Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:19 - ಪರಿಶುದ್ದ ಬೈಬಲ್‌

19 ಮೋಶೆಯ ಧರ್ಮಶಾಸ್ತ್ರವು ಯಾವುದನ್ನೂ ಸಿದ್ಧಿಗೆ ತರಲಿಲ್ಲ. ಈಗ ನಮಗೆ ಉತ್ತಮವಾದ ಒಂದು ನಿರೀಕ್ಷೆಯನ್ನು ಕೊಡಲಾಗಿದೆ. ಈ ನಿರೀಕ್ಷೆಯು ನಮ್ಮನ್ನು ದೇವರ ಬಳಿಗೆ ಕೊಂಡೊಯ್ಯಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಏಕೆಂದರೆ, ಧರ್ಮಶಾಸ್ತ್ರವು ಏನನ್ನೂ ಸಿದ್ಧಿಗೆ ತರಲಿಲ್ಲ. ಅದಕ್ಕೆ ಬದಲಾಗಿ ದೇವರ ಸನ್ನಿಧಿಗೆ ನಮ್ಮನ್ನು ಕೊಂಡೊಯ್ಯಬಲ್ಲ ನಂಬಿಕೆ ನಿರೀಕ್ಷೆಯನ್ನು ನಮಗೆ ಒದಗಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಧರ್ಮಶಾಸ್ತ್ರವು ಯಾವದನ್ನೂ ಸಿದ್ಧಿಗೆ ತಾರದೆ ಇರುವದರಿಂದ ಮೊದಲಿದ್ದ ನಿಯಮವು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ರದ್ದಾಗಿಹೋಯಿತು. ಅದಕ್ಕೆ ಬದಲಾಗಿ ಉತ್ತಮವಾಗಿರುವ ಒಂದು ನಿರೀಕ್ಷಾಧಾರವು ಪ್ರಾಬಲ್ಯಕ್ಕೆ ಬಂತು. ಈ ನಿರೀಕ್ಷಾಧಾರವು ನಮ್ಮನ್ನು ದೇವರ ಸನ್ನಿಧಿಗೆ ಸೇರಿಸುವಂಥದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮೋಶೆಯ ನಿಯಮವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ಒಯ್ಯುವಂತೆ ಹೊಸ ಉತ್ತಮ ನಿರೀಕ್ಷೆಗೆ ನಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮೊಯ್ಜೆಚ್ಯಾ ಖಾಯ್ದ್ಯಾನ್ ಖಲೆಬಿ ಸಂಪುರ್ನತೆಕ್ ಹಾನುಕ್ ನಾ ಅತ್ತಾ ಅಮ್ಕಾ ಬರಿ ಖಬರ್ ಅನಿ ಬರೊಸೊ ದೆವಾಚ್ಯಾ ಜಗೊಳ್ ನ್ಹೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:19
29 ತಿಳಿವುಗಳ ಹೋಲಿಕೆ  

ಆದ್ದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು.


ಈ ದಿನ ನಮಗೆ ಇದೊಂದು ಉದಾಹರಣೆಯಾಗಿದೆ. ದೇವರಿಗೆ ಅರ್ಪಿಸಲ್ಪಡುತ್ತಿದ್ದ ಕಾಣಿಕೆಗಳಿಗಾಗಲಿ ಯಜ್ಞಗಳಿಗಾಗಲಿ ದೇವಾರಾಧನೆ ಮಾಡುವ ವ್ಯಕ್ತಿಯನ್ನು ಪರಿಪೂರ್ಣನನ್ನಾಗಿ ಮಾಡಲು ಸಾಧ್ಯವಿರಲಿಲ್ಲ ಎಂಬುದನ್ನು ಇದು ತೋರ್ಪಡಿಸುತ್ತದೆ. ಆ ವ್ಯಕ್ತಿಯ ಹೃದಯವನ್ನು ಪರಿಶುದ್ಧಗೊಳಿಸಲು ಆ ಯಜ್ಞಗಳಿಗೆ ಸಾಧ್ಯವಿರಲಿಲ್ಲ.


ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.


ದೇವರು ನಮಗೆ ಶ್ರೇಷ್ಠವಾದದ್ದನ್ನು ಕೊಡಲು ಯೋಜನೆ ಮಾಡಿದನು. ನಮ್ಮೊಡನೆ ಮಾತ್ರ ಅವರು ಪರಿಪೂರ್ಣರಾಗಬೇಕೆಂಬುದೇ ಆ ಯೋಜನೆ.


ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ.


ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.


ಈಗ ನಾವು ಆನಂದಿಸುತ್ತಿರುವ ದೇವರ ಕೃಪಾಶ್ರಯಕ್ಕೆ ಕ್ರಿಸ್ತನೇ ನಮ್ಮನ್ನು ನಮ್ಮ ನಂಬಿಕೆಯ ಮೂಲಕ ತಂದಿದ್ದಾನೆ. ದೇವರ ಮಹಿಮೆಯನ್ನು ಹೊಂದುವೆವು ಎಂಬ ನಿರೀಕ್ಷೆಯು ನಮಗಿರುವುದರಿಂದ ನಾವು ಬಹು ಸಂತೋಷವಾಗಿದ್ದೇವೆ.


ಆದರೆ ಯೇಸುವಿಗೆ ಕೊಡಲ್ಪಟ್ಟ ಕಾರ್ಯವು ಆ ಯಾಜಕರಿಗೆ ಕೊಡಲ್ಪಟ್ಟ ಕಾರ್ಯಕ್ಕಿಂತ ಅತ್ಯಂತ ಮಹತ್ವದ್ದಾಗಿದೆ. ಇದೇ ರೀತಿಯಲ್ಲಿ ಯೇಸು ತನ್ನ ಜನರಿಗಾಗಿ ದೇವರಿಂದ ತಂದ ಹೊಸ ಒಡಂಬಡಿಕೆಯು ಹಳೆಯದಕ್ಕಿಂತ ಶ್ರೇಷ್ಠವಾಗಿದೆ. ಉತ್ತಮ ಸಂಗತಿಗಳ ವಾಗ್ದಾನದ ಆಧಾರದ ಮೇಲೆ ಹೊಸ ಒಡಂಬಡಿಕೆಯು ಸ್ಥಾಪಿತವಾಗಿದೆ.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.


ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.


ನನಗಾದರೋ ದೇವರ ಸಮೀಪದಲ್ಲಿರುವುದೇ ಭಾಗ್ಯವಾಗಿದೆ. ನನ್ನ ಒಡೆಯನಾದ ಯೆಹೋವನನ್ನು ನನ್ನ ಆಶ್ರಯಸ್ಥಾನವನ್ನಾಗಿ ಮಾಡಿಕೊಂಡಿರುವೆ. ದೇವರೇ, ನಿನ್ನ ಎಲ್ಲಾ ಕಾರ್ಯಗಳ ಕುರಿತಾಗಿ ಹೇಳಲು ಬಂದಿರುವೆ.


ಲೇವಿಕುಲದ ಯಾಜಕತ್ವದ ಆಧಾರದ ಮೇಲೆ ಧರ್ಮಶಾಸ್ತ್ರವನ್ನು ಜನರಿಗೆ ಕೊಡಲಾಯಿತು. ಆದರೆ ಆ ಯಾಜಕತ್ವದಿಂದ ಜನರನ್ನು ಆತ್ಮಿಕತೆಯಲ್ಲಿ ಪರಿಪೂರ್ಣರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಬೇರೊಂದು ರೀತಿಯ ಯಾಜಕನು ಬರುವುದು ಅತ್ಯವಶ್ಯಕವಾಗಿತ್ತು. ಅಂದರೆ ಮೆಲ್ಕಿಜೆದೇಕನಂತಹ ಯಾಜಕನೇ ಹೊರತು ಆರೋನನಂತವನಲ್ಲ ಎಂಬುದು ಅದರ ಅರ್ಥ.


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ತಿಮೊಥೆಯನಿಗೆ ಬರೆಯುವ ಪತ್ರ. ನಮ್ಮ ರಕ್ಷಕನಾದ ದೇವರು ಮತ್ತು ನಮ್ಮ ನಿರೀಕ್ಷೆಗೆ ಆಧಾರವಾದ ಕ್ರಿಸ್ತ ಯೇಸುವಿನ ಆಜ್ಞೆಗನುಸಾರವಾಗಿ ನಾನು ಅಪೊಸ್ತಲನಾದೆನು.


ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.


ನಾವು ಕ್ರಿಸ್ತನಲ್ಲಿರುವ ನಂಬಿಕೆಯ ಮೂಲಕ ದೇವರ ಬಳಿಗೆ ಸ್ವತಂತ್ರದಿಂದ ಮತ್ತು ನಿರ್ಭಯದಿಂದ ಹೋಗಲು ಸಾಧ್ಯವಾಯಿತು.


ಆದ್ದರಿಂದ ಕ್ರಿಸ್ತನು ಬರುವ ತನಕ ಧರ್ಮಶಾಸ್ತ್ರವು ನಮಗೆ ಯಜಮಾನನಾಗಿತ್ತು. ಕ್ರಿಸ್ತನು ಬಂದ ತರುವಾಯ ನಾವು ನಂಬಿಕೆಯ ಮೂಲಕ ನೀತಿವಂತರಾಗಿರಲು ಸಾಧ್ಯವಾಯಿತು.


ಧರ್ಮಶಾಸ್ತ್ರವು ಮೋಶೆಯ ಮೂಲಕ ಕೊಡಲ್ಪಟ್ಟಿತು. ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮೂಲಕ ಬಂದವು.


ನಾನು ನಿನ್ನನ್ನು ಕರೆದಾಗ, ನೀನು ಸಮೀಪಕ್ಕೆ ಬಂದು, “ಭಯಪಡದಿರು” ಎಂದು ಹೇಳಿದೆ.


ಪಾಪ ಮತ್ತು ಧರ್ಮಶಾಸ್ತ್ರ ಇವೆರಡೂ ಒಂದೇ ಎಂದು ನಾನು ಹೇಳುತ್ತಿರುವುದಾಗಿ ನೀವು ಭಾವಿಸಬಹುದು. ಆದರೆ ಅದು ನಿಜವಲ್ಲ. ಪಾಪವೆಂದರೆ ಏನೆಂಬುದನ್ನು ಕಲಿತುಕೊಳ್ಳಲು ಧರ್ಮಶಾಸ್ತ್ರವೊಂದೇ ನನಗೆ ಏಕೈಕ ಮಾರ್ಗವಾಗಿದೆ. ಧರ್ಮಶಾಸ್ತ್ರವಿಲ್ಲದಿದ್ದರೆ, ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ. “ಬೇರೆಯವರ ವಸ್ತುಗಳನ್ನು ನೀವು ಆಶಿಸಕೂಡದು” ಎಂದು ಧರ್ಮಶಾಸ್ತ್ರವು ಹೇಳಿದ್ದರಿಂದಲೇ ಅದು ನನಗೆ ತಿಳಿಯಿತು.


ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರೋಧವಾಗಿದೆ ಎಂಬುದು ಇದರರ್ಥವೇ? ಇಲ್ಲ! ಜೀವವನ್ನು ಕೊಡುವಂಥ ಧರ್ಮಶಾಸ್ತ್ರವಿದ್ದಿದ್ದರೆ ಅದನ್ನು ಅನುಸರಿಸುವುದರ ಮೂಲಕ ನೀತಿವಂತರಾಗಬಹುದಾಗಿತ್ತು.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.


ದೇವರು ಯೇಸುವನ್ನು ಪ್ರಧಾನಯಾಜಕನನ್ನಾಗಿ ಮಾಡಿದಾಗ, ಒಂದು ವಾಗ್ದಾನವನ್ನೂ ಮಾಡಿದನು. ಆದರೆ ಬೇರೆಯವರು ಯಾಜಕರಾದಾಗ ಆತನು ವಾಗ್ದಾನ ಮಾಡಲಿಲ್ಲ.


ನಂಬಿಕೆಯಿಲ್ಲದೆ ದೇವರನ್ನು ಯಾರೂ ಮೆಚ್ಚಿಸಲಾಗುವುದಿಲ್ಲ. ದೇವರ ಬಳಿಗೆ ಬರುವ ಯಾರೇ ಆಗಲಿ, ದೇವರು ಇದ್ದಾನೆಂತಲೂ ಆತನನ್ನು ಮನಃಪೂರ್ವಕವಾಗಿ ಹುಡುಕುವ ಜನರಿಗೆ ಆತನು ಪ್ರತಿಫಲವನ್ನು ಕೊಡುತ್ತಾನೆಂತಲೂ ನಂಬಬೇಕು.


ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದ್ದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಈ ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು