Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:27 - ಪರಿಶುದ್ದ ಬೈಬಲ್‌

27 ಪ್ರತಿಯೊಬ್ಬರೂ ಒಂದೇಸಾರಿ ಸಾಯುವರು. ಅನಂತರ ಅವರಿಗೆ ನ್ಯಾಯತೀರ್ಪಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಒಂದೇ ಸಾರಿ ಸಾಯುವದೂ ಆಮೇಲೆ ನ್ಯಾಯತೀರ್ಪೂ ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ ಹಾಗೆಯೇ ಕ್ರಿಸ್ತನು ಸಹ ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತನಾದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಹರ್ ಎಕ್ಲೊಬಿ ಎಗ್ದಾಚ್ ಮರ್‍ತಲೊ ಮಾನಾ ತೆಂಕಾ ದೆವಾಚ್ಯಾ ಇದ್ರಾಕ್ ನ್ಯಾಯ್ ನಿರ್‍ನಯ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:27
28 ತಿಳಿವುಗಳ ಹೋಲಿಕೆ  

ನಾವೆಲ್ಲರೂ ನ್ಯಾಯ ವಿಚಾರಣೆಗಾಗಿ ಕ್ರಿಸ್ತನ ಮುಂದೆ ನಿಂತುಕೊಳ್ಳಲೇಬೇಕು. ಪ್ರತಿಯೊಬ್ಬನು ಇಹಲೋಕದ ದೇಹದಲ್ಲಿ ವಾಸವಾಗಿದ್ದಾಗ ಮಾಡಿದ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಪ್ರತಿಫಲವನ್ನು ಹೊಂದುವನು.


ನಿನ್ನ ದೇಹ ಭೂಮಿಯಿಂದ ಬಂದಿದೆ. ನೀನು ಸತ್ತಾಗ ಅದು ಮತ್ತೆ ಭೂಮಿಯ ಪಾಲಾಗುವುದು. ಆದರೆ ನಿನ್ನ ಆತ್ಮವು ದೇವರಿಂದ ಬಂದಿದೆ. ನಿನ್ನ ದೇಹವು ಸತ್ತ ಮೇಲೆ, ನಿನ್ನ ಆತ್ಮವು ಮತ್ತೆ ದೇವರ ಬಳಿಗೆ ಹೋಗುವುದು.


ನಾವೆಲ್ಲ ಎಂದಾದರೂ ಒಂದು ದಿನ ಸಾಯುತ್ತೇವೆ ಎನ್ನುವುದು ನಿಜ. ನಾವೆಲ್ಲ ನೆಲದ ಮೇಲೆ ಚೆಲ್ಲಿದ ನೀರಿನಂತಿದ್ದೇವೆ. ಈ ನೀರನ್ನು ನೆಲದಿಂದ ಮತ್ತೆ ಒಟ್ಟುಗೂಡಿಸುವುದು ಯಾವ ವ್ಯಕ್ತಿಯಿಂದಲೂ ಸಾಧ್ಯವಿಲ್ಲ. ಆದರೆ ಜೀವವನ್ನು ತೆಗೆದುಬಿಡಲು ದೇವರು ಇಚ್ಛಿಸುವುದಿಲ್ಲ. ಬಲಾತ್ಕಾರವಾಗಿ ಹೊರಗೆ ನೂಕಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನದೇ ಆದ ಉಪಾಯವಿದೆ.


ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”


ಜೀವಿತರಿಗೆ ಸಾಯುತ್ತೇವೆಂಬ ತಿಳುವಳಿಕೆಯಿದೆ. ಆದರೆ ಸತ್ತವರಿಗೆ ಯಾವ ತಿಳುವಳಿಕೆಯೂ ಇಲ್ಲ. ಸತ್ತವರಿಗೆ ಯಾವ ಪ್ರತಿಫಲವೂ ಇಲ್ಲ. ಜನರು ಅವರನ್ನು ಬೇಗನೆ ಮರೆತುಬಿಡುವರು.


ಪ್ರಭುವು ಪ್ರತಿಯೊಬ್ಬರಿಗೂ ನ್ಯಾಯತೀರಿಸುತ್ತಾನೆ. ಭಕ್ತಿಹೀನರು ತನಗೆ ವಿರುದ್ಧವಾಗಿ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತನಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಆತನು ಬರುತ್ತಾನೆ.”


ಜೀವಂತರಾಗಿರುವ ಜನರಿಗೂ ಸತ್ತುಹೋಗಿರುವ ಜನರಿಗೂ ನ್ಯಾಯತೀರಿಸುವಾತನು ಕ್ರಿಸ್ತ ಯೇಸುವೇ. ಆತನು ತನ್ನ ರಾಜ್ಯವನ್ನು ಹೊಂದಿದ್ದಾನೆ. ಆತನು ಮತ್ತೆ ಬರುವನು. ಆದ್ದರಿಂದ ಯೇಸು ಕ್ರಿಸ್ತನ ಮತ್ತು ದೇವರ ಸನ್ನಿಧಿಯಲ್ಲಿ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,


ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ.


ಒಬ್ಬ ಮನುಷ್ಯನು (ಆದಾಮ) ಮಾಡಿದ ಕೃತ್ಯದಿಂದ ಪಾಪವು ಲೋಕಕ್ಕೆ ಬಂದಿತು. ಆ ಪಾಪದೊಂದಿಗೆ ಮರಣವೂ ಬಂದಿತು. ಆದಕಾರಣವೇ ಎಲ್ಲಾ ಜನರು ಸಾಯಲೇಬೇಕು; ಏಕೆಂದರೆ ಎಲ್ಲಾ ಜನರು ಪಾಪ ಮಾಡಿದ್ದಾರೆ.


ಮನುಷ್ಯರ ಮತ್ತು ಪ್ರಾಣಿಗಳ ದೇಹಗಳೆಲ್ಲ ಒಂದೇ ಸ್ಥಳಕ್ಕೆ ಹೋಗುತ್ತವೆ. ಮನುಷ್ಯರು ಮಣ್ಣಿನಿಂದ ಬಂದರು. ಕೊನೆಗೆ ಅವರು ಮಣ್ಣಿಗೇ ಹೋಗುವರು. ಪ್ರಾಣಿಗಳು ಮಣ್ಣಿನಿಂದ ಬಂದವು; ಕೊನೆಗೆ ಅವು ಮಣ್ಣಿಗೆ ಹೋಗುತ್ತವೆ.


ಮನುಷ್ಯನ ದಿನಗಳು ಇಷ್ಟೇ ಎಂದು ನಿರ್ಣಯವಾಗಿದೆ; ಅವನ ತಿಂಗಳುಗಳನ್ನು ನೀನು ನಿರ್ಣಯಿಸಿರುವೆ. ಅವನ ಆಯುಷ್ಯಕ್ಕೆ ದಾಟಲಾರದ ಮೇರೆಯನ್ನು ಹಾಕಿರುವೆ.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ಆ ಸಮಯದಲ್ಲಿ ನಮಗೆ ದೀಕ್ಷಾಸ್ನಾನ, ಹಸ್ತಾರ್ಪಣ, ಸತ್ತವರ ಪುನರುತ್ಥಾನ ಮತ್ತು ನಿತ್ಯವಾದ ನ್ಯಾಯತೀರ್ಪು ಇವುಗಳನ್ನು ಕುರಿತು ಬೋಧಿಸಲಾಯಿತು. ಆದರೆ ಈಗ ನಾವು ಪೂರ್ಣ ತಿಳುವಳಿಕೆಗೆ ಹೋಗುವುದು ಅಗತ್ಯವಾಗಿದೆ.


ಮರಣ ಹೊಂದದೆ ಚಿರಂಜೀವಿಯಾಗಿರುವವನು ಯಾರೂ ಇಲ್ಲ. ಯಾವ ವ್ಯಕ್ತಿಯೂ ಸಮಾಧಿಯಿಂದ ತಪ್ಪಿಸಿಕೊಳ್ಳಲಾರನು.


ನೀನು ನನ್ನನ್ನು ಮರಣಕ್ಕೀಡು ಮಾಡಿರುವುದು ನನಗೆ ಗೊತ್ತಿದೆ. ಜೀವಿಸಿರುವ ಪ್ರತಿಯೊಬ್ಬನೂ ಸಾಯಲೇಬೇಕು.


ಜೀವಸ್ವರೂಪನಾದ ಒಬ್ಬನು ನನ್ನ ಪರವಾಗಿ ವಾದಿಸುತ್ತಾನೆಂದು ನನಗೆ ಗೊತ್ತಿದೆ; ಕೊನೆಯಲ್ಲಿ, ಆತನು ಭೂಮಿಯ ಮೇಲೆ ನಿಂತುಕೊಂಡು ನನಗೋಸ್ಕರ ವಾದಿಸುವನು.


ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು.


ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.


ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.


ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.


ಹುಟ್ಟುವ ಸಮಯ, ಸಾಯುವ ಸಮಯ. ನೆಡುವ ಸಮಯ, ಸಸಿಗಳನ್ನು ಕೀಳುವ ಸಮಯ.


ನಾವು ಪಾಪಗಳಲ್ಲಿಯೇ ಮುಂದುವರಿದರೆ, ನ್ಯಾಯತೀರ್ಪಿನ ಭಯದಲ್ಲಿ ಮತ್ತು ದೇವರ ವಿರುದ್ಧವಾಗಿ ಜೀವಿಸುವವರನ್ನು ದಹಿಸುವ ಭಯಂಕರ ಬೆಂಕಿಯ ಭಯದಲ್ಲಿ ಜೀವಿಸಬೇಕಾಗುತ್ತದೆ.


ಹೀಗೆ ಪ್ರೀತಿಯು ನಮ್ಮಲ್ಲಿ ಪರಿಪೂರ್ಣವಾಗುವುದರಿಂದ ದೇವರು ನಮಗೆ ತೀರ್ಪು ನೀಡುವ ದಿನದಂದು ನಾವು ನಿರ್ಭಯದಿಂದಿರುತ್ತೇವೆ. ಈ ಲೋಕದಲ್ಲಿ ನಾವು ಆತನಂತೆಯೇ (ಕ್ರಿಸ್ತನು ಅಥವಾ ದೇವರು) ಇರುವುದರಿಂದ ನಾವು ಧೈರ್ಯದಿಂದಿರುತ್ತೇವೆ.


ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು