Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:2 - ಪರಿಶುದ್ದ ಬೈಬಲ್‌

2 ಈ ಸ್ಥಳವು ಗುಡಾರದ ಒಳಗಿತ್ತು. ಗುಡಾರದ ಮೊದಲ ಆವರಣವನ್ನು ಪವಿತ್ರ ಸ್ಥಳವೆಂದು ಕರೆಯುತ್ತಿದ್ದರು. ಪವಿತ್ರ ಸ್ಥಳದಲ್ಲಿ ದೀಪಸ್ತಂಭ, ಮೇಜು ಮತ್ತು ದೇವರಿಗೆ ಅರ್ಪಿಸಲ್ಪಟ್ಟ ರೊಟ್ಟಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂದರೆ, ಒಂದು ಗುಡಾರವನ್ನು ಕಟ್ಟುತ್ತಿದ್ದರು. ಅದರಲ್ಲಿ ಎರಡು ಭಾಗಗಳು ಇದ್ದವು. ಮೊದಲನೆಯ ಭಾಗಕ್ಕೆ ಪವಿತ್ರಸ್ಥಳ ಎಂದು ಹೆಸರು. ಅಲ್ಲಿ, ಒಂದು ದೀಪಸ್ತಂಭ ಮತ್ತು ಒಂದು ಮೇಜು ಇದ್ದವು. ಆ ಮೇಜಿನ ಮೇಲೆ ಅರ್ಪಣೆಯ ನೈವೇದ್ಯ ರೊಟ್ಟಿಗಳನ್ನು ಇಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಂದರೆ ಒಂದು ಗುಡಾರವು ಕಟ್ಟಲ್ಪಟ್ಟಿತು; ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮರ್ಪಿಸಿದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರಸ್ಥಾನ ಎಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದರೊಳಗೆ ಒಂದು ಗುಡಾರವು ಕಟ್ಟಲಾಗಿತ್ತು. ಅದರ ಪ್ರಥಮ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು. ಅದು ಪವಿತ್ರ ಸ್ಥಳ ಎಂದು ಕರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೊ ಜಾಗೊ ಬಿರಾಡಾಚ್ಯಾ ಭುತ್ತುರ್ ಬಲ್‍ಯಿತ್ ಹೊತ್ತೊ, ತ್ಯಾ ಘರಾಚ್ಯಾ ಪೈಲೆಚ್ಯಾ ಖೊಲಿಕ್ ಪವಿತ್ರ್ ಜಾಗೊ ಮನುನ್ ತ್ಯಾ ಪವಿತ್ರ್ ಜಾಗ್ಯಾರ್ ಚಿಮ್ನಿಚೊ ಖಾಂಬೊ ಮೆಜ್ ಅನಿ ದೆವಾಕ್ ಮನುನ್ ಭೆಟ್ವಲ್ಲಿ ಭಾಕ್ರಿಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:2
21 ತಿಳಿವುಗಳ ಹೋಲಿಕೆ  

ಬಳಿಕ ಮೇಜನ್ನು ಒಳಗೆ ತರಿಸಿ ಮೇಜಿನ ಮೇಲಿರಬೇಕಾದ ವಸ್ತುಗಳನ್ನು ಅದರ ಮೇಲಿರಿಸು. ದೀಪಸ್ತಂಭವನ್ನು ಗುಡಾರದಲ್ಲಿ ಇರಿಸು. ದೀಪಸ್ತಂಭದಲ್ಲಿ ಸರಿಯಾದ ಜಾಗಗಳಲ್ಲಿ ಹಣತೆಗಳನ್ನು ಇರಿಸು.


“ಪರದೆಯ ಇನ್ನೊಂದು ಭಾಗದಲ್ಲಿ ನೀನು ಮಾಡಿಸಿದ ವಿಶೇಷ ಮೇಜನ್ನು ಇಡಬೇಕು. ಮೇಜು ಪರಿಶುದ್ಧ ಗುಡಾರದ ಉತ್ತರಭಾಗದಲ್ಲಿರಬೇಕು. ಬಳಿಕ ದೀಪಸ್ತಂಭವನ್ನು ದಕ್ಷಿಣಭಾಗದಲ್ಲಿಡಬೇಕು. ಇದು ಮೇಜಿನ ಎದುರಿಗೆ ಇರಬೇಕು.


“ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ದೇವದರ್ಶನಗುಡಾರವಾದ ಪವಿತ್ರಗುಡಾರವನ್ನು ಎತ್ತಿನಿಲ್ಲಿಸು.


ಚಿನ್ನದ ಬಳೆಗಳ ಕೆಳಗೆ ಪರದೆಯನ್ನು ಹಾಕಿಸಬೇಕು; ಪರದೆಯ ಹಿಂಭಾಗದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಬೇಕು. ಈ ಪರದೆಯು ಪವಿತ್ರ ಸ್ಥಳವನ್ನು ಮಹಾಪವಿತ್ರ ಸ್ಥಳದಿಂದ ಪ್ರತ್ಯೇಕಿಸುವುದು.


“ನಾನು ನಿನಗೆ ಆಜ್ಞಾಪಿಸಿದ ಇವುಗಳನ್ನೆಲ್ಲ ಆರೋನ ಮತ್ತು ಅವನ ಪುತ್ರರಿಗೋಸ್ಕರ ಮಾಡು. ಅವರನ್ನು ಯಾಜಕರನ್ನಾಗಿ ನೇಮಿಸುವ ಸಮಾರಂಭವು ಏಳು ದಿನಗಳವರೆಗೆ ನಡೆಯಬೇಕು.


ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಆರೋನನು ಮತ್ತು ಅವನ ಗಂಡುಮಕ್ಕಳು ಅಭಿಷೇಕಿಸಲ್ಪಟ್ಟ ಮತ್ತು ಪ್ರತ್ಯೇಕಿಸಲ್ಪಟ್ಟ ಯಾಜಕರಾಗಿ ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡಲು ಅವರು ಮಾಡತಕ್ಕದ್ದೇನೆಂಬುದನ್ನು ನಾನೀಗ ಹೇಳುವೆನು. ಯಾವ ಅಂಗದೋಷವಿಲ್ಲದ ಒಂದು ಹೋರಿಮರಿಯನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.


“ನೀನು ಜಾಲೀಮರದಿಂದ ಮೇಜನ್ನು ಮಾಡಬೇಕು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು.


ನೈವೇದ್ಯದ ರೊಟ್ಟಿಗಳನ್ನು ಮೇಜಿನ ಮೇಲೆ ನನ್ನ ಮುಂದೆ ಇಡು. ಅವು ಅಲ್ಲಿ ನನ್ನ ಮುಂದೆ ಯಾವಾಗಲೂ ಇರಬೇಕು.


“ಬಳಿಕ ಒಂದು ದೀಪಸ್ತಂಭವನ್ನು ಶುದ್ಧಬಂಗಾರದಿಂದ ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ಕಸೂತಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿದ್ದು ಪುಷ್ಪಪಾತ್ರೆಗಳಂತೆಯೂ ಅಲಂಕಾರವಾಗಿ ಕೆತ್ತಲ್ಪಡಬೇಕು.


ಯೆಹೋವನು ಮೋಶೆಗೆ, “ಪವಿತ್ರಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳನ್ನು ನಾರುಬಟ್ಟೆ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರದಿಂದ ಮಾಡಿಸಬೇಕು. ನುರಿತ ಕೆಲಸಗಾರನು ಪರದೆಗಳಲ್ಲಿ ರೆಕ್ಕೆಗಳಿರುವ ಕೆರೂಬಿಗಳ ಚಿತ್ರವನ್ನು ಕಸೂತಿ ಹಾಕಬೇಕು.


ಜನರು ದೀಪವನ್ನು ಪಾತ್ರೆಯ ಕೆಳಗೆ ಮುಚ್ಚಿಡುವುದಿಲ್ಲ. ಜನರು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಮನೆಯಲ್ಲಿರುವವರಿಗೆಲ್ಲಾ ಬೆಳಕು ಪ್ರಕಾಶಿಸುವುದು.


ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.


ಪ್ರಧಾನಯಾಜಕನು ವರ್ಷಕ್ಕೊಮ್ಮೆ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವಾಗ ಅರ್ಪಿಸುವುದಕ್ಕಾಗಿ ಪಶುರಕ್ತವನ್ನು ತನ್ನೊಡನೆ ತೆಗೆದುಕೊಂಡು ಹೋಗುತ್ತಿದ್ದನು. ಆದರೆ ಅವನು ತನ್ನ ಸ್ವಂತ ರಕ್ತವನ್ನು ಅರ್ಪಿಸುತ್ತಿರಲಿಲ್ಲ. ಕ್ರಿಸ್ತನು ಪರಲೋಕಕ್ಕೆ ಹೋದದ್ದು, ಪ್ರಧಾನ ಯಾಜಕನು ಮತ್ತೆಮತ್ತೆ ರಕ್ತವನ್ನು ಅರ್ಪಿಸಿದಂತೆ ತನ್ನನ್ನು ಮತ್ತೆಮತ್ತೆ ಅರ್ಪಿಸಿಕೊಳ್ಳುವುದಕ್ಕಾಗಿಯಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು