Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:4 - ಪರಿಶುದ್ದ ಬೈಬಲ್‌

4-6 ಕ್ರಿಸ್ತನ ಮಾರ್ಗವನ್ನು ಜನರು ಬಿಟ್ಟುಹೋದ ನಂತರ, ನೀವು ಅವರ ಜೀವನವನ್ನು ಮತ್ತೆ ಪರಿವರ್ತಿಸಲು ಸಾಧ್ಯವೇ? ನಾನು ಸತ್ಯವನ್ನು ತಿಳಿದುಕೊಂಡ ಜನರನ್ನು ಕುರಿತು ಮಾತಾಡುತ್ತಿದ್ದೇನೆ. ಅವರು ದೇವರ ವರಗಳನ್ನು ಪಡೆದವರೂ ಪವಿತ್ರಾತ್ಮನಲ್ಲಿ ಪಾಲುಗಾರರೂ ಆಗಿದ್ದಾರೆ. ದೇವರು ಹೇಳಿದ ಸಂಗತಿಗಳನ್ನು ಅವರು ಕೇಳಿದವರೂ ದೇವರ ಹೊಸಲೋಕದ ಮಹಾಶಕ್ತಿಗಳನ್ನು ನೋಡಿದವರೂ ಆಗಿದ್ದಾರೆ. ಅವುಗಳೆಲ್ಲ ಉತ್ತಮವಾದವುಗಳೆಂಬುದನ್ನು ಅವರು ಕಲಿತುಕೊಂಡಿದ್ದಾರೆ. ಆದರೂ ಅವರು ಕ್ರಿಸ್ತನ ಮಾರ್ಗವನ್ನು ಬಿಟ್ಟುಹೋದರು. ಅವರ ಜೀವಿತವನ್ನು ಮತ್ತೆ ಪರಿವರ್ತಿಸಿ ಕ್ರಿಸ್ತನ ಬಳಿಗೆ ಬರಮಾಡಲು ಸಾಧ್ಯವಿಲ್ಲ. ಏಕೆಂದರೆ ಕ್ರಿಸ್ತನನ್ನು ಬಿಟ್ಟುಹೋದ ಅವರು ಕ್ರಿಸ್ತನನ್ನು ಮತ್ತೆ ಶಿಲುಬೆಗೇರಿಸಿ ಮೊಳೆಗಳನ್ನು ಹೊಡೆಯುವವರೂ ಜನರೆಲ್ಲರ ಮುಂದೆ ಕ್ರಿಸ್ತನಿಗೆ ಅವಮಾನ ಮಾಡುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಒಬ್ಬನು, ಒಮ್ಮೆ ಜ್ಞಾನೋದಯವನ್ನು ಪಡೆದು, ಸ್ವರ್ಗೀಯ ವರದಾನಗಳನ್ನು ಆಸ್ವಾದಿಸಿ, ಪವಿತ್ರಾತ್ಮ ಅವರ ಸಹಭಾಗಿಯಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಒಂದು ಸಾರಿ ಜ್ಞಾನಪ್ರಕಾಶದಲ್ಲಿ ಸೇರಿ ಪರಲೋಕದಿಂದಾದ ದಾನದ ಅನುಭವವನ್ನು ಹೊಂದಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಒಂದು ಸಾರಿ ಬೆಳಕನ್ನು ಪಡೆದು, ಪರಲೋಕದ ವರವನ್ನು ರುಚಿ ನೋಡಿ, ಪವಿತ್ರಾತ್ಮ ದೇವರ ಪಾಲನ್ನು ಹೊಂದಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕಶ್ಯಾಕ್ ಮಟ್ಲ್ಯಾರ್, ಎಗ್ದಾ ದೆವಾಚ್ಯಾ ಉಜ್ವೊಡಾತ್ ಮಿಳ್ವುನ್ ಸರ್ಗಾಕ್ನಾ ಅನುಭೊಗ್ ಘೆವ್ನ್ ಅನಿ ಪವಿತ್ರ್ ಆತ್ಮ್ಯಾತ್ ವಾಟೊ ಘೆಟಲ್ಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:4
38 ತಿಳಿವುಗಳ ಹೋಲಿಕೆ  

“ನೀವು ಭೂಮಿಗೆ ಉಪ್ಪಾಗಿದ್ದೀರಿ. ಆದರೆ ಉಪ್ಪೇ ತನ್ನ ರುಚಿಯನ್ನು ಕಳೆದುಕೊಂಡರೆ ಅದನ್ನು ಮತ್ತೆ ಉಪ್ಪನ್ನಾಗಿ ಮಾಡಲು ಸಾಧ್ಯವಿಲ್ಲ; ಅಂಥ ಉಪ್ಪಿನಿಂದ ಪ್ರಯೋಜನವೇನೂ ಇಲ್ಲ. ಜನರು ಅದನ್ನು ಹೊರಗೆ ಬಿಸಾಡಿ ಅದರ ಮೇಲೆ ನಡೆದಾಡುವರು.


ನನ್ನಲ್ಲಿ ನೆಲೆಗೊಂಡಿಲ್ಲದವನು ಹೊರಗೆ ಬಿಸಾಡಲ್ಪಟ್ಟ ಕವಲಿನಂತಿರುವನು. ಆ ಕವಲು ಸತ್ತುಹೋಗುವುದು. ಸತ್ತ ಕವಲುಗಳನ್ನು ಜನರು ಒಟ್ಟುಗೂಡಿಸಿ ಬೆಂಕಿಯೊಳಕ್ಕೆ ಎಸೆದು ಸುಟ್ಟುಹಾಕುವರು.


ಆದ್ದರಿಂದ ನೀವು ನಂಬಿಕೆಯ ಮೂಲಕ ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಅದು ದೇವರ ವರ.


ಯೋಹಾನನು, “ದೇವರು ಏನು ಕೊಡುತ್ತಾನೋ ಅದನ್ನು ಮಾತ್ರ ಒಬ್ಬನು ಪಡೆದುಕೊಳ್ಳಬಲ್ಲನು.


ನೀವು ಸತ್ಯವನ್ನು ತಿಳಿದುಕೊಂಡ ಆ ದಿನಗಳನ್ನು ನೆನಪು ಮಾಡಿಕೊಳ್ಳಿ. ನೀವು ಅನೇಕ ಸಂಕಟಗಳಲ್ಲಿ ಹೋರಾಟ ಮಾಡಿದರೂ, ಧೃತಿಗೆಡದೆ ಮುಂದುವರಿದಿರಿ.


ಆಗ ಅದು ಹೊರಗೆ ಹೋಗಿ ತನಗಿಂತಲೂ ಹೆಚ್ಚು ದುಷ್ಟರಾದ ಏಳು ದುರಾತ್ಮಗಳನ್ನು ಕರೆದುಕೊಂಡು ಬರುತ್ತದೆ. ಆ ದುರಾತ್ಮಗಳೆಲ್ಲಾ ಆ ಮನುಷ್ಯನೊಳಗೆ ಸೇರಿಕೊಂಡು ವಾಸಮಾಡಲಾರಂಭಿಸುತ್ತವೆ. ಆಗ ಆ ಮನುಷ್ಯನಿಗೆ ಮೊದಲಿಗಿಂತಲೂ ಹೆಚ್ಚಿನ ಕಷ್ಟಗಳು ಉಂಟಾಗುತ್ತವೆ. ಈ ದಿನಗಳಲ್ಲಿ ಜೀವಿಸುವ ದುಷ್ಟ ಜನರಿಗೆ ಅದೇ ರೀತಿ ಆಗುವುದು” ಎಂದನು.


ಈ ವಿಷಯವೊಂದನ್ನು ನನಗೆ ತಿಳಿಸಿರಿ: ನೀವು ಪವಿತ್ರಾತ್ಮನನ್ನು ಹೊಂದಿಕೊಂಡದ್ದು ಹೇಗೆ? ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದ ಹೊಂದಿಕೊಂಡಿರೊ? ಇಲ್ಲ! ಸುವಾರ್ತೆಯನ್ನು ಕೇಳಿ ಅದರಲ್ಲಿ ನಂಬಿಕೆಯಿಟ್ಟದ್ದರಿಂದಲೇ ಪವಿತ್ರಾತ್ಮನನ್ನು ಹೊಂದಿಕೊಂಡಿರಿ.


ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು.


ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.


ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.


ನಿನ್ನಲ್ಲಿರುವ ವರವನ್ನು ಜ್ಞಾಪಿಸಿಕೊಳ್ಳುತ್ತಿರು. ಸಭೆಯ ಹಿರಿಯರು ಪ್ರವಾದನೆಗಳೊಂದಿಗೆ ತಮ್ಮ ಕೈಗಳನ್ನು ನಿನ್ನ ಮೇಲಿಟ್ಟಾಗ ಆ ವರವು ನಿನಗೆ ಕೊಡಲ್ಪಟ್ಟಿತು.


ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರವನ್ನೇ ದೇವರು ಈ ಜನರಿಗೆ ಕೊಟ್ಟನು. ಹೀಗಿರಲು ನಾನು ದೇವರ ಕೆಲಸವನ್ನು ನಿಲ್ಲಿಸಲು ಸಾಧ್ಯವಿರಲಿಲ್ಲ” ಎಂದು ಹೇಳಿದನು.


ಕ್ರಿಸ್ತನು ನಮ್ಮಲ್ಲಿ ಪ್ರತಿಯೊಬ್ಬರಿಗೂ ವಿಶೇಷವಾದ ವರವನ್ನು ಕೊಟ್ಟಿದ್ದಾನೆ. ಪ್ರತಿಯೊಬ್ಬನು ಕ್ರಿಸ್ತನ ಇಷ್ಟಾನುಸಾರವಾಗಿ ವರವನ್ನು ಪಡೆದುಕೊಂಡಿದ್ದಾನೆ.


ದೇವರು ನೀಡಿದ ವಿಶೇಷವಾದ ಕೃಪಾವರದಿಂದ ನಾನು ಸುವಾರ್ತೆಯನ್ನು ತಿಳಿಸಲು ಸೇವಕನಾದೆನು. ದೇವರು ತನ್ನ ಶಕ್ತಿಯನ್ನು ಪ್ರಯೋಗಿಸಿ ನನಗೆ ಆ ಕೃಪಾವರವನ್ನು ಕೊಟ್ಟನು.


ಪೇತ್ರನೊಂದಿಗೆ ಬಂದಿದ್ದ ಯೆಹೂದ್ಯ ವಿಶ್ವಾಸಿಗಳು ವಿಸ್ಮಿತರಾದರು. ಯೆಹೂದ್ಯರಲ್ಲದ ಜನರಿಗೂ ಸಹ ಪವಿತ್ರಾತ್ಮಧಾರೆಯಾದದ್ದನ್ನು ಕಂಡು ಅವರು ಆಶ್ಚರ್ಯಪಟ್ಟರು.


ಪೇತ್ರನು ಸಿಮೋನನಿಗೆ, “ನೀನೂ ನಾಶವಾಗು! ನಿನ್ನ ಹಣವೂ ನಾಶವಾಗಲಿ! ದೇವರ ವರವನ್ನು ಹಣದಿಂದ ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದೆ.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ಜನರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ. ಆದರೆ ನನ್ನ ತಂದೆಯು ನಿಮಗೆ ಪರಲೋಕದಿಂದ ನಿಜವಾದ ರೊಟ್ಟಿಯನ್ನು ಕೊಡುವನು.


ಆಗ ಅವನು ದೇವರಾತ್ಮ ಪ್ರೇರಿತನಾಗಿ ಹೀಗೆಂದನು: “ಬೆಯೋರನ ಮಗನಾದ ಬಿಳಾಮನ ಸಂದೇಶವಿದು. ನನ್ನ ಕಣ್ಣುಗಳು ತೆರೆಯಲ್ಪಟ್ಟಿವೆ. ನಾನು ನೋಡುವುದನ್ನೇ ಹೇಳುತ್ತೇನೆ.


ದೇವರು ಪವಿತ್ರಾತ್ಮನನ್ನು ಕೊಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ದೇವರು ಮಹತ್ಕಾರ್ಯಗಳನ್ನು ಮಾಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ಇಲ್ಲ! ಸುವಾರ್ತೆಯನ್ನು ಕೇಳಿ ಅದನ್ನು ನಂಬಿಕೊಂಡದ್ದರಿಂದ ದೇವರು ನಿಮಗೆ ಪವಿತ್ರಾತ್ಮನನ್ನು ಕೊಡುತ್ತಾನೆ ಮತ್ತು ಮಹತ್ಕಾರ್ಯಗಳನ್ನು ಮಾಡುತ್ತಾನೆ.


ಎಲ್ಲಾ ಜನರ ಆಲೋಚನೆಗಳನ್ನು ಬಲ್ಲ ದೇವರು ಯೆಹೂದ್ಯರಲ್ಲದ ಜನರನ್ನೂ ಸ್ವೀಕರಿಸಿಕೊಂಡನು. ದೇವರು ನಮಗೆ ಪವಿತ್ರಾತ್ಮನನ್ನು ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮನನ್ನು ಕೊಟ್ಟು ಇದನ್ನು ರುಜುವಾತುಪಡಿಸಿದ್ದಾನೆ.


ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.


ಕಂಚುಗಾರನಾದ ಅಲೆಗ್ಸಾಂಡರನು ನನಗೆ ಅನೇಕ ಕೆಡಕುಗಳನ್ನು ಮಾಡಿದನು. ಅವನು ಮಾಡಿದ ಕೃತ್ಯಗಳಿಗಾಗಿ ಪ್ರಭುವು ಅವನನ್ನು ದಂಡಿಸುವನು.


ನಾನು ನಿಮ್ಮನ್ನು ನೋಡಲು, ನಿಮ್ಮನ್ನು ಬಲಗೊಳಿಸಲು, ನಿಮಗೆ ಆತ್ಮಿಕ ಉಡುಗೊರೆಯನ್ನು ಕೊಡಲು ಅತ್ಯಾಸಕ್ತಿ ಉಳ್ಳವನಾಗಿದ್ದೇನೆ.


ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.


“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


ನೀವು ನಿಮ್ಮ ಹೃದಯದಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆಯನ್ನು ಹೊಂದಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ನಾವು ಎಂಥ ನಿರೀಕ್ಷೆಯನ್ನು ಹೊಂದಿಕೊಳ್ಳಬೇಕೆಂದು ದೇವರು ನಮ್ಮನ್ನು ಆರಿಸಿಕೊಂಡನೆಂಬುದನ್ನು ಆಗ ತಿಳಿದುಕೊಳ್ಳುವಿರಿ; ಆತನು ತನ್ನ ಪರಿಶುದ್ಧ ಜನರಿಗೆ ವಾಗ್ದಾನ ಮಾಡಿದ ಆಶೀರ್ವಾದಗಳು ಎಷ್ಟು ಮಹಿಮಾತಿಶಯವಾಗಿವೆ ಎಂಬುದನ್ನು ತಿಳಿದುಕೊಳ್ಳುವಿರಿ.


ಆ ಬಳಿಕ ಯಾಜಕನು ಅದನ್ನು ತಿರುಗಿ ಪರೀಕ್ಷಿಸಬೇಕು. ಬೂಷ್ಟು ಇನ್ನೂ ಹಾಗೆಯೇ ಇರುವಂತೆ ಕಂಡರೆ, ಆಗ ಆ ವಸ್ತು ಅಶುದ್ಧವಾಗಿದೆ. ಅದು ಹರಡಲಿಲ್ಲವಾದರೂ ನೀವು ಬಟ್ಟೆಯನ್ನು ಅಥವಾ ತೊಗಲನ್ನು ಸುಟ್ಟುಹಾಕಬೇಕು.


“ಒಂದುವೇಳೆ ಒಬ್ಬನು ಹಳೆಯ ಕಲ್ಲುಗಳನ್ನು ಮತ್ತು ಮಣ್ಣನ್ನು ತೆಗೆಸಿ ಹೊಸ ಕಲ್ಲುಗಳನ್ನು, ಮಣ್ಣನ್ನು ಮತ್ತು ಹೊಸ ಮಡ್ಡಿಯನ್ನು ಹಾಕಿಸಿದ್ದರೂ ಬೂಷ್ಟು ಮತ್ತೆ ಆ ಮನೆಯಲ್ಲಿ ಕಾಣಿಸಿಕೊಂಡರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು