Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:3 - ಪರಿಶುದ್ದ ಬೈಬಲ್‌

3 ಎರಡನೆ ತೆರೆಯ ಹಿಂದೆ “ಮಹಾ ಪವಿತ್ರಸ್ಥಳ”ವೆಂದು ಕರೆಸಿಕೊಳ್ಳುವ ಒಂದು ಕೊಠಡಿಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮತ್ತು ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲಾಗುತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದರ ಎರಡನೆಯ ಭಾಗಕ್ಕೆ ಗರ್ಭಗುಡಿ ಎಂದು ಹೆಸರು. ಈ ಎರಡು ಭಾಗಗಳ ನಡುವೆ ತೆರೆಯಿತ್ತು. ಗರ್ಭಗುಡಿಯನ್ನು ಈ ತೆರೆ ಮರೆಮಾಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಾನವೆನಿಸಿಕೊಳ್ಳುವ ಇನ್ನೊಂದು ಭಾಗವಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಎರಡನೆಯ ತೆರೆಯ ಆಚೆ ಅತಿ ಪವಿತ್ರ ಸ್ಥಳ ಎಂದು ಕರೆಯಲಾದ ಗುಡಾರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದೊನ್ವ್ಯಾ ಫಡ್ದ್ಯಾಚ್ಯಾ ಫಾಟಿ ಆಗ್ದಿ ಪವಿತ್ರ್ ಜಾಗೊ ಮನ್ವುನ್ ಘೆತಲಿ ಖೊಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:3
15 ತಿಳಿವುಗಳ ಹೋಲಿಕೆ  

ಆಗ ದೇವಾಲಯದ ತೆರೆಯು ಮೇಲ್ಗಡೆಯಿಂದ ತಳಭಾಗದವರೆಗೂ ಹರಿದು ಎರಡು ಭಾಗವಾಯಿತು. ಭೂಮಿಯು ನಡುಗಿತು. ಬಂಡೆಗಳು ಒಡೆದುಹೋದವು.


ಬಳಿಕ ಮೋಶೆಯು ಪವಿತ್ರಪೆಟ್ಟಿಗೆಯನ್ನು ಪವಿತ್ರಗುಡಾರದೊಳಗೆ ತಂದನು. ಅದನ್ನು ಸಂರಕ್ಷಿಸುವುದಕ್ಕಾಗಿ ಸರಿಯಾದ ಸ್ಥಳದಲ್ಲಿ ಪರದೆಯನ್ನು ಹಾಕಿದನು. ಹೀಗೆ ಒಡಂಬಡಿಕೆ ಪೆಟ್ಟಿಗೆಯನ್ನು ಪರದೆಯ ಹಿಂಭಾಗದಲ್ಲಿರಿಸಿ ಸಂರಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು.


ಪವಿತ್ರಗುಡಾರದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡು. ಪೆಟ್ಟಿಗೆಯನ್ನು ಪರದೆಯಿಂದ ಮುಚ್ಚಿಸು.


ಪವಿತ್ರಾತ್ಮನು ಆ ಎರಡು ಪ್ರತ್ಯೇಕವಾದ ಕೊಠಡಿಗಳ ಮೂಲಕ ನಮಗೆ ತಿಳಿಸುವುದೇನೆಂದರೆ, ಮೊದಲನೆ ಕೊಠಡಿಯು ಅಲ್ಲಿ ಇರುವವರೆಗೂ ಮಹಾ ಪವಿತ್ರಸ್ಥಳಕ್ಕೆ ಹೋಗುವ ಮಾರ್ಗವು ತೆರೆಯಲೇ ಇಲ್ಲ.


ಆಗ ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಅದರ ಸರಿಯಾದ ಸ್ಥಳದಲ್ಲಿ ಇಟ್ಟರು. ಇದು ಆಲಯದ ಮಹಾ ಪವಿತ್ರಸ್ಥಳವಾಗಿತ್ತು. ಒಡಂಬಡಿಕೆಯ ಪೆಟ್ಟಿಗೆಯನ್ನು ಕೆರೂಬಿಗಳ ರೆಕ್ಕೆಗಳ ಅಡಿಯಲ್ಲಿ ಇಟ್ಟರು.


ಈ ನಿರೀಕ್ಷೆಯು ನಮ್ಮ ಆತ್ಮಗಳನ್ನು ಅಪಾಯದಲ್ಲಿ ಕೊಚ್ಚಿಕೊಂಡು ಹೋಗದಂತೆ ಕಾಪಾಡುವ ಬಲವಾದ ಸ್ಥಿರವಾದ ಲಂಗರಿನಂತಿದೆ. ಅದು ಸ್ವರ್ಗದಾಲಯದ ತೆರೆಯ ಮರೆಯಲ್ಲಿರುವ ಮಹಾ ಪವಿತ್ರಸ್ಥಳದ ಒಳಕ್ಕೆ ಪ್ರವೇಶಿಸುತ್ತದೆ.


ಆದರೆ ಎಲ್ಲಾ ಜನಾಂಗಗಳನ್ನು ಮತ್ತು ಜನರನ್ನು ಮುಚ್ಚುವ ಒಂದು ಮುಸುಕು ಇದೆ. ಆ ಮುಸುಕು ಯಾವದೆಂದರೆ ಮರಣ.


ಸೊಲೊಮೋನನು ದೇವಾಲಯಕ್ಕೆ ನೀಲ, ಧೂಮ್ರ ಮತ್ತು ಕೆಂಪು ಬಟ್ಟೆ ಮತ್ತು ಬೆಲೆಬಾಳುವ ನಾರುಬಟ್ಟೆಗಳಿಂದ ಪರದೆಗಳನ್ನು ತಯಾರಿಸಿ ಅದರ ಮೇಲೆ ಕೆರೂಬಿಯರ ಚಿತ್ರವನ್ನು ಕಸೂತಿ ಮಾಡಿಸಿದನು.


“ಇಸ್ರೇಲರು ಹೊಸ ಸ್ಥಳಕ್ಕೆ ಪ್ರಯಾಣ ಮಾಡುವಾಗ ಆರೋನನೂ ಅವನ ಪುತ್ರರೂ ದೇವದರ್ಶನಗುಡಾರದೊಳಕ್ಕೆ ಹೋಗಿ, ಮಹಾ ಪವಿತ್ರ ಸ್ಥಳವನ್ನು ಮರೆಮಾಡುವ ತೆರೆಯನ್ನು ಇಳಿಸಿ, ಅದನ್ನು ಒಡಂಬಡಿಕೆಯ ಪವಿತ್ರ ಪೆಟ್ಟಿಗೆಗೆ ಹೊದಿಸಬೇಕು.


ದೇವಾಲಯದ ಹಿಂಭಾಗದಲ್ಲಿ ಅವರು ಮೂವತ್ತು ಅಡಿ ಉದ್ದವಾಗಿರುವ ಒಂದು ಕೊಠಡಿಯನ್ನು ನಿರ್ಮಿಸಿದ್ದರು. ಈ ಕೊಠಡಿಯ ಗೋಡೆಗಳಿಗೂ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಈ ಕೊಠಡಿಯನ್ನು ಮಹಾ ಪವಿತ್ರಸ್ಥಳವೆಂದು ಕರೆದರು.


ಆಮೇಲೆ ಆ ಪುರುಷನು ಕೋಣೆಯ ಉದ್ದವನ್ನು ಅಳತೆ ಮಾಡಿದನು. ಅದು ಇಪ್ಪತ್ತು ಮೊಳ ಉದ್ದ, ಇಪ್ಪತ್ತು ಮೊಳ ಅಗಲವಾಗಿತ್ತು. “ಇದು ಮಹಾ ಪವಿತ್ರಸ್ಥಳ” ಎಂದು ಅವನು ನನಗೆ ತಿಳಿಸಿದನು.


ಆದರೆ ಪ್ರಧಾನಯಾಜಕನು ಮಾತ್ರ ಎರಡನೆ ಕೊಠಡಿಯ ಒಳಗೆ ಹೋಗಬಹುದಿತ್ತು. ಅವನು ವರ್ಷಕ್ಕೊಮ್ಮೆ ಮಾತ್ರ ಅದರೊಳಗೆ ಹೋಗುತ್ತಿದ್ದನು. ಅವನು ತನ್ನೊಂದಿಗೆ ರಕ್ತವನ್ನು ತೆಗೆದುಕೊಳ್ಳದೆ ಎಂದೂ ಅದರೊಳಗೆ ಪ್ರವೇಶಿಸುತ್ತಿರಲಿಲ್ಲ. ತನಗೋಸ್ಕರವಾಗಿಯೂ ಜನರು ತಿಳಿಯದೆ ಮಾಡಿದ ಪಾಪಗಳಿಗಾಗಿಯೂ ಅವನು ಆ ರಕ್ತವನ್ನು ದೇವರಿಗೆ ಅರ್ಪಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು