸೋಮಾರಿಯು ನಾಶಮಾಡುವ ವ್ಯಕ್ತಿಯಂತಿದ್ದಾನೆ.


ಸೆರೆ ಒಯ್ಯುವವನು ಸೆರೆ ಒಯ್ಯಲ್ಪಡುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲ್ಲಲ್ಪಡುವನು. ಆದ್ದರಿಂದ ದೇವರ ಪರಿಶುದ್ಧ ಜನರು ತಾಳ್ಮೆಯನ್ನೂ ನಂಬಿಕೆಯನ್ನೂ ಹೊಂದಿರಬೇಕು.


ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು;


ಅಬ್ರಹಾಮನು ಇದರ ನೆರವೇರುವಿಕೆಗಾಗಿ ತಾಳ್ಮೆಯಿಂದ ಕಾದಿದ್ದನು. ತರುವಾಯ ಅವನಿಗೆ ದೇವರ ವಾಗ್ದಾನದ ಫಲ ದೊರೆಯಿತು.


ದೇವರ ಇತರ ಸಭೆಗಳಲ್ಲಿ ನಿಮ್ಮನ್ನು ಕುರಿತು ಹೆಚ್ಚಳಪಡುತ್ತೇವೆ. ನಿಮ್ಮಲ್ಲಿರುವ ನಂಬಿಕೆ ಮತ್ತು ಸಹನೆಗಳನ್ನು ಕುರಿತು ಇತರ ಸಭೆಗಳಿಗೆ ಹೇಳುತ್ತೇವೆ. ನೀವು ಹಿಂಸೆಗೆ ಒಳಗಾಗಿದ್ದರೂ ಅನೇಕ ಸಂಕಟಗಳನ್ನು ಅನುಭವಿಸುತ್ತಿದ್ದರೂ ನಂಬಿಕೆಯಿಂದಲೂ ಸಹನೆಯಿಂದಲೂ ಜೀವಿಸುತ್ತಿದ್ದೀರಿ.


ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿರುವುದನ್ನು ನೀವು ಓದಿಲ್ಲವೇ? ಹೀಗಿರುವಲ್ಲಿ, ದೇವರು ಜೀವಿತರಿಗೆ ಮಾತ್ರ ದೇವರೇ ಹೊರತು ಸತ್ತವರಿಗಲ್ಲಾ” ಅಂದನು.


ಸೋಮಾರಿಗೆ ಎಲ್ಲೆಲ್ಲೂ ತೊಂದರೆ, ಯಥಾರ್ಥವಂತನಿಗೆ ಜೀವನ ಸರಾಗ.


ಸೋಮಾರಿಯ ಆಸೆಗಳೆಲ್ಲಾ ವ್ಯರ್ಥ. ಅವನೆಂದಿಗೂ ಅವುಗಳನ್ನು ಪಡೆಯಲಾರ. ಕಷ್ಟಪಟ್ಟು ದುಡಿಯುವವನು ತನ್ನ ಆಸೆಗಳನ್ನು ಈಡೇರಿಸಿಕೊಳ್ಳುವನು.


ಕಷ್ಟಪಟ್ಟು ಕೆಲಸ ಮಾಡುವವನು ಅಧಿಪತಿಯಾಗುವನು. ಸೋಮಾರಿಯನ್ನು ಗುಲಾಮನನ್ನಾಗಿ ಮಾಡಲಾಗುವುದು.


ನಮ್ಮ ತಂದೆಯಾದ ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಫಲವಾಗಿ ಮಾಡಿದ ಕಾರ್ಯಗಳಿಗಾಗಿಯೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಿಮಗಿರುವ ನಿರೀಕ್ಷೆಯಿಂದ ನೀವು ದೃಢವಾಗಿರುವುದಕ್ಕಾಗಿಯೂ ನಾವು ಆತನಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.


“ಸ್ವಲ್ಪ ಸಮಯದ ನಂತರ ಲಾಜರನು ಸತ್ತನು. ದೇವದೂತರು ಲಾಜರನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಒಂದು ದಿನ ಐಶ್ವರ್ಯವಂತನೂ ಸತ್ತನು. ಅವನಿಗೆ ಸಮಾಧಿ ಮಾಡಲಾಯಿತು.


“ಅದಕ್ಕೆ ಯಜಮಾನನು, ‘ನೀನು ಸೋಮಾರಿಯಾದ ಕೆಟ್ಟ ಸೇವಕ! ನಾನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನೆಂದು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನೆಂದು ನಿನಗೆ ಗೊತ್ತಿತ್ತೇ?


ಸ್ತ್ರೀಯರಲ್ಲಿ ಅತ್ಯಂತ ರೂಪವತಿಯೇ, ನಿನ್ನ ಪ್ರಿಯನು ಎಲ್ಲಿದ್ದಾನೆಂಬುದು ನಿನಗೆ ಗೊತ್ತಿಲ್ಲದಿದ್ದರೆ, ಹೋಗು, ಕುರಿಗಳನ್ನು ಹಿಂಬಾಲಿಸು. ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.


ಆದ್ದರಿಂದ ನೀನು ಒಳ್ಳೆಯವರ ಮಾದರಿಯನ್ನು ಅನುಸರಿಸಬೇಕು. ನೀತಿವಂತರ ಮಾರ್ಗದಲ್ಲಿ ಜೀವಿಸಬೇಕು.


ಯಥಾರ್ಥವಂತರನ್ನು ದಾರಿತಪ್ಪಿಸಿ ಅಪಾಯದ ಮಾರ್ಗದಲ್ಲಿ ನಡೆಸುವವನು ತಾನು ತೋಡಿದ ಗುಂಡಿಗೆ ತಾನೇ ಬೀಳುವನು.


ಬಾಗಿಲು ತಿರುಗುಣಿಯ ಮೇಲೆ ಸುತ್ತುವಂತೆ ಸೋಮಾರಿಯು ತನ್ನ ಹಾಸಿಗೆಯ ಮೇಲೆ ಹೊರಳಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು