Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:16 - ಪರಿಶುದ್ದ ಬೈಬಲ್‌

16 ಒಬ್ಬನು ಸಾಯುವ ಮೊದಲೇ ಉಯಿಲನ್ನು ಬರೆದಿಡುತ್ತಾನೆ. ಆದರೆ ಸತ್ತಿರುವಾತನೇ ಆ ಉಯಿಲನ್ನು ಬರೆದವನೆಂದು ಜನರು ಸಾಧಿಸಿ ತೋರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮರಣ ಶಾಸನವು ಇರುವಲ್ಲಿ ಆದನ್ನು ಬರೆಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಒಂದು ಮರಣ ಶಾಸನವು ಪರಿಣಾಮಕಾರಿಯಾಗಬೇಕಾದರೆ, ಅದನ್ನು ಬರೆದಾತನು ಸತ್ತಿದ್ದಾನೆಂಬುದು ಖಚಿತವಾಗಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವು ಪ್ರಸಿದ್ಧವಾಗಿರಬೇಕಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮರಣ ಶಾಸನವು ಎಲ್ಲಿದೆಯೋ ಅಲ್ಲಿ ಅದನ್ನು ಮಾಡಿಕೊಂಡಾತನ ಮರಣ ಅವಶ್ಯ ಎಂಬುದನ್ನು ರುಜುಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಎಕ್ಲೊ ಮರುಚ್ಯಾ ಪೈಲೆಚ್ ಅಪ್ಲಿ ಆಸ್ತಿ ಕೊನಾಕ್ ಜಾತಾ ಮನುನ್ ಲಿವ್ನ್ ಥವ್ತಾ, ಖರೆ ಮರಲ್ಲ್ಯಾ ಮಾನ್ಸಾನುಚ್ ತೆ ಲಿವಲ್ಲೆ ಮನುನ್ ಹುರಲ್ಯಾ ಲೊಕಾನಿ ಖರೆ ಕರುನ್ ದಾಕ್ವುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:16
8 ತಿಳಿವುಗಳ ಹೋಲಿಕೆ  

ಒಬ್ಬನು ದೇವರ ಎಲ್ಲಾ ಆಜ್ಞೆಗಳನ್ನು ಅನುಸರಿಸುತ್ತಿರಬಹುದು. ಆದರೆ ಅವನು ಒಂದು ಆಜ್ಞೆಗೆ ಅವಿಧೇಯನಾದರೆ ಅವನು ಧರ್ಮಶಾಸ್ತ್ರದ ಎಲ್ಲಾ ಆಜ್ಞೆಗಳನ್ನು ಮೀರಿದನೆಂಬ ಅಪರಾಧಕ್ಕೆ ಗುರಿಯಾಗುವನು.


ಆದಾಮನ ಸಂಬಂಧದಿಂದ ಎಲ್ಲರೂ ಸಾಯುತ್ತಾರೆ. ಇದೇರೀತಿ ಕ್ರಿಸ್ತನ ಸಂಬಂಧದಿಂದ ನಾವೆಲ್ಲರೂ ಮತ್ತೆ ಜೀವಂತರಾಗುತ್ತೇವೆ.


ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಒಬ್ಬ ಮನುಷ್ಯನು (ಆದಾಮ) ಮಾಡಿದ ಕೃತ್ಯದಿಂದ ಪಾಪವು ಲೋಕಕ್ಕೆ ಬಂದಿತು. ಆ ಪಾಪದೊಂದಿಗೆ ಮರಣವೂ ಬಂದಿತು. ಆದಕಾರಣವೇ ಎಲ್ಲಾ ಜನರು ಸಾಯಲೇಬೇಕು; ಏಕೆಂದರೆ ಎಲ್ಲಾ ಜನರು ಪಾಪ ಮಾಡಿದ್ದಾರೆ.


ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.


ಅದನ್ನು ಬರೆದವನು ಇನ್ನೂ ಬದುಕಿದ್ದರೆ ಅದಕ್ಕೆ ಬೆಲೆಯೇನೂ ಇಲ್ಲ. ಅದನ್ನು ಬರೆದಾತನು ಸತ್ತನಂತರ ಅದು ಉಪಯುಕ್ತವಾಗಿರುತ್ತದೆ.


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು