ಇಬ್ರಿಯರಿಗೆ 7:19 - ಪರಿಶುದ್ದ ಬೈಬಲ್19 ಮೋಶೆಯ ಧರ್ಮಶಾಸ್ತ್ರವು ಯಾವುದನ್ನೂ ಸಿದ್ಧಿಗೆ ತರಲಿಲ್ಲ. ಈಗ ನಮಗೆ ಉತ್ತಮವಾದ ಒಂದು ನಿರೀಕ್ಷೆಯನ್ನು ಕೊಡಲಾಗಿದೆ. ಈ ನಿರೀಕ್ಷೆಯು ನಮ್ಮನ್ನು ದೇವರ ಬಳಿಗೆ ಕೊಂಡೊಯ್ಯಬಲ್ಲದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಏಕೆಂದರೆ, ಧರ್ಮಶಾಸ್ತ್ರವು ಏನನ್ನೂ ಸಿದ್ಧಿಗೆ ತರಲಿಲ್ಲ. ಅದಕ್ಕೆ ಬದಲಾಗಿ ದೇವರ ಸನ್ನಿಧಿಗೆ ನಮ್ಮನ್ನು ಕೊಂಡೊಯ್ಯಬಲ್ಲ ನಂಬಿಕೆ ನಿರೀಕ್ಷೆಯನ್ನು ನಮಗೆ ಒದಗಿಸಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಧರ್ಮಶಾಸ್ತ್ರವು ಯಾವದನ್ನೂ ಸಿದ್ಧಿಗೆ ತಾರದೆ ಇರುವದರಿಂದ ಮೊದಲಿದ್ದ ನಿಯಮವು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ರದ್ದಾಗಿಹೋಯಿತು. ಅದಕ್ಕೆ ಬದಲಾಗಿ ಉತ್ತಮವಾಗಿರುವ ಒಂದು ನಿರೀಕ್ಷಾಧಾರವು ಪ್ರಾಬಲ್ಯಕ್ಕೆ ಬಂತು. ಈ ನಿರೀಕ್ಷಾಧಾರವು ನಮ್ಮನ್ನು ದೇವರ ಸನ್ನಿಧಿಗೆ ಸೇರಿಸುವಂಥದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮೋಶೆಯ ನಿಯಮವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ಒಯ್ಯುವಂತೆ ಹೊಸ ಉತ್ತಮ ನಿರೀಕ್ಷೆಗೆ ನಡಿಸುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಮೊಯ್ಜೆಚ್ಯಾ ಖಾಯ್ದ್ಯಾನ್ ಖಲೆಬಿ ಸಂಪುರ್ನತೆಕ್ ಹಾನುಕ್ ನಾ ಅತ್ತಾ ಅಮ್ಕಾ ಬರಿ ಖಬರ್ ಅನಿ ಬರೊಸೊ ದೆವಾಚ್ಯಾ ಜಗೊಳ್ ನ್ಹೆತಾ. ಅಧ್ಯಾಯವನ್ನು ನೋಡಿ |
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.
ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.
ಪಾಪ ಮತ್ತು ಧರ್ಮಶಾಸ್ತ್ರ ಇವೆರಡೂ ಒಂದೇ ಎಂದು ನಾನು ಹೇಳುತ್ತಿರುವುದಾಗಿ ನೀವು ಭಾವಿಸಬಹುದು. ಆದರೆ ಅದು ನಿಜವಲ್ಲ. ಪಾಪವೆಂದರೆ ಏನೆಂಬುದನ್ನು ಕಲಿತುಕೊಳ್ಳಲು ಧರ್ಮಶಾಸ್ತ್ರವೊಂದೇ ನನಗೆ ಏಕೈಕ ಮಾರ್ಗವಾಗಿದೆ. ಧರ್ಮಶಾಸ್ತ್ರವಿಲ್ಲದಿದ್ದರೆ, ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ. “ಬೇರೆಯವರ ವಸ್ತುಗಳನ್ನು ನೀವು ಆಶಿಸಕೂಡದು” ಎಂದು ಧರ್ಮಶಾಸ್ತ್ರವು ಹೇಳಿದ್ದರಿಂದಲೇ ಅದು ನನಗೆ ತಿಳಿಯಿತು.