Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:7 - ಪರಿಶುದ್ದ ಬೈಬಲ್‌

7 ಆ ಜನರು ತನ್ನ ಮೇಲೆ ಪದೇಪದೇ ಸುರಿಯುವ ಮಳೆಯನ್ನು ಹೀರಿಕೊಳ್ಳುವ ಭೂಮಿಯಂತಿದ್ದಾರೆ. ಅದು ಜನರಿಗೆ ಆಹಾರವನ್ನು ಕೊಡಲೆಂದು ರೈತನು ಅದರಲ್ಲಿ ಸಸಿಯನ್ನು ನೆಟ್ಟು ಬೆಳೆಸುತ್ತಾನೆ. ಅದು ಜನರಿಗೆ ಉಪಯುಕ್ತವಾದ ಬೆಳೆಗಳನ್ನು ಬೆಳೆಸಿದರೆ, ಅದಕ್ಕೆ ದೇವರಿಂದ ಆಶೀರ್ವಾದ ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಭೂಮಿಯು ಕಾಲಾನುಕಾಲಕ್ಕೆ ತನ್ನ ಮೇಲೆ ಬೀಳುವ ಮಳೆಯ ನೀರನ್ನು ಹೀರಿಕೊಂಡು ವ್ಯವಸಾಯಗಾರನಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಪಡೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಭೂವಿುಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿವಿುತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಭೂಮಿಯು ತನ್ನ ಮೇಲೆ ಆಗಾಗ್ಗೆ ಬೀಳುವ ಮಳೆಯನ್ನು ಹೀರಿಕೊಂಡು ಅದು ತನ್ನ ಒಡೆಯನಿಗೆ ಯೋಗ್ಯವಾದ ಬೆಳೆಯನ್ನು ಕೊಡುವುದಾದರೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಜಿಮಿನ್ ಅಪ್ನಾವರ್ತಿ ಪಡ್ತಲೊ ಪಾವ್ಸ್ ಘೆವ್ನ್, ಕೊನಾಕ್ ತರಿಬಿ ಸೆತ್ ಕರುಕ್ ಅವಕಾಸ್ ಕರುನ್ ದಿಲ್ಲ್ಯಾ ತನ್ನಾ ಎವ್ಡಿಚ್ ದೆವಾಕ್ನಾ ಆಶಿರ್ವಾದ್ ಘೆವ್ಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:7
17 ತಿಳಿವುಗಳ ಹೋಲಿಕೆ  

ನೀನು ಒಳ್ಳೆಯತನವನ್ನು ಬಿತ್ತಿದರೆ ಪ್ರೀತಿಯೆಂಬ ಬೆಳೆಯನ್ನು ಕೊಯ್ಯುವೆ. ನಿನ್ನ ನೆಲವನ್ನು ಉಳುಮೆ ಮಾಡು. ಆಗ ನೀನು ಯೆಹೋವನೊಂದಿಗೆ ಬೆಳೆಯನ್ನು ಕೊಯ್ಯುವೆ. ಆತನು ಬರುವನು. ಮತ್ತು ಆತನ ಒಳ್ಳೆಯತನವು ನಿನ್ನ ಮೇಲೆ ಮಳೆಯಂತೆ ಸುರಿಯುವದು.


“ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.


ಅಳುತ್ತಾ ಹೊಲಕ್ಕೆ ಬೀಜವನ್ನು ಹೊತ್ತುಕೊಂಡು ಹೋಗುವವನು ಹರ್ಷದಿಂದ ಸಿವುಡುಗಳನ್ನು ಹೊತ್ತುಕೊಂಡು ಬರುವನು!


ಸಹೋದರ ಸಹೋದರಿಯರೇ, ತಾಳ್ಮೆಯಿಂದಿರಿ, ಪ್ರಭುವಾದ ಯೇಸು ಪ್ರತ್ಯಕ್ಷನಾಗುತ್ತಾನೆ. ಆದ್ದರಿಂದ ಅಲ್ಲಿಯವರೆಗೆ ತಾಳ್ಮೆಯಿಂದಿರಿ. ತನ್ನ ಅಮೂಲ್ಯ ಬೆಳೆಯು ಭೂಮಿಯಿಂದ ಬರುವ ತನಕ ರೈತನು ತಾಳ್ಮೆಯಿಂದ ಕಾಯುತ್ತಾನೆ. ಮೊದಲ ಹಾಗೂ ಕೊನೆಯ ಮಳೆಯು ತನ್ನ ಬೆಳೆಯ ಮೇಲೆ ಸುರಿಯುವ ತನಕ ರೈತನು ತಾಳ್ಮೆಯಿಂದ ಕಾದಿರುತ್ತಾನೆ.


ನಾನು ನನ್ನ ಕುರಿಗಳನ್ನೂ ನನ್ನ ಬೆಟ್ಟದ ಸುತ್ತಲೂ ಇರುವ ಸ್ಥಳಗಳನ್ನೂ ಆಶೀರ್ವದಿಸುವೆನು. ಸರಿಯಾದ ಸಮಯಕ್ಕೆ ಮಳೆ ಬೀಳುವಂತೆ ಮಾಡುವೆನು. ಮತ್ತು ಅದನ್ನು ಆಶೀರ್ವಾದದ ಸುರಿಮಳೆಯಂತೆ ಸುರಿಸುವೆನು.


ಅವರನ್ನು ಯೆಹೋವನು ಆಶೀರ್ವದಿಸಿ ಕಾಪಾಡುವನು; ದೇವರು ಅವರನ್ನು ನಿರಪರಾಧಿಗಳೆಂದು ಪ್ರಕಟಿಸುವನು.


ಚಿಂತೆ ಮಾಡಬೇಡಿರಿ! ಆರನೆಯ ವರ್ಷದಲ್ಲಿ ನನ್ನ ಆಶೀರ್ವಾದವು ನಿಮ್ಮ ಮೇಲಿರುವುದು. ಆ ವರ್ಷ ಭೂಮಿಯಲ್ಲಿ ಬೆಳೆದ ಪೈರುಗಳು ಮೂರು ವರ್ಷಗಳ ಬೆಳೆಯಷ್ಟಾಗುವದು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.


ಅದರಂತೆಯೇ ಯಾಕೋಬನು ತಂದೆಯ ಬಳಿಗೆ ಹೋಗಿ ಅವನಿಗೆ ಮುದ್ದಿಟ್ಟನು. ಇಸಾಕನು ಅವನ ಉಡುಪಿನ ವಾಸನೆಯನ್ನು ನೋಡಿ ಅವನನ್ನು ಹೀಗೆ ಆಶೀರ್ವದಿಸಿದನು: “ನನ್ನ ಮಗನ ಸುವಾಸನೆಯು ಯೆಹೋವನು ಆಶೀರ್ವದಿಸಿದ ಪ್ರದೇಶಗಳಂತಿದೆ.


ಬಳಿಕ ದೇವರು, “ಭೂಮಿಯು ಸಸ್ಯರಾಶಿಯನ್ನು ಬೆಳೆಸಲಿ; ಬೀಜಗಳನ್ನು ಫಲಿಸುವ ಸಸ್ಯಗಳು ಬೆಳೆಯಲಿ; ತನ್ನತನ್ನ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಹಣ್ಣಿನ ಮರಗಳು ಭೂಮಿಯ ಮೇಲೆ ಬೆಳೆಯಲಿ” ಅಂದನು. ಹಾಗೆಯೇ ಆಯಿತು.


ಹೌದು, ಕೇಳುತ್ತಲೇ ಇರುವವನು ಪಡೆದುಕೊಳ್ಳುತ್ತಾನೆ, ಹುಡುಕುತ್ತಲೇ ಇರುವವನು ಕಂಡುಕೊಳ್ಳುತ್ತಾನೆ, ತಟ್ಟುತ್ತಲೇ ಇರುವವನಿಗೆ ಬಾಗಿಲು ತೆರೆಯುತ್ತದೆ.


ಕಷ್ಟಪಟ್ಟು ಕೆಲಸಮಾಡುವ ರೈತನಿಗೆ ಬೆಳೆಯ ಪ್ರಥಮ ಪಾಲು ದೊರೆಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು