Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:27 - ಪರಿಶುದ್ದ ಬೈಬಲ್‌

27 ಆತನು ಬೇರೆ ಯಾಜಕರಂತಲ್ಲ. ಅವರಾದರೋ ಪ್ರತಿ ದಿನವೂ ಯಜ್ಞಗಳನ್ನು ಅರ್ಪಿಸಬೇಕು. ಅವರು ತಮ್ಮ ಸ್ವಂತ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಿದ ನಂತರ ಬೇರೆಯವರ ಪಾಪಗಳಿಗಾಗಿ ಅರ್ಪಿಸಬೇಕು. ಆದರೆ ಕ್ರಿಸ್ತನು ಹಾಗೆ ಮಾಡಬೇಕಾಗಿಲ್ಲ. ಆತನು ತನ್ನನ್ನೇ ಯಜ್ಞವಾಗಿ ಅರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇವರು ಮಿಕ್ಕ ಪ್ರಧಾನಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪಪರಿಹಾರಕ್ಕಾಗಿ ಸಮರ್ಪಣೆಮಾಡುವ ಲೇವಿಕ ಮಹಾಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸಬೇಕಾದ ಅವಶ್ಯವಿಲ್ಲ. ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಮೊದಲು ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಾರ್ಪಣೆ ಮಾಡುವ ಆ ಮಹಾಯಾಜಕರಂತೆ ಯೇಸು ಪ್ರತಿದಿನವೂ ಬಲಿ ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಇವರು ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡಾಗ ಅದನ್ನು ಒಂದೇ ಸಾರಿ ಮಾಡಿ ಮುಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಯಾಜಕ್ ಸದ್ದಿಬಿ ಬಲಿ ಭೆಟ್ವುಚೆ ಹೊಲ್ಲೆ ತೆನಿ ಅಪ್ಲ್ಯಾ ಸ್ವತಾಚ್ಯಾ ಪಾಪಾಕ್ನಿ ಬಲಿ ಭೆಟ್ವುನ್ ಮಾನಾ ಲೊಕಾಂಚ್ಯಾ ಪಾಪಾಕ್ನಿ ಬಲಿ ಭೆಟ್ವುಚೆ, ಹೊಲ್ಯಾರ್ ಜೆಜು ತೆಂಚ್ಯಾ ಸಾರ್ಕೊ ನ್ಹಯ್, ತೆನಿ ಅಪ್ನಾಕುಚ್ ಬಲಿ ಕರುನ್ ಕುರ್ಸಾರ್ ಒಪ್ಸುನ್ ದಿವ್ನ್ ಎಕುಚ್‍ದಾ ಬಲಿ ಕರ್‍ತಲೆ ಕಾಮಾ ಕರುನ್ ಸಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:27
23 ತಿಳಿವುಗಳ ಹೋಲಿಕೆ  

ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.


ಆತನು ಒಂದೇ ಒಂದು ಸಾರಿ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿದನು. ಆತನು ಹೋತಗಳ ಮತ್ತು ಹೋರಿಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತದಿಂದಲೇ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿ ನಮಗೆ ನಿತ್ಯಸ್ವಾತಂತ್ರ್ಯವನ್ನು ತಂದುಕೊಟ್ಟನು.


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ಪ್ರೀತಿಯಿಂದ ಬಾಳಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿದಂತೆ ನೀವೂ ಇತರರನ್ನು ಪ್ರೀತಿಸಿರಿ. ಕ್ರಿಸ್ತನು ನಮಗೋಸ್ಕರವಾಗಿ ತನ್ನನ್ನೇ ಪರಿಮಳದ ಕಾಣಿಕೆಯಾಗಿಯೂ ಯಜ್ಞವಾಗಿಯೂ ದೇವರಿಗೆ ಸಮರ್ಪಿಸಿಕೊಂಡನು.


ತಾನೂ ಬಲಹೀನನಾಗಿರುವುದರಿಂದ ಅವನು ಮನುಷ್ಯರ ಪಾಪಗಳಿಗಾಗಿಯೂ ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಗಳನ್ನು ಅರ್ಪಿಸುತ್ತಾನೆ.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ಹೌದು, ಕ್ರಿಸ್ತನು ಪಾಪದ ಶಕ್ತಿಯನ್ನು ಸೋಲಿಸುವುದಕ್ಕಾಗಿ ಒಂದೇ ಸಲ ಸತ್ತನು; ಅದು ಎಲ್ಲಾ ಕಾಲಕ್ಕೂ ಸಾಕಾಗಿದೆ. ಈಗ ಆತನಲ್ಲಿ ಹೊಸ ಜೀವಿತವಿದೆ. ದೇವರೊಂದಿಗೆ ಜೀವಿಸುವುದೇ ಆ ಹೊಸ ಜೀವಿತ.


ಪ್ರಧಾನಯಾಜಕನು ವರ್ಷಕ್ಕೊಮ್ಮೆ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವಾಗ ಅರ್ಪಿಸುವುದಕ್ಕಾಗಿ ಪಶುರಕ್ತವನ್ನು ತನ್ನೊಡನೆ ತೆಗೆದುಕೊಂಡು ಹೋಗುತ್ತಿದ್ದನು. ಆದರೆ ಅವನು ತನ್ನ ಸ್ವಂತ ರಕ್ತವನ್ನು ಅರ್ಪಿಸುತ್ತಿರಲಿಲ್ಲ. ಕ್ರಿಸ್ತನು ಪರಲೋಕಕ್ಕೆ ಹೋದದ್ದು, ಪ್ರಧಾನ ಯಾಜಕನು ಮತ್ತೆಮತ್ತೆ ರಕ್ತವನ್ನು ಅರ್ಪಿಸಿದಂತೆ ತನ್ನನ್ನು ಮತ್ತೆಮತ್ತೆ ಅರ್ಪಿಸಿಕೊಳ್ಳುವುದಕ್ಕಾಗಿಯಲ್ಲ.


“ಬಳಿಕ ಆರೋನನು ಹೋರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ಅರ್ಪಿಸುವನು. ಆರೋನನು ತನಗಾಗಿಯೂ ತನ್ನ ಕುಟುಂಬದವರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು. ಆರೋನನು ಹೋರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ವಧಿಸುವನು.


ಆದರೆ ಪ್ರಧಾನಯಾಜಕನು ಮಾತ್ರ ಎರಡನೆ ಕೊಠಡಿಯ ಒಳಗೆ ಹೋಗಬಹುದಿತ್ತು. ಅವನು ವರ್ಷಕ್ಕೊಮ್ಮೆ ಮಾತ್ರ ಅದರೊಳಗೆ ಹೋಗುತ್ತಿದ್ದನು. ಅವನು ತನ್ನೊಂದಿಗೆ ರಕ್ತವನ್ನು ತೆಗೆದುಕೊಳ್ಳದೆ ಎಂದೂ ಅದರೊಳಗೆ ಪ್ರವೇಶಿಸುತ್ತಿರಲಿಲ್ಲ. ತನಗೋಸ್ಕರವಾಗಿಯೂ ಜನರು ತಿಳಿಯದೆ ಮಾಡಿದ ಪಾಪಗಳಿಗಾಗಿಯೂ ಅವನು ಆ ರಕ್ತವನ್ನು ದೇವರಿಗೆ ಅರ್ಪಿಸುತ್ತಿದ್ದನು.


ಪ್ರತಿಯೊಬ್ಬ ಯೆಹೂದ್ಯ ಪ್ರಧಾನಯಾಜಕನೂ ಮನುಷ್ಯರೊಳಗಿಂದ ಆರಿಸಲ್ಪಟ್ಟು ದೇವರಿಗೆ ಸಂಬಂಧಿಸಿದ ಕಾರ್ಯಗಳನ್ನು ಮನುಷ್ಯರಿಗೋಸ್ಕರ ಮಾಡಲು ನೇಮಿಸಲ್ಪಡುತ್ತಾನೆ. ಆ ಯಾಜಕನು ಪಾಪಗಳಿಗಾಗಿ ದೇವರಿಗೆ ಕಾಣಿಕೆಗಳನ್ನೂ ಯಜ್ಞಗಳನ್ನೂ ಅರ್ಪಿಸಬೇಕು.


“ಬಳಿಕ ಆರೋನನು ಜನರಿಗೋಸ್ಕರವಾಗಿರುವ ಪಾಪಪರಿಹಾರಕ ಪಶುವಾದ ಹೋತವನ್ನು ವಧಿಸಬೇಕು. ಆರೋನನು ಈ ಹೋತದ ರಕ್ತವನ್ನು ತೆರೆಯ ಹಿಂಭಾಗದಲ್ಲಿರುವ ಕೋಣೆಗೆ ತೆಗೆದುಕೊಂಡು ಬರಬೇಕು. ಆರೋನನು ಹೋರಿಯ ರಕ್ತದಿಂದ ಮಾಡಿದಂತೆ ಹೋತದ ರಕ್ತದಿಂದಲೂ ಮಾಡಬೇಕು. ಆರೋನನು ಹೋತದ ರಕ್ತವನ್ನು ಕೃಪಾಸನದ ಮೇಲೂ ಮತ್ತು ಕೃಪಾಸನದ ಮುಂಭಾಗದಲ್ಲಿಯೂ ಚಿಮಿಕಿಸಬೇಕು.


ಬಳಿಕ ಆರೋನನು ಪಾಪಪರಿಹಾರಕ ಯಜ್ಞಕ್ಕೋಸ್ಕರ ಹೋರಿಯನ್ನು ಅರ್ಪಿಸಬೇಕು. ಈ ಪಾಪಪರಿಹಾರಕ ಯಜ್ಞವು ಅವನಿಗಾಗಿ ಇರುತ್ತದೆ. ಆರೋನನು ತನಗೂ ತನ್ನ ಕುಟುಂಬದವರಿಗೂ ಪ್ರಾಯಶ್ಚಿತ್ತ ಮಾಡಲು ಇದನ್ನು ಮಾಡಬೇಕು.


ನೀವು ಕ್ರಿಸ್ತನಲ್ಲಿ ಇತರ ಜನರೊಂದಿಗೆ (ಯೆಹೂದ್ಯರೊಂದಿಗೆ) ಕಟ್ಟಲ್ಪಡುತ್ತಿದ್ದೀರಿ. ದೇವರು ತನ್ನ ಆತ್ಮನ ಮೂಲಕ ವಾಸಿಸತಕ್ಕ ನಿವಾಸಸ್ಥಾನವಾಗಿ ನಿರ್ಮಿತರಾಗುತ್ತಿದ್ದೀರಿ.


ಚಾದೋಕನ ಸಂತತಿಯ ಯಾಜಕರ ಪಾಪಪರಿಹಾರಕ್ಕಾಗಿ ನೀನು ಒಂದು ಎಳೆ ಹೋರಿಯನ್ನು ಅರ್ಪಿಸು. ಇವರು ಲೇವಿಕುಲದ ಯಾಜಕರು. ಇವರು ನನಗೆ ಕಾಣಿಕೆಗಳನ್ನು ಅರ್ಪಿಸುವ ಸೇವೆ ಮಾಡುವವರಾಗಿರುತ್ತಾರೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಆತನು ಇನ್ನೂ ಭೂಮಿಯ ಮೇಲೆ ವಾಸಮಾಡುತ್ತಿದ್ದರೆ ಯಾಜಕನಾಗಿರುತ್ತಿರಲಿಲ್ಲ. ಕಾರಣವೇನೆಂದರೆ, ಧರ್ಮಶಾಸ್ತ್ರದ ಪ್ರಕಾರ ದೇವರಿಗೆ ಕಾಣಿಕೆಗಳನ್ನು ಅರ್ಪಿಸುವ ಯಾಜಕರು ಈಗಾಗಲೇ ಇಲ್ಲಿದ್ದಾರೆ.


ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು