Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:22 - ಪರಿಶುದ್ದ ಬೈಬಲ್‌

22 ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಎಂದೇ, ಧರ್ಮಶಾಸ್ತ್ರದ ಪ್ರಕಾರ ಹೆಚ್ಚುಕಡಿಮೆ ಎಲ್ಲವೂ ರಕ್ತದಿಂದಲೇ ಶುದ್ಧೀಕರಣ ಹೊಂದುತ್ತವೆ. ರಕ್ತಧಾರೆ ಇಲ್ಲದೆ ಪಾಪಪರಿಹಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಧರ್ಮಶಾಸ್ತ್ರದ ಪ್ರಕಾರ ಸ್ವಲ್ಪಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತಧಾರೆಯಿಲ್ಲದೆ ಪಾಪಪರಿಹಾರ ಉಂಟಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೀಗೆ ದೇವರ ನಿಯಮದ ಪ್ರಕಾರ ಎಲ್ಲವೂ ರಕ್ತದಿಂದಲೇ ಶುದ್ಧಿಯಾಗಬೇಕು. ರಕ್ತಧಾರೆ ಇಲ್ಲದೆ ಪಾಪಪರಿಹಾರವು ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಲೈ ಕರುನ್ ಹರ್ ಎಕ್ ರಗ್ತಾನುಚ್ ನಿತಳ್ ಹೊವ್ಚೆ ಮನುನ್ ಪವಿತ್ರ್ ಪುಸ್ತಕ್ ಸಾಂಗ್ತಾ ರಗಾತ್ ನಸ್ತಾನಾ ಪಾಪಾಚಿ ಸುಟ್ಕಾ ಹೊವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:22
14 ತಿಳಿವುಗಳ ಹೋಲಿಕೆ  

ಯಾಕೆಂದರೆ ದೇಹದ ಜೀವ ರಕ್ತದಲ್ಲಿದೆ. ನೀವು ನಿಮಗೋಸ್ಕರವಾಗಿ ಯಜ್ಞವೇದಿಕೆಯ ಮೇಲೆ ಪ್ರಾಯಶ್ಚಿತ್ತ ಮಾಡಲಿ ಎಂದು ನಾನು ಅದನ್ನು ನಿಮಗೆ ಕೊಟ್ಟಿದ್ದೇನೆ. ನೀವು ನಿಮಗೋಸ್ಕರವಾಗಿ ಪ್ರಾಯಶ್ಚಿತ್ತ ಮಾಡಲು ಈ ನಿಯಮಗಳನ್ನು ಉಪಯೋಗಿಸಬೇಕು. ಒಬ್ಬನ ಜೀವಕ್ಕೆ ರಕ್ತವೇ ಪ್ರಾಯಶ್ಚಿತ್ತವಾಗಿದೆ. ಜೀವಿಯೊಂದನ್ನು ಕೊಂದಿದ್ದರ ಬೆಲೆಯಾಗಿ ನೀವು ನನಗೆ ಆ ರಕ್ತವನ್ನು ಕೊಡಬೇಕು.


ಬಳಿಕ ಯಾಜಕನು ಯೆಹೋವನ ಸನ್ನಿಧಿಗೆ ಹೋಗಿ ಅವನನ್ನು ಶುದ್ಧಿಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.”


ಯಾಜಕನು ಸಮಾಧಾನಯಜ್ಞಗಳಲ್ಲಿ ಕುರಿಮರಿಯ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಈ ಕುರಿಮರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸುವ ಸಮರ್ಪಣೆಯಂತೆ ವೇದಿಕೆಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಅವನು ಅಂಗದೋಷವಿಲ್ಲದ ಮತ್ತು ಸರಿಯಾದ ಬೆಲೆಬಾಳುವ ಟಗರನ್ನು ಯಾಜಕನ ಬಳಿಗೆ ತರಬೇಕು. ಟಗರು ದೋಷಪರಿಹಾರಕ ಯಜ್ಞವಾಗಿರುವುದು. ಹೀಗೆ ಯಾಜಕನು ತಿಳಿಯದೆ ಮಾಡಿದ ಪಾಪದಿಂದ ಅವನನ್ನು ಶುದ್ಧಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.


“ಯಾಜಕನು ದೋಷಪರಿಹಾರಕ ಯಜ್ಞಪಶುವಿನ ರಕ್ತದಿಂದ ಸ್ವಲ್ಪವನ್ನು ತೆಗೆದುಕೊಂಡು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.


ಯಾಜಕನು ಸಜೀವವಾದ ಎರಡನೆಯ ಪಕ್ಷಿಯನ್ನು, ದೇವದಾರು ಮರದ ತುಂಡನ್ನು, ಕೆಂಪುಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡವನ್ನು ತೆಗೆದುಕೊಳ್ಳಬೇಕು. ಸೆಲೇ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಜೀವಂತವಾಗಿರುವ ಪಕ್ಷಿಯನ್ನು ಮತ್ತು ಇತರ ವಸ್ತುಗಳನ್ನು ಅದ್ದಬೇಕು.


ತರುವಾಯ ಯಾಜಕನು ಎರಡನೆಯ ಪಕ್ಷಿಯನ್ನು ಸರ್ವಾಂಗಹೋಮದ ವಿಧಿಗಳಿಗನುಸಾರವಾಗಿ ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಅವನನ್ನು ಕ್ಷಮಿಸುವನು.


ಹೋತದ ಕೊಬ್ಬನ್ನೆಲ್ಲಾ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಸಮಾಧಾನಯಜ್ಞವಾಗಿದೆ. ಕೊಬ್ಬನ್ನು ಹೋಮಮಾಡುವಂತೆ ಅದನ್ನು ಹೋಮಮಾಡಬೇಕು. ಹೀಗೆ ಯಾಜಕನು ಅಧಿಪತಿಯನ್ನು ಶುದ್ಧಗೊಳಿಸುವನು. ಆಗ ದೇವರು ಆ ಅಧಿಪತಿಯನ್ನು ಕ್ಷಮಿಸುವನು.


ಯಾಜಕನು ಪಾಪಪರಿಹಾರಕ ಯಜ್ಞದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಈ ಭಾಗಗಳನ್ನು ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು.


ಬಳಿಕ ದೋಷಪರಿಹಾರಕ ಯಜ್ಞವಾದ ಕುರಿಮರಿಯನ್ನು ಯಾಜಕನು ವಧಿಸುವನು. ಯಾಜಕನು ದೋಷಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧೀಕರಿಸಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.


ಅವನು ಹಿಟ್ಟನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಒಂದು ಹಿಡಿಹಿಟ್ಟನ್ನು ಅದರಿಂದ ತೆಗೆದು ದೇವಾರ್ಪಿತವಾಯಿತೆಂದು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಹೋಮಮಾಡುವನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಯಾಗಿರುವುದು. ಅದು ಪಾಪಪರಿಹಾರಕ ಸಮರ್ಪಣೆಯಾಗಿದೆ.


“ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅವನು ಶಕ್ತನಾಗಿಲ್ಲದಿದ್ದರೆ, ಆಗ ಅವನು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ತರಬೇಕು. ಇದು ಅವನ ಪಾಪಪರಿಹಾರಕ ಯಜ್ಞವಾಗಿರುವುದು. ಅವನು ಹಿಟ್ಟಿಗೆ ಎಣ್ಣೆಯನ್ನು ಹಾಕಬಾರದು. ಅವನು ಅದರ ಮೇಲೆ ಸುಗಂಧ ಧೂಪವನ್ನು ಇಡಬಾರದು, ಯಾಕೆಂದರೆ ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.


ಆಗ ಅವನು ನನಗೆ, “ನರಪುತ್ರನೇ, ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಯಜ್ಞವೇದಿಯ ಕ್ರಮಗಳು ಯಾವುದೆಂದರೆ, ಯಜ್ಞವೇದಿಯನ್ನು ಕಟ್ಟುವಾಗ ಸರ್ವಾಂಗಹೋಮ ಮತ್ತು ಅದರ ಮೇಲೆ ರಕ್ತ ಚಿಮುಕಿಸುವದಕ್ಕೆ ಈ ಕ್ರಮಗಳನ್ನು ಅನುಸರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು