ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”
ಕ್ರಿಸ್ತನು ದೇವರ ವಾಗ್ದಾನದಂತೆ ಯಾಜಕನಾದನು. ದೇವರು ಆತನಿಗೆ ಹೇಳಿದ್ದೇನೆಂದರೆ: “‘ನೀನು ಸದಾಕಾಲವೂ ಯಾಜಕನಾಗಿರುವೆ’ ಎಂದು ಪ್ರಭುವೆಂಬ ನಾನು ವಾಗ್ದಾನ ಮಾಡಿದೆನು. ಇದಕ್ಕಾಗಿ ನಾನೆಂದಿಗೂ ಪಶ್ಚಾತ್ತಾಪಪಡುವುದಿಲ್ಲ.”