Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:22 - ಪರಿಶುದ್ದ ಬೈಬಲ್‌

22 ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಶ್ರೇಷ್ಠವಾದ ಒಡಂಬಡಿಕೆಗೆ ಯೇಸುವೇ ಆಧಾರ ಎಂಬುದೇ ಇದರರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸು ಪ್ರತಿಜ್ಞೆಯೊಡನೆಯೇ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದ್ದರಿಂದಲೇ, ಯೇಸು ಅತ್ಯಂತ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರಪುರುಷರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೇಸು ಆಣೆಯೊಡನೆಯೇ ಯಾಜಕನಾದದರಿಂದ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದರಿಂದಲೇ ಯೇಸು ಎಷ್ಟೋ ಉತ್ತಮವಾದ ಒಡಂಬಡಿಕೆಗೆ ಹೊಣೆಗಾರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ದೆವಾನ್ ಅಪ್ಲ್ಯಾ ಲೊಕಾಂಚ್ಯಾ ವಾಂಗ್ಡಾ ಕರಲ್ಯಾ ಒಪ್ವಂದಾಕ್ ಜೆಜು ಕ್ರಿಸ್ತುಚ್ ಆಧಾರ್ ಮನ್ತಲೊ ಹೆಚೊ ಅರ್ಥ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:22
17 ತಿಳಿವುಗಳ ಹೋಲಿಕೆ  

ಅದೇ ರೀತಿಯಲ್ಲಿ ಅವರು ಊಟಮಾಡಿದ ಮೇಲೆ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಈ ದ್ರಾಕ್ಷಾರಸ ಸೂಚಿಸುತ್ತದೆ. ಈ ಹೊಸ ಒಡಂಬಡಿಕೆ ನನ್ನ ರಕ್ತದಿಂದ ಆರಂಭವಾಗುತ್ತದೆ. ನೀವು ಇದನ್ನು ಕುಡಿಯುವಾಗಲೆಲ್ಲಾ ನನ್ನನ್ನು ನೆನಸಿಕೊಳ್ಳವವರಾಗಿದ್ದೀರಿ” ಎಂದು ಹೇಳಿದನು.


“ನಾನು ಈ ಯುವಕನ ಜವಾಬ್ದಾರಿಯನ್ನು ವಹಿಸಿಕೊಂಡೆನು. ನಾನು ನನ್ನ ತಂದೆಗೆ, ‘ನಾನು ಇವನನ್ನು ಹಿಂದಕ್ಕೆ ಕರೆದುಕೊಂಡು ಬರದಿದ್ದರೆ ನನ್ನ ಜೀವಮಾನವೆಲ್ಲಾ ನೀನು ನನ್ನನ್ನು ದೂಷಿಸಬಹುದು’ ಎಂದು ಹೇಳಿದೆನು.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಅವನು ಸುರಕ್ಷಿತವಾಗಿರುವಂತೆ ನಾನು ನೋಡಿಕೊಳ್ಳುವೆನು. ನಾನು ಅವನಿಗೆ ಜವಾಬ್ದಾರನಾಗಿರುತ್ತೇನೆ. ನಾನು ಅವನನ್ನು ನಿನ್ನ ಬಳಿಗೆ ಮತ್ತೆ ಕರೆದುಕೊಂಡು ಬರದಿದ್ದರೆ, ನೀನು ಸದಾಕಾಲ ನನ್ನನ್ನು ದೂಷಿಸಬಹುದು.


ಅದೇ ರೀತಿಯಾಗಿ, ಊಟವಾದ ನಂತರ, ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಇದು ಸೂಚಿಸುತ್ತದೆ. ನಾನು ನಿಮಗಾಗಿ ಕೊಡುತ್ತಿರುವ ರಕ್ತದಿಂದ ಈ ಹೊಸ ಒಡಂಬಡಿಕೆ ಪ್ರಾರಂಭವಾಗುತ್ತದೆ” ಅಂದನು.


ಇದು ಹೊಸ ಒಡಂಬಡಿಕೆಯನ್ನು ಸ್ಥಾಪಿಸುವ ನನ್ನ ರಕ್ತ. ಇದು ಅನೇಕ ಜನರ ಪಾಪಗಳ ಕ್ಷಮೆಗಾಗಿ ಸುರಿಸಲ್ಪಡುವ ರಕ್ತ.


ಯೇಸು, “ಇದು ನನ್ನ ರಕ್ತ. ಒಡಂಬಡಿಕೆಯ ರಕ್ತ. ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


“ಆಗ ಭವಿಷ್ಯತ್ತಿನ ನಾಯಕನು ಬಹುಜನರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಆ ಒಪ್ಪಂದ ಒಂದು ವಾರದವರೆಗೆ ಮುಂದುವರೆಯುವದು. ಅರ್ಧವಾರದವರೆಗೆ ಯಜ್ಞ ಮತ್ತು ನೈವೇದ್ಯಗಳನ್ನು ನಿಲ್ಲಿಸಲಾಗುವುದು. ಒಬ್ಬ ಘಾತುಕನು ಬರುವನು. ಅವನು ಬಹುವಿನಾಶಕಾರಿ ಕೆಲಸಗಳನ್ನು ಮಾಡುವನು. ಆದರೆ ಆ ಘಾತುಕನನ್ನು ಮುಗಿಸಿಬಿಡಬೇಕೆಂದು ದೇವರ ಆಜ್ಞೆಯಾಗಿದೆ” ಎಂದು ಹೇಳಿದನು.


ಬೇರೊಬ್ಬನ ಸಾಲಕ್ಕೆ ನೀನು ಜಾಮೀನಾದರೆ, ನಿನ್ನ ಅಂಗಿಯನ್ನು ಕಳೆದುಕೊಳ್ಳುವೆ.


ನನ್ನ ಮಗನೇ, ಮತ್ತೊಬ್ಬನ ಸಾಲಕ್ಕೆ ನೀನು ಜಾಮೀನಾಗಬೇಡ. ಅವನು ಸಾಲ ತೀರಿಸಲಾಗದಿದ್ದರೆ ನಾನು ತೀರಿಸುತ್ತೇನೆ ಎಂದು ಪ್ರಮಾಣ ಮಾಡಿರುವೆಯಾ?


ನಿನ್ನ ಸೇವಕನಾದ ನನಗೆ ಸಹಾಯಮಾಡುವುದಾಗಿ ವಾಗ್ದಾನಮಾಡು. ನನಗೆ ಕೇಡುಮಾಡಲು ಆ ಗರ್ವಿಷ್ಠರಿಗೆ ಅವಕಾಶ ಕೊಡಬೇಡ.


ನಾನು ಪಾರಿವಾಳದಂತೆ ಕೂಗಿಕೊಂಡೆನು. ಪಕ್ಷಿಯಂತೆ ಅರಚಿಕೊಂಡೆನು. ನನ್ನ ಕಣ್ಣುಗಳು ಸ್ವರ್ಗದ ಕಡೆಗೆ ನೋಡುತ್ತಾ ಆಯಾಸಗೊಂಡವು. ನನ್ನ ಒಡೆಯನೇ, ನಾನು ತುಂಬಾ ಚಿಂತಾಕ್ರಾಂತನಾಗಿದ್ದೇನೆ. ನೀನು ನನಗೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡು.”


ಇದಲ್ಲದೆ ಇತರ ಯಾಜಕರಲ್ಲಿ ಮರಣದ ಕಾರಣದಿಂದ ಒಬ್ಬನೇ ಶಾಶ್ವತವಾಗಿ ಯಾಜಕನಾಗಿ ಮುಂದುವರೆಯಲಾಗಲಿಲ್ಲ. ಆದ್ದರಿಂದ ಅಲ್ಲಿ ಅನೇಕ ಮಂದಿ ಯಾಜಕರಿದ್ದರು.


ದೇವರು ಇದನ್ನು ಹೊಸ ಒಡಂಬಡಿಕೆ ಎಂದು ಕರೆದನು. ಆದ್ದರಿಂದ ಮೊದಲನೆ ಒಡಂಬಡಿಕೆಯನ್ನು ದೇವರು ಹಳೆಯದಾಗಿ ಮಾಡಿದನು. ಯಾವುದು ಹಳೆಯದಾಗಿ ಉಪಯೋಗಕ್ಕೆ ಬಾರದಾಗುತ್ತದೋ ಅದು ಅದೃಶ್ಯವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು