Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:2 - ಪರಿಶುದ್ದ ಬೈಬಲ್‌

2 ಅಬ್ರಹಾಮನು ಅವನಿಗೆ ತನ್ನಲ್ಲಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. ಸಾಲೇಮಿನ ರಾಜನಾದ ಮೆಲ್ಕಿಜೆದೇಕನೆಂಬ ಹೆಸರಿಗೆ ಎರಡು ಅರ್ಥಗಳಿವೆ. ಮೆಲ್ಕಿಜೆದೇಕನೆಂದರೆ, “ನೀತಿರಾಜ” ಎಂಬರ್ಥ. “ಸಾಲೇಮಿನ ರಾಜ”ನೆಂದರೆ “ಸಮಾಧಾನದ ರಾಜ” ಎಂದರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಅಬ್ರಹಾಮನು ತಾನು ಗೆದ್ದು ತಂದಿದ್ದ ಎಲ್ಲದರಲ್ಲೂ ದಶಮಾಂಶವನ್ನು ಆತನಿಗೆ ಕೊಟ್ಟು ಗೌರವಿಸಿದನು. ಮೆಲ್ಕಿಸದೇಕ ಎಂಬ ಹೆಸರಿನ ಮೂಲಾರ್ಥ, ‘ನ್ಯಾಯನೀತಿಯ ಅರಸ.’ ಅಲ್ಲದೆ, ಆತನು ಸಾಲೇಮಿನ ಅರಸನೂ ಆಗಿದ್ದನು. ಆದ್ದರಿಂದ ‘ಶಾಂತಿಸಮಾಧಾನದ ಅರಸ’ ಎಂಬ ಅರ್ಥವೂ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿನ ಅರ್ಥವು ನೀತಿರಾಜ ಎಂಬದು; ಇದಲ್ಲದೆ ಅವನು ಸಾಲೇವಿುನರಾಜ ಅಂದರೆ ಸಮಾಧಾನರಾಜ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಬ್ರಹಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತರಲ್ಲಿ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿಗೆ ಮೊದಲನೆಯದಾಗಿ, “ನೀತಿರಾಜನು” ಎಂದೂ ತರುವಾಯ “ಸಾಲೇಮಿನ ರಾಜ,” ಅಂದರೆ, “ಸಮಾಧಾನದ ಅರಸನು” ಎಂದರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆಕಾ ಅಬ್ರಾಹಾಮಾನ್ ಅಪ್ನಿ ಜಿಕುನ್ ಹಾನಲ್ಯಾ ಸಗ್ಳ್ಯಾ ಸಾಮಾನಾತ್ನಿ ಧಾತ್ಲೊ ಎಕ್ ವಾಟೊ ದಿಲ್ಯಾನ್, ತೆಜಾ ನಾವಾಚೊ ಅರ್ತ್ “ನಿತಿವಂತ್ ರಾಜಾ” ಥವ್ಡೆಚ್ ನಸ್ತಾನಾ, ತೊ ಸಾಲೆಮಾಚೊ ರಾಜಾ ಮಟ್ಲ್ಯಾರ್ “ಸಮಾಧಾನಾಚೊ ರಾಜಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:2
26 ತಿಳಿವುಗಳ ಹೋಲಿಕೆ  

“ಲೇವಿಯರು ದೇವದರ್ಶನಗುಡಾರಕ್ಕೋಸ್ಕರ ಮಾಡುವ ಭಾರವಾದ ಕೆಲಸಕ್ಕೆ ಪ್ರತಿಫಲವಾಗಿ ಪ್ರತಿಯೊಬ್ಬ ಇಸ್ರೇಲನ ದಶಾಂಶವನ್ನು ನಾನು ಲೇವಿಯರಿಗೆ ಅವರ ಪಾಲಾಗಿ ಕೊಡುತ್ತಿದ್ದೇನೆ.


ಅವನ ಆಡಳಿತದ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ. ಚಂದ್ರನಿರುವವರೆಗೂ ಶಾಂತಿ ನೆಲಸಿರಲಿ.


ಆದರೆ ನಿನ್ನ ನಂತರ ಬರುವ ನಿನ್ನ ಮಗನು ಸಮಾಧಾನ ಪುರುಷನಾಗಿರುವನು. ಅವನ ರಾಜ್ಯದಲ್ಲಿ ನಾನು ಶಾಂತಿಯನ್ನು ನೆಲೆಗೊಳಿಸುವೆನು. ಅವನ ಸುತ್ತಮುತ್ತಲಿರುವ ವೈರಿಗಳಿಂದ ಅವನಿಗೆ ಯಾವ ಕೇಡೂ ಉಂಟಾಗದು. ಅವನೇ ಸೊಲೊಮೋನನು. ಅವನ ಕಾಲದಲ್ಲಿ ಇಸ್ರೇಲರು ಸಮಾಧಾನದಿಂದ ವಾಸಿಸುವರು.


ಇಸ್ರೇಲಿನ ದೇವರು ಮಾತನಾಡಿದನು. ಇಸ್ರೇಲಿನ ಬಂಡೆಯಾದಾತನು ನನಗೆ ತಿಳಿಸಿದನು. ‘ದೇವರಲ್ಲಿ ಭಯಭಕ್ತಿಯನ್ನಿಟ್ಟು ಜನರನ್ನು ನ್ಯಾಯವಾಗಿ ಆಳುವ ವ್ಯಕ್ತಿಯು


ದಾವೀದನು ಸಮಸ್ತ ಇಸ್ರೇಲರನ್ನು ಆಳಿದನು. ದಾವೀದನು ಜನರಿಗೆ ನ್ಯಾಯವಾದ ಮತ್ತು ಸರಿಯಾದ ತೀರ್ಪುಗಳನ್ನು ಕೊಡುತ್ತಿದ್ದನು.


ನಿಮ್ಮ ಕುರಿಹಿಂಡುಗಳಲ್ಲಿ ಹತ್ತನೆಯ ಒಂದು ಭಾಗವನ್ನು ತೆಗೆದುಕೊಳ್ಳುವನು. “ಆಗ ನೀವು ರಾಜನಿಗೆ ಸೇವಕರಾಗುವಿರಿ;


ನೀವು ಬೆಳೆದ ಧಾನ್ಯಗಳಲ್ಲಿ ಮತ್ತು ದ್ರಾಕ್ಷಿಗಳಲ್ಲಿ ಅವನು ಹತ್ತನೆ ಒಂದು ಭಾಗವನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುತ್ತಾನೆ.


ನಾನು ಕಲ್ಲನ್ನು ನೆಟ್ಟಿರುವ ಈ ಸ್ಥಳವು ದೇವರ ಪವಿತ್ರಸ್ಥಳವಾಗುವುದು. ಇದಲ್ಲದೆ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತನೆಯ ಒಂದು ಭಾಗವನ್ನು ನಾನು ಆತನಿಗೆ ಕೊಡುತ್ತೇನೆ.”


ಹೀಗೆ ದೇವರು ತಾನೇ ನೀತಿವಂತನೆಂಬುದನ್ನು ಮತ್ತು ಯೇಸುವಿನಲ್ಲಿ ನಂಬಿಕೆಯಿಡುವ ಯಾವನನ್ನೇ ಆಗಲಿ ನೀತಿವಂತನನ್ನಾಗಿ ಮಾಡುತ್ತೇನೆಂಬದನ್ನು ನಿರೂಪಿಸಿದ್ದಾನೆ.


“ಮೇಲಿನಲೋಕಗಳಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ” ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು.


ಆಗ ಶಾಂತಿ ನೆಲೆಸುವದು. ಹೌದು, ಅಶ್ಶೂರದ ಸೈನ್ಯವು ನಮ್ಮ ದೇಶಕ್ಕೆ ಬಂದು ನಮ್ಮ ಮಹಾ ಕಟ್ಟಡಗಳನ್ನು ತುಳಿದುಹಾಕುವರು. ಆದರೆ ಇಸ್ರೇಲನ್ನು ಆಳುವಾತನು ಏಳು ಕುರುಬರನ್ನೂ ಎಂಟು ನಾಯಕರನ್ನೂ ಆರಿಸುವನು.


“ದನಗಳಲ್ಲಾಗಲಿ ಕುರಿಗಳಲ್ಲಾಗಲಿ ಪ್ರತಿ ಹತ್ತನೆಯ ಪಾಲನ್ನು ಯಾಜಕರು ತೆಗೆದುಕೊಳ್ಳುವರು. ಪ್ರತಿ ಹತ್ತನೆ ಪಶು ಯೆಹೋವನದಾಗಿರುವುದು.


ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)


ಮೆಲ್ಕಿಜೆದೇಕನು ಸಾಲೇಮಿನ ರಾಜನಾಗಿದ್ದನು ಮತ್ತು ಪರಾತ್ಪರನಾದ ದೇವರ ಯಾಜಕನಾಗಿದ್ದನು. ಅಬ್ರಹಾಮನು ರಾಜರುಗಳನ್ನು ಸೋಲಿಸಿ ಹಿಂದಿರುಗಿ ಬರುತ್ತಿರುವಾಗ ಅವನು ಅಬ್ರಹಾಮನನ್ನು ಸಂಧಿಸಿ ಆಶೀರ್ವದಿಸಿದನು.


ಮೆಲ್ಕಿಜೆದೇಕನ ತಂದೆತಾಯಿಗಳು ಯಾರೆಂಬುದಾಗಲಿ ಅವನು ಎಲ್ಲಿಂದ ಬಂದನೆಂಬುದಾಗಲಿ ಅವನು ಯಾವಾಗ ಹುಟ್ಟಿದನೆಂಬುದಾಗಲಿ ಅವನು ಯಾವಾಗ ಸತ್ತನೆಂಬುದಾಗಲಿ ಯಾರಿಗೂ ತಿಳಿದಿಲ್ಲ. ಅವನು ದೇವರ ಮಗನಂತೆ ಸದಾಕಾಲವೂ ಯಾಜಕನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು